Homeಅಂತರಾಷ್ಟ್ರೀಯಟ್ರಂಪ್ 'ಫ್ಯಾಸಿಸ್ಟ್' ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

ಟ್ರಂಪ್ ‘ಫ್ಯಾಸಿಸ್ಟ್’ ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

- Advertisement -
- Advertisement -

ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ನ.21) ಶ್ವೇತಭವನದಲ್ಲಿ ತಮ್ಮ ಮೊದಲ ಮುಖಾಮುಖಿ ಮಾತುಕತೆ ನಡೆಸಿದ್ದಾರೆ.

ರಾಜಕೀಯ ಮತ್ತು ಸೈದ್ದಾಂತಿಕವಾಗಿ ಪರಸ್ಪರ ಶತ್ರುಗಳಾಗಿರುವ ಮಮ್ದಾನಿ ಮತ್ತು ಟ್ರಂಪ್, ಮೊದಲ ಭೇಟಿಯಲ್ಲಿ ಬಹಳ ಆತ್ಮೀಯತೆಯಿಂದ, ನಗು ನಗುತ್ತಾ ಮಾತನಾಡಿರುವುದು ಹಲವರನ್ನು ಆಶ್ವರ್ಯಗೊಳಿಸಿದೆ.

ಶ್ವೇತ ಭವನದಲ್ಲಿ ಟ್ರಂಪ್ ಜೊತೆ ಬಹಳ ಆಪ್ತವಾಗಿ ಮಾತುಕತೆ ನಡೆಸಿರುವ ಮಮ್ದಾನಿ, ಅಲ್ಲಿಂದ ಹೊರ ಬಂದ ಬಳಿಕ ಟ್ರಂಪ್ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಿಸಿಲ್ಲ. ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಎಂದು ಪುನರುಚ್ಚರಿಸಿದ್ದಾರೆ.

ಶನಿವಾರ (ನ.22) ಎನ್‌ಬಿಸಿ ನ್ಯೂಸ್‌ನ ಮೀಟ್ ದಿ ಪ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮಮ್ದಾನಿ, ಶುಕ್ರವಾರ ಟ್ರಂಪ್ ಜೊತೆ ನಡೆಸಿರುವ ಮಾತುಕತೆ ಫಲದಾಯಕವಾಗಿದೆ. ಆದರೆ, ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಮತ್ತು ‘ನಿರಂಕುಶಾಧಿಕಾರಿ’ ಎಂದು ಎಂಬ ನಿಲುವನ್ನು ಈಗಲೂ ಹೊಂದಿದ್ದೇನೆ ಎಂದಿದ್ದಾರೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ನ್ಯೂಯಾರ್ಕ್ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗಲೇ ಟ್ರಂಪ್ ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು. ಆದರೆ, ಶುಕ್ರವಾರದ ಸಭೆಯಲ್ಲಿ ಮಮ್ದಾನಿಗೆ ಶುಭಾಷಯ ಕೋರಿ, ಅವರನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮ್ದಾನಿ, ಟ್ರಂಪ್ ಜೊತೆಗಿನ ಚರ್ಚೆಗಳು ಧನಾತ್ಮಕವಾಗಿತ್ತು. ಮುಖ್ಯವಾಗಿ ಜನರ ಜೀವನ ವೆಚ್ಚ ಮತ್ತು ಆರ್ಥಿಕ ಸಾಧ್ಯತೆಗಳ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿದ್ದವು ಎಂದು ತಿಳಿಸಿದ್ದಾರೆ.

ನಿಲುವಿಗೆ ಬದ್ದ-ಮಮ್ದಾನಿ

ಚುನಾವಣಾ ಪ್ರಚಾರದ ಸಮಯದಲ್ಲಿ ಟ್ರಂಪ್ ಬಗ್ಗೆ ನೀಡಿದ್ದ ನೇರ ಹೇಳಿಕೆಗಳಿಗೆ ತಾನು ಈಗಲೂ ಬದ್ಧನಾಗಿರುವುದಾಗಿ ಮಮ್ದಾನಿ ಸ್ಪಷ್ಟಪಡಿಸಿದ್ದಾರೆ.

“ನಾನು ಹಿಂದೆ ಯಾವ ಯಾವ ಮಾತುಗಳನ್ನು ಹೇಳಿದ್ದೆಯೋ, ಅವೆಲ್ಲವನ್ನೂ ಇಂದಿಗೂ ನಾನು ಪೂರ್ತಿಯಾಗಿ ನಂಬುತ್ತೇನೆ. ನನ್ನ ಆಲೋಚನೆಗಳು ಬದಲಾಗಿಲ್ಲ. ಆದರೆ ರಾಜಕೀಯದಲ್ಲಿ ಒಂದು ಒಳ್ಳೆಯ ವಿಷಯ ಇದೆ: ನಮಗೆ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮುಚ್ಚಿಹಾಕುವುದಿಲ್ಲ. ನಾವು ತಾಳ್ಮೆಯಿಂದ ಕೂತು ಮಾತಾಡುತ್ತೇವೆ. ನಾನು ಅಧ್ಯಕ್ಷರ ಓವಲ್ ಆಫೀಸ್‌ಗೆ ಹೋಗಿರುವುದು ತಮಾಷೆಗೋ, ತೋರಿಕೆಗೋ ಅಲ್ಲ. ನನ್ನ ಸಿದ್ಧಾಂತಗಳನ್ನು ಜಗಳ ಮಾಡಿಕೊಳ್ಳಲು ಅಲ್ಲ. ನಾನು ಅಲ್ಲಿಗೆ ಹೋಗಿರುವುದು ಕೇವಲ ನ್ಯೂಯಾರ್ಕ್ ನಗರದ ಜನರಿಗೆ ಒಳ್ಳೆಯ ಕೆಲಸ ಮಾಡಲು, ಅವರ ಸಮಸ್ಯೆಗಳಿಗೆ ಪರಿಹಾರ ತಂದುಕೊಡಲು ಮಾತ್ರ” ಎಂದು ಮಮ್ದಾನಿ ಹೇಳಿದ್ದಾರೆ.

ಶುಕ್ರವಾರದ ಮಾತುಕತೆ ವೇಳೆ, “ನಾನು ನಿನ್ನನ್ನು ಫ್ಯಾಸಿಸ್ಟ್ ಅಂತ ಕರ್ದಿದ್ದಲ್ಲಾ? ಇನ್ನೊಮ್ಮೆ ‘ಹೌದು’ ಅಂತ ಹೇಳಿಬಿಡು” ಎಂದು ಟ್ರಂಪ್ ನಗು ನಗುತ್ತಾ ಮಮ್ದಾನಿಗೆ ಹೇಳಿದ್ದರು. ಮಮ್ದಾನಿ ಕೂಡ ನಗು ನಗುತ್ತಾ, ಅದನ್ನು ಈಗಾಗಲೇ ಹೇಳಿದ್ದೇನೆ ಸರ್” ಅಂತ ಶುರು ಮಾಡ್ತಿದ್ದಂತೆ, “ಅಯ್ಯೋ ಬಿಡು ವಿವರಣೆ ಬೇಡ, ಕೇವಲ ‘ಹೌದು’ ಅಂತ ಹೇಳು, ಅಷ್ಟೇ ಸಾಕು. ನನಗೆ ಚಿಂತೆಯೇ ಇಲ್ಲ!” ಎಂದು ಟ್ರಂಪ್ ಹೇಳಿದ್ದರು. ಮಮ್ದಾನಿಯ ತೋಳಿಗೆ ಗಟ್ಟಿಯಾಗಿ ತಟ್ಟಿದ್ದರು. ಇಬ್ಬರೂ ಒಟ್ಟಿಗೆ ಜೋರಾಗಿ ನಕ್ಕಿದ್ದರು.

ಟ್ರಂಪ್‌ಗೆ ಮತ ಹಾಕಿದವರೇ ಆಗಲಿ, ನನ್ನ ಪರ ಮತ ಹಾಕಿದವರೇ ಆಗಲಿ, ಎಲ್ಲರ ಸಮಸ್ಯೆ ಒಂದೇ : ಬಾಡಿಗೆ, ಆಹಾರ, ಎಲ್ಲವೂ ದುಬಾರಿಯಾಗಿದೆ. ಅದನ್ನು ಕಡಿಮೆ ಮಾಡುವುದೇ ನನ್ನ ಮೊದಲ ಕೆಲಸ ಎಂದು ಮಮ್ದಾನಿ ತಿಳಿಸಿದ್ದಾರೆ.

ನಾನು ಶ್ವೇತಭವನಕ್ಕೆ ಹೋಗುವಾಗ ಒಂದೇ ಉದ್ದೇಶ ಇತ್ತು, ಅದು ಟ್ರಂಪ್ ಜೊತೆ ಒಳ್ಳೆಯ, ಕೆಲಸ ಮಾಡಬಹುದಾದ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಆ ಸಂಬಂಧ ನ್ಯೂಯಾರ್ಕ್ ಜನರನ್ನು ರಾತ್ರಿಯೆಲ್ಲಾ ನಿದ್ರೆ ಬರದಂತೆ ಕಾಡುವ ಸಮಸ್ಯೆಗಳ ಮೇಲೆಯೇ ಕೇಂದ್ರೀಕೃತವಾಗಿರಬೇಕು ಎಂಬುವುದು ಎಂದು ಮಮ್ದಾನಿ ಹೇಳಿದ್ದಾರೆ.

ಟ್ರಂಪ್ ಜೊತೆ ಮಾತನಾಡುವಾಗ, “ನಾನು ಎರಡನೇ ಬಾರಿ ಅಧ್ಯಕ್ಷನಾದರೆ ಮೊದಲ ದಿನದಿಂದಲೇ ಜೀವನ ವೆಚ್ಚವನ್ನು ಕಡಿಮೆ ಮಾಡುತ್ತೇನೆ ಎಂದು ನೀವೇ ಕಳೆದ ವರ್ಷ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೀರಿ. ಅದಕ್ಕಾಗಿಯೇ ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಮಮ್ದಾನಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...