Homeಮುಖಪುಟಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

ಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

- Advertisement -
- Advertisement -

ಬ್ರಿಟನ್‌ನ ಭಾರತೀಯರು ಅಥವಾ ಆ ದೇಶದಲ್ಲಿ ನೆಲೆಸಿರುವ ಭಾರತೀಯರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ.52ರಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಭಾರತೀಯತೆಯನ್ನು ರಕ್ಷಿಸಲು ಪ್ರಯತ್ನಿಸುವ ಸಮುದಾಯ ನೇತೃತ್ವದ ಸಂಸ್ಥೆ ಎಂದು ಗುರುತಿಸಿಕೊಂಡಿರುವ ‘ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ’ ಬ್ರಿಟಿಷ್ ಭಾರತೀಯರಾದ 500 ಜನರ ಮೇಲೆ ಬ್ರಿಟನ್‌ನಲ್ಲಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಗೆ ಒಳಗಾದವರಲ್ಲಿ ಶೇಕಡಾ 50ರಷ್ಟು ಹಿಂದೂಗಳು ಹಿಂದುತ್ವ ತತ್ವಗಳನ್ನು ತಿರಸ್ಕರಿಸಿದ್ದಾರೆ.

ಶೇ.50ರಷ್ಟು ಮಹಿಳೆಯರು ಮತ್ತು ಶೇ.50ರಷ್ಟು ಪುರುಷರ ಮೇಲೆ ಸಮೀಕ್ಷೇ ನಡೆಸಲಾಗಿದೆ. ಈ ಸಮೀಕ್ಷೆಗೆ ಒಳಗಾದವರಲ್ಲಿ 18 ರಿಂದ 44 ವರ್ಷ ವಯಸ್ಸಿನವರು 57%, ಹಿಂದೂಗಳು 43%, ಪದವೀದರರು 62% ಮತ್ತು ಬ್ರಿಟನ್‌ನಿಂದ ಹೊರಗೆ ಜನಿಸಿದವರು 56% ಇದ್ದಾರೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಜನರು ನಾಲ್ಕು ವರ್ಷಗಳವರೆಗೆ ಬ್ರಿಟನ್‌ನಲ್ಲಿ ವಾಸಿಸುತ್ತಿದ್ದರೆ, ಉಳಿದ ಅರ್ಧದಷ್ಟು ಜನರು ಕನಿಷ್ಠ ಐದು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದಾರೆ.

ಒಟ್ಟು ಪ್ರತಿಕ್ರಿಯಿಸಿದವರಲ್ಲಿ 35 ಶೇ. ಜನರು ಮೋದಿಯವರ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಶೇ.52ರಷ್ಟು ಜನರು ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಹಿಂದೂಗಳಲ್ಲಿ, ಶೇ.57ರಷ್ಟು ಜನರು ಭಾರತದ ಪ್ರಧಾನಿಯ ಪರ ಒಲವು ತೋರಿದ್ದಾರೆ, ಆದರೆ ಶೇ. 71ರಷ್ಟು ಹಿಂದೂಯೇತರರು ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಭಾರತದಲ್ಲಿ ಜನಿಸಿದವರು, ವಯಸ್ಸಾದವರು ಮತ್ತು ಇಂಗ್ಲಿಷ್ ಮಾತನಾಡಲು ಬಾರದ ಮನೆಯಲ್ಲಿರುವವರು ಮೋದಿಯವರ ಬಗ್ಗೆ ಹೆಚ್ಚು ಒಲವು ತೋರಿದ್ದಾರೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಪ್ರಕಟಣೆಯಲ್ಲಿ ಹೇಳಿದೆ.

ಪುರುಷರಿಗಿಂತ ಹೆಚ್ಚು ಶೇ.34ರಷ್ಟು ಮಹಿಳೆಯರು ಮೋದಿಯವರ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.28ರಷ್ಟು ಪುರುಷರು ಮೋದಿ ಪರ ಮಾತನಾಡಿದ್ದಾರೆ.

ಭಾರತದ ಪಥ (ಭಾರತ ಮುನ್ನಡೆಯುತ್ತಿರುವ ಹಾದಿ)ದ ಬಗ್ಗೆ ಕೇಳಿದಾಗ, ಶೇ. 68ರಷ್ಟು ಹಿಂದೂಗಳು ಭಾರತವು ಸರಿಯಾದ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಆದರೆ, ಶೇ. 73ರಷ್ಟು ಹಿಂದೂಯೇತರರು ಮತ್ತು ಶೇ. 81ರಷ್ಟು ಮುಸ್ಲಿಮರು ಇದನ್ನು ಒಪ್ಪಿಲ್ಲ.

ಸಮೀಕ್ಷೆಯ ಸಾರಾಂಶವು, ಉತ್ತರಿಸಿದ ಬಹುಪಾಲು ಜನರು “ಮೋದಿಯಿಂದ ಪ್ರಚಾರಗೊಂಡ ಧಾರ್ಮಿಕ ಹಿಂಸಾಚಾರವು ಬ್ರಿಟನ್‌ಗೆ ವ್ಯಾಪಿಸುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ. ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಹಿಂದೂಗಳು, ಅಂದರೆ ಶೇ. 65ರಷ್ಟು ಜನರು ಸಂಬಂಧಿತ ಘಟನೆಗಳಿಗೆ ಮೋದಿಯನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಇನ್ನು ಈ ಕುರಿತು ಶೇ.65ರಷ್ಟು ಜನರು 1ರಿಂದ 10ರೊಳಗಿನ ರೇಟಿಂಗ್ಸ್‌ನಲ್ಲಿ 8 ರೇಟಿಂಗ್ ನೀಡಿದ್ದಾರೆ. ಇದು ಗಂಭೀರ ಕಳವಳವನ್ನು ಸೂಚಿಸುತ್ತದೆ. 2022ರಲ್ಲಿ ಲೀಸೆಸ್ಟರ್‌ನಲ್ಲಿ ಹಿಂದೂ-ಮುಸ್ಲಿಮರ ನಡುವೆ ನಡೆದ ಹಿಂಸಾಚಾರವನ್ನು ಹೆಚ್ಚಿನ ಜನರು ಉಲ್ಲೇಖಿಸಿದ್ದಾರೆ.

ಈ ಸಮೀಕ್ಷೆಯು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಕಾರ್ಯಸೂಚಿಯನ್ನು ಇಡೀ ಬ್ರಿಟಿಷ್ ಭಾರತೀಯ ಸಮುದಾಯ ಬೆಂಬಲಿಸುತ್ತಿದೆ ಎಂಬ ಚಾಲ್ತಿಯಲ್ಲಿರುವ ನಂಬಿಕೆಯನ್ನು ಸುಳ್ಳಾಗಿಸಿದೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಹೇಳಿದೆ.

ಹಿಂದುತ್ವದ ಬಗೆಗಿನ ಧೋರಣೆಗಳು ಮತ್ತು ಭಾರತದ ಬಗ್ಗೆ ಕಾಳಜಿ

ಶೇ. 50ರಷ್ಟು ಹಿಂದೂ ಪ್ರತಿಕ್ರಿಯಿಸಿದವರು ಸೇರಿದಂತೆ ಬಹುಪಾಲು ಪ್ರತಿಕ್ರಿಯಿಸಿದವರು ತಾವು ಹಿಂದುತ್ವದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ತಿಳಿಸಿರುವುದಾಗಿ ಸಮೀಕ್ಷೆ ಹೇಳಿದೆ. ಹಿಂದುತ್ವದ ಕಡೆ ಒಲವು ಹೊಂದಿರುವವರಲ್ಲಿ ಹೆಚ್ಚಿನವರು ಪುರುಷರು, ಅವರು ಜಾತಿ, ಅರೇಂಜ್ ಮ್ಯಾರೇಜ್, ಗೋಮಾಂಸ ನಿಷೇಧ ಇತ್ಯಾದಿ ವಿಚಾರಗಳಲ್ಲಿ ಹಿಂದುತ್ವದ ಕಡೆ ಒಲವು ತೋರಿಸಿದ್ದಾರೆ.

ಪ್ರತಿಕ್ರಿಯಿಸಿದವರಲ್ಲಿ ಮೋದಿ ಪರವಾಗಿ ಒಲವು ತೋರಿಸದವರು ‘ಧಾರ್ಮಿಕ ಉದ್ವಿಗ್ನತೆ ಮತ್ತು ಪ್ರಜಾಪ್ರಭುತ್ವದ ನಿರ್ಬಂಧಗಳು ಭಾರತ ಎದುರಿಸುತ್ತಿದೆ’ ಎಂದು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ : ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...