Homeಮುಖಪುಟಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ ಪಡೆಯುವ ಪ್ರಯತ್ನದಂತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ಬೌದ್ಧ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಎಂದು ಘೋಷಿಸಲಾದ ಉತ್ತರ ಪ್ರದೇಶದ ಸುಭಾರ್ತಿ ವೈದ್ಯಕೀಯ ಕಾಲೇಜಿನಲ್ಲಿ ಬೌದ್ಧ ಅಲ್ಪಸಂಖ್ಯಾತ ಕೋಟಾದಡಿಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗೆ ಪ್ರವೇಶ ಪಡೆಯಲು ನಿರ್ದೇಶನಗಳನ್ನು ಕೋರಿ ಹರಿಯಾಣದ ಇಬ್ಬರು ವ್ಯಕ್ತಿಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ.

ಅರ್ಜಿದಾರರು ತಾವು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇವೆಂದು ಹೇಳಿಕೊಂಡು, ಬೌದ್ಧ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂದು ಉಪವಿಭಾಗಾಧಿಕಾರಿ ನೀಡಿದ ಪ್ರಮಾಣಪತ್ರಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಅರ್ಜಿದಾರರು ‘ಪುನಿಯಾ’ ಜಾತಿಗೆ ಸೇರಿದವರು ಎಂಬುವುದನ್ನು ಗಮನಿಸಿದ ಸಿಜೆಐ ಸೂರ್ಯ ಕಾಂತ್, “ಪುನಿಯಾಗಳು ಪರಿಶಿಷ್ಟ ಜಾತಿ ವರ್ಗದಲ್ಲಿ ಇರಬಹುದು, ಪುನಿಯಾಗಳು ಜಾಟ್ ಕೂಡ ಆಗಿರಬಹುದು, ಅದು ಸಾಮಾನ್ಯ ವರ್ಗ. ನೀವು ಯಾವ ಪುನಿಯಾ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಅರ್ಜಿದಾರರು “ನಾವು ಜಾಟ್” ಎಂದು ಉತ್ತರಿಸಿದ್ದಾರೆ. “ಹಾಗಾದರೆ ನೀವು (ಅಲ್ಪಸಂಖ್ಯಾತರು) ಹೇಗೆ ಆಗುತ್ತೀರಿ?” ಎಂದು ಸಿಜೆಐ ಕೇಳಿದ್ದಾರೆ.

ಈ ವೇಳೆ ಅರ್ಜಿದಾರರು “ನಾವು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇವೆ. ಯಾರಾದರೂ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಬಹುದು” ಎಂದು ಉತ್ತರಿಸಿದ್ದಾರೆ.

ಈ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ, “ಇದು ವಂಚನೆಯ ಮತ್ತೊಂದು ಹಾದಿ, ನಿಜವಾದ ಅಲ್ಪಸಂಖ್ಯಾತರಿಗೆ ಸಿಗಬೇಕಾದ ಹಕ್ಕುಗಳನ್ನು ನೀವು ಕಿತ್ತುಕೊಳ್ಳಲು ಪ್ರಯತ್ನಿಸುತ್ತಿದ್ದೀರಿ. ನೀವು ಆರ್ಥಿಕವಾಗಿ ಸದೃಢರಾಗಿದ್ದೀರಿ, ಉತ್ತಮ ಪ್ರದೇಶಗಳಲ್ಲಿ ವಾಸಿಸುತ್ತಿದ್ದೀರಿ ಮತ್ತು ಪ್ರಬಲ ಸಮುದಾಯಕ್ಕೆ ಸೇರಿದವರಾಗಿದ್ದೀರಿ. ನಿಮ್ಮ ಬಳಿ ಕೃಷಿ ಭೂಮಿ ಮತ್ತು ಎಲ್ಲಾ ಅಗತ್ಯ ಸೌಲಭ್ಯಗಳಿವೆ. ನಿಮ್ಮ ಸ್ವಂತ ಅರ್ಹತೆ ಮತ್ತು ಸಾಮರ್ಥ್ಯದ ಬಗ್ಗೆ ನೀವು ಹೆಮ್ಮೆ ಪಡಬೇಕು. ಅದನ್ನು ಬಿಟ್ಟು, ನಿಜವಾಗಿಯೂ ವಂಚಿತರಾದವರ (ಬಡವರ ಅಥವಾ ಶೋಷಿತರ) ಹಕ್ಕುಗಳನ್ನು ಕಸಿದುಕೊಳ್ಳಲು ಮುಂದಾಗಬಾರದು” ಎಂದು ಹೇಳಿದ್ದಾರೆ.

ಇದಕ್ಕೆ ಅರ್ಜಿದಾರರು “ನಾವು ನಿಜವಾಗಿಯೂ ಬೌದ್ಧಧರ್ಮವನ್ನು ಅನುಸರಿಸುತ್ತಿದ್ದೇವೆ ಅಥವಾ ಮತಾಂತಗೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

ಈ ವಾದವನ್ನು ಒಪ್ಪಿಕೊಳ್ಳದ ಸಿಜೆಐ, “ಇದೇ ರೀತಿ ಮುಂದುವರಿದರೆ, ಪ್ರತಿಯೊಬ್ಬರೂ ಈ ಹಾದಿಯನ್ನು ಹಿಡಿಯುತ್ತಾರೆ. ಮೇಲ್ವರ್ಗದವರು ಸಹ ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆಯಲು ಅಥವಾ ಅಳವಡಿಸಿಕೊಳ್ಳಲು ಪ್ರಾರಂಭಿಸುತ್ತಾರೆ” ಎಂದಿದ್ದಾರೆ. “ನಮ್ಮಿಂದ ಇನ್ನೂ ಹೆಚ್ಚಿನ ಕಠಿಣ ಕಾಮೆಂಟ್‌ಗಳನ್ನು (ಟೀಕೆಗಳನ್ನು) ಮಾಡಿಸಲು ನಮಗೆ ಒತ್ತಾಯ ಮಾಡಬೇಡಿ” ಎಂದು ವಕೀಲರಿಗೆ ಅಥವಾ ಅರ್ಜಿದಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಅಭ್ಯರ್ಥಿಗಳು ನೀಟ್‌-ಪಿಜಿ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ತಾವು ‘ಸಾಮಾನ್ಯ ವರ್ಗಕ್ಕೆ’ (General Category) ಸೇರಿದವರೆಂದು ನಮೂದಿಸಿದ್ದಾರೆ ಮತ್ತು ತಮಗೆ ‘ಆರ್ಥಿಕವಾಗಿ ಹಿಂದುಳಿದ ವರ್ಗದ’ (EWS) ಸೌಲಭ್ಯ ಬೇಡವೆಂದು ಸ್ಪಷ್ಟಪಡಿಸಿದ್ದಾರೆ” ಎಂಬುವುದನ್ನು ನ್ಯಾಯಾಲಯ ಗಮನಿಸಿದೆ. ಹೀಗಿರುವಾಗ, ಅವರಿಗೆ ಅಲ್ಪಸಂಖ್ಯಾತ ಪ್ರಮಾಣಪತ್ರಗಳನ್ನು ನೀಡಿರುವುದು ಹೇಗೆ? ಎಂದು ನ್ಯಾಯಪೀಠ ಪ್ರಶ್ನಿಸಿದೆ. ಈ ಕುರಿತು ಸೂಕ್ತ ತನಿಖೆ ಅಗತ್ಯವಿದೆ ಎಂದು ಹೇಳಿದೆ.

“ಅರ್ಜಿದಾರರು ಮೂಲತಃ ಸಾಮಾನ್ಯ ವರ್ಗದವರಾಗಿ (ಜನರಲ್ ಕ್ಯಾಟಗರಿ) ಜನಿಸಿದ್ದಾರೆ ಎಂಬುವುದನ್ನು ನಾವು ವಕೀಲರಿಂದ ಖಚಿತಪಡಿಸಿಕೊಂಡಿದ್ದೇವೆ. 2025ರ ನೀಟ್-ಪಿಜಿ ಪರೀಕ್ಷೆಯಲ್ಲಿ ಅವರು ಸಾಮಾನ್ಯ ವರ್ಗದ ಅಭ್ಯರ್ಥಿಗಳಾಗಿ ಗುರುತಿಸಿಕೊಂಡಿದ್ದಾರೆ. ಅವರು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದವರಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಹೀಗಿರುವಾಗ ಉಪ-ವಿಭಾಗಾಧಿಕಾರಿ (ಎಸ್‌ಡಿಒ) ನೀಡಿರುವ ಅಲ್ಪಸಂಖ್ಯಾತ ಪ್ರಮಾಣಪತ್ರಗಳನ್ನು ನೀಡುವ ವಿಷಯದಲ್ಲಿ ಇನ್ನಷ್ಟು ಆಳವಾದ ತನಿಖೆ ಅಗತ್ಯವಿದೆ ಎಂದು ತೋರುತ್ತದೆ” ಎಂದು ನ್ಯಾಯಪೀಠ ತಿಳಿಸಿದೆ.

ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ಕೆಳಗಿನ ಮಾಹಿತಿಯನ್ನು ತಿಳಿಸಲು ಪೀಠ ಸೂಚಿಸಿದೆ.

1 ಅಲ್ಪಸಂಖ್ಯಾತ ಪ್ರಮಾಣಪತ್ರವನ್ನು ನೀಡಲು ಮಾರ್ಗಸೂಚಿಗಳು ಯಾವುವು?

    2. 2025ರ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗ ಎಂದು ಗುರುತನ್ನು ಬಹಿರಂಗಪಡಿಸಿದ ಇಡಬ್ಲ್ಯುಎಸ್‌ಗಿಂತ ಮೇಲ್ಪಟ್ಟ ಮೇಲ್ವರ್ಗದ ಅಭ್ಯರ್ಥಿಯನ್ನು ಬೌದ್ಧ ಅಲ್ಪಸಂಖ್ಯಾತ ಸಮುದಾಯವಾಗಲು ಅನುಮತಿಸಬಹುದೇ? ಇಲ್ಲದಿದ್ದರೆ, ಯಾವ ಆಧಾರದಲ್ಲಿ ಉಪ ವಿಭಾಗದಿಕಾರಿ ಅರ್ಜಿದಾರರಿಗೆ ಅಲ್ಪಸಂಖ್ಯಾತ ಪ್ರಮಾಣಪತ್ರ ನೀಡಿದ್ದಾರೆ?

    ಈ ಬಗ್ಗೆ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಅಲ್ಪಸಂಖ್ಯಾತ ಅಭ್ಯರ್ಥಿಗಳಾಗಿ ಪ್ರವೇಶ ಕೋರಿ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

    ನಿಖಿಲ್ ಕುಮಾರ್ ಪುನಿಯಾ ಮತ್ತು ಏಕ್ತಾ ಸಲ್ಲಿಸಿದ ಅರ್ಜಿಯಲ್ಲಿ ಮೀರತ್‌ನ ಸುಭಾರ್ತಿ ವೈದ್ಯಕೀಯ ಕಾಲೇಜಿನಲ್ಲಿ 50% ಸೀಟುಗಳನ್ನು ಬೌದ್ಧ ಅಲ್ಪಸಂಖ್ಯಾತ ಸಮುದಾಯಕ್ಕೆ ಹಂಚಿಕೆ ಮಾಡಲು ನಿರ್ದೇಶನಗಳನ್ನು ಕೋರಲಾಗಿತ್ತು. ಸುಪ್ರೀಂ ಕೋರ್ಟ್ ಅಕ್ಟೋಬರ್ 20,2022 ರಂದು ಎಸ್‌ಎಲ್‌ಪಿ (ಸಿ) ಸಂಖ್ಯೆ 17003/2022 ರಲ್ಲಿ ನೀಡಿದ ಮಧ್ಯಂತರ ಆದೇಶದ ಪ್ರಕಾರ. ಸದರಿ ಕಾಲೇಜಿಗೆ 2018ರಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗವು ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಿದೆ ಎಂದು ಹೇಳಲಾಗಿದೆ.

    ಅರ್ಜಿದಾರರು ಬೌದ್ಧ ಅಲ್ಪಸಂಖ್ಯಾತ ಅಭ್ಯರ್ಥಿಗಳಾಗಿ ನೀಟ್-ಪಿಜಿ ಕೋರ್ಸ್‌ಗಳಿಗೆ ಸೀಟುಗಳನ್ನು ಹಂಚಿಕೆ ಮಾಡಲು ನಿರ್ದೇಶನಗಳನ್ನು ಕೋರಿದ್ದರು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

    ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

    ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

    ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

    ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

    ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

    ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

    ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

    ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

    ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

    ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

    ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

    ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

    ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

    ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

    SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

    ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

    ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

    ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...