Homeನಿಜವೋ ಸುಳ್ಳೋಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ...

ಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ…

- Advertisement -
- Advertisement -
  1. ಗ್ರಾಮ ಪಂಚಾಯಿತಿ ಚುನಾವಣೆ ಏಪ್ರಿಲ್ 5 ಮತ್ತು 9ಕ್ಕೆ: ಇದು ಸುಳ್ಳು ಸುದ್ದಿ

ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು 10ನೇ ತರಗತಿ ಪಾಸಾಗಿರಬೇಕು, ಪಾನ್ ಕಾರ್ಡ್ ಮತ್ತು ಆಧಾರ ಕಾರ್ಡ್ ಕಡ್ಡಾಯ ಎಂಬ ಸುದ್ದಿ ಹರಿದಾಡಿತ್ತು. ಏಪ್ರಿಲ್ 5 ಮತ್ತು 9ಕ್ಕೆ ಚುನಾವಣೆ ಸಹ ನಡೆಯಲಿದೆ ಎಂಬ ಆದೇಶವೂ ಬಂದಿತ್ತು.]

ಆದರೆ ಇದು ಸುಳ್ಳು ಸುದ್ದಿ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಇನ್ನು ಅಧಿಸೂಚನೆ ಹೊರಡಿಸಿಲ್ಲ ಮತ್ತು ಯಾವುದೇ ನಿಯಮಗಳಿಲ್ಲ ಎಂದು ಹೊಸ ಪ್ರಕಟಣೆ ಹೊರಡಿಸಿದೆ.

2. ಚಪಾಕ್ ಚಿತ್ರದಲ್ಲಿ ಮುಸ್ಲಿಂ ಆರೋಪಿಯ ಹೆಸರನ್ನು ಹಿಂದೂ ಹೆಸರಾಗಿ ಬದಲಾಯಿಸಲಾಗಿದೆಯೇ?

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಆಸಿಡ್ ದಾಳಿಗೊಳಗಾದ ಹೆಣ್ಣುಮಗಳ ಬದುಕಿನ ಘಟನೆಯಾಧಾರಿತ ಚಪಾಕ್ ಎಂಬ ಚಿತ್ರದಲ್ಲಿ ಹಣ ಹೂಡಿದ್ದಲ್ಲದೇ ತಾನೂ ನಟಿಸಿದ್ದಾಳೆ. ಈ ಚಿತ್ರವೂ ಜನವರಿ 10ರಂದು ಬಿಡುಗಡೆಯಾಗಿದೆ.

ಇದಕ್ಕೂ ಮೊದಲು ಜನವರಿ 05ರಂದು ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಎಬಿವಿಪಿ, ಬಿಜೆಪಿ ಗೂಂಡಾಗಳು ನುಗ್ಗಿ ಹಲ್ಲೆ ಮಾಡಿದ್ದನ್ನು ಖಂಡಿಸಿ ದೀಪಿಕಾ ಪಡುಕೋಣೆ ಜೆಎನ್‌ಯುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದರು.

ಇಷ್ಟಕ್ಕೆ ದೀಪಿಕಾ ವಿರುದ್ಧ ದ್ವೇಷ ಸಾಧಿಸಿದ ಕೆಲವರು ಅವರ ವಿರುದ್ಧ ಇಲ್ಲಸಲ್ಲದ ಸುಳ್ಳು ಹರಡಲು ಮುಂದಾಗಿದ್ದರು. ಅದರಲ್ಲಿ ಮುಖ್ಯವಾದುದು ಅವರ ಚಪಾಕ್ ಚಿತ್ರದಲ್ಲಿ ಸಂತ್ರಸ್ತೆ ಮೇಲೆ ಆಸಿಡ್ ಎರಚಿದ ಆರೋಪಿ ನದೀಮ್ ಖಾನ್ ಎಂಬ ಹೆಸರನ್ನು ರಾಜೇಶ್ ಶರ್ಮಾ ಎಂದು ಬದಲಿಸಲಾಗಿದೆ ಎಂಬ ಆರೋಪ..

ಒಪಿಇಂಡಿಯಾ, ಸ್ವರಾಜ್ಯ ಎಂಬ ಬಿಜೆಪಿ ಬೆಂಬಲಿತ ವೆಬ್‌ಗಳು ಇದನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಿದ್ದವು. ಸುಬ್ರಮಣ್ಯಸ್ವಾಮಿ ಅಂತೂ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದರು. ಹಲವು ಬಿಜೆಪಿ ಸಂಸದರಿಂದ ಶುರುವಾಗಿ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಇದನ್ನು ಷೇರ್ ಮಾಡಿದ್ದರು.

ಆದರೆ ಸಿನಿಮಾ ನೋಡಿದ ಬಹುತೇಕರು ಸ್ಪಷ್ಟಪಡಿಸಿರುವುದೇನೆಂದರೆ ನದೀಮ್ ಖಾನ್ ಬದಲಾಗಿ ಬಶೀರ್ ಎಂದು ಮುಸ್ಲಿಂ ಹೆಸರನ್ನೇ ಇಡಲಾಗಿದೆ. ಅಂದರೆ ಬಿಜೆಪಿಗರು, ಸ್ವರಾಜ್ ಹೇಳಿದ್ದೆಲ್ಲ ಹಸಿ ಸುಳ್ಳು ಎಂದು ಜಗಜ್ಜಾಹೀರಾಗಿದೆ.

3. ಇಂದಿರಾಗಾಂಧಿ 1975ರಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿಸಿದ್ದರೆ?

“1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿ ದೆಹಲಿ ಪೊಲೀಸರೊಂದಿಗೆ ಜೆಎನ್‌ಯುಗೆ ಪ್ರವೇಶಿಸಿ, ಆ ಸಮಯದಲ್ಲಿ ಜೆಎನ್‌ಯು ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿದ್ದ ಸಿಪಿಐ ಮುಖಂಡ ಸೀತಾರಾಮ್ ಯೆಚೂರಿಗೆ ಹೊಡೆದು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು ಮತ್ತು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದಕ್ಕೆ ಕ್ಷಮೆಯಾಚಿಸುವ ಪತ್ರವನ್ನು ಸೀತಾರಾಮ್ ಯೆಚೂರಿ ಓದಿದರು. ಇದನ್ನು ಕಮ್ಯುನಿಸ್ಟರೊಂದಿಗೆ ವ್ಯವಹರಿಸುವ ಉಕ್ಕಿನಹಸ್ತ ಎಂದು ಕರೆಯಲಾಗುತ್ತದೆ. ಅಮಿತ್ ಶಾ ಅವರ ಮುಂದೆ ಸಂತನಾಗಿ ಕಾಣಿಸುತ್ತಾನೆ.”

ಈ ರೀತಿಯ ಸಂದೇಶವೊಂದನ್ನು ಮೋಹನ್ ದಾಸ್ ಪೈ ‘ಇದು ನಿಜವೇ’ ಎಂಬ ತಲೆಬರಹದೊಂದಿಗೆ ಹಂಚಿಕೊಂಡಿದ್ದಾರೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಲು ಬೂಮ್‌ಲೈವ್ ಸೀತಾರಾಂ ಯೆಚೂರಿಯವರನ್ನು ಸಂಪರ್ಕಿಸಿತು. ಆಗ ಅವರು “ಇದು 1975ರ ಚಿತ್ರವಲ್ಲ ಬದಲಿಗೆ 1977ರ ಸೆಪ್ಟಂಬರ್‌ನಲ್ಲಿ ತೆಗೆದ ಚಿತ್ರ. ಇಂದಿರಾಗಾಂಧಿಯವರು ಜೆಎನ್‌ಯು ವಿವಿಯ ಉಪಕುಲಪತಿಗಳಾಗಿದ್ದರು. ಅದನ್ನು ವಿರೋಧಿಸಿ ನಾವು ದೊಡ್ಡ ಹೋರಾಟ ನಡೆಸಿದ್ದವು. ಆಗ ಅವರು ಜೆಎನ್‌ಯುಗೆ ಬಂದಾಗ ನಾನು ನಮ್ಮ ಹಕ್ಕೊತ್ತಾಯ ಪತ್ರವನ್ನು ಓದಿ ರಾಜೀನಾಮೆಗೆ ಒತ್ತಾಯಿಸಿದೆವು. ಅಂತೆಯೇ ಅವರು ರಾಜೀನಾಮೆ ನೀಡಿದ್ದರು” ಎಂದಿದ್ದಾರೆ.

ನಂತರ ಬೂಮ್ “ಅವರು ನಿಮ್ಮ ಮೇಲೆ ಹಲ್ಲೆ ನಡೆಸಿದ್ದರೆ ಎಂಬ ಪ್ರಶ್ನೆಗೆ, ಇಲ್ಲ ಅವರು ಹಲ್ಲೆ ಮಾಡಿಸಿರಲಿಲ್ಲ, ಏಕೆಂದರೆ ಅವರು ನಾಗರಿಕರಾಗಿದ್ದರು ಎಂಬ ಉತ್ತರ ನೀಡಿದ್ದಾರೆ. ಅವರು ಅಲ್ಲಿಂದ ನಿಧಾನವಾಗಿ ನಡೆದುಕೊಂಡು ಹೋದರು ಅಷ್ಟೇ ಎಂದು ಅವರು ತಿಳಿಸಿದ್ದಾರೆ.

4 ಜೆಎನ್‌ಯು ಮೇಲೆ ದಾಳಿ ಮಾಡಿದ್ದು ನಾನೇ ಎಂದು ಒಪ್ಪಿಕೊಂಡ ಅಕ್ಷತ್ ಅವಾಸ್ಥಿ ನಮ್ಮ ಸದಸ್ಯನಲ್ಲ: ಎಬಿವಿಪಿ

ಜನವರಿ 10ರಂದು ಇಂಡಿಯಾ ಟುಡೆ ಟಿವಿಯು ಸ್ಟಿಂಗ್ ಆಪರೇಷನ್ ನಡೆಸಿತು. ಆಗ ಎಬಿವಿಪಿ ಸದಸ್ಯ ಅಕ್ಷತ್ ಅವಾಸ್ಥಿ ಎಂಬುವವನು ನಾನು 20 ಜನರನ್ನು ಒಟ್ಟುಗೂಡಿಸಿ ಹಲ್ಲೆ ನಡೆಸಿದೆ, ಗಡ್ಡಬಿಟ್ಟಿದ್ದ ಕಾಶ್ಮೀರದವನ ಹಾಗೆ ಕಾಣುತ್ತಿದ್ದವನ ಮೇಲೆ ಹೊಡೆದು ಎಂದು ಒಪ್ಪಿಕೊಂಡಿದ್ದ.

ನಂತರ ಎಬಿವಿಪಿ ಯಥಾಪ್ರಕಾರ ಆತ ನಮ್ಮ ಸದಸ್ಯನಲ್ಲ ಎಂದು ಜಾರಿಕೊಂಡಿತ್ತು.

ಆಲ್ಟ್‌ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿತು. ಆಗ ಆತ ಹಲವಾರು ಬಿಜೆಪಿ/ಎಬಿವಿಪಿ ಕಾರ್ಯಕ್ರಮ ಪ್ರತಿಭಟನೆಗಳನ್ನು ಭಾಗವಹಿಸಿರುವ ಫೋಟೊ, ವಿಡಿಯೋಗಳನ್ನು ಹುಡುಕಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...