Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಮೇಲೆ ಅಮೆರಿಕ ಪೊಲೀಸರಿಂದ ದೌರ್ಜನ್ಯ

ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಮೇಲೆ ಅಮೆರಿಕ ಪೊಲೀಸರಿಂದ ದೌರ್ಜನ್ಯ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಮುಂದುವರಿಸಿದ್ದು, ಇದನ್ನು ಖಂಡಿಸಿ ಅಮೆರಿಕದಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರನ್ನು ಥಳಿಸಿ ಪೊಲೀಸರು ದೌರ್ಜನ್ಯ ನಡೆಸಿರುವ ಬಗ್ಗೆ ಅಲ್‌ಜಝೀರಾ ವರದಿ ಮಾಡಿದೆ.

ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸಲು ಅಮೆರಿಕ ಇಸ್ರೇಲ್‌ಗೆ ಬೆನ್ನಿಗೆ ನಿಂತಿತ್ತು. ಇದನ್ನು ಅಮೆರಿಕದ ನಾಗರಿಕರು ವಿರೋಧಿಸುತ್ತಲೇ ಬಂದಿದ್ದರು, ಇಸ್ರೇಲ್‌ಗೆ ಯಾವುದೇ ಯುದ್ಧ ನೆರವನ್ನು ನೀಡದಂತೆ ಆಗ್ರಹಿಸಿದ್ದರು. ಆದರೆ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳ ಸಾಗಣೆಯನ್ನು ಅಮೆರಿಕ ನಿಲ್ಲಿಸಿಲ್ಲ. ಅಂತರಾಷ್ಟ್ರೀಯ ಖಂಡನೆಗಳ ಹೊರತಾಗಿಯೂ ಟ್ಯಾಂಕ್ ಶೆಲ್‌ಗಳನ್ನು ಒಳಗೊಂಡಂತೆ ಹೊಸ 1 ಬಿಲಿಯನ್ ಪ್ಯಾಕೇಜ್‌ನ್ನು ಅಮೆರಿಕ ಮುಂದುವರಿಸಿದೆ.

ಅಮೆರಿಕದ ನೈರುತ್ಯ ಬ್ರೂಕ್ಲಿನ್‌ನ ಬೇ ರಿಡ್ಜ್ ಪ್ರದೇಶದಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದರು. ನೈರುತ್ಯ ಬ್ರೂಕ್ಲಿನ್‌ ಪ್ಯಾಲೆಸ್ತೀನಿಯನ್ನರು ಮತ್ತು ಯೆಮೆನ್ ಮೂಲದ ಜನರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದ ಜನರು ವಾಸಿಸುವ ನೆಲೆಯಾಗಿದೆ. ಪ್ರತಿಭಟನಕಾರರು ಬೀದಿಯಲ್ಲಿ ಮೆರವಣಿಗೆ ಮಾಡಿದ್ದು, ಈ ವೇಳೆ ನ್ಯೂಯಾರ್ಕ್ ಪೊಲೀಸರು ಬಂದು ಪ್ರತಿಭಟನಾಕಾರರನ್ನು ಥಳಿಸಿ ಬಂಧಿಸಿದ್ದಾರೆ. ಪ್ರತಿಭಟನಾಕಾರರನ್ನು ನೆಲಕ್ಕೆ ತಳ್ಳಿ ತಲೆಗೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ಸ್ವತಂತ್ರ ಪತ್ರಕರ್ತರಾದ ಕೇಟೀ ಸ್ಮಿತ್ ತಿಳಿಸಿದ್ದಾರೆ.

ಸ್ಮಿತ್ ಸ್ಥಳೀಯ ಸಮುದಾಯದ ಪ್ರತಿಕ್ರಿಯೆಯನ್ನು “ಆಕ್ರೋಶ’ ಎಂದು ಬಣ್ಣಿಸಿದ್ದಾರೆ. ಬೇ ರಿಡ್ಜ್ ಪ್ರದೇಶ ಒಂದು ದಶಕದಿಂದ ಪ್ಯಾಲೆಸ್ತೀನ್‌ ಪರ ಮೆರವಣಿಗೆಗಳನ್ನು ನೋಡಿದೆ, ಆದರೆ ಪೊಲೀಸ್ ಈ ರೀತಿ ಎಂದಿಗೂ ಕ್ರೂರವಾಗಿ ನಡೆದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ.

ನೂರಾರು ಜನರ ಗುಂಪಿನಿಂದ ಕನಿಷ್ಠ ಹನ್ನೆರಡು ಮಂದಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಈ ಕುರಿತ ವೈರಲ್‌ ವಿಡಿಯೋಗಳು  ಪ್ರತಿಭಟನಾಕಾರರನ್ನು ಪೊಲೀಸರು ಎಳೆದುಕೊಂಡು ಹೋಗುವುದನ್ನು ತೋರಿಸಿದೆ. ಅವರಿಗೆ ಕೈಗೆ ಸಂಕೋಲೆಗಳನ್ನು ಹಾಕಲಾಗಿದೆ ಎನ್ನುವುದನ್ನು ತೋರಿಸಿದೆ.

ಮೇ ತಿಂಗಳ ಆರಂಭದಲ್ಲಿ ಕೊಲಂಬಿಯಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ನಡೆದ ದಾಳಿ ಸೇರಿದಂತೆ ಗಾಝಾದ ಮೇಲಿನ ಯುದ್ಧವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ನಡೆದ ಪ್ರತಿಭಟನೆಗಳಲ್ಲಿ ಅಮೆರಿಕದ ಪೊಲೀಸರು ನೂರಾರು ಮಂದಿಯನ್ನು ಬಂಧಿಸಿದ್ದಾರೆ.

ಶನಿವಾರ ನೂರಾರು ಜನರ ಗುಂಪು ವಾಷಿಂಗ್ಟನ್‌ನಲ್ಲಿ ಮಳೆಯ ಮಧ್ಯೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಪ್ಯಾಲೆಸ್ತೀನ್‌ ಅಮೇರಿಕನ್ನರು ಮತ್ತು ಅವರು ಬೆಂಬಲಿಗರಾಗಿದ್ದರು. ಅವರು ‘ಫ್ರೀ ಪ್ಯಾಲೆಸ್ತೀನ್‌’ ಎಂದು ಘೋಷಣೆ ಕೂಗುತ್ತಿದ್ದರು ಮತ್ತು ಯುಎಸ್ ಅಧ್ಯಕ್ಷ ಜೋ ಬಿಡೆನ್ ನರಮೇಧದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಘೋಷಣೆ ಕೂಗಿದ್ದಾರೆ.

ಅಮೆರಿಕನ್ ಮುಸ್ಲಿಂ ಫಾರ್ ಪ್ಯಾಲೆಸ್ತೀನ್‌ (AMP) ಸಂಘಟನೆಯ ಸದಸ್ಯ ಮೊಹಮದ್ ಹಬೆಹ್ ಮಾತನಾಡಿ, ನಾವು ಇಸ್ರೇಲ್-ಪ್ಯಾಲೆಸ್ತೀನ್‌ ಸಂಘರ್ಷದ ಬಗ್ಗೆ ಜನರಿಗೆ ಅರಿವು ನೀಡಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೇಲ್‌ ಕಳೆದ 8 ತಿಂಗಳಿನಿಂದ ಗಾಝಾ ಮೇಲೆ ಆಕ್ರಮಣವನ್ನು ನಡೆಸುತ್ತಿದೆ. 35,000ಕ್ಕೂ ಅಧಿಕ ಮಂದಿ ಈ ವೇಳೆ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿ ರಫಾದ ನಿರಾಶ್ರಿತರ ಶಿಬಿರದಲ್ಲಿ ದಿನದೂಡುತ್ತಿದ್ದರು. ಆದರೆ ಇದೀಗ ಇಸ್ರೇಲ್‌ ರಫಾದ ಮೇಲೆ ತನ್ನ ಆಕ್ರಮಣವನ್ನು ಮುಂದುವರಿಸಿದೆ. ಕಳೆದ ವಾರ ಇಸ್ರೇಲ್ ದಕ್ಷಿಣ ಗಾಝಾ ನಗರವಾದ ರಫಾ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದಾಗಿನಿಂದ ಸುಮಾರು 8,00,000 ಪ್ಯಾಲೆಸ್ತೀನಿಯನ್ನರು ರಫಾದಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಪ್ಯಾಲೆಸ್ತೀನಿಯನ್ ನಿರಾಶ್ರಿತರಿಗಾಗಿ ನೆರವು ನೀಡುತ್ತಿರುವ ವಿಶ್ವಸಂಸ್ಥೆಯ ಏಜೆನ್ಸಿಯ ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ.

ಶನಿವಾರ ಗಾಝಾದಾದ್ಯಂತ ಇಸ್ರೇಲ್‌ ತನ್ನ ಆಕ್ರಮಣವನ್ನು ತೀವ್ರವಾಗಿ ಮುಂದುವರಿಸಿತ್ತು. ರಫಾ ಸೇರಿದಂತೆ ವಿವಿಧೆಡೆ ಇಸ್ರೇಲ್‌ ನಡೆಸಿದ ದಾಳಿಗೆ 12ಕ್ಕೂ ಅಧಿಕ ನಾಗರಿಕರ ಹತ್ಯೆ ನಡೆದಿದೆ. ಕಳೆದ 24 ಗಂಟೆಗಳಲ್ಲಿ 83 ಪ್ಯಾಲೆಸ್ತೀನ್‌ ನಾಗರಿಕರ ಹತ್ಯೆ ನಡೆದಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ತಿಳಿಸಿದೆ.

ಇದನ್ನು ಓದಿ: ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...