Homeಮುಖಪುಟಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

ಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

- Advertisement -
- Advertisement -

ಬ್ರಿಟನ್‌ನ ಭಾರತೀಯರು ಅಥವಾ ಆ ದೇಶದಲ್ಲಿ ನೆಲೆಸಿರುವ ಭಾರತೀಯರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ.52ರಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಭಾರತೀಯತೆಯನ್ನು ರಕ್ಷಿಸಲು ಪ್ರಯತ್ನಿಸುವ ಸಮುದಾಯ ನೇತೃತ್ವದ ಸಂಸ್ಥೆ ಎಂದು ಗುರುತಿಸಿಕೊಂಡಿರುವ ‘ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ’ ಬ್ರಿಟಿಷ್ ಭಾರತೀಯರಾದ 500 ಜನರ ಮೇಲೆ ಬ್ರಿಟನ್‌ನಲ್ಲಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಗೆ ಒಳಗಾದವರಲ್ಲಿ ಶೇಕಡಾ 50ರಷ್ಟು ಹಿಂದೂಗಳು ಹಿಂದುತ್ವ ತತ್ವಗಳನ್ನು ತಿರಸ್ಕರಿಸಿದ್ದಾರೆ.

ಶೇ.50ರಷ್ಟು ಮಹಿಳೆಯರು ಮತ್ತು ಶೇ.50ರಷ್ಟು ಪುರುಷರ ಮೇಲೆ ಸಮೀಕ್ಷೇ ನಡೆಸಲಾಗಿದೆ. ಈ ಸಮೀಕ್ಷೆಗೆ ಒಳಗಾದವರಲ್ಲಿ 18 ರಿಂದ 44 ವರ್ಷ ವಯಸ್ಸಿನವರು 57%, ಹಿಂದೂಗಳು 43%, ಪದವೀದರರು 62% ಮತ್ತು ಬ್ರಿಟನ್‌ನಿಂದ ಹೊರಗೆ ಜನಿಸಿದವರು 56% ಇದ್ದಾರೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಜನರು ನಾಲ್ಕು ವರ್ಷಗಳವರೆಗೆ ಬ್ರಿಟನ್‌ನಲ್ಲಿ ವಾಸಿಸುತ್ತಿದ್ದರೆ, ಉಳಿದ ಅರ್ಧದಷ್ಟು ಜನರು ಕನಿಷ್ಠ ಐದು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದಾರೆ.

ಒಟ್ಟು ಪ್ರತಿಕ್ರಿಯಿಸಿದವರಲ್ಲಿ 35 ಶೇ. ಜನರು ಮೋದಿಯವರ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಶೇ.52ರಷ್ಟು ಜನರು ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಹಿಂದೂಗಳಲ್ಲಿ, ಶೇ.57ರಷ್ಟು ಜನರು ಭಾರತದ ಪ್ರಧಾನಿಯ ಪರ ಒಲವು ತೋರಿದ್ದಾರೆ, ಆದರೆ ಶೇ. 71ರಷ್ಟು ಹಿಂದೂಯೇತರರು ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಭಾರತದಲ್ಲಿ ಜನಿಸಿದವರು, ವಯಸ್ಸಾದವರು ಮತ್ತು ಇಂಗ್ಲಿಷ್ ಮಾತನಾಡಲು ಬಾರದ ಮನೆಯಲ್ಲಿರುವವರು ಮೋದಿಯವರ ಬಗ್ಗೆ ಹೆಚ್ಚು ಒಲವು ತೋರಿದ್ದಾರೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಪ್ರಕಟಣೆಯಲ್ಲಿ ಹೇಳಿದೆ.

ಪುರುಷರಿಗಿಂತ ಹೆಚ್ಚು ಶೇ.34ರಷ್ಟು ಮಹಿಳೆಯರು ಮೋದಿಯವರ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.28ರಷ್ಟು ಪುರುಷರು ಮೋದಿ ಪರ ಮಾತನಾಡಿದ್ದಾರೆ.

ಭಾರತದ ಪಥ (ಭಾರತ ಮುನ್ನಡೆಯುತ್ತಿರುವ ಹಾದಿ)ದ ಬಗ್ಗೆ ಕೇಳಿದಾಗ, ಶೇ. 68ರಷ್ಟು ಹಿಂದೂಗಳು ಭಾರತವು ಸರಿಯಾದ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಆದರೆ, ಶೇ. 73ರಷ್ಟು ಹಿಂದೂಯೇತರರು ಮತ್ತು ಶೇ. 81ರಷ್ಟು ಮುಸ್ಲಿಮರು ಇದನ್ನು ಒಪ್ಪಿಲ್ಲ.

ಸಮೀಕ್ಷೆಯ ಸಾರಾಂಶವು, ಉತ್ತರಿಸಿದ ಬಹುಪಾಲು ಜನರು “ಮೋದಿಯಿಂದ ಪ್ರಚಾರಗೊಂಡ ಧಾರ್ಮಿಕ ಹಿಂಸಾಚಾರವು ಬ್ರಿಟನ್‌ಗೆ ವ್ಯಾಪಿಸುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ. ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಹಿಂದೂಗಳು, ಅಂದರೆ ಶೇ. 65ರಷ್ಟು ಜನರು ಸಂಬಂಧಿತ ಘಟನೆಗಳಿಗೆ ಮೋದಿಯನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಇನ್ನು ಈ ಕುರಿತು ಶೇ.65ರಷ್ಟು ಜನರು 1ರಿಂದ 10ರೊಳಗಿನ ರೇಟಿಂಗ್ಸ್‌ನಲ್ಲಿ 8 ರೇಟಿಂಗ್ ನೀಡಿದ್ದಾರೆ. ಇದು ಗಂಭೀರ ಕಳವಳವನ್ನು ಸೂಚಿಸುತ್ತದೆ. 2022ರಲ್ಲಿ ಲೀಸೆಸ್ಟರ್‌ನಲ್ಲಿ ಹಿಂದೂ-ಮುಸ್ಲಿಮರ ನಡುವೆ ನಡೆದ ಹಿಂಸಾಚಾರವನ್ನು ಹೆಚ್ಚಿನ ಜನರು ಉಲ್ಲೇಖಿಸಿದ್ದಾರೆ.

ಈ ಸಮೀಕ್ಷೆಯು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಕಾರ್ಯಸೂಚಿಯನ್ನು ಇಡೀ ಬ್ರಿಟಿಷ್ ಭಾರತೀಯ ಸಮುದಾಯ ಬೆಂಬಲಿಸುತ್ತಿದೆ ಎಂಬ ಚಾಲ್ತಿಯಲ್ಲಿರುವ ನಂಬಿಕೆಯನ್ನು ಸುಳ್ಳಾಗಿಸಿದೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಹೇಳಿದೆ.

ಹಿಂದುತ್ವದ ಬಗೆಗಿನ ಧೋರಣೆಗಳು ಮತ್ತು ಭಾರತದ ಬಗ್ಗೆ ಕಾಳಜಿ

ಶೇ. 50ರಷ್ಟು ಹಿಂದೂ ಪ್ರತಿಕ್ರಿಯಿಸಿದವರು ಸೇರಿದಂತೆ ಬಹುಪಾಲು ಪ್ರತಿಕ್ರಿಯಿಸಿದವರು ತಾವು ಹಿಂದುತ್ವದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ತಿಳಿಸಿರುವುದಾಗಿ ಸಮೀಕ್ಷೆ ಹೇಳಿದೆ. ಹಿಂದುತ್ವದ ಕಡೆ ಒಲವು ಹೊಂದಿರುವವರಲ್ಲಿ ಹೆಚ್ಚಿನವರು ಪುರುಷರು, ಅವರು ಜಾತಿ, ಅರೇಂಜ್ ಮ್ಯಾರೇಜ್, ಗೋಮಾಂಸ ನಿಷೇಧ ಇತ್ಯಾದಿ ವಿಚಾರಗಳಲ್ಲಿ ಹಿಂದುತ್ವದ ಕಡೆ ಒಲವು ತೋರಿಸಿದ್ದಾರೆ.

ಪ್ರತಿಕ್ರಿಯಿಸಿದವರಲ್ಲಿ ಮೋದಿ ಪರವಾಗಿ ಒಲವು ತೋರಿಸದವರು ‘ಧಾರ್ಮಿಕ ಉದ್ವಿಗ್ನತೆ ಮತ್ತು ಪ್ರಜಾಪ್ರಭುತ್ವದ ನಿರ್ಬಂಧಗಳು ಭಾರತ ಎದುರಿಸುತ್ತಿದೆ’ ಎಂದು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ : ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...