Homeಮುಖಪುಟನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

ನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

- Advertisement -
- Advertisement -

ಭಾರತದ ಬಗ್ಗೆ ಅಪಪ್ರಚಾರ ಮಾಡುವುದೇ ‘ದಿ ನ್ಯೂಯಾರ್ಕ್ ಟೈಮ್ಸ್‌’ ಪತ್ರಿಕೆಯ ಏಕೈಕ ಉದ್ದೇಶವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಕುಗ್ಗಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ಪ್ರಕಟಿಸಿರುವ ಲೇಖನಕ್ಕೆ ಸಂಬಂಧಿಸಿದಂತೆ ಅನುರಾಗ್ ಪ್ರತಿಕ್ರಿಯಿಸಿದ್ದಾರೆ.

“ಭಾರತದ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಮೋದಿಯವರಿಂದ ಅಂತಿಮ ದಾಳಿ ಆರಂಭವಾಗಿದೆ” ಎಂಬ ಶೀರ್ಷಿಕೆಯಲ್ಲಿ ‘ದಿ ಕಾಶ್ಮೀರ್ ಟೈಮ್ಸ್‌’ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ಅವರು ಲೇಖನ ಬರೆದಿದ್ದು, ಬುಧವಾರ ಅದು ಪ್ರಕಟವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ದಮನಕಾರಿ ಮಾಧ್ಯಮ ನೀತಿಗಳು ಕಾಶ್ಮೀರಿ ಪತ್ರಿಕೋದ್ಯಮವನ್ನು ನಾಶಪಡಿಸುತ್ತಿವೆ, ಸರ್ಕಾರದ ಮುಖವಾಣಿಗಳಾಗಿ ಕಾರ್ಯನಿರ್ವಹಿಸುವಂತೆ ಮಾಧ್ಯಮಗಳನ್ನು ಬೆದರಿಸಲಾಗುತ್ತಿದೆ. ಸುಮಾರು 13 ಮಿಲಿಯನ್ ಜನರಿರುವ ನಮ್ಮ ಪ್ರದೇಶದಲ್ಲಿ ಮಾಹಿತಿ ಹರಿವಿನ ಮೇಲೆ ತಡೆ ನೀಡಲಾಗುತ್ತಿದೆ ಎಂದು ಭಾಸಿನ್ ಬರೆದಿದ್ದಾರೆ.

ಭಾರತದಾದ್ಯಂತ ಈ ‘ಗೊಂದಲಕಾರಿ ಮಾದರಿ’ಯನ್ನು ಅನ್ವಯಿಸಲು ಮೋದಿ ಮುಂದಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಠಾಕೂರ್‌, “ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯವು ಇತರ ಮೂಲಭೂತ ಹಕ್ಕುಗಳಂತೆ ಪರಮಪೂಜ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಆದರೆ ಠಾಕೂರ್ ಅವರ ಪ್ರತಿಪಾದನೆಗೆ ವ್ಯತಿರಿಕ್ತವಾಗಿ ಅಂಕಿಅಂಶಗಳಿವೆ. 2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 140ನೇ ಸ್ಥಾನದಿಂದ ಕಳೆದ ವರ್ಷ 150ನೇ ಸ್ಥಾನಕ್ಕೆ ಕುಸಿದಿದೆ.

“ಕಾಶ್ಮೀರದಲ್ಲಿ ಮಾಹಿತಿ ಹರಿವಿನ ಮೇಲೆ ನಿರ್ಬಂಧ ಹೇರಲಾಗಿದೆ ಎಂಬುದು ಕಾಲ್ಪನಿಕ” ಎಂದು ವಾದಿಸಿರುವ ಠಾಕೂರ್‌, “ನ್ಯೂಯಾರ್ಕ್ ಟೈಮ್ಸ್ ಬಹಳ ಹಿಂದೆಯೇ ಭಾರತದ ಬಗ್ಗೆ ಏನನ್ನಾದರೂ ಪ್ರಕಟಿಸುವಾಗ ತಟಸ್ಥತೆಯ ಎಲ್ಲಾ ಸೋಗುಗಳನ್ನು ಕೈಬಿಟ್ಟಿದೆ” ಎಂದು ದೂರಿದ್ದಾರೆ.

“ಇದೇ ರೀತಿಯ ಮನಸ್ಥಿತಿಯನ್ನು ಹೊಂದಿರುವ ಇತರ ಕೆಲವು ವಿದೇಶಿ ಮಾಧ್ಯಮ ಸಂಸ್ಥೆಗಳು ಭಾರತ ಮತ್ತು ಮೋದಿಯವರ ಬಗ್ಗೆ ಸುಳ್ಳುಗಳನ್ನು ಹರಡುತ್ತಿವೆ. ಈ ಸಂಸ್ಥೆಗಳು ಭಾರತ ಮತ್ತು ಪ್ರಧಾನಿ ವಿರುದ್ಧ ದ್ವೇಷ ಕಾರುತ್ತಿವೆ” ಎಂದಿದ್ದಾರೆ.

ಇದನ್ನೂ ಓದಿರಿ: ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

“ಇಂತಹ ಸುಳ್ಳುಗಳು ಹೆಚ್ಚು ಕಾಲ ಉಳಿಯುವುದಿಲ್ಲ. ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜನರು ಬಹಳ ಪ್ರಬುದ್ಧರಾಗಿದ್ದೇವೆ. ಇಂತಹ ಅಜೆಂಡಾ ಚಾಲಿತ ಮಾಧ್ಯಮಗಳಿಂದ ನಾವು ಪ್ರಜಾಪ್ರಭುತ್ವದ ಪಾಠವನ್ನು ಕಲಿಯಬೇಕಾಗಿಲ್ಲ. ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ನ್ಯೂಯಾರ್ಕ್ ಟೈಮ್ಸ್‌ ಹರಡಿದ ಸುಳ್ಳುಗಳು ಖಂಡನೀಯ” ಎಂದು ತಿಳಿಸಿದ್ದಾರೆ.

2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ನಿಷ್ಕ್ರಿಯತೆಯನ್ನು ಎತ್ತಿಹಿಡಿದು ಬಿಬಿಸಿ ಬಿಡುಗಡೆ ಮಾಡಿದ ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಬಿಜೆಪಿ ಸರ್ಕಾರ ವಿರೋಧಿಸಿದ ವಾರಗಳ ನಂತರ ಅನುರಾಗ್ ಹೇಳಿಕೆಗಳು ಹೊರಬಿದ್ದಿವೆ.

ಸಾಕ್ಷ್ಯಚಿತ್ರ ಬಿಡುಗಡೆಯಾದ ಬಳಿಕ, ಕಳೆದ ಫೆಬ್ರವರಿಯಲ್ಲಿ ಭಾರತೀಯ ತೆರಿಗೆ ಅಧಿಕಾರಿಗಳು ಬಿಬಿಸಿ ಮಾಧ್ಯಮದ ಕಚೇರಿಗಳ ಮೇಲೆ ನವದೆಹಲಿ ಮತ್ತು ಮುಂಬೈನಲ್ಲಿ ದಾಳಿ ಮಾಡಿದ್ದರು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಅನುಗುಣವಾಗಿಲ್ಲ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...