Homeಕರ್ನಾಟಕನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

- Advertisement -
- Advertisement -

‘ಪಠ್ಯಪುಸ್ತಕ ಮುದ್ರಣಕ್ಕೆ ಘಟನೋತ್ತರ ಆದೇಶ ಹೊರಡಿಸಿರುವುದು ಶಾಸನ ಸಭೆಗೆ ದೊರೆತಿರುವ ಸಂವಿಧಾನ ಬದ್ಧ ಅವಕಾಶ’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಸಮರ್ಥಿಸಿದರು.

‘ಪಠ್ಯ ಪರಿಷ್ಕರಣೆ: ಸಾರ್ವಜನಿಕರ ಆಕ್ಷೇಪಕ್ಕೆ ಆಹ್ವಾನ ಬೇಕಾ?’ ಎಂಬ ವಿಷಯದ ಕುರಿತು ‘ಪ್ರಜಾವಾಣಿ’ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಘಟನೋತ್ತರ ಆದೇಶಕ್ಕೆ ಅವಕಾಶವಿದೆ. ಇದನ್ನು ಬಾಲಿಷ ನಿರ್ಧಾರ ಎನ್ನಬಾರದು” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿ, “ಘಟನೋತ್ತರ ಆದೇಶಗಳಿಗೆ ಅವಕಾಶವಿರುವ ಅನೇಕ ಸಂದರ್ಭಗಳಿರಬಹುದು. ಆದರೆ ಯಾವ ವಿಷಯಕ್ಕೆ ಘಟನೋತ್ತರ ಆದೇಶ ನೀಡುತ್ತಿದ್ದೇವೆ ಎಂಬುದನ್ನು ಗಮನಿಸಬೇಕು. ಇದು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ವಿಷಯ. ಇದಕ್ಕೆಲ್ಲ ಘಟನೋತ್ತರ ಆದೇಶ ಸರಿಯಲ್ಲ” ಎಂದು ಪ್ರತಿಪಾದಿಸಿದರು.

“ಈವರೆಗೆ ರಚನೆಯಾದ ಪಠ್ಯಪುಸ್ತಕಗಳೆಲ್ಲ ಸರಿ ಇದ್ದವು, ಬರಗೂರರ ಸಮಿತಿ ಮಾಡಿದ್ದೆಲ್ಲವೂ ಸರಿ ಎಂದು ನಾವು ಪ್ರತಿಪಾದಿಸುತ್ತಿಲ್ಲ. ಆದರೆ ಪಠ್ಯಪುಸ್ತಕಗಳನ್ನು ತಜ್ಞರು ರೂಪಿಸುತ್ತಾರೆ. ಅದನ್ನು ಸಾರ್ವಜನಿಕ ಚರ್ಚೆಗೆ ತರುವುದು ಸರಿಯಾದ ನಡೆಯಲ್ಲ. ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪೋಷಕರು, ಶಿಕ್ಷಕರ ಸಂಘಟನೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಿತ್ತು” ಎಂದು ತಿಳಿಸಿದರು.

“ಪಠ್ಯಪುಸ್ತಕಗಳಿಗೆ ಸಂಬಂಧಿಸಿದಂತೆ ಸಿಆರ್‌ಸಿ, ಬಿಆರ್‌ಸಿ, ಡಯಟ್‌ಗಳಂತಹ ಸಂಸ್ಥೆಗಳಿಂದ ಅನುಮೋದನೆಯನ್ನು ಸಮಿತಿ ಪಡೆಯಬೇಕಿತ್ತು.  ಈ ಪ್ರಶ್ನೆಗಳನ್ನು ಎತ್ತಿದ ನಮ್ಮನ್ನು ಚಿಲ್ಲರೆ ಜನ ಎಂದು ಸಚಿವರು ಕರೆದರು. ಒಬ್ಬಾತ ಬಿಜೆಪಿ ನಾಯಕ- ಸರಿಯಾಗಿ ಮರ್ಮಾಂಗಕ್ಕೆ ಹೊಡೆದಿದ್ದೇವೆ. ವಿಲವಿಲ ಒದ್ದಾಡುತ್ತಿದ್ದಾರೆ- ಎಂದು ಹೇಳಿಕೆ ನೀಡಿದರು. ಇದು ಸರಿಯೇ?” ಎಂದು ವಿನಯ್‌ ಬಿದರೆಯವರನ್ನು ಪ್ರಶ್ನಿಸಿದರು.

ಇದನ್ನೂ ಓದಿರಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

“ಬರಗೂರರ ಸಮಿತಿಯ ಕುರಿತು ಬಂದಿರುವ ಆಕ್ಷೇಪಗಳನ್ನು ಪರಿಶೀಲಿಸಲೆಂದು ರೂಪಿಸಲಾಗಿದ್ದ ಸಮಿತಿ ಪರಿಷ್ಕರಣೆಯನ್ನೇ ಮಾಡಿದೆ. ಮೌಖಿಕ ಆದೇಶದ ಮೂಲಕ ಪರಿಷ್ಕರಣೆ ನಡೆದಿದೆ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಪರಿಷ್ಕರಣೆ ಮಾಡಿದ್ದು ಹೇಗೆ? ಇದು ಸರಿಯಾದ ನಡೆಯೇ?” ಎಂದು ಕೇಳಿದರು.

ಹಿರಿಯ ಪತ್ರಕರ್ತರಾದ ವೈ.ಗ.ಜಗದೀಶ್ ಸಂವಾದವನ್ನು ನಡೆಸಿಕೊಟ್ಟರು. ಲೇಖಕಿ ಪಲ್ಲವಿ ಇಡೂರು, ಬಲಪಂಥೀಯ ಬರಹಗಾರ ಸುಧಾಕರ್‌ ಹೊಸಳ್ಳಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸುಮಾರು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಈ ವಿದ್ಯಾ ಸಚಿವನಿಗೇನಾದರು ಜವಾಬ್ದಾರಿ ಇದೆಯೇ? ನೀನು ಮನಸ್ಸಿಗೆ ಬಂದಂತೆ ಒಂದು ಸಮುದಾಯದ ಅಶಯಗಳನ್ಳ ತಿರುಚು,ಉಳಿದ ಸಮುದಾಯಗಳ ಆಶಯ,ಸಂಸ್ಕೃತಿ, ನೈಜ ಇತಿಹಾಸ ನಾಶವಾದರು ಸರಿ,ಇಲ್ಲವೇ ಆ ಸಮುದಾಯಗಳ ಅಸ್ಮಿತೆಗಳಿಗೆ ಮಸಿ ಬಳಿದಾದರು ಪಠ್ಯ ಪರಿಸ್ಕರಿಸು ,ನಾವು ಘಟನೋತ್ತರ ಮಂಜೂರಾತಿ ನೀಡುತ್ತೇವೆ ಎಂಬಂತೆ ಇದೆ.ನಾಚಿಕೆಯಾಗಬೇಕು ಈ ಘಟನೋತ್ತರ ಅದೇಶವನ್ನ ಸಮರ್ಥನೆ ಮಾಡಿಕೊಳ್ಳುವವರಿಗೆ ಅದಕ್ಕೆ ಸಂವಿಧಾನದ ಉಲ್ಲಂಘನೆ ಯಾಗಿಲ್ಲವೆಂಬ ಸಬೂಬು ಬೇರೆ.ಹೋಗಲಿ, ನೀವು ಯಾವಾಗ ಸಂವಿಧಾನಕ್ಕೆ ಗೌರವ ನೀಡಿದ್ದೀರಾ?

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...