Homeಮುಖಪುಟಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ಸಂಪುಟದ 70 (90%) ಸಚಿವರು ಕೋಟ್ಯಾಧಿಪತಿಗಳಾಗಿದ್ದು, ಪ್ರತಿ ಸಚಿವರ ಸರಾಸರಿ ಆಸ್ತಿ 16.24 ಕೋಟಿ ರೂಪಾಯಿಗಳಾಗಿವೆ.

- Advertisement -
- Advertisement -

ನೂತನ ಕೇಂದ್ರ ಸಂಪುಟದ ಶೇಕಡಾ 40 ರಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಶೇಕಡಾ 90 ರಷ್ಟು ಸಚಿವರು ಕೋಟ್ಯಾಧಿಪತಿಗಳಿದ್ದಾರೆ ಎಂದು ಇಂಡಿಪೆಂಡೆಂಟ್ ವಾಚ್‌ಡಾಗ್ ಗ್ರೂಪ್ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ತನ್ನ ವರದಿಯಲ್ಲಿ ತಿಳಿಸಿದೆ.

ಇತ್ತೀಚೆಗೆ ಕೇಂದ್ರ ಸಚಿವ ಸಂಪುಟವನ್ನು ಪುನರ್ರಚಿಸಲಾಯಿತು. ಈ ವೇಳೆ 44 ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಪುಟದಲ್ಲಿನ 78 ಮಂತ್ರಿಗಳಲ್ಲಿ 33 (42%) ಮಂದಿ ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದನ್ನು ಘೋಷಿಸಿದ್ದಾರೆ ಎಂದು ಎಡಿಆರ್ ತಿಳಿಸಿದೆ.

ಅದರಲ್ಲಿ, 24 ಮಂತ್ರಿಗಳ (31%) ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ದರೋಡೆ ಸೇರಿದಂತೆ ಗಂಭೀರ ಪ್ರಕರಣಗಳು ಇರುವುದನ್ನು ಸ್ವತಃ ತಾವೇ ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

ಸಚಿವ ಸಂಪುಟವನ್ನು ಪುನರ್ರಚಿಸಿದ ಬಳಿಕ ಸಂಪುಟದಲ್ಲಿ ಕ್ರಿಮಿನಲ್ ಪ್ರಕರಣಗಳಿರುವ ಸಚಿವರ ಪ್ರಮಾಣ  ಶೇಕಡಾ 3 ರಷ್ಟು ಏರಿಕೆಯಾಗಿದೆ. 2019 ರಲ್ಲಿ ಎಡಿಆರ್ ನಡೆಸಿದ ವಿಶ್ಲೇಷಣೆಯಲ್ಲಿ, ಮೊದಲ ಸಚಿವ ಸಂಪುಟದಲ್ಲಿ ಪ್ರಮಾಣವಚನ ಸ್ವೀಕರಿಸಿದ, 56 ಮಂತ್ರಿಗಳಲ್ಲಿ ಶೇಕಡಾ 39 ರಷ್ಟು ಮಂದಿಯ ವಿರುದ್ದ ಕ್ರಿಮಿನಲ್ ಪ್ರಕರಣಗಳಿದ್ದವು. ಆ ಸಂಪುಟದಲ್ಲಿಯೂ ಶೇಕಡಾ 91 ರಷ್ಟು ಮಂದಿ ಕೋಟ್ಯಾಧಿಪತಿಗಳಿದ್ದರು ಎಂದು ಎಡಿಆರ್ ತಿಳಿಸಿದೆ.

ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಕೂಚ್ ಬೆಹರ್ ಕ್ಷೇತ್ರದ ನಿಸಿತ್ ಪ್ರಮಾಣಿಕ್, ತಮ್ಮ ವಿರುದ್ಧ ಕೊಲೆ (ಐಪಿಸಿ ಸೆಕ್ಷನ್ -302) ಪ್ರಕರಣ ಇರುವುದನ್ನು ಘೋಷಿಸಿಕೊಂಡಿದ್ದಾರೆ. ಹೊಸ ಸಚಿವ ಸಂಪುಟದಲ್ಲಿ 35 ನೇ ವಯಸ್ಸಿನಲ್ಲಿ ಸಚಿವರಾಗಿ ಅತ್ಯಂತ ಕಿರಿಯ ಸಚಿವ ಎನಿಸಿಕೊಂಡಿದ್ದಾರೆ.

ಹೊಸ ಸಂಪುಟಕ್ಕೆ ಸೇರ್ಪಡೆಗೊಂಡಿರುವ ಜಾನ್ ಬಾರ್ಲಾ, ಪ್ರಮಾಣಿಕ್, ಪಂಕಜ್ ಚೌಧರಿ ಮತ್ತು ವಿ.ಮುರಳೀಧರನ್ ಈ ನಾಲ್ಕು ಸಚಿವರು ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳು ಇರುವುದನ್ನು ಘೋಷಿಸಿಕೊಂಡಿದ್ದಾರೆ (ಐಪಿಸಿ ಸೆಕ್ಷನ್ -307).

ನರೇಂದ್ರ ಮೋದಿ ಸಂಪುಟದ 70 (90%) ಸಚಿವರು ಕೋಟ್ಯಾಧಿಪತಿಗಳಾಗಿದ್ದು, ಪ್ರತಿ ಸಚಿವರ ಸರಾಸರಿ ಆಸ್ತಿ 16.24 ಕೋಟಿ ರೂ. ನಾಲ್ವರು ಸಚಿವರು 50 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿದ್ದಾರೆ. ಅವರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ – 395 ಕೋಟಿ ರೂಪಾಯಿ, ಪಿಯೂಷ್ ಗೋಯಲ್ – 95 ಕೋಟಿ ರೂಪಾಯಿ, ನಾರಾಯಣ್  ರಾಣೆ – 87 ಕೋಟಿ ರೂಪಾಯಿ ಮತ್ತು ರಾಜೀವ್ ಚಂದ್ರಶೇಖರ್ – 64 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ.

ಹೊಸ ಕ್ಯಾಬಿನೆಟ್‌ ಮಂತ್ರಿಗಳಲ್ಲಿ 21 ಜನ ಸ್ನಾತಕೋತ್ತರ ಪದವೀಧರರಾಗಿದ್ದಾರೆ. 9 ಮಂತ್ರಿಗಳು ಡಾಕ್ಟರೇಟ್ ಪಡೆದಿದ್ದರೇ, ತಲಾ 17 ಮಂದಿ ಪದವೀಧರರು ಮತ್ತು ವೃತ್ತಿಪರ ಪದವೀಧರರಾಗಿದ್ದಾರೆ. ಇನ್ನು 7 ಮಂದಿ ತಮ್ಮ ಹನ್ನೆರಡನೇ ತರಗತಿ, 3 ಸಚಿವರು ತಮ್ಮ ಹತ್ತನೇ ತರಗತಿ ಮತ್ತು  ಇಬ್ಬರು ಸಚಿವರು ತಮ್ಮ ಎಂಟನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತವರು ಬಿಜೆಪಿ ಸೇರಿ ಕಳಂಕರಹಿತ ಎನಿಸಿಕೊಂಡವರ ಪಟ್ಟಿ ಇಲ್ಲಿದೆ ಇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...