Homeನಿಜವೋ ಸುಳ್ಳೋಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ...

ಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ…

- Advertisement -
- Advertisement -
  1. ಗ್ರಾಮ ಪಂಚಾಯಿತಿ ಚುನಾವಣೆ ಏಪ್ರಿಲ್ 5 ಮತ್ತು 9ಕ್ಕೆ: ಇದು ಸುಳ್ಳು ಸುದ್ದಿ

ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು 10ನೇ ತರಗತಿ ಪಾಸಾಗಿರಬೇಕು, ಪಾನ್ ಕಾರ್ಡ್ ಮತ್ತು ಆಧಾರ ಕಾರ್ಡ್ ಕಡ್ಡಾಯ ಎಂಬ ಸುದ್ದಿ ಹರಿದಾಡಿತ್ತು. ಏಪ್ರಿಲ್ 5 ಮತ್ತು 9ಕ್ಕೆ ಚುನಾವಣೆ ಸಹ ನಡೆಯಲಿದೆ ಎಂಬ ಆದೇಶವೂ ಬಂದಿತ್ತು.]

ಆದರೆ ಇದು ಸುಳ್ಳು ಸುದ್ದಿ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಇನ್ನು ಅಧಿಸೂಚನೆ ಹೊರಡಿಸಿಲ್ಲ ಮತ್ತು ಯಾವುದೇ ನಿಯಮಗಳಿಲ್ಲ ಎಂದು ಹೊಸ ಪ್ರಕಟಣೆ ಹೊರಡಿಸಿದೆ.

2. ಚಪಾಕ್ ಚಿತ್ರದಲ್ಲಿ ಮುಸ್ಲಿಂ ಆರೋಪಿಯ ಹೆಸರನ್ನು ಹಿಂದೂ ಹೆಸರಾಗಿ ಬದಲಾಯಿಸಲಾಗಿದೆಯೇ?

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಆಸಿಡ್ ದಾಳಿಗೊಳಗಾದ ಹೆಣ್ಣುಮಗಳ ಬದುಕಿನ ಘಟನೆಯಾಧಾರಿತ ಚಪಾಕ್ ಎಂಬ ಚಿತ್ರದಲ್ಲಿ ಹಣ ಹೂಡಿದ್ದಲ್ಲದೇ ತಾನೂ ನಟಿಸಿದ್ದಾಳೆ. ಈ ಚಿತ್ರವೂ ಜನವರಿ 10ರಂದು ಬಿಡುಗಡೆಯಾಗಿದೆ.

ಇದಕ್ಕೂ ಮೊದಲು ಜನವರಿ 05ರಂದು ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಎಬಿವಿಪಿ, ಬಿಜೆಪಿ ಗೂಂಡಾಗಳು ನುಗ್ಗಿ ಹಲ್ಲೆ ಮಾಡಿದ್ದನ್ನು ಖಂಡಿಸಿ ದೀಪಿಕಾ ಪಡುಕೋಣೆ ಜೆಎನ್‌ಯುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದರು.

ಇಷ್ಟಕ್ಕೆ ದೀಪಿಕಾ ವಿರುದ್ಧ ದ್ವೇಷ ಸಾಧಿಸಿದ ಕೆಲವರು ಅವರ ವಿರುದ್ಧ ಇಲ್ಲಸಲ್ಲದ ಸುಳ್ಳು ಹರಡಲು ಮುಂದಾಗಿದ್ದರು. ಅದರಲ್ಲಿ ಮುಖ್ಯವಾದುದು ಅವರ ಚಪಾಕ್ ಚಿತ್ರದಲ್ಲಿ ಸಂತ್ರಸ್ತೆ ಮೇಲೆ ಆಸಿಡ್ ಎರಚಿದ ಆರೋಪಿ ನದೀಮ್ ಖಾನ್ ಎಂಬ ಹೆಸರನ್ನು ರಾಜೇಶ್ ಶರ್ಮಾ ಎಂದು ಬದಲಿಸಲಾಗಿದೆ ಎಂಬ ಆರೋಪ..

ಒಪಿಇಂಡಿಯಾ, ಸ್ವರಾಜ್ಯ ಎಂಬ ಬಿಜೆಪಿ ಬೆಂಬಲಿತ ವೆಬ್‌ಗಳು ಇದನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಿದ್ದವು. ಸುಬ್ರಮಣ್ಯಸ್ವಾಮಿ ಅಂತೂ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದರು. ಹಲವು ಬಿಜೆಪಿ ಸಂಸದರಿಂದ ಶುರುವಾಗಿ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಇದನ್ನು ಷೇರ್ ಮಾಡಿದ್ದರು.

ಆದರೆ ಸಿನಿಮಾ ನೋಡಿದ ಬಹುತೇಕರು ಸ್ಪಷ್ಟಪಡಿಸಿರುವುದೇನೆಂದರೆ ನದೀಮ್ ಖಾನ್ ಬದಲಾಗಿ ಬಶೀರ್ ಎಂದು ಮುಸ್ಲಿಂ ಹೆಸರನ್ನೇ ಇಡಲಾಗಿದೆ. ಅಂದರೆ ಬಿಜೆಪಿಗರು, ಸ್ವರಾಜ್ ಹೇಳಿದ್ದೆಲ್ಲ ಹಸಿ ಸುಳ್ಳು ಎಂದು ಜಗಜ್ಜಾಹೀರಾಗಿದೆ.

3. ಇಂದಿರಾಗಾಂಧಿ 1975ರಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿಸಿದ್ದರೆ?

“1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿ ದೆಹಲಿ ಪೊಲೀಸರೊಂದಿಗೆ ಜೆಎನ್‌ಯುಗೆ ಪ್ರವೇಶಿಸಿ, ಆ ಸಮಯದಲ್ಲಿ ಜೆಎನ್‌ಯು ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿದ್ದ ಸಿಪಿಐ ಮುಖಂಡ ಸೀತಾರಾಮ್ ಯೆಚೂರಿಗೆ ಹೊಡೆದು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು ಮತ್ತು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದಕ್ಕೆ ಕ್ಷಮೆಯಾಚಿಸುವ ಪತ್ರವನ್ನು ಸೀತಾರಾಮ್ ಯೆಚೂರಿ ಓದಿದರು. ಇದನ್ನು ಕಮ್ಯುನಿಸ್ಟರೊಂದಿಗೆ ವ್ಯವಹರಿಸುವ ಉಕ್ಕಿನಹಸ್ತ ಎಂದು ಕರೆಯಲಾಗುತ್ತದೆ. ಅಮಿತ್ ಶಾ ಅವರ ಮುಂದೆ ಸಂತನಾಗಿ ಕಾಣಿಸುತ್ತಾನೆ.”

ಈ ರೀತಿಯ ಸಂದೇಶವೊಂದನ್ನು ಮೋಹನ್ ದಾಸ್ ಪೈ ‘ಇದು ನಿಜವೇ’ ಎಂಬ ತಲೆಬರಹದೊಂದಿಗೆ ಹಂಚಿಕೊಂಡಿದ್ದಾರೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಲು ಬೂಮ್‌ಲೈವ್ ಸೀತಾರಾಂ ಯೆಚೂರಿಯವರನ್ನು ಸಂಪರ್ಕಿಸಿತು. ಆಗ ಅವರು “ಇದು 1975ರ ಚಿತ್ರವಲ್ಲ ಬದಲಿಗೆ 1977ರ ಸೆಪ್ಟಂಬರ್‌ನಲ್ಲಿ ತೆಗೆದ ಚಿತ್ರ. ಇಂದಿರಾಗಾಂಧಿಯವರು ಜೆಎನ್‌ಯು ವಿವಿಯ ಉಪಕುಲಪತಿಗಳಾಗಿದ್ದರು. ಅದನ್ನು ವಿರೋಧಿಸಿ ನಾವು ದೊಡ್ಡ ಹೋರಾಟ ನಡೆಸಿದ್ದವು. ಆಗ ಅವರು ಜೆಎನ್‌ಯುಗೆ ಬಂದಾಗ ನಾನು ನಮ್ಮ ಹಕ್ಕೊತ್ತಾಯ ಪತ್ರವನ್ನು ಓದಿ ರಾಜೀನಾಮೆಗೆ ಒತ್ತಾಯಿಸಿದೆವು. ಅಂತೆಯೇ ಅವರು ರಾಜೀನಾಮೆ ನೀಡಿದ್ದರು” ಎಂದಿದ್ದಾರೆ.

ನಂತರ ಬೂಮ್ “ಅವರು ನಿಮ್ಮ ಮೇಲೆ ಹಲ್ಲೆ ನಡೆಸಿದ್ದರೆ ಎಂಬ ಪ್ರಶ್ನೆಗೆ, ಇಲ್ಲ ಅವರು ಹಲ್ಲೆ ಮಾಡಿಸಿರಲಿಲ್ಲ, ಏಕೆಂದರೆ ಅವರು ನಾಗರಿಕರಾಗಿದ್ದರು ಎಂಬ ಉತ್ತರ ನೀಡಿದ್ದಾರೆ. ಅವರು ಅಲ್ಲಿಂದ ನಿಧಾನವಾಗಿ ನಡೆದುಕೊಂಡು ಹೋದರು ಅಷ್ಟೇ ಎಂದು ಅವರು ತಿಳಿಸಿದ್ದಾರೆ.

4 ಜೆಎನ್‌ಯು ಮೇಲೆ ದಾಳಿ ಮಾಡಿದ್ದು ನಾನೇ ಎಂದು ಒಪ್ಪಿಕೊಂಡ ಅಕ್ಷತ್ ಅವಾಸ್ಥಿ ನಮ್ಮ ಸದಸ್ಯನಲ್ಲ: ಎಬಿವಿಪಿ

ಜನವರಿ 10ರಂದು ಇಂಡಿಯಾ ಟುಡೆ ಟಿವಿಯು ಸ್ಟಿಂಗ್ ಆಪರೇಷನ್ ನಡೆಸಿತು. ಆಗ ಎಬಿವಿಪಿ ಸದಸ್ಯ ಅಕ್ಷತ್ ಅವಾಸ್ಥಿ ಎಂಬುವವನು ನಾನು 20 ಜನರನ್ನು ಒಟ್ಟುಗೂಡಿಸಿ ಹಲ್ಲೆ ನಡೆಸಿದೆ, ಗಡ್ಡಬಿಟ್ಟಿದ್ದ ಕಾಶ್ಮೀರದವನ ಹಾಗೆ ಕಾಣುತ್ತಿದ್ದವನ ಮೇಲೆ ಹೊಡೆದು ಎಂದು ಒಪ್ಪಿಕೊಂಡಿದ್ದ.

ನಂತರ ಎಬಿವಿಪಿ ಯಥಾಪ್ರಕಾರ ಆತ ನಮ್ಮ ಸದಸ್ಯನಲ್ಲ ಎಂದು ಜಾರಿಕೊಂಡಿತ್ತು.

ಆಲ್ಟ್‌ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿತು. ಆಗ ಆತ ಹಲವಾರು ಬಿಜೆಪಿ/ಎಬಿವಿಪಿ ಕಾರ್ಯಕ್ರಮ ಪ್ರತಿಭಟನೆಗಳನ್ನು ಭಾಗವಹಿಸಿರುವ ಫೋಟೊ, ವಿಡಿಯೋಗಳನ್ನು ಹುಡುಕಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...