Homeಕರ್ನಾಟಕನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

- Advertisement -
- Advertisement -

‘ಪಠ್ಯಪುಸ್ತಕ ಮುದ್ರಣಕ್ಕೆ ಘಟನೋತ್ತರ ಆದೇಶ ಹೊರಡಿಸಿರುವುದು ಶಾಸನ ಸಭೆಗೆ ದೊರೆತಿರುವ ಸಂವಿಧಾನ ಬದ್ಧ ಅವಕಾಶ’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಸಮರ್ಥಿಸಿದರು.

‘ಪಠ್ಯ ಪರಿಷ್ಕರಣೆ: ಸಾರ್ವಜನಿಕರ ಆಕ್ಷೇಪಕ್ಕೆ ಆಹ್ವಾನ ಬೇಕಾ?’ ಎಂಬ ವಿಷಯದ ಕುರಿತು ‘ಪ್ರಜಾವಾಣಿ’ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಘಟನೋತ್ತರ ಆದೇಶಕ್ಕೆ ಅವಕಾಶವಿದೆ. ಇದನ್ನು ಬಾಲಿಷ ನಿರ್ಧಾರ ಎನ್ನಬಾರದು” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿ, “ಘಟನೋತ್ತರ ಆದೇಶಗಳಿಗೆ ಅವಕಾಶವಿರುವ ಅನೇಕ ಸಂದರ್ಭಗಳಿರಬಹುದು. ಆದರೆ ಯಾವ ವಿಷಯಕ್ಕೆ ಘಟನೋತ್ತರ ಆದೇಶ ನೀಡುತ್ತಿದ್ದೇವೆ ಎಂಬುದನ್ನು ಗಮನಿಸಬೇಕು. ಇದು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ವಿಷಯ. ಇದಕ್ಕೆಲ್ಲ ಘಟನೋತ್ತರ ಆದೇಶ ಸರಿಯಲ್ಲ” ಎಂದು ಪ್ರತಿಪಾದಿಸಿದರು.

“ಈವರೆಗೆ ರಚನೆಯಾದ ಪಠ್ಯಪುಸ್ತಕಗಳೆಲ್ಲ ಸರಿ ಇದ್ದವು, ಬರಗೂರರ ಸಮಿತಿ ಮಾಡಿದ್ದೆಲ್ಲವೂ ಸರಿ ಎಂದು ನಾವು ಪ್ರತಿಪಾದಿಸುತ್ತಿಲ್ಲ. ಆದರೆ ಪಠ್ಯಪುಸ್ತಕಗಳನ್ನು ತಜ್ಞರು ರೂಪಿಸುತ್ತಾರೆ. ಅದನ್ನು ಸಾರ್ವಜನಿಕ ಚರ್ಚೆಗೆ ತರುವುದು ಸರಿಯಾದ ನಡೆಯಲ್ಲ. ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪೋಷಕರು, ಶಿಕ್ಷಕರ ಸಂಘಟನೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಿತ್ತು” ಎಂದು ತಿಳಿಸಿದರು.

“ಪಠ್ಯಪುಸ್ತಕಗಳಿಗೆ ಸಂಬಂಧಿಸಿದಂತೆ ಸಿಆರ್‌ಸಿ, ಬಿಆರ್‌ಸಿ, ಡಯಟ್‌ಗಳಂತಹ ಸಂಸ್ಥೆಗಳಿಂದ ಅನುಮೋದನೆಯನ್ನು ಸಮಿತಿ ಪಡೆಯಬೇಕಿತ್ತು.  ಈ ಪ್ರಶ್ನೆಗಳನ್ನು ಎತ್ತಿದ ನಮ್ಮನ್ನು ಚಿಲ್ಲರೆ ಜನ ಎಂದು ಸಚಿವರು ಕರೆದರು. ಒಬ್ಬಾತ ಬಿಜೆಪಿ ನಾಯಕ- ಸರಿಯಾಗಿ ಮರ್ಮಾಂಗಕ್ಕೆ ಹೊಡೆದಿದ್ದೇವೆ. ವಿಲವಿಲ ಒದ್ದಾಡುತ್ತಿದ್ದಾರೆ- ಎಂದು ಹೇಳಿಕೆ ನೀಡಿದರು. ಇದು ಸರಿಯೇ?” ಎಂದು ವಿನಯ್‌ ಬಿದರೆಯವರನ್ನು ಪ್ರಶ್ನಿಸಿದರು.

ಇದನ್ನೂ ಓದಿರಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

“ಬರಗೂರರ ಸಮಿತಿಯ ಕುರಿತು ಬಂದಿರುವ ಆಕ್ಷೇಪಗಳನ್ನು ಪರಿಶೀಲಿಸಲೆಂದು ರೂಪಿಸಲಾಗಿದ್ದ ಸಮಿತಿ ಪರಿಷ್ಕರಣೆಯನ್ನೇ ಮಾಡಿದೆ. ಮೌಖಿಕ ಆದೇಶದ ಮೂಲಕ ಪರಿಷ್ಕರಣೆ ನಡೆದಿದೆ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಪರಿಷ್ಕರಣೆ ಮಾಡಿದ್ದು ಹೇಗೆ? ಇದು ಸರಿಯಾದ ನಡೆಯೇ?” ಎಂದು ಕೇಳಿದರು.

ಹಿರಿಯ ಪತ್ರಕರ್ತರಾದ ವೈ.ಗ.ಜಗದೀಶ್ ಸಂವಾದವನ್ನು ನಡೆಸಿಕೊಟ್ಟರು. ಲೇಖಕಿ ಪಲ್ಲವಿ ಇಡೂರು, ಬಲಪಂಥೀಯ ಬರಹಗಾರ ಸುಧಾಕರ್‌ ಹೊಸಳ್ಳಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸುಮಾರು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಈ ವಿದ್ಯಾ ಸಚಿವನಿಗೇನಾದರು ಜವಾಬ್ದಾರಿ ಇದೆಯೇ? ನೀನು ಮನಸ್ಸಿಗೆ ಬಂದಂತೆ ಒಂದು ಸಮುದಾಯದ ಅಶಯಗಳನ್ಳ ತಿರುಚು,ಉಳಿದ ಸಮುದಾಯಗಳ ಆಶಯ,ಸಂಸ್ಕೃತಿ, ನೈಜ ಇತಿಹಾಸ ನಾಶವಾದರು ಸರಿ,ಇಲ್ಲವೇ ಆ ಸಮುದಾಯಗಳ ಅಸ್ಮಿತೆಗಳಿಗೆ ಮಸಿ ಬಳಿದಾದರು ಪಠ್ಯ ಪರಿಸ್ಕರಿಸು ,ನಾವು ಘಟನೋತ್ತರ ಮಂಜೂರಾತಿ ನೀಡುತ್ತೇವೆ ಎಂಬಂತೆ ಇದೆ.ನಾಚಿಕೆಯಾಗಬೇಕು ಈ ಘಟನೋತ್ತರ ಅದೇಶವನ್ನ ಸಮರ್ಥನೆ ಮಾಡಿಕೊಳ್ಳುವವರಿಗೆ ಅದಕ್ಕೆ ಸಂವಿಧಾನದ ಉಲ್ಲಂಘನೆ ಯಾಗಿಲ್ಲವೆಂಬ ಸಬೂಬು ಬೇರೆ.ಹೋಗಲಿ, ನೀವು ಯಾವಾಗ ಸಂವಿಧಾನಕ್ಕೆ ಗೌರವ ನೀಡಿದ್ದೀರಾ?

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...