Homeನಿಜವೋ ಸುಳ್ಳೋಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ...

ಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ…

- Advertisement -
- Advertisement -
  1. ಗ್ರಾಮ ಪಂಚಾಯಿತಿ ಚುನಾವಣೆ ಏಪ್ರಿಲ್ 5 ಮತ್ತು 9ಕ್ಕೆ: ಇದು ಸುಳ್ಳು ಸುದ್ದಿ

ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು 10ನೇ ತರಗತಿ ಪಾಸಾಗಿರಬೇಕು, ಪಾನ್ ಕಾರ್ಡ್ ಮತ್ತು ಆಧಾರ ಕಾರ್ಡ್ ಕಡ್ಡಾಯ ಎಂಬ ಸುದ್ದಿ ಹರಿದಾಡಿತ್ತು. ಏಪ್ರಿಲ್ 5 ಮತ್ತು 9ಕ್ಕೆ ಚುನಾವಣೆ ಸಹ ನಡೆಯಲಿದೆ ಎಂಬ ಆದೇಶವೂ ಬಂದಿತ್ತು.]

ಆದರೆ ಇದು ಸುಳ್ಳು ಸುದ್ದಿ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಇನ್ನು ಅಧಿಸೂಚನೆ ಹೊರಡಿಸಿಲ್ಲ ಮತ್ತು ಯಾವುದೇ ನಿಯಮಗಳಿಲ್ಲ ಎಂದು ಹೊಸ ಪ್ರಕಟಣೆ ಹೊರಡಿಸಿದೆ.

2. ಚಪಾಕ್ ಚಿತ್ರದಲ್ಲಿ ಮುಸ್ಲಿಂ ಆರೋಪಿಯ ಹೆಸರನ್ನು ಹಿಂದೂ ಹೆಸರಾಗಿ ಬದಲಾಯಿಸಲಾಗಿದೆಯೇ?

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಆಸಿಡ್ ದಾಳಿಗೊಳಗಾದ ಹೆಣ್ಣುಮಗಳ ಬದುಕಿನ ಘಟನೆಯಾಧಾರಿತ ಚಪಾಕ್ ಎಂಬ ಚಿತ್ರದಲ್ಲಿ ಹಣ ಹೂಡಿದ್ದಲ್ಲದೇ ತಾನೂ ನಟಿಸಿದ್ದಾಳೆ. ಈ ಚಿತ್ರವೂ ಜನವರಿ 10ರಂದು ಬಿಡುಗಡೆಯಾಗಿದೆ.

ಇದಕ್ಕೂ ಮೊದಲು ಜನವರಿ 05ರಂದು ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಎಬಿವಿಪಿ, ಬಿಜೆಪಿ ಗೂಂಡಾಗಳು ನುಗ್ಗಿ ಹಲ್ಲೆ ಮಾಡಿದ್ದನ್ನು ಖಂಡಿಸಿ ದೀಪಿಕಾ ಪಡುಕೋಣೆ ಜೆಎನ್‌ಯುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದರು.

ಇಷ್ಟಕ್ಕೆ ದೀಪಿಕಾ ವಿರುದ್ಧ ದ್ವೇಷ ಸಾಧಿಸಿದ ಕೆಲವರು ಅವರ ವಿರುದ್ಧ ಇಲ್ಲಸಲ್ಲದ ಸುಳ್ಳು ಹರಡಲು ಮುಂದಾಗಿದ್ದರು. ಅದರಲ್ಲಿ ಮುಖ್ಯವಾದುದು ಅವರ ಚಪಾಕ್ ಚಿತ್ರದಲ್ಲಿ ಸಂತ್ರಸ್ತೆ ಮೇಲೆ ಆಸಿಡ್ ಎರಚಿದ ಆರೋಪಿ ನದೀಮ್ ಖಾನ್ ಎಂಬ ಹೆಸರನ್ನು ರಾಜೇಶ್ ಶರ್ಮಾ ಎಂದು ಬದಲಿಸಲಾಗಿದೆ ಎಂಬ ಆರೋಪ..

ಒಪಿಇಂಡಿಯಾ, ಸ್ವರಾಜ್ಯ ಎಂಬ ಬಿಜೆಪಿ ಬೆಂಬಲಿತ ವೆಬ್‌ಗಳು ಇದನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಿದ್ದವು. ಸುಬ್ರಮಣ್ಯಸ್ವಾಮಿ ಅಂತೂ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದರು. ಹಲವು ಬಿಜೆಪಿ ಸಂಸದರಿಂದ ಶುರುವಾಗಿ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಇದನ್ನು ಷೇರ್ ಮಾಡಿದ್ದರು.

ಆದರೆ ಸಿನಿಮಾ ನೋಡಿದ ಬಹುತೇಕರು ಸ್ಪಷ್ಟಪಡಿಸಿರುವುದೇನೆಂದರೆ ನದೀಮ್ ಖಾನ್ ಬದಲಾಗಿ ಬಶೀರ್ ಎಂದು ಮುಸ್ಲಿಂ ಹೆಸರನ್ನೇ ಇಡಲಾಗಿದೆ. ಅಂದರೆ ಬಿಜೆಪಿಗರು, ಸ್ವರಾಜ್ ಹೇಳಿದ್ದೆಲ್ಲ ಹಸಿ ಸುಳ್ಳು ಎಂದು ಜಗಜ್ಜಾಹೀರಾಗಿದೆ.

3. ಇಂದಿರಾಗಾಂಧಿ 1975ರಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿಸಿದ್ದರೆ?

“1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿ ದೆಹಲಿ ಪೊಲೀಸರೊಂದಿಗೆ ಜೆಎನ್‌ಯುಗೆ ಪ್ರವೇಶಿಸಿ, ಆ ಸಮಯದಲ್ಲಿ ಜೆಎನ್‌ಯು ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿದ್ದ ಸಿಪಿಐ ಮುಖಂಡ ಸೀತಾರಾಮ್ ಯೆಚೂರಿಗೆ ಹೊಡೆದು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು ಮತ್ತು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದಕ್ಕೆ ಕ್ಷಮೆಯಾಚಿಸುವ ಪತ್ರವನ್ನು ಸೀತಾರಾಮ್ ಯೆಚೂರಿ ಓದಿದರು. ಇದನ್ನು ಕಮ್ಯುನಿಸ್ಟರೊಂದಿಗೆ ವ್ಯವಹರಿಸುವ ಉಕ್ಕಿನಹಸ್ತ ಎಂದು ಕರೆಯಲಾಗುತ್ತದೆ. ಅಮಿತ್ ಶಾ ಅವರ ಮುಂದೆ ಸಂತನಾಗಿ ಕಾಣಿಸುತ್ತಾನೆ.”

ಈ ರೀತಿಯ ಸಂದೇಶವೊಂದನ್ನು ಮೋಹನ್ ದಾಸ್ ಪೈ ‘ಇದು ನಿಜವೇ’ ಎಂಬ ತಲೆಬರಹದೊಂದಿಗೆ ಹಂಚಿಕೊಂಡಿದ್ದಾರೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಲು ಬೂಮ್‌ಲೈವ್ ಸೀತಾರಾಂ ಯೆಚೂರಿಯವರನ್ನು ಸಂಪರ್ಕಿಸಿತು. ಆಗ ಅವರು “ಇದು 1975ರ ಚಿತ್ರವಲ್ಲ ಬದಲಿಗೆ 1977ರ ಸೆಪ್ಟಂಬರ್‌ನಲ್ಲಿ ತೆಗೆದ ಚಿತ್ರ. ಇಂದಿರಾಗಾಂಧಿಯವರು ಜೆಎನ್‌ಯು ವಿವಿಯ ಉಪಕುಲಪತಿಗಳಾಗಿದ್ದರು. ಅದನ್ನು ವಿರೋಧಿಸಿ ನಾವು ದೊಡ್ಡ ಹೋರಾಟ ನಡೆಸಿದ್ದವು. ಆಗ ಅವರು ಜೆಎನ್‌ಯುಗೆ ಬಂದಾಗ ನಾನು ನಮ್ಮ ಹಕ್ಕೊತ್ತಾಯ ಪತ್ರವನ್ನು ಓದಿ ರಾಜೀನಾಮೆಗೆ ಒತ್ತಾಯಿಸಿದೆವು. ಅಂತೆಯೇ ಅವರು ರಾಜೀನಾಮೆ ನೀಡಿದ್ದರು” ಎಂದಿದ್ದಾರೆ.

ನಂತರ ಬೂಮ್ “ಅವರು ನಿಮ್ಮ ಮೇಲೆ ಹಲ್ಲೆ ನಡೆಸಿದ್ದರೆ ಎಂಬ ಪ್ರಶ್ನೆಗೆ, ಇಲ್ಲ ಅವರು ಹಲ್ಲೆ ಮಾಡಿಸಿರಲಿಲ್ಲ, ಏಕೆಂದರೆ ಅವರು ನಾಗರಿಕರಾಗಿದ್ದರು ಎಂಬ ಉತ್ತರ ನೀಡಿದ್ದಾರೆ. ಅವರು ಅಲ್ಲಿಂದ ನಿಧಾನವಾಗಿ ನಡೆದುಕೊಂಡು ಹೋದರು ಅಷ್ಟೇ ಎಂದು ಅವರು ತಿಳಿಸಿದ್ದಾರೆ.

4 ಜೆಎನ್‌ಯು ಮೇಲೆ ದಾಳಿ ಮಾಡಿದ್ದು ನಾನೇ ಎಂದು ಒಪ್ಪಿಕೊಂಡ ಅಕ್ಷತ್ ಅವಾಸ್ಥಿ ನಮ್ಮ ಸದಸ್ಯನಲ್ಲ: ಎಬಿವಿಪಿ

ಜನವರಿ 10ರಂದು ಇಂಡಿಯಾ ಟುಡೆ ಟಿವಿಯು ಸ್ಟಿಂಗ್ ಆಪರೇಷನ್ ನಡೆಸಿತು. ಆಗ ಎಬಿವಿಪಿ ಸದಸ್ಯ ಅಕ್ಷತ್ ಅವಾಸ್ಥಿ ಎಂಬುವವನು ನಾನು 20 ಜನರನ್ನು ಒಟ್ಟುಗೂಡಿಸಿ ಹಲ್ಲೆ ನಡೆಸಿದೆ, ಗಡ್ಡಬಿಟ್ಟಿದ್ದ ಕಾಶ್ಮೀರದವನ ಹಾಗೆ ಕಾಣುತ್ತಿದ್ದವನ ಮೇಲೆ ಹೊಡೆದು ಎಂದು ಒಪ್ಪಿಕೊಂಡಿದ್ದ.

ನಂತರ ಎಬಿವಿಪಿ ಯಥಾಪ್ರಕಾರ ಆತ ನಮ್ಮ ಸದಸ್ಯನಲ್ಲ ಎಂದು ಜಾರಿಕೊಂಡಿತ್ತು.

ಆಲ್ಟ್‌ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿತು. ಆಗ ಆತ ಹಲವಾರು ಬಿಜೆಪಿ/ಎಬಿವಿಪಿ ಕಾರ್ಯಕ್ರಮ ಪ್ರತಿಭಟನೆಗಳನ್ನು ಭಾಗವಹಿಸಿರುವ ಫೋಟೊ, ವಿಡಿಯೋಗಳನ್ನು ಹುಡುಕಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...