Homeಮುಖಪುಟಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ಸಂಪುಟದ 70 (90%) ಸಚಿವರು ಕೋಟ್ಯಾಧಿಪತಿಗಳಾಗಿದ್ದು, ಪ್ರತಿ ಸಚಿವರ ಸರಾಸರಿ ಆಸ್ತಿ 16.24 ಕೋಟಿ ರೂಪಾಯಿಗಳಾಗಿವೆ.

- Advertisement -
- Advertisement -

ನೂತನ ಕೇಂದ್ರ ಸಂಪುಟದ ಶೇಕಡಾ 40 ರಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಶೇಕಡಾ 90 ರಷ್ಟು ಸಚಿವರು ಕೋಟ್ಯಾಧಿಪತಿಗಳಿದ್ದಾರೆ ಎಂದು ಇಂಡಿಪೆಂಡೆಂಟ್ ವಾಚ್‌ಡಾಗ್ ಗ್ರೂಪ್ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ತನ್ನ ವರದಿಯಲ್ಲಿ ತಿಳಿಸಿದೆ.

ಇತ್ತೀಚೆಗೆ ಕೇಂದ್ರ ಸಚಿವ ಸಂಪುಟವನ್ನು ಪುನರ್ರಚಿಸಲಾಯಿತು. ಈ ವೇಳೆ 44 ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಪುಟದಲ್ಲಿನ 78 ಮಂತ್ರಿಗಳಲ್ಲಿ 33 (42%) ಮಂದಿ ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದನ್ನು ಘೋಷಿಸಿದ್ದಾರೆ ಎಂದು ಎಡಿಆರ್ ತಿಳಿಸಿದೆ.

ಅದರಲ್ಲಿ, 24 ಮಂತ್ರಿಗಳ (31%) ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ದರೋಡೆ ಸೇರಿದಂತೆ ಗಂಭೀರ ಪ್ರಕರಣಗಳು ಇರುವುದನ್ನು ಸ್ವತಃ ತಾವೇ ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

ಸಚಿವ ಸಂಪುಟವನ್ನು ಪುನರ್ರಚಿಸಿದ ಬಳಿಕ ಸಂಪುಟದಲ್ಲಿ ಕ್ರಿಮಿನಲ್ ಪ್ರಕರಣಗಳಿರುವ ಸಚಿವರ ಪ್ರಮಾಣ  ಶೇಕಡಾ 3 ರಷ್ಟು ಏರಿಕೆಯಾಗಿದೆ. 2019 ರಲ್ಲಿ ಎಡಿಆರ್ ನಡೆಸಿದ ವಿಶ್ಲೇಷಣೆಯಲ್ಲಿ, ಮೊದಲ ಸಚಿವ ಸಂಪುಟದಲ್ಲಿ ಪ್ರಮಾಣವಚನ ಸ್ವೀಕರಿಸಿದ, 56 ಮಂತ್ರಿಗಳಲ್ಲಿ ಶೇಕಡಾ 39 ರಷ್ಟು ಮಂದಿಯ ವಿರುದ್ದ ಕ್ರಿಮಿನಲ್ ಪ್ರಕರಣಗಳಿದ್ದವು. ಆ ಸಂಪುಟದಲ್ಲಿಯೂ ಶೇಕಡಾ 91 ರಷ್ಟು ಮಂದಿ ಕೋಟ್ಯಾಧಿಪತಿಗಳಿದ್ದರು ಎಂದು ಎಡಿಆರ್ ತಿಳಿಸಿದೆ.

ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಕೂಚ್ ಬೆಹರ್ ಕ್ಷೇತ್ರದ ನಿಸಿತ್ ಪ್ರಮಾಣಿಕ್, ತಮ್ಮ ವಿರುದ್ಧ ಕೊಲೆ (ಐಪಿಸಿ ಸೆಕ್ಷನ್ -302) ಪ್ರಕರಣ ಇರುವುದನ್ನು ಘೋಷಿಸಿಕೊಂಡಿದ್ದಾರೆ. ಹೊಸ ಸಚಿವ ಸಂಪುಟದಲ್ಲಿ 35 ನೇ ವಯಸ್ಸಿನಲ್ಲಿ ಸಚಿವರಾಗಿ ಅತ್ಯಂತ ಕಿರಿಯ ಸಚಿವ ಎನಿಸಿಕೊಂಡಿದ್ದಾರೆ.

ಹೊಸ ಸಂಪುಟಕ್ಕೆ ಸೇರ್ಪಡೆಗೊಂಡಿರುವ ಜಾನ್ ಬಾರ್ಲಾ, ಪ್ರಮಾಣಿಕ್, ಪಂಕಜ್ ಚೌಧರಿ ಮತ್ತು ವಿ.ಮುರಳೀಧರನ್ ಈ ನಾಲ್ಕು ಸಚಿವರು ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳು ಇರುವುದನ್ನು ಘೋಷಿಸಿಕೊಂಡಿದ್ದಾರೆ (ಐಪಿಸಿ ಸೆಕ್ಷನ್ -307).

ನರೇಂದ್ರ ಮೋದಿ ಸಂಪುಟದ 70 (90%) ಸಚಿವರು ಕೋಟ್ಯಾಧಿಪತಿಗಳಾಗಿದ್ದು, ಪ್ರತಿ ಸಚಿವರ ಸರಾಸರಿ ಆಸ್ತಿ 16.24 ಕೋಟಿ ರೂ. ನಾಲ್ವರು ಸಚಿವರು 50 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿದ್ದಾರೆ. ಅವರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ – 395 ಕೋಟಿ ರೂಪಾಯಿ, ಪಿಯೂಷ್ ಗೋಯಲ್ – 95 ಕೋಟಿ ರೂಪಾಯಿ, ನಾರಾಯಣ್  ರಾಣೆ – 87 ಕೋಟಿ ರೂಪಾಯಿ ಮತ್ತು ರಾಜೀವ್ ಚಂದ್ರಶೇಖರ್ – 64 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ.

ಹೊಸ ಕ್ಯಾಬಿನೆಟ್‌ ಮಂತ್ರಿಗಳಲ್ಲಿ 21 ಜನ ಸ್ನಾತಕೋತ್ತರ ಪದವೀಧರರಾಗಿದ್ದಾರೆ. 9 ಮಂತ್ರಿಗಳು ಡಾಕ್ಟರೇಟ್ ಪಡೆದಿದ್ದರೇ, ತಲಾ 17 ಮಂದಿ ಪದವೀಧರರು ಮತ್ತು ವೃತ್ತಿಪರ ಪದವೀಧರರಾಗಿದ್ದಾರೆ. ಇನ್ನು 7 ಮಂದಿ ತಮ್ಮ ಹನ್ನೆರಡನೇ ತರಗತಿ, 3 ಸಚಿವರು ತಮ್ಮ ಹತ್ತನೇ ತರಗತಿ ಮತ್ತು  ಇಬ್ಬರು ಸಚಿವರು ತಮ್ಮ ಎಂಟನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತವರು ಬಿಜೆಪಿ ಸೇರಿ ಕಳಂಕರಹಿತ ಎನಿಸಿಕೊಂಡವರ ಪಟ್ಟಿ ಇಲ್ಲಿದೆ ಇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...