Homeಕರ್ನಾಟಕನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

- Advertisement -
- Advertisement -

‘ಪಠ್ಯಪುಸ್ತಕ ಮುದ್ರಣಕ್ಕೆ ಘಟನೋತ್ತರ ಆದೇಶ ಹೊರಡಿಸಿರುವುದು ಶಾಸನ ಸಭೆಗೆ ದೊರೆತಿರುವ ಸಂವಿಧಾನ ಬದ್ಧ ಅವಕಾಶ’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಸಮರ್ಥಿಸಿದರು.

‘ಪಠ್ಯ ಪರಿಷ್ಕರಣೆ: ಸಾರ್ವಜನಿಕರ ಆಕ್ಷೇಪಕ್ಕೆ ಆಹ್ವಾನ ಬೇಕಾ?’ ಎಂಬ ವಿಷಯದ ಕುರಿತು ‘ಪ್ರಜಾವಾಣಿ’ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಘಟನೋತ್ತರ ಆದೇಶಕ್ಕೆ ಅವಕಾಶವಿದೆ. ಇದನ್ನು ಬಾಲಿಷ ನಿರ್ಧಾರ ಎನ್ನಬಾರದು” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿ, “ಘಟನೋತ್ತರ ಆದೇಶಗಳಿಗೆ ಅವಕಾಶವಿರುವ ಅನೇಕ ಸಂದರ್ಭಗಳಿರಬಹುದು. ಆದರೆ ಯಾವ ವಿಷಯಕ್ಕೆ ಘಟನೋತ್ತರ ಆದೇಶ ನೀಡುತ್ತಿದ್ದೇವೆ ಎಂಬುದನ್ನು ಗಮನಿಸಬೇಕು. ಇದು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ವಿಷಯ. ಇದಕ್ಕೆಲ್ಲ ಘಟನೋತ್ತರ ಆದೇಶ ಸರಿಯಲ್ಲ” ಎಂದು ಪ್ರತಿಪಾದಿಸಿದರು.

“ಈವರೆಗೆ ರಚನೆಯಾದ ಪಠ್ಯಪುಸ್ತಕಗಳೆಲ್ಲ ಸರಿ ಇದ್ದವು, ಬರಗೂರರ ಸಮಿತಿ ಮಾಡಿದ್ದೆಲ್ಲವೂ ಸರಿ ಎಂದು ನಾವು ಪ್ರತಿಪಾದಿಸುತ್ತಿಲ್ಲ. ಆದರೆ ಪಠ್ಯಪುಸ್ತಕಗಳನ್ನು ತಜ್ಞರು ರೂಪಿಸುತ್ತಾರೆ. ಅದನ್ನು ಸಾರ್ವಜನಿಕ ಚರ್ಚೆಗೆ ತರುವುದು ಸರಿಯಾದ ನಡೆಯಲ್ಲ. ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪೋಷಕರು, ಶಿಕ್ಷಕರ ಸಂಘಟನೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಿತ್ತು” ಎಂದು ತಿಳಿಸಿದರು.

“ಪಠ್ಯಪುಸ್ತಕಗಳಿಗೆ ಸಂಬಂಧಿಸಿದಂತೆ ಸಿಆರ್‌ಸಿ, ಬಿಆರ್‌ಸಿ, ಡಯಟ್‌ಗಳಂತಹ ಸಂಸ್ಥೆಗಳಿಂದ ಅನುಮೋದನೆಯನ್ನು ಸಮಿತಿ ಪಡೆಯಬೇಕಿತ್ತು.  ಈ ಪ್ರಶ್ನೆಗಳನ್ನು ಎತ್ತಿದ ನಮ್ಮನ್ನು ಚಿಲ್ಲರೆ ಜನ ಎಂದು ಸಚಿವರು ಕರೆದರು. ಒಬ್ಬಾತ ಬಿಜೆಪಿ ನಾಯಕ- ಸರಿಯಾಗಿ ಮರ್ಮಾಂಗಕ್ಕೆ ಹೊಡೆದಿದ್ದೇವೆ. ವಿಲವಿಲ ಒದ್ದಾಡುತ್ತಿದ್ದಾರೆ- ಎಂದು ಹೇಳಿಕೆ ನೀಡಿದರು. ಇದು ಸರಿಯೇ?” ಎಂದು ವಿನಯ್‌ ಬಿದರೆಯವರನ್ನು ಪ್ರಶ್ನಿಸಿದರು.

ಇದನ್ನೂ ಓದಿರಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

“ಬರಗೂರರ ಸಮಿತಿಯ ಕುರಿತು ಬಂದಿರುವ ಆಕ್ಷೇಪಗಳನ್ನು ಪರಿಶೀಲಿಸಲೆಂದು ರೂಪಿಸಲಾಗಿದ್ದ ಸಮಿತಿ ಪರಿಷ್ಕರಣೆಯನ್ನೇ ಮಾಡಿದೆ. ಮೌಖಿಕ ಆದೇಶದ ಮೂಲಕ ಪರಿಷ್ಕರಣೆ ನಡೆದಿದೆ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಪರಿಷ್ಕರಣೆ ಮಾಡಿದ್ದು ಹೇಗೆ? ಇದು ಸರಿಯಾದ ನಡೆಯೇ?” ಎಂದು ಕೇಳಿದರು.

ಹಿರಿಯ ಪತ್ರಕರ್ತರಾದ ವೈ.ಗ.ಜಗದೀಶ್ ಸಂವಾದವನ್ನು ನಡೆಸಿಕೊಟ್ಟರು. ಲೇಖಕಿ ಪಲ್ಲವಿ ಇಡೂರು, ಬಲಪಂಥೀಯ ಬರಹಗಾರ ಸುಧಾಕರ್‌ ಹೊಸಳ್ಳಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸುಮಾರು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಈ ವಿದ್ಯಾ ಸಚಿವನಿಗೇನಾದರು ಜವಾಬ್ದಾರಿ ಇದೆಯೇ? ನೀನು ಮನಸ್ಸಿಗೆ ಬಂದಂತೆ ಒಂದು ಸಮುದಾಯದ ಅಶಯಗಳನ್ಳ ತಿರುಚು,ಉಳಿದ ಸಮುದಾಯಗಳ ಆಶಯ,ಸಂಸ್ಕೃತಿ, ನೈಜ ಇತಿಹಾಸ ನಾಶವಾದರು ಸರಿ,ಇಲ್ಲವೇ ಆ ಸಮುದಾಯಗಳ ಅಸ್ಮಿತೆಗಳಿಗೆ ಮಸಿ ಬಳಿದಾದರು ಪಠ್ಯ ಪರಿಸ್ಕರಿಸು ,ನಾವು ಘಟನೋತ್ತರ ಮಂಜೂರಾತಿ ನೀಡುತ್ತೇವೆ ಎಂಬಂತೆ ಇದೆ.ನಾಚಿಕೆಯಾಗಬೇಕು ಈ ಘಟನೋತ್ತರ ಅದೇಶವನ್ನ ಸಮರ್ಥನೆ ಮಾಡಿಕೊಳ್ಳುವವರಿಗೆ ಅದಕ್ಕೆ ಸಂವಿಧಾನದ ಉಲ್ಲಂಘನೆ ಯಾಗಿಲ್ಲವೆಂಬ ಸಬೂಬು ಬೇರೆ.ಹೋಗಲಿ, ನೀವು ಯಾವಾಗ ಸಂವಿಧಾನಕ್ಕೆ ಗೌರವ ನೀಡಿದ್ದೀರಾ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...