Homeಮುಖಪುಟಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ ಪಡೆಯುವ ಪ್ರಯತ್ನದಂತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ಬೌದ್ಧ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಎಂದು ಘೋಷಿಸಲಾದ ಉತ್ತರ ಪ್ರದೇಶದ ಸುಭಾರ್ತಿ ವೈದ್ಯಕೀಯ ಕಾಲೇಜಿನಲ್ಲಿ ಬೌದ್ಧ ಅಲ್ಪಸಂಖ್ಯಾತ ಕೋಟಾದಡಿಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗೆ ಪ್ರವೇಶ ಪಡೆಯಲು ನಿರ್ದೇಶನಗಳನ್ನು ಕೋರಿ ಹರಿಯಾಣದ ಇಬ್ಬರು ವ್ಯಕ್ತಿಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ.

ಅರ್ಜಿದಾರರು ತಾವು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇವೆಂದು ಹೇಳಿಕೊಂಡು, ಬೌದ್ಧ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂದು ಉಪವಿಭಾಗಾಧಿಕಾರಿ ನೀಡಿದ ಪ್ರಮಾಣಪತ್ರಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಅರ್ಜಿದಾರರು ‘ಪುನಿಯಾ’ ಜಾತಿಗೆ ಸೇರಿದವರು ಎಂಬುವುದನ್ನು ಗಮನಿಸಿದ ಸಿಜೆಐ ಸೂರ್ಯ ಕಾಂತ್, “ಪುನಿಯಾಗಳು ಪರಿಶಿಷ್ಟ ಜಾತಿ ವರ್ಗದಲ್ಲಿ ಇರಬಹುದು, ಪುನಿಯಾಗಳು ಜಾಟ್ ಕೂಡ ಆಗಿರಬಹುದು, ಅದು ಸಾಮಾನ್ಯ ವರ್ಗ. ನೀವು ಯಾವ ಪುನಿಯಾ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಅರ್ಜಿದಾರರು “ನಾವು ಜಾಟ್” ಎಂದು ಉತ್ತರಿಸಿದ್ದಾರೆ. “ಹಾಗಾದರೆ ನೀವು (ಅಲ್ಪಸಂಖ್ಯಾತರು) ಹೇಗೆ ಆಗುತ್ತೀರಿ?” ಎಂದು ಸಿಜೆಐ ಕೇಳಿದ್ದಾರೆ.

ಈ ವೇಳೆ ಅರ್ಜಿದಾರರು “ನಾವು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇವೆ. ಯಾರಾದರೂ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಬಹುದು” ಎಂದು ಉತ್ತರಿಸಿದ್ದಾರೆ.

ಈ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ, “ಇದು ವಂಚನೆಯ ಮತ್ತೊಂದು ಹಾದಿ, ನಿಜವಾದ ಅಲ್ಪಸಂಖ್ಯಾತರಿಗೆ ಸಿಗಬೇಕಾದ ಹಕ್ಕುಗಳನ್ನು ನೀವು ಕಿತ್ತುಕೊಳ್ಳಲು ಪ್ರಯತ್ನಿಸುತ್ತಿದ್ದೀರಿ. ನೀವು ಆರ್ಥಿಕವಾಗಿ ಸದೃಢರಾಗಿದ್ದೀರಿ, ಉತ್ತಮ ಪ್ರದೇಶಗಳಲ್ಲಿ ವಾಸಿಸುತ್ತಿದ್ದೀರಿ ಮತ್ತು ಪ್ರಬಲ ಸಮುದಾಯಕ್ಕೆ ಸೇರಿದವರಾಗಿದ್ದೀರಿ. ನಿಮ್ಮ ಬಳಿ ಕೃಷಿ ಭೂಮಿ ಮತ್ತು ಎಲ್ಲಾ ಅಗತ್ಯ ಸೌಲಭ್ಯಗಳಿವೆ. ನಿಮ್ಮ ಸ್ವಂತ ಅರ್ಹತೆ ಮತ್ತು ಸಾಮರ್ಥ್ಯದ ಬಗ್ಗೆ ನೀವು ಹೆಮ್ಮೆ ಪಡಬೇಕು. ಅದನ್ನು ಬಿಟ್ಟು, ನಿಜವಾಗಿಯೂ ವಂಚಿತರಾದವರ (ಬಡವರ ಅಥವಾ ಶೋಷಿತರ) ಹಕ್ಕುಗಳನ್ನು ಕಸಿದುಕೊಳ್ಳಲು ಮುಂದಾಗಬಾರದು” ಎಂದು ಹೇಳಿದ್ದಾರೆ.

ಇದಕ್ಕೆ ಅರ್ಜಿದಾರರು “ನಾವು ನಿಜವಾಗಿಯೂ ಬೌದ್ಧಧರ್ಮವನ್ನು ಅನುಸರಿಸುತ್ತಿದ್ದೇವೆ ಅಥವಾ ಮತಾಂತಗೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

ಈ ವಾದವನ್ನು ಒಪ್ಪಿಕೊಳ್ಳದ ಸಿಜೆಐ, “ಇದೇ ರೀತಿ ಮುಂದುವರಿದರೆ, ಪ್ರತಿಯೊಬ್ಬರೂ ಈ ಹಾದಿಯನ್ನು ಹಿಡಿಯುತ್ತಾರೆ. ಮೇಲ್ವರ್ಗದವರು ಸಹ ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆಯಲು ಅಥವಾ ಅಳವಡಿಸಿಕೊಳ್ಳಲು ಪ್ರಾರಂಭಿಸುತ್ತಾರೆ” ಎಂದಿದ್ದಾರೆ. “ನಮ್ಮಿಂದ ಇನ್ನೂ ಹೆಚ್ಚಿನ ಕಠಿಣ ಕಾಮೆಂಟ್‌ಗಳನ್ನು (ಟೀಕೆಗಳನ್ನು) ಮಾಡಿಸಲು ನಮಗೆ ಒತ್ತಾಯ ಮಾಡಬೇಡಿ” ಎಂದು ವಕೀಲರಿಗೆ ಅಥವಾ ಅರ್ಜಿದಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಅಭ್ಯರ್ಥಿಗಳು ನೀಟ್‌-ಪಿಜಿ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ತಾವು ‘ಸಾಮಾನ್ಯ ವರ್ಗಕ್ಕೆ’ (General Category) ಸೇರಿದವರೆಂದು ನಮೂದಿಸಿದ್ದಾರೆ ಮತ್ತು ತಮಗೆ ‘ಆರ್ಥಿಕವಾಗಿ ಹಿಂದುಳಿದ ವರ್ಗದ’ (EWS) ಸೌಲಭ್ಯ ಬೇಡವೆಂದು ಸ್ಪಷ್ಟಪಡಿಸಿದ್ದಾರೆ” ಎಂಬುವುದನ್ನು ನ್ಯಾಯಾಲಯ ಗಮನಿಸಿದೆ. ಹೀಗಿರುವಾಗ, ಅವರಿಗೆ ಅಲ್ಪಸಂಖ್ಯಾತ ಪ್ರಮಾಣಪತ್ರಗಳನ್ನು ನೀಡಿರುವುದು ಹೇಗೆ? ಎಂದು ನ್ಯಾಯಪೀಠ ಪ್ರಶ್ನಿಸಿದೆ. ಈ ಕುರಿತು ಸೂಕ್ತ ತನಿಖೆ ಅಗತ್ಯವಿದೆ ಎಂದು ಹೇಳಿದೆ.

“ಅರ್ಜಿದಾರರು ಮೂಲತಃ ಸಾಮಾನ್ಯ ವರ್ಗದವರಾಗಿ (ಜನರಲ್ ಕ್ಯಾಟಗರಿ) ಜನಿಸಿದ್ದಾರೆ ಎಂಬುವುದನ್ನು ನಾವು ವಕೀಲರಿಂದ ಖಚಿತಪಡಿಸಿಕೊಂಡಿದ್ದೇವೆ. 2025ರ ನೀಟ್-ಪಿಜಿ ಪರೀಕ್ಷೆಯಲ್ಲಿ ಅವರು ಸಾಮಾನ್ಯ ವರ್ಗದ ಅಭ್ಯರ್ಥಿಗಳಾಗಿ ಗುರುತಿಸಿಕೊಂಡಿದ್ದಾರೆ. ಅವರು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದವರಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಹೀಗಿರುವಾಗ ಉಪ-ವಿಭಾಗಾಧಿಕಾರಿ (ಎಸ್‌ಡಿಒ) ನೀಡಿರುವ ಅಲ್ಪಸಂಖ್ಯಾತ ಪ್ರಮಾಣಪತ್ರಗಳನ್ನು ನೀಡುವ ವಿಷಯದಲ್ಲಿ ಇನ್ನಷ್ಟು ಆಳವಾದ ತನಿಖೆ ಅಗತ್ಯವಿದೆ ಎಂದು ತೋರುತ್ತದೆ” ಎಂದು ನ್ಯಾಯಪೀಠ ತಿಳಿಸಿದೆ.

ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ಕೆಳಗಿನ ಮಾಹಿತಿಯನ್ನು ತಿಳಿಸಲು ಪೀಠ ಸೂಚಿಸಿದೆ.

1 ಅಲ್ಪಸಂಖ್ಯಾತ ಪ್ರಮಾಣಪತ್ರವನ್ನು ನೀಡಲು ಮಾರ್ಗಸೂಚಿಗಳು ಯಾವುವು?

    2. 2025ರ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗ ಎಂದು ಗುರುತನ್ನು ಬಹಿರಂಗಪಡಿಸಿದ ಇಡಬ್ಲ್ಯುಎಸ್‌ಗಿಂತ ಮೇಲ್ಪಟ್ಟ ಮೇಲ್ವರ್ಗದ ಅಭ್ಯರ್ಥಿಯನ್ನು ಬೌದ್ಧ ಅಲ್ಪಸಂಖ್ಯಾತ ಸಮುದಾಯವಾಗಲು ಅನುಮತಿಸಬಹುದೇ? ಇಲ್ಲದಿದ್ದರೆ, ಯಾವ ಆಧಾರದಲ್ಲಿ ಉಪ ವಿಭಾಗದಿಕಾರಿ ಅರ್ಜಿದಾರರಿಗೆ ಅಲ್ಪಸಂಖ್ಯಾತ ಪ್ರಮಾಣಪತ್ರ ನೀಡಿದ್ದಾರೆ?

    ಈ ಬಗ್ಗೆ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಅಲ್ಪಸಂಖ್ಯಾತ ಅಭ್ಯರ್ಥಿಗಳಾಗಿ ಪ್ರವೇಶ ಕೋರಿ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

    ನಿಖಿಲ್ ಕುಮಾರ್ ಪುನಿಯಾ ಮತ್ತು ಏಕ್ತಾ ಸಲ್ಲಿಸಿದ ಅರ್ಜಿಯಲ್ಲಿ ಮೀರತ್‌ನ ಸುಭಾರ್ತಿ ವೈದ್ಯಕೀಯ ಕಾಲೇಜಿನಲ್ಲಿ 50% ಸೀಟುಗಳನ್ನು ಬೌದ್ಧ ಅಲ್ಪಸಂಖ್ಯಾತ ಸಮುದಾಯಕ್ಕೆ ಹಂಚಿಕೆ ಮಾಡಲು ನಿರ್ದೇಶನಗಳನ್ನು ಕೋರಲಾಗಿತ್ತು. ಸುಪ್ರೀಂ ಕೋರ್ಟ್ ಅಕ್ಟೋಬರ್ 20,2022 ರಂದು ಎಸ್‌ಎಲ್‌ಪಿ (ಸಿ) ಸಂಖ್ಯೆ 17003/2022 ರಲ್ಲಿ ನೀಡಿದ ಮಧ್ಯಂತರ ಆದೇಶದ ಪ್ರಕಾರ. ಸದರಿ ಕಾಲೇಜಿಗೆ 2018ರಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗವು ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಿದೆ ಎಂದು ಹೇಳಲಾಗಿದೆ.

    ಅರ್ಜಿದಾರರು ಬೌದ್ಧ ಅಲ್ಪಸಂಖ್ಯಾತ ಅಭ್ಯರ್ಥಿಗಳಾಗಿ ನೀಟ್-ಪಿಜಿ ಕೋರ್ಸ್‌ಗಳಿಗೆ ಸೀಟುಗಳನ್ನು ಹಂಚಿಕೆ ಮಾಡಲು ನಿರ್ದೇಶನಗಳನ್ನು ಕೋರಿದ್ದರು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

    ‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

    ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

    SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

    ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

    SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

    ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

    SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

    ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

    SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

    ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

    ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

    ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

    ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

    ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

    ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

    ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

    ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

    ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...