Homeನಿಜವೋ ಸುಳ್ಳೋಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ...

ಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ…

- Advertisement -
- Advertisement -
  1. ಗ್ರಾಮ ಪಂಚಾಯಿತಿ ಚುನಾವಣೆ ಏಪ್ರಿಲ್ 5 ಮತ್ತು 9ಕ್ಕೆ: ಇದು ಸುಳ್ಳು ಸುದ್ದಿ

ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು 10ನೇ ತರಗತಿ ಪಾಸಾಗಿರಬೇಕು, ಪಾನ್ ಕಾರ್ಡ್ ಮತ್ತು ಆಧಾರ ಕಾರ್ಡ್ ಕಡ್ಡಾಯ ಎಂಬ ಸುದ್ದಿ ಹರಿದಾಡಿತ್ತು. ಏಪ್ರಿಲ್ 5 ಮತ್ತು 9ಕ್ಕೆ ಚುನಾವಣೆ ಸಹ ನಡೆಯಲಿದೆ ಎಂಬ ಆದೇಶವೂ ಬಂದಿತ್ತು.]

ಆದರೆ ಇದು ಸುಳ್ಳು ಸುದ್ದಿ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಇನ್ನು ಅಧಿಸೂಚನೆ ಹೊರಡಿಸಿಲ್ಲ ಮತ್ತು ಯಾವುದೇ ನಿಯಮಗಳಿಲ್ಲ ಎಂದು ಹೊಸ ಪ್ರಕಟಣೆ ಹೊರಡಿಸಿದೆ.

2. ಚಪಾಕ್ ಚಿತ್ರದಲ್ಲಿ ಮುಸ್ಲಿಂ ಆರೋಪಿಯ ಹೆಸರನ್ನು ಹಿಂದೂ ಹೆಸರಾಗಿ ಬದಲಾಯಿಸಲಾಗಿದೆಯೇ?

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಆಸಿಡ್ ದಾಳಿಗೊಳಗಾದ ಹೆಣ್ಣುಮಗಳ ಬದುಕಿನ ಘಟನೆಯಾಧಾರಿತ ಚಪಾಕ್ ಎಂಬ ಚಿತ್ರದಲ್ಲಿ ಹಣ ಹೂಡಿದ್ದಲ್ಲದೇ ತಾನೂ ನಟಿಸಿದ್ದಾಳೆ. ಈ ಚಿತ್ರವೂ ಜನವರಿ 10ರಂದು ಬಿಡುಗಡೆಯಾಗಿದೆ.

ಇದಕ್ಕೂ ಮೊದಲು ಜನವರಿ 05ರಂದು ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಎಬಿವಿಪಿ, ಬಿಜೆಪಿ ಗೂಂಡಾಗಳು ನುಗ್ಗಿ ಹಲ್ಲೆ ಮಾಡಿದ್ದನ್ನು ಖಂಡಿಸಿ ದೀಪಿಕಾ ಪಡುಕೋಣೆ ಜೆಎನ್‌ಯುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದರು.

ಇಷ್ಟಕ್ಕೆ ದೀಪಿಕಾ ವಿರುದ್ಧ ದ್ವೇಷ ಸಾಧಿಸಿದ ಕೆಲವರು ಅವರ ವಿರುದ್ಧ ಇಲ್ಲಸಲ್ಲದ ಸುಳ್ಳು ಹರಡಲು ಮುಂದಾಗಿದ್ದರು. ಅದರಲ್ಲಿ ಮುಖ್ಯವಾದುದು ಅವರ ಚಪಾಕ್ ಚಿತ್ರದಲ್ಲಿ ಸಂತ್ರಸ್ತೆ ಮೇಲೆ ಆಸಿಡ್ ಎರಚಿದ ಆರೋಪಿ ನದೀಮ್ ಖಾನ್ ಎಂಬ ಹೆಸರನ್ನು ರಾಜೇಶ್ ಶರ್ಮಾ ಎಂದು ಬದಲಿಸಲಾಗಿದೆ ಎಂಬ ಆರೋಪ..

ಒಪಿಇಂಡಿಯಾ, ಸ್ವರಾಜ್ಯ ಎಂಬ ಬಿಜೆಪಿ ಬೆಂಬಲಿತ ವೆಬ್‌ಗಳು ಇದನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಿದ್ದವು. ಸುಬ್ರಮಣ್ಯಸ್ವಾಮಿ ಅಂತೂ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದರು. ಹಲವು ಬಿಜೆಪಿ ಸಂಸದರಿಂದ ಶುರುವಾಗಿ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಇದನ್ನು ಷೇರ್ ಮಾಡಿದ್ದರು.

ಆದರೆ ಸಿನಿಮಾ ನೋಡಿದ ಬಹುತೇಕರು ಸ್ಪಷ್ಟಪಡಿಸಿರುವುದೇನೆಂದರೆ ನದೀಮ್ ಖಾನ್ ಬದಲಾಗಿ ಬಶೀರ್ ಎಂದು ಮುಸ್ಲಿಂ ಹೆಸರನ್ನೇ ಇಡಲಾಗಿದೆ. ಅಂದರೆ ಬಿಜೆಪಿಗರು, ಸ್ವರಾಜ್ ಹೇಳಿದ್ದೆಲ್ಲ ಹಸಿ ಸುಳ್ಳು ಎಂದು ಜಗಜ್ಜಾಹೀರಾಗಿದೆ.

3. ಇಂದಿರಾಗಾಂಧಿ 1975ರಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿಸಿದ್ದರೆ?

“1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿ ದೆಹಲಿ ಪೊಲೀಸರೊಂದಿಗೆ ಜೆಎನ್‌ಯುಗೆ ಪ್ರವೇಶಿಸಿ, ಆ ಸಮಯದಲ್ಲಿ ಜೆಎನ್‌ಯು ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿದ್ದ ಸಿಪಿಐ ಮುಖಂಡ ಸೀತಾರಾಮ್ ಯೆಚೂರಿಗೆ ಹೊಡೆದು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು ಮತ್ತು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದಕ್ಕೆ ಕ್ಷಮೆಯಾಚಿಸುವ ಪತ್ರವನ್ನು ಸೀತಾರಾಮ್ ಯೆಚೂರಿ ಓದಿದರು. ಇದನ್ನು ಕಮ್ಯುನಿಸ್ಟರೊಂದಿಗೆ ವ್ಯವಹರಿಸುವ ಉಕ್ಕಿನಹಸ್ತ ಎಂದು ಕರೆಯಲಾಗುತ್ತದೆ. ಅಮಿತ್ ಶಾ ಅವರ ಮುಂದೆ ಸಂತನಾಗಿ ಕಾಣಿಸುತ್ತಾನೆ.”

ಈ ರೀತಿಯ ಸಂದೇಶವೊಂದನ್ನು ಮೋಹನ್ ದಾಸ್ ಪೈ ‘ಇದು ನಿಜವೇ’ ಎಂಬ ತಲೆಬರಹದೊಂದಿಗೆ ಹಂಚಿಕೊಂಡಿದ್ದಾರೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಲು ಬೂಮ್‌ಲೈವ್ ಸೀತಾರಾಂ ಯೆಚೂರಿಯವರನ್ನು ಸಂಪರ್ಕಿಸಿತು. ಆಗ ಅವರು “ಇದು 1975ರ ಚಿತ್ರವಲ್ಲ ಬದಲಿಗೆ 1977ರ ಸೆಪ್ಟಂಬರ್‌ನಲ್ಲಿ ತೆಗೆದ ಚಿತ್ರ. ಇಂದಿರಾಗಾಂಧಿಯವರು ಜೆಎನ್‌ಯು ವಿವಿಯ ಉಪಕುಲಪತಿಗಳಾಗಿದ್ದರು. ಅದನ್ನು ವಿರೋಧಿಸಿ ನಾವು ದೊಡ್ಡ ಹೋರಾಟ ನಡೆಸಿದ್ದವು. ಆಗ ಅವರು ಜೆಎನ್‌ಯುಗೆ ಬಂದಾಗ ನಾನು ನಮ್ಮ ಹಕ್ಕೊತ್ತಾಯ ಪತ್ರವನ್ನು ಓದಿ ರಾಜೀನಾಮೆಗೆ ಒತ್ತಾಯಿಸಿದೆವು. ಅಂತೆಯೇ ಅವರು ರಾಜೀನಾಮೆ ನೀಡಿದ್ದರು” ಎಂದಿದ್ದಾರೆ.

ನಂತರ ಬೂಮ್ “ಅವರು ನಿಮ್ಮ ಮೇಲೆ ಹಲ್ಲೆ ನಡೆಸಿದ್ದರೆ ಎಂಬ ಪ್ರಶ್ನೆಗೆ, ಇಲ್ಲ ಅವರು ಹಲ್ಲೆ ಮಾಡಿಸಿರಲಿಲ್ಲ, ಏಕೆಂದರೆ ಅವರು ನಾಗರಿಕರಾಗಿದ್ದರು ಎಂಬ ಉತ್ತರ ನೀಡಿದ್ದಾರೆ. ಅವರು ಅಲ್ಲಿಂದ ನಿಧಾನವಾಗಿ ನಡೆದುಕೊಂಡು ಹೋದರು ಅಷ್ಟೇ ಎಂದು ಅವರು ತಿಳಿಸಿದ್ದಾರೆ.

4 ಜೆಎನ್‌ಯು ಮೇಲೆ ದಾಳಿ ಮಾಡಿದ್ದು ನಾನೇ ಎಂದು ಒಪ್ಪಿಕೊಂಡ ಅಕ್ಷತ್ ಅವಾಸ್ಥಿ ನಮ್ಮ ಸದಸ್ಯನಲ್ಲ: ಎಬಿವಿಪಿ

ಜನವರಿ 10ರಂದು ಇಂಡಿಯಾ ಟುಡೆ ಟಿವಿಯು ಸ್ಟಿಂಗ್ ಆಪರೇಷನ್ ನಡೆಸಿತು. ಆಗ ಎಬಿವಿಪಿ ಸದಸ್ಯ ಅಕ್ಷತ್ ಅವಾಸ್ಥಿ ಎಂಬುವವನು ನಾನು 20 ಜನರನ್ನು ಒಟ್ಟುಗೂಡಿಸಿ ಹಲ್ಲೆ ನಡೆಸಿದೆ, ಗಡ್ಡಬಿಟ್ಟಿದ್ದ ಕಾಶ್ಮೀರದವನ ಹಾಗೆ ಕಾಣುತ್ತಿದ್ದವನ ಮೇಲೆ ಹೊಡೆದು ಎಂದು ಒಪ್ಪಿಕೊಂಡಿದ್ದ.

ನಂತರ ಎಬಿವಿಪಿ ಯಥಾಪ್ರಕಾರ ಆತ ನಮ್ಮ ಸದಸ್ಯನಲ್ಲ ಎಂದು ಜಾರಿಕೊಂಡಿತ್ತು.

ಆಲ್ಟ್‌ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿತು. ಆಗ ಆತ ಹಲವಾರು ಬಿಜೆಪಿ/ಎಬಿವಿಪಿ ಕಾರ್ಯಕ್ರಮ ಪ್ರತಿಭಟನೆಗಳನ್ನು ಭಾಗವಹಿಸಿರುವ ಫೋಟೊ, ವಿಡಿಯೋಗಳನ್ನು ಹುಡುಕಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...