Homeಮುಖಪುಟಹೊಸ ವರ್ಷಾಚರಣೆ; ಬೆಂಗಳೂರಿನಾದ್ಯಂತ ಸಂಚಾರ ಮಾರ್ಗದಲ್ಲಿ ಹಲವು ಬದಲಾವಣೆ

ಹೊಸ ವರ್ಷಾಚರಣೆ; ಬೆಂಗಳೂರಿನಾದ್ಯಂತ ಸಂಚಾರ ಮಾರ್ಗದಲ್ಲಿ ಹಲವು ಬದಲಾವಣೆ

- Advertisement -
- Advertisement -

ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದ್ದು, ಇಂದು ರಾತ್ರಿ ನಗರದ ಅನೇಕ ಸ್ಥಳಗಳು ಅದ್ಧೂರಿ ಆಚರಣೆಗೆ ಸಜ್ಜಾಗಿವೆ. ಹೊಸ ವರ್ಷದ ರಾತ್ರಿಯಂದು ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಜನರು ಸೇರುತ್ತಾರೆ. ಮುಖ್ಯವಾಗಿ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ ಮತ್ತು ಇಂದಿರಾನಗರದಂತಹ ಪ್ರದೇಶಗಳಲ್ಲಿನ ಸಂಭ್ರಮಾಚರಣೆಗಳನ್ನು ಸೂಕ್ಷ್ಮವಾಗಿ ಗಮನಿಸಲು ಬೆಂಗಳೂರು ಪೊಲೀಸರು ಸಜ್ಜಾಗಿದ್ದಾರೆ.

ನಗರದಾದ್ಯಂತ ಇರುವ ಪ್ರಮುಖ ಫ್ಲೈಓವರ್‌ಗಳನ್ನು ಭಾನುವಾರ ರಾತ್ರಿ 11 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಮುಚ್ಚಲಾಗುತ್ತದೆ. ಹೆಣ್ಣೂರು ಮೇಲ್ಸೇತುವೆ, ಐಟಿಸಿ ಮೇಲ್ಸೇತುವೆ, ಬಾಣಸವಾಡಿ ಮುಖ್ಯರಸ್ತೆ ಮೇಲ್ಸೇತುವೆ, ಲಿಂಗರಾಜಪುರ ಮೇಲ್ಸೇತುವೆ, ಹೆಣ್ಣೂರು ಮುಖ್ಯರಸ್ತೆ ಮೇಲ್ಸೇತುವೆ, ದೊಮ್ಮಲೂರು ಮೇಲ್ಸೇತುವೆ, ನಾಗವಾರ ಫ್ಲೈಓವರ್, ಮೇಡಹಳ್ಳಿ ಫ್ಲೈಓವರ್, ಓಎಂ ರಸ್ತೆ ಮೇಲ್ಸೇತುವೆ, ದೇವರಬೀಸನಹಳ್ಳಿ ಮೇಲ್ಸೇತುವೆ, ಮಹದೇವಪುರ ಮೇಲ್ಸೇತುವೆ, ಮಹದೇವಪುರ ಮೇಲ್ಸೇತುವೆ, ಕೆಆರ್ ಮಾರ್ಕೆಟ್ ಮೇಲ್ಸೇತುವೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ.

ವೈಟ್‌ಫಿಲ್ಡ್‌ನಲ್ಲಿರುವ ಫೀನಿಕ್ಸ್ ಮಾಲಿಗೆ ಭೇಟಿ ನೀಡುವ ಜನರು ಕ್ಯಾಬ್‌ಗಳನ್ನು ಮೀಸಲಾದ ಪಿಕ್ ಅಪ್ ಮತ್ತು ಡ್ರಾಪ್ ಪಾಯಿಂಟ್‌ಗಳನ್ನು ಹೊರತುಪಡಿಸಿ ಬೇರೆಡೆ ನಿಲ್ಲಿಸುವುದಕ್ಕೆ ಅನುಮತಿ ಇಲ್ಲ ಎಂಬುದನ್ನು ಗಮನಿಸಬೇಕು. ಫೀನಿಕ್ಸ್ ಮಾಲ್‌ಗೆ ಬರುವವರಿಗೆ ಐಟಿಪಿಎಲ್ ಮುಖ್ಯರಸ್ತೆಯ ಬೆಸ್ಕಾಂ ಕಚೇರಿ ಬಳಿ ಡ್ರಾಪ್ ಪಾಯಿಂಟ್, ಸಿಂಗಯ್ಯನಪಾಳ್ಯ ಮೆಟ್ರೋ ನಿಲ್ದಾಣದ ಬಳಿ ಪಿಕ್ ಅಪ್ ಪಾಯಿಂಟ್. ಇಂದಿರಾನಗರಕ್ಕೆ ಬರುವವರಿಗೆ ಇಂದಿರಾನಗರ 100 ಅಡಿ ರಸ್ತೆಯಲ್ಲಿ 17ನೇ ಮುಖ್ಯರಸ್ತೆ ಜಂಕ್ಷನ್ ಬಳಿ ಡ್ರಾಪ್ ಪಾಯಿಂಟ್, ಇಂದಿರಾನಗರ 100 ಅಡಿ ರಸ್ತೆಯ ಬಿಎಂ ಶ್ರೀ ಜಂಕ್ಷನ್ ಬಳಿ ಪಿಕ್ ಅಪ್ ಪಾಯಿಂಟ್ ಗುರುತಿಸಲಾಗಿದೆ.

ಕೆಲ ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧ:

ಇಂದಿರಾನಗರ 100 ಅಡಿ ರಸ್ತೆ ಹಳೆ ಮದ್ರಾಸ್ ರಸ್ತೆ ಜಂಕ್ಷನ್‌ನಿಂದ ದೊಮ್ಮಲೂರು ಫ್ಲೈಓವರ್ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ. ಇಂದಿರಾನಗರ 12ನೇ ಮುಖ್ಯರಸ್ತೆ 80 ಅಡಿ ರಸ್ತೆಯಿಂದ ಇಂದಿರಾನಗರ ಡಬಲ್ ರೋಡ್ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿ. ಐಟಿಪಿಎಲ್ ಮುಖ್ಯರಸ್ತೆ ಬಿ.ನಾರಾಯಣಪುರ ಶೆಲ್ ಪೆಟ್ರೋಲ್ ಬಂಕ್ ನಿಂದ ಗರುಡಾಚಾರ್ಪಾಳ್ಯ ಡೆಕಾಥ್ಲಾನ್ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಇವುಗಳ ಹೊರತಾಗಿ ಹೊಸ ವರ್ಷದ ರಾತ್ರಿ ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಿಗೆ ವಾಹನಗಳನ್ನು ನಿರ್ಬಂಧಿಸಲಾಗಿದೆ. ಬೆಂಗಳೂರು ಪೊಲೀಸರು ನಗರದ ಎಲ್ಲ ಪ್ರಮುಖ ಸ್ಥಳಗಳಲ್ಲಿ ನೈಟ್ ವಿಷನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ರೀತಿಯ ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಲು ಜನರಿಗೆ ಸಲಹೆ ನೀಡಲಾಗಿದೆ.

ಇದನ್ನೂ ಓದಿ; ಲೈಂಗಿಕ ಕಿರುಕುಳಕ್ಕೆ ಪ್ರತಿರೋಧ; ದಲಿತ ಯುವತಿಯನ್ನು ಬಿಸಿ ಎಣ್ಣೆಗೆ ತಳ್ಳಿದ ದುರುಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...