Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಮೇಲೆ ಅಮೆರಿಕ ಪೊಲೀಸರಿಂದ ದೌರ್ಜನ್ಯ

ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಮೇಲೆ ಅಮೆರಿಕ ಪೊಲೀಸರಿಂದ ದೌರ್ಜನ್ಯ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಮುಂದುವರಿಸಿದ್ದು, ಇದನ್ನು ಖಂಡಿಸಿ ಅಮೆರಿಕದಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರನ್ನು ಥಳಿಸಿ ಪೊಲೀಸರು ದೌರ್ಜನ್ಯ ನಡೆಸಿರುವ ಬಗ್ಗೆ ಅಲ್‌ಜಝೀರಾ ವರದಿ ಮಾಡಿದೆ.

ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸಲು ಅಮೆರಿಕ ಇಸ್ರೇಲ್‌ಗೆ ಬೆನ್ನಿಗೆ ನಿಂತಿತ್ತು. ಇದನ್ನು ಅಮೆರಿಕದ ನಾಗರಿಕರು ವಿರೋಧಿಸುತ್ತಲೇ ಬಂದಿದ್ದರು, ಇಸ್ರೇಲ್‌ಗೆ ಯಾವುದೇ ಯುದ್ಧ ನೆರವನ್ನು ನೀಡದಂತೆ ಆಗ್ರಹಿಸಿದ್ದರು. ಆದರೆ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳ ಸಾಗಣೆಯನ್ನು ಅಮೆರಿಕ ನಿಲ್ಲಿಸಿಲ್ಲ. ಅಂತರಾಷ್ಟ್ರೀಯ ಖಂಡನೆಗಳ ಹೊರತಾಗಿಯೂ ಟ್ಯಾಂಕ್ ಶೆಲ್‌ಗಳನ್ನು ಒಳಗೊಂಡಂತೆ ಹೊಸ 1 ಬಿಲಿಯನ್ ಪ್ಯಾಕೇಜ್‌ನ್ನು ಅಮೆರಿಕ ಮುಂದುವರಿಸಿದೆ.

ಅಮೆರಿಕದ ನೈರುತ್ಯ ಬ್ರೂಕ್ಲಿನ್‌ನ ಬೇ ರಿಡ್ಜ್ ಪ್ರದೇಶದಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದರು. ನೈರುತ್ಯ ಬ್ರೂಕ್ಲಿನ್‌ ಪ್ಯಾಲೆಸ್ತೀನಿಯನ್ನರು ಮತ್ತು ಯೆಮೆನ್ ಮೂಲದ ಜನರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದ ಜನರು ವಾಸಿಸುವ ನೆಲೆಯಾಗಿದೆ. ಪ್ರತಿಭಟನಕಾರರು ಬೀದಿಯಲ್ಲಿ ಮೆರವಣಿಗೆ ಮಾಡಿದ್ದು, ಈ ವೇಳೆ ನ್ಯೂಯಾರ್ಕ್ ಪೊಲೀಸರು ಬಂದು ಪ್ರತಿಭಟನಾಕಾರರನ್ನು ಥಳಿಸಿ ಬಂಧಿಸಿದ್ದಾರೆ. ಪ್ರತಿಭಟನಾಕಾರರನ್ನು ನೆಲಕ್ಕೆ ತಳ್ಳಿ ತಲೆಗೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ಸ್ವತಂತ್ರ ಪತ್ರಕರ್ತರಾದ ಕೇಟೀ ಸ್ಮಿತ್ ತಿಳಿಸಿದ್ದಾರೆ.

ಸ್ಮಿತ್ ಸ್ಥಳೀಯ ಸಮುದಾಯದ ಪ್ರತಿಕ್ರಿಯೆಯನ್ನು “ಆಕ್ರೋಶ’ ಎಂದು ಬಣ್ಣಿಸಿದ್ದಾರೆ. ಬೇ ರಿಡ್ಜ್ ಪ್ರದೇಶ ಒಂದು ದಶಕದಿಂದ ಪ್ಯಾಲೆಸ್ತೀನ್‌ ಪರ ಮೆರವಣಿಗೆಗಳನ್ನು ನೋಡಿದೆ, ಆದರೆ ಪೊಲೀಸ್ ಈ ರೀತಿ ಎಂದಿಗೂ ಕ್ರೂರವಾಗಿ ನಡೆದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ.

ನೂರಾರು ಜನರ ಗುಂಪಿನಿಂದ ಕನಿಷ್ಠ ಹನ್ನೆರಡು ಮಂದಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಈ ಕುರಿತ ವೈರಲ್‌ ವಿಡಿಯೋಗಳು  ಪ್ರತಿಭಟನಾಕಾರರನ್ನು ಪೊಲೀಸರು ಎಳೆದುಕೊಂಡು ಹೋಗುವುದನ್ನು ತೋರಿಸಿದೆ. ಅವರಿಗೆ ಕೈಗೆ ಸಂಕೋಲೆಗಳನ್ನು ಹಾಕಲಾಗಿದೆ ಎನ್ನುವುದನ್ನು ತೋರಿಸಿದೆ.

ಮೇ ತಿಂಗಳ ಆರಂಭದಲ್ಲಿ ಕೊಲಂಬಿಯಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ನಡೆದ ದಾಳಿ ಸೇರಿದಂತೆ ಗಾಝಾದ ಮೇಲಿನ ಯುದ್ಧವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ನಡೆದ ಪ್ರತಿಭಟನೆಗಳಲ್ಲಿ ಅಮೆರಿಕದ ಪೊಲೀಸರು ನೂರಾರು ಮಂದಿಯನ್ನು ಬಂಧಿಸಿದ್ದಾರೆ.

ಶನಿವಾರ ನೂರಾರು ಜನರ ಗುಂಪು ವಾಷಿಂಗ್ಟನ್‌ನಲ್ಲಿ ಮಳೆಯ ಮಧ್ಯೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಪ್ಯಾಲೆಸ್ತೀನ್‌ ಅಮೇರಿಕನ್ನರು ಮತ್ತು ಅವರು ಬೆಂಬಲಿಗರಾಗಿದ್ದರು. ಅವರು ‘ಫ್ರೀ ಪ್ಯಾಲೆಸ್ತೀನ್‌’ ಎಂದು ಘೋಷಣೆ ಕೂಗುತ್ತಿದ್ದರು ಮತ್ತು ಯುಎಸ್ ಅಧ್ಯಕ್ಷ ಜೋ ಬಿಡೆನ್ ನರಮೇಧದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಘೋಷಣೆ ಕೂಗಿದ್ದಾರೆ.

ಅಮೆರಿಕನ್ ಮುಸ್ಲಿಂ ಫಾರ್ ಪ್ಯಾಲೆಸ್ತೀನ್‌ (AMP) ಸಂಘಟನೆಯ ಸದಸ್ಯ ಮೊಹಮದ್ ಹಬೆಹ್ ಮಾತನಾಡಿ, ನಾವು ಇಸ್ರೇಲ್-ಪ್ಯಾಲೆಸ್ತೀನ್‌ ಸಂಘರ್ಷದ ಬಗ್ಗೆ ಜನರಿಗೆ ಅರಿವು ನೀಡಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೇಲ್‌ ಕಳೆದ 8 ತಿಂಗಳಿನಿಂದ ಗಾಝಾ ಮೇಲೆ ಆಕ್ರಮಣವನ್ನು ನಡೆಸುತ್ತಿದೆ. 35,000ಕ್ಕೂ ಅಧಿಕ ಮಂದಿ ಈ ವೇಳೆ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿ ರಫಾದ ನಿರಾಶ್ರಿತರ ಶಿಬಿರದಲ್ಲಿ ದಿನದೂಡುತ್ತಿದ್ದರು. ಆದರೆ ಇದೀಗ ಇಸ್ರೇಲ್‌ ರಫಾದ ಮೇಲೆ ತನ್ನ ಆಕ್ರಮಣವನ್ನು ಮುಂದುವರಿಸಿದೆ. ಕಳೆದ ವಾರ ಇಸ್ರೇಲ್ ದಕ್ಷಿಣ ಗಾಝಾ ನಗರವಾದ ರಫಾ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದಾಗಿನಿಂದ ಸುಮಾರು 8,00,000 ಪ್ಯಾಲೆಸ್ತೀನಿಯನ್ನರು ರಫಾದಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಪ್ಯಾಲೆಸ್ತೀನಿಯನ್ ನಿರಾಶ್ರಿತರಿಗಾಗಿ ನೆರವು ನೀಡುತ್ತಿರುವ ವಿಶ್ವಸಂಸ್ಥೆಯ ಏಜೆನ್ಸಿಯ ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ.

ಶನಿವಾರ ಗಾಝಾದಾದ್ಯಂತ ಇಸ್ರೇಲ್‌ ತನ್ನ ಆಕ್ರಮಣವನ್ನು ತೀವ್ರವಾಗಿ ಮುಂದುವರಿಸಿತ್ತು. ರಫಾ ಸೇರಿದಂತೆ ವಿವಿಧೆಡೆ ಇಸ್ರೇಲ್‌ ನಡೆಸಿದ ದಾಳಿಗೆ 12ಕ್ಕೂ ಅಧಿಕ ನಾಗರಿಕರ ಹತ್ಯೆ ನಡೆದಿದೆ. ಕಳೆದ 24 ಗಂಟೆಗಳಲ್ಲಿ 83 ಪ್ಯಾಲೆಸ್ತೀನ್‌ ನಾಗರಿಕರ ಹತ್ಯೆ ನಡೆದಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ತಿಳಿಸಿದೆ.

ಇದನ್ನು ಓದಿ: ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...