Homeಮುಖಪುಟನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

ನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

- Advertisement -
- Advertisement -

ಭಾರತದ ಬಗ್ಗೆ ಅಪಪ್ರಚಾರ ಮಾಡುವುದೇ ‘ದಿ ನ್ಯೂಯಾರ್ಕ್ ಟೈಮ್ಸ್‌’ ಪತ್ರಿಕೆಯ ಏಕೈಕ ಉದ್ದೇಶವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಕುಗ್ಗಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ಪ್ರಕಟಿಸಿರುವ ಲೇಖನಕ್ಕೆ ಸಂಬಂಧಿಸಿದಂತೆ ಅನುರಾಗ್ ಪ್ರತಿಕ್ರಿಯಿಸಿದ್ದಾರೆ.

“ಭಾರತದ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಮೋದಿಯವರಿಂದ ಅಂತಿಮ ದಾಳಿ ಆರಂಭವಾಗಿದೆ” ಎಂಬ ಶೀರ್ಷಿಕೆಯಲ್ಲಿ ‘ದಿ ಕಾಶ್ಮೀರ್ ಟೈಮ್ಸ್‌’ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ಅವರು ಲೇಖನ ಬರೆದಿದ್ದು, ಬುಧವಾರ ಅದು ಪ್ರಕಟವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ದಮನಕಾರಿ ಮಾಧ್ಯಮ ನೀತಿಗಳು ಕಾಶ್ಮೀರಿ ಪತ್ರಿಕೋದ್ಯಮವನ್ನು ನಾಶಪಡಿಸುತ್ತಿವೆ, ಸರ್ಕಾರದ ಮುಖವಾಣಿಗಳಾಗಿ ಕಾರ್ಯನಿರ್ವಹಿಸುವಂತೆ ಮಾಧ್ಯಮಗಳನ್ನು ಬೆದರಿಸಲಾಗುತ್ತಿದೆ. ಸುಮಾರು 13 ಮಿಲಿಯನ್ ಜನರಿರುವ ನಮ್ಮ ಪ್ರದೇಶದಲ್ಲಿ ಮಾಹಿತಿ ಹರಿವಿನ ಮೇಲೆ ತಡೆ ನೀಡಲಾಗುತ್ತಿದೆ ಎಂದು ಭಾಸಿನ್ ಬರೆದಿದ್ದಾರೆ.

ಭಾರತದಾದ್ಯಂತ ಈ ‘ಗೊಂದಲಕಾರಿ ಮಾದರಿ’ಯನ್ನು ಅನ್ವಯಿಸಲು ಮೋದಿ ಮುಂದಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಠಾಕೂರ್‌, “ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯವು ಇತರ ಮೂಲಭೂತ ಹಕ್ಕುಗಳಂತೆ ಪರಮಪೂಜ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಆದರೆ ಠಾಕೂರ್ ಅವರ ಪ್ರತಿಪಾದನೆಗೆ ವ್ಯತಿರಿಕ್ತವಾಗಿ ಅಂಕಿಅಂಶಗಳಿವೆ. 2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 140ನೇ ಸ್ಥಾನದಿಂದ ಕಳೆದ ವರ್ಷ 150ನೇ ಸ್ಥಾನಕ್ಕೆ ಕುಸಿದಿದೆ.

“ಕಾಶ್ಮೀರದಲ್ಲಿ ಮಾಹಿತಿ ಹರಿವಿನ ಮೇಲೆ ನಿರ್ಬಂಧ ಹೇರಲಾಗಿದೆ ಎಂಬುದು ಕಾಲ್ಪನಿಕ” ಎಂದು ವಾದಿಸಿರುವ ಠಾಕೂರ್‌, “ನ್ಯೂಯಾರ್ಕ್ ಟೈಮ್ಸ್ ಬಹಳ ಹಿಂದೆಯೇ ಭಾರತದ ಬಗ್ಗೆ ಏನನ್ನಾದರೂ ಪ್ರಕಟಿಸುವಾಗ ತಟಸ್ಥತೆಯ ಎಲ್ಲಾ ಸೋಗುಗಳನ್ನು ಕೈಬಿಟ್ಟಿದೆ” ಎಂದು ದೂರಿದ್ದಾರೆ.

“ಇದೇ ರೀತಿಯ ಮನಸ್ಥಿತಿಯನ್ನು ಹೊಂದಿರುವ ಇತರ ಕೆಲವು ವಿದೇಶಿ ಮಾಧ್ಯಮ ಸಂಸ್ಥೆಗಳು ಭಾರತ ಮತ್ತು ಮೋದಿಯವರ ಬಗ್ಗೆ ಸುಳ್ಳುಗಳನ್ನು ಹರಡುತ್ತಿವೆ. ಈ ಸಂಸ್ಥೆಗಳು ಭಾರತ ಮತ್ತು ಪ್ರಧಾನಿ ವಿರುದ್ಧ ದ್ವೇಷ ಕಾರುತ್ತಿವೆ” ಎಂದಿದ್ದಾರೆ.

ಇದನ್ನೂ ಓದಿರಿ: ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

“ಇಂತಹ ಸುಳ್ಳುಗಳು ಹೆಚ್ಚು ಕಾಲ ಉಳಿಯುವುದಿಲ್ಲ. ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜನರು ಬಹಳ ಪ್ರಬುದ್ಧರಾಗಿದ್ದೇವೆ. ಇಂತಹ ಅಜೆಂಡಾ ಚಾಲಿತ ಮಾಧ್ಯಮಗಳಿಂದ ನಾವು ಪ್ರಜಾಪ್ರಭುತ್ವದ ಪಾಠವನ್ನು ಕಲಿಯಬೇಕಾಗಿಲ್ಲ. ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ನ್ಯೂಯಾರ್ಕ್ ಟೈಮ್ಸ್‌ ಹರಡಿದ ಸುಳ್ಳುಗಳು ಖಂಡನೀಯ” ಎಂದು ತಿಳಿಸಿದ್ದಾರೆ.

2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ನಿಷ್ಕ್ರಿಯತೆಯನ್ನು ಎತ್ತಿಹಿಡಿದು ಬಿಬಿಸಿ ಬಿಡುಗಡೆ ಮಾಡಿದ ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಬಿಜೆಪಿ ಸರ್ಕಾರ ವಿರೋಧಿಸಿದ ವಾರಗಳ ನಂತರ ಅನುರಾಗ್ ಹೇಳಿಕೆಗಳು ಹೊರಬಿದ್ದಿವೆ.

ಸಾಕ್ಷ್ಯಚಿತ್ರ ಬಿಡುಗಡೆಯಾದ ಬಳಿಕ, ಕಳೆದ ಫೆಬ್ರವರಿಯಲ್ಲಿ ಭಾರತೀಯ ತೆರಿಗೆ ಅಧಿಕಾರಿಗಳು ಬಿಬಿಸಿ ಮಾಧ್ಯಮದ ಕಚೇರಿಗಳ ಮೇಲೆ ನವದೆಹಲಿ ಮತ್ತು ಮುಂಬೈನಲ್ಲಿ ದಾಳಿ ಮಾಡಿದ್ದರು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಅನುಗುಣವಾಗಿಲ್ಲ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...