Homeಕರ್ನಾಟಕಹೊಸ ವರ್ಷ-ಕೊರೊನಾ ಮುನ್ನೆಚ್ಚರಿಕೆ: ಗುರುವಾರ ಮಧ್ಯಾಹ್ನದಿಂದ ಶುಕ್ರವಾರ ಬೆಳಿಗ್ಗೆ ತನಕ ಕರ್ಫ್ಯೂ

ಹೊಸ ವರ್ಷ-ಕೊರೊನಾ ಮುನ್ನೆಚ್ಚರಿಕೆ: ಗುರುವಾರ ಮಧ್ಯಾಹ್ನದಿಂದ ಶುಕ್ರವಾರ ಬೆಳಿಗ್ಗೆ ತನಕ ಕರ್ಫ್ಯೂ

- Advertisement -
- Advertisement -

ರೂಪಾಂತರಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಹೊಸ ವರ್ಷದ ಪಾರ್ಟಿಗಳಿಗೆ ಕಡಿವಾಣ ಹಾಕುವ ಸಲುವಾಗಿ ಸರ್ಕಾರವು ಗುರುವಾರ ಮಧ್ಯಾಹ್ನ 12 ಗಂಟೆಯಿಂದ ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ (ಕರ್ಫ್ಯೂ) ಜಾರಿಗೊಳಿಸಿದೆ.

ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪನವರು ರಾತ್ರಿ ಕರ್ಫ್ಯೂ ಘೋಷಿಸಿದ ದಿನವೇ ಅದರ ದಿನಾಂಕ ಬದಲಿಸಿದ್ದರು. ನಂತರ ಆ ಆದೇಶವನ್ನೇ ಹಿಂತೆಗೆದುಕೊಂಡಿದ್ದರು. ರಾಜ್ಯ ಸರ್ಕಾರದ ಈ ನಡೆ ರಾಜ್ಯದಾದ್ಯಂತ ವ್ಯಾಪಕ ವ್ಯಂಗ್ಯಕ್ಕೆ ಗುರಿಯಾಗಿತ್ತು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

“ಗೃಹ ಸಚಿವರು ಹೇಳಿದ್ದನ್ನು ಮಾತ್ರ ನಾವು ಮಾಡಿದ್ದೇವೆ” ಎಂದಿರುವ ಬೆಂಗಳೂರು ನಗರ ಪೊಲೀಸರ ಹಿರಿಯ ಅಧಿಕಾರಿ ಆಯುಕ್ತ ಕಮಲ್ ಪಂತ್, “ನಿಷೇಧಿತ ಆದೇಶಗಳು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆಗೆ ಮಾತ್ರ ಸಂಬಂಧಿಸಿದೆ. ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳಂತಹ ಸಂಸ್ಥೆಗಳು ಅವುಗಳ ಪರವಾನಗಿ ಸ್ಥಿತಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬಹುದು” ಎಂದು ಹೇಳಿದ್ದಾರೆ.

“ಹೊಸ ಮಾದರಿಯ ಬ್ರಿಟನ್ ಕೊರೋನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈ ರೀತಿಯ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ನಿಷೇಧಾಜ್ಞೆ ವೇಳೆ ಜನರು ಸಹಕರಿಸಬೇಕು. ಎಲ್ಲರೂ ಕೊರೊನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯದ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಇವತ್ತು ಒಂದು ದಿನ ಪಾಲಿಸಿ” ಎಂದು ಯಡಿಯೂರಪ್ಪನವರು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬಿಎಸ್​ವೈ ವಿರುದ್ಧ ಮತ್ತೆ ಅಪಸ್ವರ ಎತ್ತಿದ ಯತ್ನಾಳ್​; ಸಿಎಂ ಕಾರ್ಯವೈಖರಿ ಖಂಡಿಸಿ ಕಟೀಲ್​ಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...