Homeಮುಖಪುಟಹೊಸ ವರ್ಷಾಚರಣೆ; ಬೆಂಗಳೂರಿನಾದ್ಯಂತ ಸಂಚಾರ ಮಾರ್ಗದಲ್ಲಿ ಹಲವು ಬದಲಾವಣೆ

ಹೊಸ ವರ್ಷಾಚರಣೆ; ಬೆಂಗಳೂರಿನಾದ್ಯಂತ ಸಂಚಾರ ಮಾರ್ಗದಲ್ಲಿ ಹಲವು ಬದಲಾವಣೆ

- Advertisement -
- Advertisement -

ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದ್ದು, ಇಂದು ರಾತ್ರಿ ನಗರದ ಅನೇಕ ಸ್ಥಳಗಳು ಅದ್ಧೂರಿ ಆಚರಣೆಗೆ ಸಜ್ಜಾಗಿವೆ. ಹೊಸ ವರ್ಷದ ರಾತ್ರಿಯಂದು ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಜನರು ಸೇರುತ್ತಾರೆ. ಮುಖ್ಯವಾಗಿ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ ಮತ್ತು ಇಂದಿರಾನಗರದಂತಹ ಪ್ರದೇಶಗಳಲ್ಲಿನ ಸಂಭ್ರಮಾಚರಣೆಗಳನ್ನು ಸೂಕ್ಷ್ಮವಾಗಿ ಗಮನಿಸಲು ಬೆಂಗಳೂರು ಪೊಲೀಸರು ಸಜ್ಜಾಗಿದ್ದಾರೆ.

ನಗರದಾದ್ಯಂತ ಇರುವ ಪ್ರಮುಖ ಫ್ಲೈಓವರ್‌ಗಳನ್ನು ಭಾನುವಾರ ರಾತ್ರಿ 11 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಮುಚ್ಚಲಾಗುತ್ತದೆ. ಹೆಣ್ಣೂರು ಮೇಲ್ಸೇತುವೆ, ಐಟಿಸಿ ಮೇಲ್ಸೇತುವೆ, ಬಾಣಸವಾಡಿ ಮುಖ್ಯರಸ್ತೆ ಮೇಲ್ಸೇತುವೆ, ಲಿಂಗರಾಜಪುರ ಮೇಲ್ಸೇತುವೆ, ಹೆಣ್ಣೂರು ಮುಖ್ಯರಸ್ತೆ ಮೇಲ್ಸೇತುವೆ, ದೊಮ್ಮಲೂರು ಮೇಲ್ಸೇತುವೆ, ನಾಗವಾರ ಫ್ಲೈಓವರ್, ಮೇಡಹಳ್ಳಿ ಫ್ಲೈಓವರ್, ಓಎಂ ರಸ್ತೆ ಮೇಲ್ಸೇತುವೆ, ದೇವರಬೀಸನಹಳ್ಳಿ ಮೇಲ್ಸೇತುವೆ, ಮಹದೇವಪುರ ಮೇಲ್ಸೇತುವೆ, ಮಹದೇವಪುರ ಮೇಲ್ಸೇತುವೆ, ಕೆಆರ್ ಮಾರ್ಕೆಟ್ ಮೇಲ್ಸೇತುವೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ.

ವೈಟ್‌ಫಿಲ್ಡ್‌ನಲ್ಲಿರುವ ಫೀನಿಕ್ಸ್ ಮಾಲಿಗೆ ಭೇಟಿ ನೀಡುವ ಜನರು ಕ್ಯಾಬ್‌ಗಳನ್ನು ಮೀಸಲಾದ ಪಿಕ್ ಅಪ್ ಮತ್ತು ಡ್ರಾಪ್ ಪಾಯಿಂಟ್‌ಗಳನ್ನು ಹೊರತುಪಡಿಸಿ ಬೇರೆಡೆ ನಿಲ್ಲಿಸುವುದಕ್ಕೆ ಅನುಮತಿ ಇಲ್ಲ ಎಂಬುದನ್ನು ಗಮನಿಸಬೇಕು. ಫೀನಿಕ್ಸ್ ಮಾಲ್‌ಗೆ ಬರುವವರಿಗೆ ಐಟಿಪಿಎಲ್ ಮುಖ್ಯರಸ್ತೆಯ ಬೆಸ್ಕಾಂ ಕಚೇರಿ ಬಳಿ ಡ್ರಾಪ್ ಪಾಯಿಂಟ್, ಸಿಂಗಯ್ಯನಪಾಳ್ಯ ಮೆಟ್ರೋ ನಿಲ್ದಾಣದ ಬಳಿ ಪಿಕ್ ಅಪ್ ಪಾಯಿಂಟ್. ಇಂದಿರಾನಗರಕ್ಕೆ ಬರುವವರಿಗೆ ಇಂದಿರಾನಗರ 100 ಅಡಿ ರಸ್ತೆಯಲ್ಲಿ 17ನೇ ಮುಖ್ಯರಸ್ತೆ ಜಂಕ್ಷನ್ ಬಳಿ ಡ್ರಾಪ್ ಪಾಯಿಂಟ್, ಇಂದಿರಾನಗರ 100 ಅಡಿ ರಸ್ತೆಯ ಬಿಎಂ ಶ್ರೀ ಜಂಕ್ಷನ್ ಬಳಿ ಪಿಕ್ ಅಪ್ ಪಾಯಿಂಟ್ ಗುರುತಿಸಲಾಗಿದೆ.

ಕೆಲ ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧ:

ಇಂದಿರಾನಗರ 100 ಅಡಿ ರಸ್ತೆ ಹಳೆ ಮದ್ರಾಸ್ ರಸ್ತೆ ಜಂಕ್ಷನ್‌ನಿಂದ ದೊಮ್ಮಲೂರು ಫ್ಲೈಓವರ್ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ. ಇಂದಿರಾನಗರ 12ನೇ ಮುಖ್ಯರಸ್ತೆ 80 ಅಡಿ ರಸ್ತೆಯಿಂದ ಇಂದಿರಾನಗರ ಡಬಲ್ ರೋಡ್ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿ. ಐಟಿಪಿಎಲ್ ಮುಖ್ಯರಸ್ತೆ ಬಿ.ನಾರಾಯಣಪುರ ಶೆಲ್ ಪೆಟ್ರೋಲ್ ಬಂಕ್ ನಿಂದ ಗರುಡಾಚಾರ್ಪಾಳ್ಯ ಡೆಕಾಥ್ಲಾನ್ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಇವುಗಳ ಹೊರತಾಗಿ ಹೊಸ ವರ್ಷದ ರಾತ್ರಿ ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಿಗೆ ವಾಹನಗಳನ್ನು ನಿರ್ಬಂಧಿಸಲಾಗಿದೆ. ಬೆಂಗಳೂರು ಪೊಲೀಸರು ನಗರದ ಎಲ್ಲ ಪ್ರಮುಖ ಸ್ಥಳಗಳಲ್ಲಿ ನೈಟ್ ವಿಷನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ರೀತಿಯ ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಲು ಜನರಿಗೆ ಸಲಹೆ ನೀಡಲಾಗಿದೆ.

ಇದನ್ನೂ ಓದಿ; ಲೈಂಗಿಕ ಕಿರುಕುಳಕ್ಕೆ ಪ್ರತಿರೋಧ; ದಲಿತ ಯುವತಿಯನ್ನು ಬಿಸಿ ಎಣ್ಣೆಗೆ ತಳ್ಳಿದ ದುರುಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...