Homeಮುಖಪುಟಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ

- Advertisement -
- Advertisement -

ಹೊಸ ವರ್ಷದ ಪ್ರಯುಕ್ತ ಅದಾನಿ ಗ್ರೂಪ್ಸ್‌ಗೆ ಭಾರತದ ಪ್ರಧಾನಿ ಮೋದಿ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದ್ದು, ಒಪ್ಪಂದದಂತೆ ಭಾರತದ ವಿಮಾನ ನಿಲ್ದಾಣಗಳನ್ನು ಐವತ್ತು ವರ್ಷಗಳ ಕಾಲ ಅದಾನಿ ಗ್ರೂಪ್ಸ್‌ಗೆ ವಹಿಸಲಾಗುತ್ತಿದೆ. ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಮುಂದಿನ ತಿಂಗಳು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವ ಒಪ್ಪಂದಕ್ಕೆ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಹಿ ಹಾಕಲಿದೆ. ಈ ಹಿಂದೆ ಮಂಗಳೂರು, ಲಕ್ನೋ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳನ್ನು ಅದಾನಿಗೆ ಹಸ್ತಾಂತರಿಸಲಾಗಿತ್ತು.

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ.

2021 ಜನವರಿ 25 ರೊಳಗೆ ಈ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಉಳಿದ ಮೂರೂ ವಿಮಾನ ನಿಲ್ದಾಣಗಳನ್ನೂ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ ಎಂದು AAI ಅಧ್ಯಕ್ಷ ಅರವಿಂದ್ ಸಿಂಗ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಈ ಆರು ವಿಮಾನ ನಿಲ್ದಾಣಗಳನ್ನು ಹೊರತುಪಡಿಸಿ, ವಾರಣಾಸಿ, ಅಮೃತಸರ, ಭುವನೇಶ್ವರ, ರಾಯ್‌ಪುರ, ಇಂದೋರ್ ಮತ್ತು ತಿರುಚ್ಚಿ ಸೇರಿದಂತೆ ಇನ್ನೂ ವಿಮಾನ ನಿಲ್ದಾಣಗಳನ್ನು PPP ಅಡಿಯಲ್ಲಿ ಲೀಸ್‌ಗೆ ಕೊಡಲು ಸರ್ಕಾರ ನಿರ್ಧರಿಸಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ತಿರುವನಂತಪುರಂ ವಿಮಾನ ನಿಲ್ದಾಣವನ್ನು ಪಿಪಿಪಿ ಆಧಾರದ ಮೇಲೆ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕೇರಳ ಸರ್ಕಾರ ಕಾನೂನುಬದ್ಧವಾಗಿ ಪ್ರಶ್ನಿಸಿತ್ತು. ಈ ಪ್ರಕ್ರಿಯೆಯನ್ನು ಅತ್ಯಂತ ಮುಕ್ತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲಾಗಿದ್ದರಿಂದ ಆ ನ್ಯಾಯಾಲಯದ ತೀರ್ಪು ನಮ್ಮ ಪರವಾಗಿದೆ. ಉಳಿದ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವುದು” ಎಂದು ವಿಮಾನಯಾನ ಕಾರ್ಯದರ್ಶಿ ಪಿ ಎಸ್ ಖರೋಲಾ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜಾವಾಡೇಕರ್ ಈ ಹಿಂದೆ ದೆಹಲಿಯ ಸುದ್ಧಿಗೋಷ್ಠಿಯಲ್ಲಿ ಘೋಷಿಸಿದ್ದರು.

ಕೇಂದ್ರ ಸರ್ಕಾರ ಈ ಹಿಂದೆ 12 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಿಕೊಡಲು ನಿರ್ಧರಿಸಿತ್ತು. ಇದರ ಬಗ್ಗೆ ಅದಾನಿ ಸಂಸ್ಥೆಯೊಂದಿಗೆ 2020 ರ ಫೆಬ್ರವರಿಯಲ್ಲಿ ಒಪ್ಪಂದ ನಡೆದಿತ್ತು. ಈ ಪ್ರಕಾರ ಮೊದಲ ಹಂತದಲ್ಲಿ 6 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹ ಸಂಸ್ಥೆ ಅತ್ಯಧಿಕ ಮೊತ್ತ ನಮೂದಿಸುವ ಮೂಲಕ ಗೆದ್ದುಕೊಂಡಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಂಬಾನಿ-ಅದಾನಿಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದರು. ಇದಕ್ಕೆ ಒಂದೊಂದೇ ಸಾಕ್ಷಿಗಳು ಸಿಗುತ್ತಲೇ ಇದೆ. “ಸರ್ಕಾರದ ಒಡೆತನದಲ್ಲಿರುವ ಪ್ರತಿಯೊಂದು ಸಂಸ್ಥೆಗಳನ್ನೂ ಖಾಸಗಿಯವರಿಗೆ ಮಾರುವ ಮೂಲಕ ಇಡೀ ದೇಶವನ್ನೇ ಮಾರಲು ಹೊರಟಿದ್ದಾರೆ ನಮ್ಮ ಪ್ರಧಾನಿ” ಎಂದು ಹಲವರು ಟೀಕಿಸುತ್ತಿದ್ದಾರೆ.

ಆದರೆ ಇದಾವುದಕ್ಕೂ ತಲೆಕೆಡಿಸಿಕೊಳ್ಳದ ಪ್ರಧಾನಿ ಮೋದಿ, ಈ ಹಿಂದೆ ರೈಲು ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಅನುಮೋದನೆ ನೀಡಿದ್ದರು


ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯಮಾಡಿ ಜಾಹೀರಾತುಗಳನ್ನು ಕಡಿಮೆ ಮಾಡಿ.ತುಂಬಾ ತೊಂದರೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...