Homeನಿಜವೋ ಸುಳ್ಳೋಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ...

ಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ…

- Advertisement -
- Advertisement -
  1. ಗ್ರಾಮ ಪಂಚಾಯಿತಿ ಚುನಾವಣೆ ಏಪ್ರಿಲ್ 5 ಮತ್ತು 9ಕ್ಕೆ: ಇದು ಸುಳ್ಳು ಸುದ್ದಿ

ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು 10ನೇ ತರಗತಿ ಪಾಸಾಗಿರಬೇಕು, ಪಾನ್ ಕಾರ್ಡ್ ಮತ್ತು ಆಧಾರ ಕಾರ್ಡ್ ಕಡ್ಡಾಯ ಎಂಬ ಸುದ್ದಿ ಹರಿದಾಡಿತ್ತು. ಏಪ್ರಿಲ್ 5 ಮತ್ತು 9ಕ್ಕೆ ಚುನಾವಣೆ ಸಹ ನಡೆಯಲಿದೆ ಎಂಬ ಆದೇಶವೂ ಬಂದಿತ್ತು.]

ಆದರೆ ಇದು ಸುಳ್ಳು ಸುದ್ದಿ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಇನ್ನು ಅಧಿಸೂಚನೆ ಹೊರಡಿಸಿಲ್ಲ ಮತ್ತು ಯಾವುದೇ ನಿಯಮಗಳಿಲ್ಲ ಎಂದು ಹೊಸ ಪ್ರಕಟಣೆ ಹೊರಡಿಸಿದೆ.

2. ಚಪಾಕ್ ಚಿತ್ರದಲ್ಲಿ ಮುಸ್ಲಿಂ ಆರೋಪಿಯ ಹೆಸರನ್ನು ಹಿಂದೂ ಹೆಸರಾಗಿ ಬದಲಾಯಿಸಲಾಗಿದೆಯೇ?

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಆಸಿಡ್ ದಾಳಿಗೊಳಗಾದ ಹೆಣ್ಣುಮಗಳ ಬದುಕಿನ ಘಟನೆಯಾಧಾರಿತ ಚಪಾಕ್ ಎಂಬ ಚಿತ್ರದಲ್ಲಿ ಹಣ ಹೂಡಿದ್ದಲ್ಲದೇ ತಾನೂ ನಟಿಸಿದ್ದಾಳೆ. ಈ ಚಿತ್ರವೂ ಜನವರಿ 10ರಂದು ಬಿಡುಗಡೆಯಾಗಿದೆ.

ಇದಕ್ಕೂ ಮೊದಲು ಜನವರಿ 05ರಂದು ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಎಬಿವಿಪಿ, ಬಿಜೆಪಿ ಗೂಂಡಾಗಳು ನುಗ್ಗಿ ಹಲ್ಲೆ ಮಾಡಿದ್ದನ್ನು ಖಂಡಿಸಿ ದೀಪಿಕಾ ಪಡುಕೋಣೆ ಜೆಎನ್‌ಯುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದರು.

ಇಷ್ಟಕ್ಕೆ ದೀಪಿಕಾ ವಿರುದ್ಧ ದ್ವೇಷ ಸಾಧಿಸಿದ ಕೆಲವರು ಅವರ ವಿರುದ್ಧ ಇಲ್ಲಸಲ್ಲದ ಸುಳ್ಳು ಹರಡಲು ಮುಂದಾಗಿದ್ದರು. ಅದರಲ್ಲಿ ಮುಖ್ಯವಾದುದು ಅವರ ಚಪಾಕ್ ಚಿತ್ರದಲ್ಲಿ ಸಂತ್ರಸ್ತೆ ಮೇಲೆ ಆಸಿಡ್ ಎರಚಿದ ಆರೋಪಿ ನದೀಮ್ ಖಾನ್ ಎಂಬ ಹೆಸರನ್ನು ರಾಜೇಶ್ ಶರ್ಮಾ ಎಂದು ಬದಲಿಸಲಾಗಿದೆ ಎಂಬ ಆರೋಪ..

ಒಪಿಇಂಡಿಯಾ, ಸ್ವರಾಜ್ಯ ಎಂಬ ಬಿಜೆಪಿ ಬೆಂಬಲಿತ ವೆಬ್‌ಗಳು ಇದನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಿದ್ದವು. ಸುಬ್ರಮಣ್ಯಸ್ವಾಮಿ ಅಂತೂ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದರು. ಹಲವು ಬಿಜೆಪಿ ಸಂಸದರಿಂದ ಶುರುವಾಗಿ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಇದನ್ನು ಷೇರ್ ಮಾಡಿದ್ದರು.

ಆದರೆ ಸಿನಿಮಾ ನೋಡಿದ ಬಹುತೇಕರು ಸ್ಪಷ್ಟಪಡಿಸಿರುವುದೇನೆಂದರೆ ನದೀಮ್ ಖಾನ್ ಬದಲಾಗಿ ಬಶೀರ್ ಎಂದು ಮುಸ್ಲಿಂ ಹೆಸರನ್ನೇ ಇಡಲಾಗಿದೆ. ಅಂದರೆ ಬಿಜೆಪಿಗರು, ಸ್ವರಾಜ್ ಹೇಳಿದ್ದೆಲ್ಲ ಹಸಿ ಸುಳ್ಳು ಎಂದು ಜಗಜ್ಜಾಹೀರಾಗಿದೆ.

3. ಇಂದಿರಾಗಾಂಧಿ 1975ರಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿಸಿದ್ದರೆ?

“1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿ ದೆಹಲಿ ಪೊಲೀಸರೊಂದಿಗೆ ಜೆಎನ್‌ಯುಗೆ ಪ್ರವೇಶಿಸಿ, ಆ ಸಮಯದಲ್ಲಿ ಜೆಎನ್‌ಯು ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿದ್ದ ಸಿಪಿಐ ಮುಖಂಡ ಸೀತಾರಾಮ್ ಯೆಚೂರಿಗೆ ಹೊಡೆದು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು ಮತ್ತು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದಕ್ಕೆ ಕ್ಷಮೆಯಾಚಿಸುವ ಪತ್ರವನ್ನು ಸೀತಾರಾಮ್ ಯೆಚೂರಿ ಓದಿದರು. ಇದನ್ನು ಕಮ್ಯುನಿಸ್ಟರೊಂದಿಗೆ ವ್ಯವಹರಿಸುವ ಉಕ್ಕಿನಹಸ್ತ ಎಂದು ಕರೆಯಲಾಗುತ್ತದೆ. ಅಮಿತ್ ಶಾ ಅವರ ಮುಂದೆ ಸಂತನಾಗಿ ಕಾಣಿಸುತ್ತಾನೆ.”

ಈ ರೀತಿಯ ಸಂದೇಶವೊಂದನ್ನು ಮೋಹನ್ ದಾಸ್ ಪೈ ‘ಇದು ನಿಜವೇ’ ಎಂಬ ತಲೆಬರಹದೊಂದಿಗೆ ಹಂಚಿಕೊಂಡಿದ್ದಾರೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಲು ಬೂಮ್‌ಲೈವ್ ಸೀತಾರಾಂ ಯೆಚೂರಿಯವರನ್ನು ಸಂಪರ್ಕಿಸಿತು. ಆಗ ಅವರು “ಇದು 1975ರ ಚಿತ್ರವಲ್ಲ ಬದಲಿಗೆ 1977ರ ಸೆಪ್ಟಂಬರ್‌ನಲ್ಲಿ ತೆಗೆದ ಚಿತ್ರ. ಇಂದಿರಾಗಾಂಧಿಯವರು ಜೆಎನ್‌ಯು ವಿವಿಯ ಉಪಕುಲಪತಿಗಳಾಗಿದ್ದರು. ಅದನ್ನು ವಿರೋಧಿಸಿ ನಾವು ದೊಡ್ಡ ಹೋರಾಟ ನಡೆಸಿದ್ದವು. ಆಗ ಅವರು ಜೆಎನ್‌ಯುಗೆ ಬಂದಾಗ ನಾನು ನಮ್ಮ ಹಕ್ಕೊತ್ತಾಯ ಪತ್ರವನ್ನು ಓದಿ ರಾಜೀನಾಮೆಗೆ ಒತ್ತಾಯಿಸಿದೆವು. ಅಂತೆಯೇ ಅವರು ರಾಜೀನಾಮೆ ನೀಡಿದ್ದರು” ಎಂದಿದ್ದಾರೆ.

ನಂತರ ಬೂಮ್ “ಅವರು ನಿಮ್ಮ ಮೇಲೆ ಹಲ್ಲೆ ನಡೆಸಿದ್ದರೆ ಎಂಬ ಪ್ರಶ್ನೆಗೆ, ಇಲ್ಲ ಅವರು ಹಲ್ಲೆ ಮಾಡಿಸಿರಲಿಲ್ಲ, ಏಕೆಂದರೆ ಅವರು ನಾಗರಿಕರಾಗಿದ್ದರು ಎಂಬ ಉತ್ತರ ನೀಡಿದ್ದಾರೆ. ಅವರು ಅಲ್ಲಿಂದ ನಿಧಾನವಾಗಿ ನಡೆದುಕೊಂಡು ಹೋದರು ಅಷ್ಟೇ ಎಂದು ಅವರು ತಿಳಿಸಿದ್ದಾರೆ.

4 ಜೆಎನ್‌ಯು ಮೇಲೆ ದಾಳಿ ಮಾಡಿದ್ದು ನಾನೇ ಎಂದು ಒಪ್ಪಿಕೊಂಡ ಅಕ್ಷತ್ ಅವಾಸ್ಥಿ ನಮ್ಮ ಸದಸ್ಯನಲ್ಲ: ಎಬಿವಿಪಿ

ಜನವರಿ 10ರಂದು ಇಂಡಿಯಾ ಟುಡೆ ಟಿವಿಯು ಸ್ಟಿಂಗ್ ಆಪರೇಷನ್ ನಡೆಸಿತು. ಆಗ ಎಬಿವಿಪಿ ಸದಸ್ಯ ಅಕ್ಷತ್ ಅವಾಸ್ಥಿ ಎಂಬುವವನು ನಾನು 20 ಜನರನ್ನು ಒಟ್ಟುಗೂಡಿಸಿ ಹಲ್ಲೆ ನಡೆಸಿದೆ, ಗಡ್ಡಬಿಟ್ಟಿದ್ದ ಕಾಶ್ಮೀರದವನ ಹಾಗೆ ಕಾಣುತ್ತಿದ್ದವನ ಮೇಲೆ ಹೊಡೆದು ಎಂದು ಒಪ್ಪಿಕೊಂಡಿದ್ದ.

ನಂತರ ಎಬಿವಿಪಿ ಯಥಾಪ್ರಕಾರ ಆತ ನಮ್ಮ ಸದಸ್ಯನಲ್ಲ ಎಂದು ಜಾರಿಕೊಂಡಿತ್ತು.

ಆಲ್ಟ್‌ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿತು. ಆಗ ಆತ ಹಲವಾರು ಬಿಜೆಪಿ/ಎಬಿವಿಪಿ ಕಾರ್ಯಕ್ರಮ ಪ್ರತಿಭಟನೆಗಳನ್ನು ಭಾಗವಹಿಸಿರುವ ಫೋಟೊ, ವಿಡಿಯೋಗಳನ್ನು ಹುಡುಕಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...