Homeಕರ್ನಾಟಕನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

- Advertisement -
- Advertisement -

‘ಪಠ್ಯಪುಸ್ತಕ ಮುದ್ರಣಕ್ಕೆ ಘಟನೋತ್ತರ ಆದೇಶ ಹೊರಡಿಸಿರುವುದು ಶಾಸನ ಸಭೆಗೆ ದೊರೆತಿರುವ ಸಂವಿಧಾನ ಬದ್ಧ ಅವಕಾಶ’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಸಮರ್ಥಿಸಿದರು.

‘ಪಠ್ಯ ಪರಿಷ್ಕರಣೆ: ಸಾರ್ವಜನಿಕರ ಆಕ್ಷೇಪಕ್ಕೆ ಆಹ್ವಾನ ಬೇಕಾ?’ ಎಂಬ ವಿಷಯದ ಕುರಿತು ‘ಪ್ರಜಾವಾಣಿ’ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಘಟನೋತ್ತರ ಆದೇಶಕ್ಕೆ ಅವಕಾಶವಿದೆ. ಇದನ್ನು ಬಾಲಿಷ ನಿರ್ಧಾರ ಎನ್ನಬಾರದು” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿ, “ಘಟನೋತ್ತರ ಆದೇಶಗಳಿಗೆ ಅವಕಾಶವಿರುವ ಅನೇಕ ಸಂದರ್ಭಗಳಿರಬಹುದು. ಆದರೆ ಯಾವ ವಿಷಯಕ್ಕೆ ಘಟನೋತ್ತರ ಆದೇಶ ನೀಡುತ್ತಿದ್ದೇವೆ ಎಂಬುದನ್ನು ಗಮನಿಸಬೇಕು. ಇದು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ವಿಷಯ. ಇದಕ್ಕೆಲ್ಲ ಘಟನೋತ್ತರ ಆದೇಶ ಸರಿಯಲ್ಲ” ಎಂದು ಪ್ರತಿಪಾದಿಸಿದರು.

“ಈವರೆಗೆ ರಚನೆಯಾದ ಪಠ್ಯಪುಸ್ತಕಗಳೆಲ್ಲ ಸರಿ ಇದ್ದವು, ಬರಗೂರರ ಸಮಿತಿ ಮಾಡಿದ್ದೆಲ್ಲವೂ ಸರಿ ಎಂದು ನಾವು ಪ್ರತಿಪಾದಿಸುತ್ತಿಲ್ಲ. ಆದರೆ ಪಠ್ಯಪುಸ್ತಕಗಳನ್ನು ತಜ್ಞರು ರೂಪಿಸುತ್ತಾರೆ. ಅದನ್ನು ಸಾರ್ವಜನಿಕ ಚರ್ಚೆಗೆ ತರುವುದು ಸರಿಯಾದ ನಡೆಯಲ್ಲ. ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪೋಷಕರು, ಶಿಕ್ಷಕರ ಸಂಘಟನೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಿತ್ತು” ಎಂದು ತಿಳಿಸಿದರು.

“ಪಠ್ಯಪುಸ್ತಕಗಳಿಗೆ ಸಂಬಂಧಿಸಿದಂತೆ ಸಿಆರ್‌ಸಿ, ಬಿಆರ್‌ಸಿ, ಡಯಟ್‌ಗಳಂತಹ ಸಂಸ್ಥೆಗಳಿಂದ ಅನುಮೋದನೆಯನ್ನು ಸಮಿತಿ ಪಡೆಯಬೇಕಿತ್ತು.  ಈ ಪ್ರಶ್ನೆಗಳನ್ನು ಎತ್ತಿದ ನಮ್ಮನ್ನು ಚಿಲ್ಲರೆ ಜನ ಎಂದು ಸಚಿವರು ಕರೆದರು. ಒಬ್ಬಾತ ಬಿಜೆಪಿ ನಾಯಕ- ಸರಿಯಾಗಿ ಮರ್ಮಾಂಗಕ್ಕೆ ಹೊಡೆದಿದ್ದೇವೆ. ವಿಲವಿಲ ಒದ್ದಾಡುತ್ತಿದ್ದಾರೆ- ಎಂದು ಹೇಳಿಕೆ ನೀಡಿದರು. ಇದು ಸರಿಯೇ?” ಎಂದು ವಿನಯ್‌ ಬಿದರೆಯವರನ್ನು ಪ್ರಶ್ನಿಸಿದರು.

ಇದನ್ನೂ ಓದಿರಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

“ಬರಗೂರರ ಸಮಿತಿಯ ಕುರಿತು ಬಂದಿರುವ ಆಕ್ಷೇಪಗಳನ್ನು ಪರಿಶೀಲಿಸಲೆಂದು ರೂಪಿಸಲಾಗಿದ್ದ ಸಮಿತಿ ಪರಿಷ್ಕರಣೆಯನ್ನೇ ಮಾಡಿದೆ. ಮೌಖಿಕ ಆದೇಶದ ಮೂಲಕ ಪರಿಷ್ಕರಣೆ ನಡೆದಿದೆ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಪರಿಷ್ಕರಣೆ ಮಾಡಿದ್ದು ಹೇಗೆ? ಇದು ಸರಿಯಾದ ನಡೆಯೇ?” ಎಂದು ಕೇಳಿದರು.

ಹಿರಿಯ ಪತ್ರಕರ್ತರಾದ ವೈ.ಗ.ಜಗದೀಶ್ ಸಂವಾದವನ್ನು ನಡೆಸಿಕೊಟ್ಟರು. ಲೇಖಕಿ ಪಲ್ಲವಿ ಇಡೂರು, ಬಲಪಂಥೀಯ ಬರಹಗಾರ ಸುಧಾಕರ್‌ ಹೊಸಳ್ಳಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸುಮಾರು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಈ ವಿದ್ಯಾ ಸಚಿವನಿಗೇನಾದರು ಜವಾಬ್ದಾರಿ ಇದೆಯೇ? ನೀನು ಮನಸ್ಸಿಗೆ ಬಂದಂತೆ ಒಂದು ಸಮುದಾಯದ ಅಶಯಗಳನ್ಳ ತಿರುಚು,ಉಳಿದ ಸಮುದಾಯಗಳ ಆಶಯ,ಸಂಸ್ಕೃತಿ, ನೈಜ ಇತಿಹಾಸ ನಾಶವಾದರು ಸರಿ,ಇಲ್ಲವೇ ಆ ಸಮುದಾಯಗಳ ಅಸ್ಮಿತೆಗಳಿಗೆ ಮಸಿ ಬಳಿದಾದರು ಪಠ್ಯ ಪರಿಸ್ಕರಿಸು ,ನಾವು ಘಟನೋತ್ತರ ಮಂಜೂರಾತಿ ನೀಡುತ್ತೇವೆ ಎಂಬಂತೆ ಇದೆ.ನಾಚಿಕೆಯಾಗಬೇಕು ಈ ಘಟನೋತ್ತರ ಅದೇಶವನ್ನ ಸಮರ್ಥನೆ ಮಾಡಿಕೊಳ್ಳುವವರಿಗೆ ಅದಕ್ಕೆ ಸಂವಿಧಾನದ ಉಲ್ಲಂಘನೆ ಯಾಗಿಲ್ಲವೆಂಬ ಸಬೂಬು ಬೇರೆ.ಹೋಗಲಿ, ನೀವು ಯಾವಾಗ ಸಂವಿಧಾನಕ್ಕೆ ಗೌರವ ನೀಡಿದ್ದೀರಾ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...