Homeಕರ್ನಾಟಕನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

- Advertisement -
- Advertisement -

‘ಪಠ್ಯಪುಸ್ತಕ ಮುದ್ರಣಕ್ಕೆ ಘಟನೋತ್ತರ ಆದೇಶ ಹೊರಡಿಸಿರುವುದು ಶಾಸನ ಸಭೆಗೆ ದೊರೆತಿರುವ ಸಂವಿಧಾನ ಬದ್ಧ ಅವಕಾಶ’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಸಮರ್ಥಿಸಿದರು.

‘ಪಠ್ಯ ಪರಿಷ್ಕರಣೆ: ಸಾರ್ವಜನಿಕರ ಆಕ್ಷೇಪಕ್ಕೆ ಆಹ್ವಾನ ಬೇಕಾ?’ ಎಂಬ ವಿಷಯದ ಕುರಿತು ‘ಪ್ರಜಾವಾಣಿ’ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಘಟನೋತ್ತರ ಆದೇಶಕ್ಕೆ ಅವಕಾಶವಿದೆ. ಇದನ್ನು ಬಾಲಿಷ ನಿರ್ಧಾರ ಎನ್ನಬಾರದು” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿ, “ಘಟನೋತ್ತರ ಆದೇಶಗಳಿಗೆ ಅವಕಾಶವಿರುವ ಅನೇಕ ಸಂದರ್ಭಗಳಿರಬಹುದು. ಆದರೆ ಯಾವ ವಿಷಯಕ್ಕೆ ಘಟನೋತ್ತರ ಆದೇಶ ನೀಡುತ್ತಿದ್ದೇವೆ ಎಂಬುದನ್ನು ಗಮನಿಸಬೇಕು. ಇದು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ವಿಷಯ. ಇದಕ್ಕೆಲ್ಲ ಘಟನೋತ್ತರ ಆದೇಶ ಸರಿಯಲ್ಲ” ಎಂದು ಪ್ರತಿಪಾದಿಸಿದರು.

“ಈವರೆಗೆ ರಚನೆಯಾದ ಪಠ್ಯಪುಸ್ತಕಗಳೆಲ್ಲ ಸರಿ ಇದ್ದವು, ಬರಗೂರರ ಸಮಿತಿ ಮಾಡಿದ್ದೆಲ್ಲವೂ ಸರಿ ಎಂದು ನಾವು ಪ್ರತಿಪಾದಿಸುತ್ತಿಲ್ಲ. ಆದರೆ ಪಠ್ಯಪುಸ್ತಕಗಳನ್ನು ತಜ್ಞರು ರೂಪಿಸುತ್ತಾರೆ. ಅದನ್ನು ಸಾರ್ವಜನಿಕ ಚರ್ಚೆಗೆ ತರುವುದು ಸರಿಯಾದ ನಡೆಯಲ್ಲ. ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪೋಷಕರು, ಶಿಕ್ಷಕರ ಸಂಘಟನೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಿತ್ತು” ಎಂದು ತಿಳಿಸಿದರು.

“ಪಠ್ಯಪುಸ್ತಕಗಳಿಗೆ ಸಂಬಂಧಿಸಿದಂತೆ ಸಿಆರ್‌ಸಿ, ಬಿಆರ್‌ಸಿ, ಡಯಟ್‌ಗಳಂತಹ ಸಂಸ್ಥೆಗಳಿಂದ ಅನುಮೋದನೆಯನ್ನು ಸಮಿತಿ ಪಡೆಯಬೇಕಿತ್ತು.  ಈ ಪ್ರಶ್ನೆಗಳನ್ನು ಎತ್ತಿದ ನಮ್ಮನ್ನು ಚಿಲ್ಲರೆ ಜನ ಎಂದು ಸಚಿವರು ಕರೆದರು. ಒಬ್ಬಾತ ಬಿಜೆಪಿ ನಾಯಕ- ಸರಿಯಾಗಿ ಮರ್ಮಾಂಗಕ್ಕೆ ಹೊಡೆದಿದ್ದೇವೆ. ವಿಲವಿಲ ಒದ್ದಾಡುತ್ತಿದ್ದಾರೆ- ಎಂದು ಹೇಳಿಕೆ ನೀಡಿದರು. ಇದು ಸರಿಯೇ?” ಎಂದು ವಿನಯ್‌ ಬಿದರೆಯವರನ್ನು ಪ್ರಶ್ನಿಸಿದರು.

ಇದನ್ನೂ ಓದಿರಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

“ಬರಗೂರರ ಸಮಿತಿಯ ಕುರಿತು ಬಂದಿರುವ ಆಕ್ಷೇಪಗಳನ್ನು ಪರಿಶೀಲಿಸಲೆಂದು ರೂಪಿಸಲಾಗಿದ್ದ ಸಮಿತಿ ಪರಿಷ್ಕರಣೆಯನ್ನೇ ಮಾಡಿದೆ. ಮೌಖಿಕ ಆದೇಶದ ಮೂಲಕ ಪರಿಷ್ಕರಣೆ ನಡೆದಿದೆ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಪರಿಷ್ಕರಣೆ ಮಾಡಿದ್ದು ಹೇಗೆ? ಇದು ಸರಿಯಾದ ನಡೆಯೇ?” ಎಂದು ಕೇಳಿದರು.

ಹಿರಿಯ ಪತ್ರಕರ್ತರಾದ ವೈ.ಗ.ಜಗದೀಶ್ ಸಂವಾದವನ್ನು ನಡೆಸಿಕೊಟ್ಟರು. ಲೇಖಕಿ ಪಲ್ಲವಿ ಇಡೂರು, ಬಲಪಂಥೀಯ ಬರಹಗಾರ ಸುಧಾಕರ್‌ ಹೊಸಳ್ಳಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸುಮಾರು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಈ ವಿದ್ಯಾ ಸಚಿವನಿಗೇನಾದರು ಜವಾಬ್ದಾರಿ ಇದೆಯೇ? ನೀನು ಮನಸ್ಸಿಗೆ ಬಂದಂತೆ ಒಂದು ಸಮುದಾಯದ ಅಶಯಗಳನ್ಳ ತಿರುಚು,ಉಳಿದ ಸಮುದಾಯಗಳ ಆಶಯ,ಸಂಸ್ಕೃತಿ, ನೈಜ ಇತಿಹಾಸ ನಾಶವಾದರು ಸರಿ,ಇಲ್ಲವೇ ಆ ಸಮುದಾಯಗಳ ಅಸ್ಮಿತೆಗಳಿಗೆ ಮಸಿ ಬಳಿದಾದರು ಪಠ್ಯ ಪರಿಸ್ಕರಿಸು ,ನಾವು ಘಟನೋತ್ತರ ಮಂಜೂರಾತಿ ನೀಡುತ್ತೇವೆ ಎಂಬಂತೆ ಇದೆ.ನಾಚಿಕೆಯಾಗಬೇಕು ಈ ಘಟನೋತ್ತರ ಅದೇಶವನ್ನ ಸಮರ್ಥನೆ ಮಾಡಿಕೊಳ್ಳುವವರಿಗೆ ಅದಕ್ಕೆ ಸಂವಿಧಾನದ ಉಲ್ಲಂಘನೆ ಯಾಗಿಲ್ಲವೆಂಬ ಸಬೂಬು ಬೇರೆ.ಹೋಗಲಿ, ನೀವು ಯಾವಾಗ ಸಂವಿಧಾನಕ್ಕೆ ಗೌರವ ನೀಡಿದ್ದೀರಾ?

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...