Homeಮುಖಪುಟಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ

- Advertisement -
- Advertisement -

ಹೊಸ ವರ್ಷದ ಪ್ರಯುಕ್ತ ಅದಾನಿ ಗ್ರೂಪ್ಸ್‌ಗೆ ಭಾರತದ ಪ್ರಧಾನಿ ಮೋದಿ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದ್ದು, ಒಪ್ಪಂದದಂತೆ ಭಾರತದ ವಿಮಾನ ನಿಲ್ದಾಣಗಳನ್ನು ಐವತ್ತು ವರ್ಷಗಳ ಕಾಲ ಅದಾನಿ ಗ್ರೂಪ್ಸ್‌ಗೆ ವಹಿಸಲಾಗುತ್ತಿದೆ. ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಮುಂದಿನ ತಿಂಗಳು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವ ಒಪ್ಪಂದಕ್ಕೆ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಹಿ ಹಾಕಲಿದೆ. ಈ ಹಿಂದೆ ಮಂಗಳೂರು, ಲಕ್ನೋ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳನ್ನು ಅದಾನಿಗೆ ಹಸ್ತಾಂತರಿಸಲಾಗಿತ್ತು.

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ.

2021 ಜನವರಿ 25 ರೊಳಗೆ ಈ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಉಳಿದ ಮೂರೂ ವಿಮಾನ ನಿಲ್ದಾಣಗಳನ್ನೂ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ ಎಂದು AAI ಅಧ್ಯಕ್ಷ ಅರವಿಂದ್ ಸಿಂಗ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಈ ಆರು ವಿಮಾನ ನಿಲ್ದಾಣಗಳನ್ನು ಹೊರತುಪಡಿಸಿ, ವಾರಣಾಸಿ, ಅಮೃತಸರ, ಭುವನೇಶ್ವರ, ರಾಯ್‌ಪುರ, ಇಂದೋರ್ ಮತ್ತು ತಿರುಚ್ಚಿ ಸೇರಿದಂತೆ ಇನ್ನೂ ವಿಮಾನ ನಿಲ್ದಾಣಗಳನ್ನು PPP ಅಡಿಯಲ್ಲಿ ಲೀಸ್‌ಗೆ ಕೊಡಲು ಸರ್ಕಾರ ನಿರ್ಧರಿಸಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ತಿರುವನಂತಪುರಂ ವಿಮಾನ ನಿಲ್ದಾಣವನ್ನು ಪಿಪಿಪಿ ಆಧಾರದ ಮೇಲೆ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕೇರಳ ಸರ್ಕಾರ ಕಾನೂನುಬದ್ಧವಾಗಿ ಪ್ರಶ್ನಿಸಿತ್ತು. ಈ ಪ್ರಕ್ರಿಯೆಯನ್ನು ಅತ್ಯಂತ ಮುಕ್ತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲಾಗಿದ್ದರಿಂದ ಆ ನ್ಯಾಯಾಲಯದ ತೀರ್ಪು ನಮ್ಮ ಪರವಾಗಿದೆ. ಉಳಿದ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವುದು” ಎಂದು ವಿಮಾನಯಾನ ಕಾರ್ಯದರ್ಶಿ ಪಿ ಎಸ್ ಖರೋಲಾ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜಾವಾಡೇಕರ್ ಈ ಹಿಂದೆ ದೆಹಲಿಯ ಸುದ್ಧಿಗೋಷ್ಠಿಯಲ್ಲಿ ಘೋಷಿಸಿದ್ದರು.

ಕೇಂದ್ರ ಸರ್ಕಾರ ಈ ಹಿಂದೆ 12 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಿಕೊಡಲು ನಿರ್ಧರಿಸಿತ್ತು. ಇದರ ಬಗ್ಗೆ ಅದಾನಿ ಸಂಸ್ಥೆಯೊಂದಿಗೆ 2020 ರ ಫೆಬ್ರವರಿಯಲ್ಲಿ ಒಪ್ಪಂದ ನಡೆದಿತ್ತು. ಈ ಪ್ರಕಾರ ಮೊದಲ ಹಂತದಲ್ಲಿ 6 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹ ಸಂಸ್ಥೆ ಅತ್ಯಧಿಕ ಮೊತ್ತ ನಮೂದಿಸುವ ಮೂಲಕ ಗೆದ್ದುಕೊಂಡಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಂಬಾನಿ-ಅದಾನಿಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದರು. ಇದಕ್ಕೆ ಒಂದೊಂದೇ ಸಾಕ್ಷಿಗಳು ಸಿಗುತ್ತಲೇ ಇದೆ. “ಸರ್ಕಾರದ ಒಡೆತನದಲ್ಲಿರುವ ಪ್ರತಿಯೊಂದು ಸಂಸ್ಥೆಗಳನ್ನೂ ಖಾಸಗಿಯವರಿಗೆ ಮಾರುವ ಮೂಲಕ ಇಡೀ ದೇಶವನ್ನೇ ಮಾರಲು ಹೊರಟಿದ್ದಾರೆ ನಮ್ಮ ಪ್ರಧಾನಿ” ಎಂದು ಹಲವರು ಟೀಕಿಸುತ್ತಿದ್ದಾರೆ.

ಆದರೆ ಇದಾವುದಕ್ಕೂ ತಲೆಕೆಡಿಸಿಕೊಳ್ಳದ ಪ್ರಧಾನಿ ಮೋದಿ, ಈ ಹಿಂದೆ ರೈಲು ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಅನುಮೋದನೆ ನೀಡಿದ್ದರು


ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯಮಾಡಿ ಜಾಹೀರಾತುಗಳನ್ನು ಕಡಿಮೆ ಮಾಡಿ.ತುಂಬಾ ತೊಂದರೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...