Homeಮುಖಪುಟಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

ಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

- Advertisement -
- Advertisement -

ಬ್ರಿಟನ್‌ನ ಭಾರತೀಯರು ಅಥವಾ ಆ ದೇಶದಲ್ಲಿ ನೆಲೆಸಿರುವ ಭಾರತೀಯರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ.52ರಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಭಾರತೀಯತೆಯನ್ನು ರಕ್ಷಿಸಲು ಪ್ರಯತ್ನಿಸುವ ಸಮುದಾಯ ನೇತೃತ್ವದ ಸಂಸ್ಥೆ ಎಂದು ಗುರುತಿಸಿಕೊಂಡಿರುವ ‘ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ’ ಬ್ರಿಟಿಷ್ ಭಾರತೀಯರಾದ 500 ಜನರ ಮೇಲೆ ಬ್ರಿಟನ್‌ನಲ್ಲಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಗೆ ಒಳಗಾದವರಲ್ಲಿ ಶೇಕಡಾ 50ರಷ್ಟು ಹಿಂದೂಗಳು ಹಿಂದುತ್ವ ತತ್ವಗಳನ್ನು ತಿರಸ್ಕರಿಸಿದ್ದಾರೆ.

ಶೇ.50ರಷ್ಟು ಮಹಿಳೆಯರು ಮತ್ತು ಶೇ.50ರಷ್ಟು ಪುರುಷರ ಮೇಲೆ ಸಮೀಕ್ಷೇ ನಡೆಸಲಾಗಿದೆ. ಈ ಸಮೀಕ್ಷೆಗೆ ಒಳಗಾದವರಲ್ಲಿ 18 ರಿಂದ 44 ವರ್ಷ ವಯಸ್ಸಿನವರು 57%, ಹಿಂದೂಗಳು 43%, ಪದವೀದರರು 62% ಮತ್ತು ಬ್ರಿಟನ್‌ನಿಂದ ಹೊರಗೆ ಜನಿಸಿದವರು 56% ಇದ್ದಾರೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಜನರು ನಾಲ್ಕು ವರ್ಷಗಳವರೆಗೆ ಬ್ರಿಟನ್‌ನಲ್ಲಿ ವಾಸಿಸುತ್ತಿದ್ದರೆ, ಉಳಿದ ಅರ್ಧದಷ್ಟು ಜನರು ಕನಿಷ್ಠ ಐದು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದಾರೆ.

ಒಟ್ಟು ಪ್ರತಿಕ್ರಿಯಿಸಿದವರಲ್ಲಿ 35 ಶೇ. ಜನರು ಮೋದಿಯವರ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಶೇ.52ರಷ್ಟು ಜನರು ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಹಿಂದೂಗಳಲ್ಲಿ, ಶೇ.57ರಷ್ಟು ಜನರು ಭಾರತದ ಪ್ರಧಾನಿಯ ಪರ ಒಲವು ತೋರಿದ್ದಾರೆ, ಆದರೆ ಶೇ. 71ರಷ್ಟು ಹಿಂದೂಯೇತರರು ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಭಾರತದಲ್ಲಿ ಜನಿಸಿದವರು, ವಯಸ್ಸಾದವರು ಮತ್ತು ಇಂಗ್ಲಿಷ್ ಮಾತನಾಡಲು ಬಾರದ ಮನೆಯಲ್ಲಿರುವವರು ಮೋದಿಯವರ ಬಗ್ಗೆ ಹೆಚ್ಚು ಒಲವು ತೋರಿದ್ದಾರೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಪ್ರಕಟಣೆಯಲ್ಲಿ ಹೇಳಿದೆ.

ಪುರುಷರಿಗಿಂತ ಹೆಚ್ಚು ಶೇ.34ರಷ್ಟು ಮಹಿಳೆಯರು ಮೋದಿಯವರ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.28ರಷ್ಟು ಪುರುಷರು ಮೋದಿ ಪರ ಮಾತನಾಡಿದ್ದಾರೆ.

ಭಾರತದ ಪಥ (ಭಾರತ ಮುನ್ನಡೆಯುತ್ತಿರುವ ಹಾದಿ)ದ ಬಗ್ಗೆ ಕೇಳಿದಾಗ, ಶೇ. 68ರಷ್ಟು ಹಿಂದೂಗಳು ಭಾರತವು ಸರಿಯಾದ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಆದರೆ, ಶೇ. 73ರಷ್ಟು ಹಿಂದೂಯೇತರರು ಮತ್ತು ಶೇ. 81ರಷ್ಟು ಮುಸ್ಲಿಮರು ಇದನ್ನು ಒಪ್ಪಿಲ್ಲ.

ಸಮೀಕ್ಷೆಯ ಸಾರಾಂಶವು, ಉತ್ತರಿಸಿದ ಬಹುಪಾಲು ಜನರು “ಮೋದಿಯಿಂದ ಪ್ರಚಾರಗೊಂಡ ಧಾರ್ಮಿಕ ಹಿಂಸಾಚಾರವು ಬ್ರಿಟನ್‌ಗೆ ವ್ಯಾಪಿಸುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ. ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಹಿಂದೂಗಳು, ಅಂದರೆ ಶೇ. 65ರಷ್ಟು ಜನರು ಸಂಬಂಧಿತ ಘಟನೆಗಳಿಗೆ ಮೋದಿಯನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಇನ್ನು ಈ ಕುರಿತು ಶೇ.65ರಷ್ಟು ಜನರು 1ರಿಂದ 10ರೊಳಗಿನ ರೇಟಿಂಗ್ಸ್‌ನಲ್ಲಿ 8 ರೇಟಿಂಗ್ ನೀಡಿದ್ದಾರೆ. ಇದು ಗಂಭೀರ ಕಳವಳವನ್ನು ಸೂಚಿಸುತ್ತದೆ. 2022ರಲ್ಲಿ ಲೀಸೆಸ್ಟರ್‌ನಲ್ಲಿ ಹಿಂದೂ-ಮುಸ್ಲಿಮರ ನಡುವೆ ನಡೆದ ಹಿಂಸಾಚಾರವನ್ನು ಹೆಚ್ಚಿನ ಜನರು ಉಲ್ಲೇಖಿಸಿದ್ದಾರೆ.

ಈ ಸಮೀಕ್ಷೆಯು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಕಾರ್ಯಸೂಚಿಯನ್ನು ಇಡೀ ಬ್ರಿಟಿಷ್ ಭಾರತೀಯ ಸಮುದಾಯ ಬೆಂಬಲಿಸುತ್ತಿದೆ ಎಂಬ ಚಾಲ್ತಿಯಲ್ಲಿರುವ ನಂಬಿಕೆಯನ್ನು ಸುಳ್ಳಾಗಿಸಿದೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಹೇಳಿದೆ.

ಹಿಂದುತ್ವದ ಬಗೆಗಿನ ಧೋರಣೆಗಳು ಮತ್ತು ಭಾರತದ ಬಗ್ಗೆ ಕಾಳಜಿ

ಶೇ. 50ರಷ್ಟು ಹಿಂದೂ ಪ್ರತಿಕ್ರಿಯಿಸಿದವರು ಸೇರಿದಂತೆ ಬಹುಪಾಲು ಪ್ರತಿಕ್ರಿಯಿಸಿದವರು ತಾವು ಹಿಂದುತ್ವದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ತಿಳಿಸಿರುವುದಾಗಿ ಸಮೀಕ್ಷೆ ಹೇಳಿದೆ. ಹಿಂದುತ್ವದ ಕಡೆ ಒಲವು ಹೊಂದಿರುವವರಲ್ಲಿ ಹೆಚ್ಚಿನವರು ಪುರುಷರು, ಅವರು ಜಾತಿ, ಅರೇಂಜ್ ಮ್ಯಾರೇಜ್, ಗೋಮಾಂಸ ನಿಷೇಧ ಇತ್ಯಾದಿ ವಿಚಾರಗಳಲ್ಲಿ ಹಿಂದುತ್ವದ ಕಡೆ ಒಲವು ತೋರಿಸಿದ್ದಾರೆ.

ಪ್ರತಿಕ್ರಿಯಿಸಿದವರಲ್ಲಿ ಮೋದಿ ಪರವಾಗಿ ಒಲವು ತೋರಿಸದವರು ‘ಧಾರ್ಮಿಕ ಉದ್ವಿಗ್ನತೆ ಮತ್ತು ಪ್ರಜಾಪ್ರಭುತ್ವದ ನಿರ್ಬಂಧಗಳು ಭಾರತ ಎದುರಿಸುತ್ತಿದೆ’ ಎಂದು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ : ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...