Homeನಿಜವೋ ಸುಳ್ಳೋಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ...

ಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ…

- Advertisement -
- Advertisement -
  1. ಗ್ರಾಮ ಪಂಚಾಯಿತಿ ಚುನಾವಣೆ ಏಪ್ರಿಲ್ 5 ಮತ್ತು 9ಕ್ಕೆ: ಇದು ಸುಳ್ಳು ಸುದ್ದಿ

ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು 10ನೇ ತರಗತಿ ಪಾಸಾಗಿರಬೇಕು, ಪಾನ್ ಕಾರ್ಡ್ ಮತ್ತು ಆಧಾರ ಕಾರ್ಡ್ ಕಡ್ಡಾಯ ಎಂಬ ಸುದ್ದಿ ಹರಿದಾಡಿತ್ತು. ಏಪ್ರಿಲ್ 5 ಮತ್ತು 9ಕ್ಕೆ ಚುನಾವಣೆ ಸಹ ನಡೆಯಲಿದೆ ಎಂಬ ಆದೇಶವೂ ಬಂದಿತ್ತು.]

ಆದರೆ ಇದು ಸುಳ್ಳು ಸುದ್ದಿ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಇನ್ನು ಅಧಿಸೂಚನೆ ಹೊರಡಿಸಿಲ್ಲ ಮತ್ತು ಯಾವುದೇ ನಿಯಮಗಳಿಲ್ಲ ಎಂದು ಹೊಸ ಪ್ರಕಟಣೆ ಹೊರಡಿಸಿದೆ.

2. ಚಪಾಕ್ ಚಿತ್ರದಲ್ಲಿ ಮುಸ್ಲಿಂ ಆರೋಪಿಯ ಹೆಸರನ್ನು ಹಿಂದೂ ಹೆಸರಾಗಿ ಬದಲಾಯಿಸಲಾಗಿದೆಯೇ?

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಆಸಿಡ್ ದಾಳಿಗೊಳಗಾದ ಹೆಣ್ಣುಮಗಳ ಬದುಕಿನ ಘಟನೆಯಾಧಾರಿತ ಚಪಾಕ್ ಎಂಬ ಚಿತ್ರದಲ್ಲಿ ಹಣ ಹೂಡಿದ್ದಲ್ಲದೇ ತಾನೂ ನಟಿಸಿದ್ದಾಳೆ. ಈ ಚಿತ್ರವೂ ಜನವರಿ 10ರಂದು ಬಿಡುಗಡೆಯಾಗಿದೆ.

ಇದಕ್ಕೂ ಮೊದಲು ಜನವರಿ 05ರಂದು ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಎಬಿವಿಪಿ, ಬಿಜೆಪಿ ಗೂಂಡಾಗಳು ನುಗ್ಗಿ ಹಲ್ಲೆ ಮಾಡಿದ್ದನ್ನು ಖಂಡಿಸಿ ದೀಪಿಕಾ ಪಡುಕೋಣೆ ಜೆಎನ್‌ಯುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದರು.

ಇಷ್ಟಕ್ಕೆ ದೀಪಿಕಾ ವಿರುದ್ಧ ದ್ವೇಷ ಸಾಧಿಸಿದ ಕೆಲವರು ಅವರ ವಿರುದ್ಧ ಇಲ್ಲಸಲ್ಲದ ಸುಳ್ಳು ಹರಡಲು ಮುಂದಾಗಿದ್ದರು. ಅದರಲ್ಲಿ ಮುಖ್ಯವಾದುದು ಅವರ ಚಪಾಕ್ ಚಿತ್ರದಲ್ಲಿ ಸಂತ್ರಸ್ತೆ ಮೇಲೆ ಆಸಿಡ್ ಎರಚಿದ ಆರೋಪಿ ನದೀಮ್ ಖಾನ್ ಎಂಬ ಹೆಸರನ್ನು ರಾಜೇಶ್ ಶರ್ಮಾ ಎಂದು ಬದಲಿಸಲಾಗಿದೆ ಎಂಬ ಆರೋಪ..

ಒಪಿಇಂಡಿಯಾ, ಸ್ವರಾಜ್ಯ ಎಂಬ ಬಿಜೆಪಿ ಬೆಂಬಲಿತ ವೆಬ್‌ಗಳು ಇದನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಿದ್ದವು. ಸುಬ್ರಮಣ್ಯಸ್ವಾಮಿ ಅಂತೂ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದರು. ಹಲವು ಬಿಜೆಪಿ ಸಂಸದರಿಂದ ಶುರುವಾಗಿ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಇದನ್ನು ಷೇರ್ ಮಾಡಿದ್ದರು.

ಆದರೆ ಸಿನಿಮಾ ನೋಡಿದ ಬಹುತೇಕರು ಸ್ಪಷ್ಟಪಡಿಸಿರುವುದೇನೆಂದರೆ ನದೀಮ್ ಖಾನ್ ಬದಲಾಗಿ ಬಶೀರ್ ಎಂದು ಮುಸ್ಲಿಂ ಹೆಸರನ್ನೇ ಇಡಲಾಗಿದೆ. ಅಂದರೆ ಬಿಜೆಪಿಗರು, ಸ್ವರಾಜ್ ಹೇಳಿದ್ದೆಲ್ಲ ಹಸಿ ಸುಳ್ಳು ಎಂದು ಜಗಜ್ಜಾಹೀರಾಗಿದೆ.

3. ಇಂದಿರಾಗಾಂಧಿ 1975ರಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿಸಿದ್ದರೆ?

“1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿ ದೆಹಲಿ ಪೊಲೀಸರೊಂದಿಗೆ ಜೆಎನ್‌ಯುಗೆ ಪ್ರವೇಶಿಸಿ, ಆ ಸಮಯದಲ್ಲಿ ಜೆಎನ್‌ಯು ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿದ್ದ ಸಿಪಿಐ ಮುಖಂಡ ಸೀತಾರಾಮ್ ಯೆಚೂರಿಗೆ ಹೊಡೆದು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು ಮತ್ತು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದಕ್ಕೆ ಕ್ಷಮೆಯಾಚಿಸುವ ಪತ್ರವನ್ನು ಸೀತಾರಾಮ್ ಯೆಚೂರಿ ಓದಿದರು. ಇದನ್ನು ಕಮ್ಯುನಿಸ್ಟರೊಂದಿಗೆ ವ್ಯವಹರಿಸುವ ಉಕ್ಕಿನಹಸ್ತ ಎಂದು ಕರೆಯಲಾಗುತ್ತದೆ. ಅಮಿತ್ ಶಾ ಅವರ ಮುಂದೆ ಸಂತನಾಗಿ ಕಾಣಿಸುತ್ತಾನೆ.”

ಈ ರೀತಿಯ ಸಂದೇಶವೊಂದನ್ನು ಮೋಹನ್ ದಾಸ್ ಪೈ ‘ಇದು ನಿಜವೇ’ ಎಂಬ ತಲೆಬರಹದೊಂದಿಗೆ ಹಂಚಿಕೊಂಡಿದ್ದಾರೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಲು ಬೂಮ್‌ಲೈವ್ ಸೀತಾರಾಂ ಯೆಚೂರಿಯವರನ್ನು ಸಂಪರ್ಕಿಸಿತು. ಆಗ ಅವರು “ಇದು 1975ರ ಚಿತ್ರವಲ್ಲ ಬದಲಿಗೆ 1977ರ ಸೆಪ್ಟಂಬರ್‌ನಲ್ಲಿ ತೆಗೆದ ಚಿತ್ರ. ಇಂದಿರಾಗಾಂಧಿಯವರು ಜೆಎನ್‌ಯು ವಿವಿಯ ಉಪಕುಲಪತಿಗಳಾಗಿದ್ದರು. ಅದನ್ನು ವಿರೋಧಿಸಿ ನಾವು ದೊಡ್ಡ ಹೋರಾಟ ನಡೆಸಿದ್ದವು. ಆಗ ಅವರು ಜೆಎನ್‌ಯುಗೆ ಬಂದಾಗ ನಾನು ನಮ್ಮ ಹಕ್ಕೊತ್ತಾಯ ಪತ್ರವನ್ನು ಓದಿ ರಾಜೀನಾಮೆಗೆ ಒತ್ತಾಯಿಸಿದೆವು. ಅಂತೆಯೇ ಅವರು ರಾಜೀನಾಮೆ ನೀಡಿದ್ದರು” ಎಂದಿದ್ದಾರೆ.

ನಂತರ ಬೂಮ್ “ಅವರು ನಿಮ್ಮ ಮೇಲೆ ಹಲ್ಲೆ ನಡೆಸಿದ್ದರೆ ಎಂಬ ಪ್ರಶ್ನೆಗೆ, ಇಲ್ಲ ಅವರು ಹಲ್ಲೆ ಮಾಡಿಸಿರಲಿಲ್ಲ, ಏಕೆಂದರೆ ಅವರು ನಾಗರಿಕರಾಗಿದ್ದರು ಎಂಬ ಉತ್ತರ ನೀಡಿದ್ದಾರೆ. ಅವರು ಅಲ್ಲಿಂದ ನಿಧಾನವಾಗಿ ನಡೆದುಕೊಂಡು ಹೋದರು ಅಷ್ಟೇ ಎಂದು ಅವರು ತಿಳಿಸಿದ್ದಾರೆ.

4 ಜೆಎನ್‌ಯು ಮೇಲೆ ದಾಳಿ ಮಾಡಿದ್ದು ನಾನೇ ಎಂದು ಒಪ್ಪಿಕೊಂಡ ಅಕ್ಷತ್ ಅವಾಸ್ಥಿ ನಮ್ಮ ಸದಸ್ಯನಲ್ಲ: ಎಬಿವಿಪಿ

ಜನವರಿ 10ರಂದು ಇಂಡಿಯಾ ಟುಡೆ ಟಿವಿಯು ಸ್ಟಿಂಗ್ ಆಪರೇಷನ್ ನಡೆಸಿತು. ಆಗ ಎಬಿವಿಪಿ ಸದಸ್ಯ ಅಕ್ಷತ್ ಅವಾಸ್ಥಿ ಎಂಬುವವನು ನಾನು 20 ಜನರನ್ನು ಒಟ್ಟುಗೂಡಿಸಿ ಹಲ್ಲೆ ನಡೆಸಿದೆ, ಗಡ್ಡಬಿಟ್ಟಿದ್ದ ಕಾಶ್ಮೀರದವನ ಹಾಗೆ ಕಾಣುತ್ತಿದ್ದವನ ಮೇಲೆ ಹೊಡೆದು ಎಂದು ಒಪ್ಪಿಕೊಂಡಿದ್ದ.

ನಂತರ ಎಬಿವಿಪಿ ಯಥಾಪ್ರಕಾರ ಆತ ನಮ್ಮ ಸದಸ್ಯನಲ್ಲ ಎಂದು ಜಾರಿಕೊಂಡಿತ್ತು.

ಆಲ್ಟ್‌ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿತು. ಆಗ ಆತ ಹಲವಾರು ಬಿಜೆಪಿ/ಎಬಿವಿಪಿ ಕಾರ್ಯಕ್ರಮ ಪ್ರತಿಭಟನೆಗಳನ್ನು ಭಾಗವಹಿಸಿರುವ ಫೋಟೊ, ವಿಡಿಯೋಗಳನ್ನು ಹುಡುಕಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...