Homeಕರ್ನಾಟಕನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

- Advertisement -
- Advertisement -

‘ಪಠ್ಯಪುಸ್ತಕ ಮುದ್ರಣಕ್ಕೆ ಘಟನೋತ್ತರ ಆದೇಶ ಹೊರಡಿಸಿರುವುದು ಶಾಸನ ಸಭೆಗೆ ದೊರೆತಿರುವ ಸಂವಿಧಾನ ಬದ್ಧ ಅವಕಾಶ’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಸಮರ್ಥಿಸಿದರು.

‘ಪಠ್ಯ ಪರಿಷ್ಕರಣೆ: ಸಾರ್ವಜನಿಕರ ಆಕ್ಷೇಪಕ್ಕೆ ಆಹ್ವಾನ ಬೇಕಾ?’ ಎಂಬ ವಿಷಯದ ಕುರಿತು ‘ಪ್ರಜಾವಾಣಿ’ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಘಟನೋತ್ತರ ಆದೇಶಕ್ಕೆ ಅವಕಾಶವಿದೆ. ಇದನ್ನು ಬಾಲಿಷ ನಿರ್ಧಾರ ಎನ್ನಬಾರದು” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿ, “ಘಟನೋತ್ತರ ಆದೇಶಗಳಿಗೆ ಅವಕಾಶವಿರುವ ಅನೇಕ ಸಂದರ್ಭಗಳಿರಬಹುದು. ಆದರೆ ಯಾವ ವಿಷಯಕ್ಕೆ ಘಟನೋತ್ತರ ಆದೇಶ ನೀಡುತ್ತಿದ್ದೇವೆ ಎಂಬುದನ್ನು ಗಮನಿಸಬೇಕು. ಇದು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ವಿಷಯ. ಇದಕ್ಕೆಲ್ಲ ಘಟನೋತ್ತರ ಆದೇಶ ಸರಿಯಲ್ಲ” ಎಂದು ಪ್ರತಿಪಾದಿಸಿದರು.

“ಈವರೆಗೆ ರಚನೆಯಾದ ಪಠ್ಯಪುಸ್ತಕಗಳೆಲ್ಲ ಸರಿ ಇದ್ದವು, ಬರಗೂರರ ಸಮಿತಿ ಮಾಡಿದ್ದೆಲ್ಲವೂ ಸರಿ ಎಂದು ನಾವು ಪ್ರತಿಪಾದಿಸುತ್ತಿಲ್ಲ. ಆದರೆ ಪಠ್ಯಪುಸ್ತಕಗಳನ್ನು ತಜ್ಞರು ರೂಪಿಸುತ್ತಾರೆ. ಅದನ್ನು ಸಾರ್ವಜನಿಕ ಚರ್ಚೆಗೆ ತರುವುದು ಸರಿಯಾದ ನಡೆಯಲ್ಲ. ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪೋಷಕರು, ಶಿಕ್ಷಕರ ಸಂಘಟನೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಿತ್ತು” ಎಂದು ತಿಳಿಸಿದರು.

“ಪಠ್ಯಪುಸ್ತಕಗಳಿಗೆ ಸಂಬಂಧಿಸಿದಂತೆ ಸಿಆರ್‌ಸಿ, ಬಿಆರ್‌ಸಿ, ಡಯಟ್‌ಗಳಂತಹ ಸಂಸ್ಥೆಗಳಿಂದ ಅನುಮೋದನೆಯನ್ನು ಸಮಿತಿ ಪಡೆಯಬೇಕಿತ್ತು.  ಈ ಪ್ರಶ್ನೆಗಳನ್ನು ಎತ್ತಿದ ನಮ್ಮನ್ನು ಚಿಲ್ಲರೆ ಜನ ಎಂದು ಸಚಿವರು ಕರೆದರು. ಒಬ್ಬಾತ ಬಿಜೆಪಿ ನಾಯಕ- ಸರಿಯಾಗಿ ಮರ್ಮಾಂಗಕ್ಕೆ ಹೊಡೆದಿದ್ದೇವೆ. ವಿಲವಿಲ ಒದ್ದಾಡುತ್ತಿದ್ದಾರೆ- ಎಂದು ಹೇಳಿಕೆ ನೀಡಿದರು. ಇದು ಸರಿಯೇ?” ಎಂದು ವಿನಯ್‌ ಬಿದರೆಯವರನ್ನು ಪ್ರಶ್ನಿಸಿದರು.

ಇದನ್ನೂ ಓದಿರಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

“ಬರಗೂರರ ಸಮಿತಿಯ ಕುರಿತು ಬಂದಿರುವ ಆಕ್ಷೇಪಗಳನ್ನು ಪರಿಶೀಲಿಸಲೆಂದು ರೂಪಿಸಲಾಗಿದ್ದ ಸಮಿತಿ ಪರಿಷ್ಕರಣೆಯನ್ನೇ ಮಾಡಿದೆ. ಮೌಖಿಕ ಆದೇಶದ ಮೂಲಕ ಪರಿಷ್ಕರಣೆ ನಡೆದಿದೆ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಪರಿಷ್ಕರಣೆ ಮಾಡಿದ್ದು ಹೇಗೆ? ಇದು ಸರಿಯಾದ ನಡೆಯೇ?” ಎಂದು ಕೇಳಿದರು.

ಹಿರಿಯ ಪತ್ರಕರ್ತರಾದ ವೈ.ಗ.ಜಗದೀಶ್ ಸಂವಾದವನ್ನು ನಡೆಸಿಕೊಟ್ಟರು. ಲೇಖಕಿ ಪಲ್ಲವಿ ಇಡೂರು, ಬಲಪಂಥೀಯ ಬರಹಗಾರ ಸುಧಾಕರ್‌ ಹೊಸಳ್ಳಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸುಮಾರು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಈ ವಿದ್ಯಾ ಸಚಿವನಿಗೇನಾದರು ಜವಾಬ್ದಾರಿ ಇದೆಯೇ? ನೀನು ಮನಸ್ಸಿಗೆ ಬಂದಂತೆ ಒಂದು ಸಮುದಾಯದ ಅಶಯಗಳನ್ಳ ತಿರುಚು,ಉಳಿದ ಸಮುದಾಯಗಳ ಆಶಯ,ಸಂಸ್ಕೃತಿ, ನೈಜ ಇತಿಹಾಸ ನಾಶವಾದರು ಸರಿ,ಇಲ್ಲವೇ ಆ ಸಮುದಾಯಗಳ ಅಸ್ಮಿತೆಗಳಿಗೆ ಮಸಿ ಬಳಿದಾದರು ಪಠ್ಯ ಪರಿಸ್ಕರಿಸು ,ನಾವು ಘಟನೋತ್ತರ ಮಂಜೂರಾತಿ ನೀಡುತ್ತೇವೆ ಎಂಬಂತೆ ಇದೆ.ನಾಚಿಕೆಯಾಗಬೇಕು ಈ ಘಟನೋತ್ತರ ಅದೇಶವನ್ನ ಸಮರ್ಥನೆ ಮಾಡಿಕೊಳ್ಳುವವರಿಗೆ ಅದಕ್ಕೆ ಸಂವಿಧಾನದ ಉಲ್ಲಂಘನೆ ಯಾಗಿಲ್ಲವೆಂಬ ಸಬೂಬು ಬೇರೆ.ಹೋಗಲಿ, ನೀವು ಯಾವಾಗ ಸಂವಿಧಾನಕ್ಕೆ ಗೌರವ ನೀಡಿದ್ದೀರಾ?

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...