Homeಮುಖಪುಟಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ಸಂಪುಟದ 70 (90%) ಸಚಿವರು ಕೋಟ್ಯಾಧಿಪತಿಗಳಾಗಿದ್ದು, ಪ್ರತಿ ಸಚಿವರ ಸರಾಸರಿ ಆಸ್ತಿ 16.24 ಕೋಟಿ ರೂಪಾಯಿಗಳಾಗಿವೆ.

- Advertisement -
- Advertisement -

ನೂತನ ಕೇಂದ್ರ ಸಂಪುಟದ ಶೇಕಡಾ 40 ರಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಶೇಕಡಾ 90 ರಷ್ಟು ಸಚಿವರು ಕೋಟ್ಯಾಧಿಪತಿಗಳಿದ್ದಾರೆ ಎಂದು ಇಂಡಿಪೆಂಡೆಂಟ್ ವಾಚ್‌ಡಾಗ್ ಗ್ರೂಪ್ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ತನ್ನ ವರದಿಯಲ್ಲಿ ತಿಳಿಸಿದೆ.

ಇತ್ತೀಚೆಗೆ ಕೇಂದ್ರ ಸಚಿವ ಸಂಪುಟವನ್ನು ಪುನರ್ರಚಿಸಲಾಯಿತು. ಈ ವೇಳೆ 44 ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಪುಟದಲ್ಲಿನ 78 ಮಂತ್ರಿಗಳಲ್ಲಿ 33 (42%) ಮಂದಿ ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದನ್ನು ಘೋಷಿಸಿದ್ದಾರೆ ಎಂದು ಎಡಿಆರ್ ತಿಳಿಸಿದೆ.

ಅದರಲ್ಲಿ, 24 ಮಂತ್ರಿಗಳ (31%) ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ದರೋಡೆ ಸೇರಿದಂತೆ ಗಂಭೀರ ಪ್ರಕರಣಗಳು ಇರುವುದನ್ನು ಸ್ವತಃ ತಾವೇ ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

ಸಚಿವ ಸಂಪುಟವನ್ನು ಪುನರ್ರಚಿಸಿದ ಬಳಿಕ ಸಂಪುಟದಲ್ಲಿ ಕ್ರಿಮಿನಲ್ ಪ್ರಕರಣಗಳಿರುವ ಸಚಿವರ ಪ್ರಮಾಣ  ಶೇಕಡಾ 3 ರಷ್ಟು ಏರಿಕೆಯಾಗಿದೆ. 2019 ರಲ್ಲಿ ಎಡಿಆರ್ ನಡೆಸಿದ ವಿಶ್ಲೇಷಣೆಯಲ್ಲಿ, ಮೊದಲ ಸಚಿವ ಸಂಪುಟದಲ್ಲಿ ಪ್ರಮಾಣವಚನ ಸ್ವೀಕರಿಸಿದ, 56 ಮಂತ್ರಿಗಳಲ್ಲಿ ಶೇಕಡಾ 39 ರಷ್ಟು ಮಂದಿಯ ವಿರುದ್ದ ಕ್ರಿಮಿನಲ್ ಪ್ರಕರಣಗಳಿದ್ದವು. ಆ ಸಂಪುಟದಲ್ಲಿಯೂ ಶೇಕಡಾ 91 ರಷ್ಟು ಮಂದಿ ಕೋಟ್ಯಾಧಿಪತಿಗಳಿದ್ದರು ಎಂದು ಎಡಿಆರ್ ತಿಳಿಸಿದೆ.

ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಕೂಚ್ ಬೆಹರ್ ಕ್ಷೇತ್ರದ ನಿಸಿತ್ ಪ್ರಮಾಣಿಕ್, ತಮ್ಮ ವಿರುದ್ಧ ಕೊಲೆ (ಐಪಿಸಿ ಸೆಕ್ಷನ್ -302) ಪ್ರಕರಣ ಇರುವುದನ್ನು ಘೋಷಿಸಿಕೊಂಡಿದ್ದಾರೆ. ಹೊಸ ಸಚಿವ ಸಂಪುಟದಲ್ಲಿ 35 ನೇ ವಯಸ್ಸಿನಲ್ಲಿ ಸಚಿವರಾಗಿ ಅತ್ಯಂತ ಕಿರಿಯ ಸಚಿವ ಎನಿಸಿಕೊಂಡಿದ್ದಾರೆ.

ಹೊಸ ಸಂಪುಟಕ್ಕೆ ಸೇರ್ಪಡೆಗೊಂಡಿರುವ ಜಾನ್ ಬಾರ್ಲಾ, ಪ್ರಮಾಣಿಕ್, ಪಂಕಜ್ ಚೌಧರಿ ಮತ್ತು ವಿ.ಮುರಳೀಧರನ್ ಈ ನಾಲ್ಕು ಸಚಿವರು ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳು ಇರುವುದನ್ನು ಘೋಷಿಸಿಕೊಂಡಿದ್ದಾರೆ (ಐಪಿಸಿ ಸೆಕ್ಷನ್ -307).

ನರೇಂದ್ರ ಮೋದಿ ಸಂಪುಟದ 70 (90%) ಸಚಿವರು ಕೋಟ್ಯಾಧಿಪತಿಗಳಾಗಿದ್ದು, ಪ್ರತಿ ಸಚಿವರ ಸರಾಸರಿ ಆಸ್ತಿ 16.24 ಕೋಟಿ ರೂ. ನಾಲ್ವರು ಸಚಿವರು 50 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿದ್ದಾರೆ. ಅವರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ – 395 ಕೋಟಿ ರೂಪಾಯಿ, ಪಿಯೂಷ್ ಗೋಯಲ್ – 95 ಕೋಟಿ ರೂಪಾಯಿ, ನಾರಾಯಣ್  ರಾಣೆ – 87 ಕೋಟಿ ರೂಪಾಯಿ ಮತ್ತು ರಾಜೀವ್ ಚಂದ್ರಶೇಖರ್ – 64 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ.

ಹೊಸ ಕ್ಯಾಬಿನೆಟ್‌ ಮಂತ್ರಿಗಳಲ್ಲಿ 21 ಜನ ಸ್ನಾತಕೋತ್ತರ ಪದವೀಧರರಾಗಿದ್ದಾರೆ. 9 ಮಂತ್ರಿಗಳು ಡಾಕ್ಟರೇಟ್ ಪಡೆದಿದ್ದರೇ, ತಲಾ 17 ಮಂದಿ ಪದವೀಧರರು ಮತ್ತು ವೃತ್ತಿಪರ ಪದವೀಧರರಾಗಿದ್ದಾರೆ. ಇನ್ನು 7 ಮಂದಿ ತಮ್ಮ ಹನ್ನೆರಡನೇ ತರಗತಿ, 3 ಸಚಿವರು ತಮ್ಮ ಹತ್ತನೇ ತರಗತಿ ಮತ್ತು  ಇಬ್ಬರು ಸಚಿವರು ತಮ್ಮ ಎಂಟನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತವರು ಬಿಜೆಪಿ ಸೇರಿ ಕಳಂಕರಹಿತ ಎನಿಸಿಕೊಂಡವರ ಪಟ್ಟಿ ಇಲ್ಲಿದೆ ಇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...