Homeಮುಖಪುಟಹೊಸ ವರ್ಷಾಚರಣೆ; ಬೆಂಗಳೂರಿನಾದ್ಯಂತ ಸಂಚಾರ ಮಾರ್ಗದಲ್ಲಿ ಹಲವು ಬದಲಾವಣೆ

ಹೊಸ ವರ್ಷಾಚರಣೆ; ಬೆಂಗಳೂರಿನಾದ್ಯಂತ ಸಂಚಾರ ಮಾರ್ಗದಲ್ಲಿ ಹಲವು ಬದಲಾವಣೆ

- Advertisement -
- Advertisement -

ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದ್ದು, ಇಂದು ರಾತ್ರಿ ನಗರದ ಅನೇಕ ಸ್ಥಳಗಳು ಅದ್ಧೂರಿ ಆಚರಣೆಗೆ ಸಜ್ಜಾಗಿವೆ. ಹೊಸ ವರ್ಷದ ರಾತ್ರಿಯಂದು ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಜನರು ಸೇರುತ್ತಾರೆ. ಮುಖ್ಯವಾಗಿ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ ಮತ್ತು ಇಂದಿರಾನಗರದಂತಹ ಪ್ರದೇಶಗಳಲ್ಲಿನ ಸಂಭ್ರಮಾಚರಣೆಗಳನ್ನು ಸೂಕ್ಷ್ಮವಾಗಿ ಗಮನಿಸಲು ಬೆಂಗಳೂರು ಪೊಲೀಸರು ಸಜ್ಜಾಗಿದ್ದಾರೆ.

ನಗರದಾದ್ಯಂತ ಇರುವ ಪ್ರಮುಖ ಫ್ಲೈಓವರ್‌ಗಳನ್ನು ಭಾನುವಾರ ರಾತ್ರಿ 11 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಮುಚ್ಚಲಾಗುತ್ತದೆ. ಹೆಣ್ಣೂರು ಮೇಲ್ಸೇತುವೆ, ಐಟಿಸಿ ಮೇಲ್ಸೇತುವೆ, ಬಾಣಸವಾಡಿ ಮುಖ್ಯರಸ್ತೆ ಮೇಲ್ಸೇತುವೆ, ಲಿಂಗರಾಜಪುರ ಮೇಲ್ಸೇತುವೆ, ಹೆಣ್ಣೂರು ಮುಖ್ಯರಸ್ತೆ ಮೇಲ್ಸೇತುವೆ, ದೊಮ್ಮಲೂರು ಮೇಲ್ಸೇತುವೆ, ನಾಗವಾರ ಫ್ಲೈಓವರ್, ಮೇಡಹಳ್ಳಿ ಫ್ಲೈಓವರ್, ಓಎಂ ರಸ್ತೆ ಮೇಲ್ಸೇತುವೆ, ದೇವರಬೀಸನಹಳ್ಳಿ ಮೇಲ್ಸೇತುವೆ, ಮಹದೇವಪುರ ಮೇಲ್ಸೇತುವೆ, ಮಹದೇವಪುರ ಮೇಲ್ಸೇತುವೆ, ಕೆಆರ್ ಮಾರ್ಕೆಟ್ ಮೇಲ್ಸೇತುವೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ.

ವೈಟ್‌ಫಿಲ್ಡ್‌ನಲ್ಲಿರುವ ಫೀನಿಕ್ಸ್ ಮಾಲಿಗೆ ಭೇಟಿ ನೀಡುವ ಜನರು ಕ್ಯಾಬ್‌ಗಳನ್ನು ಮೀಸಲಾದ ಪಿಕ್ ಅಪ್ ಮತ್ತು ಡ್ರಾಪ್ ಪಾಯಿಂಟ್‌ಗಳನ್ನು ಹೊರತುಪಡಿಸಿ ಬೇರೆಡೆ ನಿಲ್ಲಿಸುವುದಕ್ಕೆ ಅನುಮತಿ ಇಲ್ಲ ಎಂಬುದನ್ನು ಗಮನಿಸಬೇಕು. ಫೀನಿಕ್ಸ್ ಮಾಲ್‌ಗೆ ಬರುವವರಿಗೆ ಐಟಿಪಿಎಲ್ ಮುಖ್ಯರಸ್ತೆಯ ಬೆಸ್ಕಾಂ ಕಚೇರಿ ಬಳಿ ಡ್ರಾಪ್ ಪಾಯಿಂಟ್, ಸಿಂಗಯ್ಯನಪಾಳ್ಯ ಮೆಟ್ರೋ ನಿಲ್ದಾಣದ ಬಳಿ ಪಿಕ್ ಅಪ್ ಪಾಯಿಂಟ್. ಇಂದಿರಾನಗರಕ್ಕೆ ಬರುವವರಿಗೆ ಇಂದಿರಾನಗರ 100 ಅಡಿ ರಸ್ತೆಯಲ್ಲಿ 17ನೇ ಮುಖ್ಯರಸ್ತೆ ಜಂಕ್ಷನ್ ಬಳಿ ಡ್ರಾಪ್ ಪಾಯಿಂಟ್, ಇಂದಿರಾನಗರ 100 ಅಡಿ ರಸ್ತೆಯ ಬಿಎಂ ಶ್ರೀ ಜಂಕ್ಷನ್ ಬಳಿ ಪಿಕ್ ಅಪ್ ಪಾಯಿಂಟ್ ಗುರುತಿಸಲಾಗಿದೆ.

ಕೆಲ ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧ:

ಇಂದಿರಾನಗರ 100 ಅಡಿ ರಸ್ತೆ ಹಳೆ ಮದ್ರಾಸ್ ರಸ್ತೆ ಜಂಕ್ಷನ್‌ನಿಂದ ದೊಮ್ಮಲೂರು ಫ್ಲೈಓವರ್ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ. ಇಂದಿರಾನಗರ 12ನೇ ಮುಖ್ಯರಸ್ತೆ 80 ಅಡಿ ರಸ್ತೆಯಿಂದ ಇಂದಿರಾನಗರ ಡಬಲ್ ರೋಡ್ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿ. ಐಟಿಪಿಎಲ್ ಮುಖ್ಯರಸ್ತೆ ಬಿ.ನಾರಾಯಣಪುರ ಶೆಲ್ ಪೆಟ್ರೋಲ್ ಬಂಕ್ ನಿಂದ ಗರುಡಾಚಾರ್ಪಾಳ್ಯ ಡೆಕಾಥ್ಲಾನ್ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಇವುಗಳ ಹೊರತಾಗಿ ಹೊಸ ವರ್ಷದ ರಾತ್ರಿ ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಿಗೆ ವಾಹನಗಳನ್ನು ನಿರ್ಬಂಧಿಸಲಾಗಿದೆ. ಬೆಂಗಳೂರು ಪೊಲೀಸರು ನಗರದ ಎಲ್ಲ ಪ್ರಮುಖ ಸ್ಥಳಗಳಲ್ಲಿ ನೈಟ್ ವಿಷನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ರೀತಿಯ ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಲು ಜನರಿಗೆ ಸಲಹೆ ನೀಡಲಾಗಿದೆ.

ಇದನ್ನೂ ಓದಿ; ಲೈಂಗಿಕ ಕಿರುಕುಳಕ್ಕೆ ಪ್ರತಿರೋಧ; ದಲಿತ ಯುವತಿಯನ್ನು ಬಿಸಿ ಎಣ್ಣೆಗೆ ತಳ್ಳಿದ ದುರುಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...