Homeನಿಜವೋ ಸುಳ್ಳೋಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ...

ಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ…

- Advertisement -
- Advertisement -
  1. ಗ್ರಾಮ ಪಂಚಾಯಿತಿ ಚುನಾವಣೆ ಏಪ್ರಿಲ್ 5 ಮತ್ತು 9ಕ್ಕೆ: ಇದು ಸುಳ್ಳು ಸುದ್ದಿ

ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು 10ನೇ ತರಗತಿ ಪಾಸಾಗಿರಬೇಕು, ಪಾನ್ ಕಾರ್ಡ್ ಮತ್ತು ಆಧಾರ ಕಾರ್ಡ್ ಕಡ್ಡಾಯ ಎಂಬ ಸುದ್ದಿ ಹರಿದಾಡಿತ್ತು. ಏಪ್ರಿಲ್ 5 ಮತ್ತು 9ಕ್ಕೆ ಚುನಾವಣೆ ಸಹ ನಡೆಯಲಿದೆ ಎಂಬ ಆದೇಶವೂ ಬಂದಿತ್ತು.]

ಆದರೆ ಇದು ಸುಳ್ಳು ಸುದ್ದಿ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಇನ್ನು ಅಧಿಸೂಚನೆ ಹೊರಡಿಸಿಲ್ಲ ಮತ್ತು ಯಾವುದೇ ನಿಯಮಗಳಿಲ್ಲ ಎಂದು ಹೊಸ ಪ್ರಕಟಣೆ ಹೊರಡಿಸಿದೆ.

2. ಚಪಾಕ್ ಚಿತ್ರದಲ್ಲಿ ಮುಸ್ಲಿಂ ಆರೋಪಿಯ ಹೆಸರನ್ನು ಹಿಂದೂ ಹೆಸರಾಗಿ ಬದಲಾಯಿಸಲಾಗಿದೆಯೇ?

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಆಸಿಡ್ ದಾಳಿಗೊಳಗಾದ ಹೆಣ್ಣುಮಗಳ ಬದುಕಿನ ಘಟನೆಯಾಧಾರಿತ ಚಪಾಕ್ ಎಂಬ ಚಿತ್ರದಲ್ಲಿ ಹಣ ಹೂಡಿದ್ದಲ್ಲದೇ ತಾನೂ ನಟಿಸಿದ್ದಾಳೆ. ಈ ಚಿತ್ರವೂ ಜನವರಿ 10ರಂದು ಬಿಡುಗಡೆಯಾಗಿದೆ.

ಇದಕ್ಕೂ ಮೊದಲು ಜನವರಿ 05ರಂದು ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಎಬಿವಿಪಿ, ಬಿಜೆಪಿ ಗೂಂಡಾಗಳು ನುಗ್ಗಿ ಹಲ್ಲೆ ಮಾಡಿದ್ದನ್ನು ಖಂಡಿಸಿ ದೀಪಿಕಾ ಪಡುಕೋಣೆ ಜೆಎನ್‌ಯುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದರು.

ಇಷ್ಟಕ್ಕೆ ದೀಪಿಕಾ ವಿರುದ್ಧ ದ್ವೇಷ ಸಾಧಿಸಿದ ಕೆಲವರು ಅವರ ವಿರುದ್ಧ ಇಲ್ಲಸಲ್ಲದ ಸುಳ್ಳು ಹರಡಲು ಮುಂದಾಗಿದ್ದರು. ಅದರಲ್ಲಿ ಮುಖ್ಯವಾದುದು ಅವರ ಚಪಾಕ್ ಚಿತ್ರದಲ್ಲಿ ಸಂತ್ರಸ್ತೆ ಮೇಲೆ ಆಸಿಡ್ ಎರಚಿದ ಆರೋಪಿ ನದೀಮ್ ಖಾನ್ ಎಂಬ ಹೆಸರನ್ನು ರಾಜೇಶ್ ಶರ್ಮಾ ಎಂದು ಬದಲಿಸಲಾಗಿದೆ ಎಂಬ ಆರೋಪ..

ಒಪಿಇಂಡಿಯಾ, ಸ್ವರಾಜ್ಯ ಎಂಬ ಬಿಜೆಪಿ ಬೆಂಬಲಿತ ವೆಬ್‌ಗಳು ಇದನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಿದ್ದವು. ಸುಬ್ರಮಣ್ಯಸ್ವಾಮಿ ಅಂತೂ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದರು. ಹಲವು ಬಿಜೆಪಿ ಸಂಸದರಿಂದ ಶುರುವಾಗಿ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಇದನ್ನು ಷೇರ್ ಮಾಡಿದ್ದರು.

ಆದರೆ ಸಿನಿಮಾ ನೋಡಿದ ಬಹುತೇಕರು ಸ್ಪಷ್ಟಪಡಿಸಿರುವುದೇನೆಂದರೆ ನದೀಮ್ ಖಾನ್ ಬದಲಾಗಿ ಬಶೀರ್ ಎಂದು ಮುಸ್ಲಿಂ ಹೆಸರನ್ನೇ ಇಡಲಾಗಿದೆ. ಅಂದರೆ ಬಿಜೆಪಿಗರು, ಸ್ವರಾಜ್ ಹೇಳಿದ್ದೆಲ್ಲ ಹಸಿ ಸುಳ್ಳು ಎಂದು ಜಗಜ್ಜಾಹೀರಾಗಿದೆ.

3. ಇಂದಿರಾಗಾಂಧಿ 1975ರಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿಸಿದ್ದರೆ?

“1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿ ದೆಹಲಿ ಪೊಲೀಸರೊಂದಿಗೆ ಜೆಎನ್‌ಯುಗೆ ಪ್ರವೇಶಿಸಿ, ಆ ಸಮಯದಲ್ಲಿ ಜೆಎನ್‌ಯು ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿದ್ದ ಸಿಪಿಐ ಮುಖಂಡ ಸೀತಾರಾಮ್ ಯೆಚೂರಿಗೆ ಹೊಡೆದು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು ಮತ್ತು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದಕ್ಕೆ ಕ್ಷಮೆಯಾಚಿಸುವ ಪತ್ರವನ್ನು ಸೀತಾರಾಮ್ ಯೆಚೂರಿ ಓದಿದರು. ಇದನ್ನು ಕಮ್ಯುನಿಸ್ಟರೊಂದಿಗೆ ವ್ಯವಹರಿಸುವ ಉಕ್ಕಿನಹಸ್ತ ಎಂದು ಕರೆಯಲಾಗುತ್ತದೆ. ಅಮಿತ್ ಶಾ ಅವರ ಮುಂದೆ ಸಂತನಾಗಿ ಕಾಣಿಸುತ್ತಾನೆ.”

ಈ ರೀತಿಯ ಸಂದೇಶವೊಂದನ್ನು ಮೋಹನ್ ದಾಸ್ ಪೈ ‘ಇದು ನಿಜವೇ’ ಎಂಬ ತಲೆಬರಹದೊಂದಿಗೆ ಹಂಚಿಕೊಂಡಿದ್ದಾರೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಲು ಬೂಮ್‌ಲೈವ್ ಸೀತಾರಾಂ ಯೆಚೂರಿಯವರನ್ನು ಸಂಪರ್ಕಿಸಿತು. ಆಗ ಅವರು “ಇದು 1975ರ ಚಿತ್ರವಲ್ಲ ಬದಲಿಗೆ 1977ರ ಸೆಪ್ಟಂಬರ್‌ನಲ್ಲಿ ತೆಗೆದ ಚಿತ್ರ. ಇಂದಿರಾಗಾಂಧಿಯವರು ಜೆಎನ್‌ಯು ವಿವಿಯ ಉಪಕುಲಪತಿಗಳಾಗಿದ್ದರು. ಅದನ್ನು ವಿರೋಧಿಸಿ ನಾವು ದೊಡ್ಡ ಹೋರಾಟ ನಡೆಸಿದ್ದವು. ಆಗ ಅವರು ಜೆಎನ್‌ಯುಗೆ ಬಂದಾಗ ನಾನು ನಮ್ಮ ಹಕ್ಕೊತ್ತಾಯ ಪತ್ರವನ್ನು ಓದಿ ರಾಜೀನಾಮೆಗೆ ಒತ್ತಾಯಿಸಿದೆವು. ಅಂತೆಯೇ ಅವರು ರಾಜೀನಾಮೆ ನೀಡಿದ್ದರು” ಎಂದಿದ್ದಾರೆ.

ನಂತರ ಬೂಮ್ “ಅವರು ನಿಮ್ಮ ಮೇಲೆ ಹಲ್ಲೆ ನಡೆಸಿದ್ದರೆ ಎಂಬ ಪ್ರಶ್ನೆಗೆ, ಇಲ್ಲ ಅವರು ಹಲ್ಲೆ ಮಾಡಿಸಿರಲಿಲ್ಲ, ಏಕೆಂದರೆ ಅವರು ನಾಗರಿಕರಾಗಿದ್ದರು ಎಂಬ ಉತ್ತರ ನೀಡಿದ್ದಾರೆ. ಅವರು ಅಲ್ಲಿಂದ ನಿಧಾನವಾಗಿ ನಡೆದುಕೊಂಡು ಹೋದರು ಅಷ್ಟೇ ಎಂದು ಅವರು ತಿಳಿಸಿದ್ದಾರೆ.

4 ಜೆಎನ್‌ಯು ಮೇಲೆ ದಾಳಿ ಮಾಡಿದ್ದು ನಾನೇ ಎಂದು ಒಪ್ಪಿಕೊಂಡ ಅಕ್ಷತ್ ಅವಾಸ್ಥಿ ನಮ್ಮ ಸದಸ್ಯನಲ್ಲ: ಎಬಿವಿಪಿ

ಜನವರಿ 10ರಂದು ಇಂಡಿಯಾ ಟುಡೆ ಟಿವಿಯು ಸ್ಟಿಂಗ್ ಆಪರೇಷನ್ ನಡೆಸಿತು. ಆಗ ಎಬಿವಿಪಿ ಸದಸ್ಯ ಅಕ್ಷತ್ ಅವಾಸ್ಥಿ ಎಂಬುವವನು ನಾನು 20 ಜನರನ್ನು ಒಟ್ಟುಗೂಡಿಸಿ ಹಲ್ಲೆ ನಡೆಸಿದೆ, ಗಡ್ಡಬಿಟ್ಟಿದ್ದ ಕಾಶ್ಮೀರದವನ ಹಾಗೆ ಕಾಣುತ್ತಿದ್ದವನ ಮೇಲೆ ಹೊಡೆದು ಎಂದು ಒಪ್ಪಿಕೊಂಡಿದ್ದ.

ನಂತರ ಎಬಿವಿಪಿ ಯಥಾಪ್ರಕಾರ ಆತ ನಮ್ಮ ಸದಸ್ಯನಲ್ಲ ಎಂದು ಜಾರಿಕೊಂಡಿತ್ತು.

ಆಲ್ಟ್‌ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿತು. ಆಗ ಆತ ಹಲವಾರು ಬಿಜೆಪಿ/ಎಬಿವಿಪಿ ಕಾರ್ಯಕ್ರಮ ಪ್ರತಿಭಟನೆಗಳನ್ನು ಭಾಗವಹಿಸಿರುವ ಫೋಟೊ, ವಿಡಿಯೋಗಳನ್ನು ಹುಡುಕಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...