Homeಅಂತರಾಷ್ಟ್ರೀಯಟ್ರಂಪ್ 'ಫ್ಯಾಸಿಸ್ಟ್' ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

ಟ್ರಂಪ್ ‘ಫ್ಯಾಸಿಸ್ಟ್’ ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

- Advertisement -
- Advertisement -

ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ನ.21) ಶ್ವೇತಭವನದಲ್ಲಿ ತಮ್ಮ ಮೊದಲ ಮುಖಾಮುಖಿ ಮಾತುಕತೆ ನಡೆಸಿದ್ದಾರೆ.

ರಾಜಕೀಯ ಮತ್ತು ಸೈದ್ದಾಂತಿಕವಾಗಿ ಪರಸ್ಪರ ಶತ್ರುಗಳಾಗಿರುವ ಮಮ್ದಾನಿ ಮತ್ತು ಟ್ರಂಪ್, ಮೊದಲ ಭೇಟಿಯಲ್ಲಿ ಬಹಳ ಆತ್ಮೀಯತೆಯಿಂದ, ನಗು ನಗುತ್ತಾ ಮಾತನಾಡಿರುವುದು ಹಲವರನ್ನು ಆಶ್ವರ್ಯಗೊಳಿಸಿದೆ.

ಶ್ವೇತ ಭವನದಲ್ಲಿ ಟ್ರಂಪ್ ಜೊತೆ ಬಹಳ ಆಪ್ತವಾಗಿ ಮಾತುಕತೆ ನಡೆಸಿರುವ ಮಮ್ದಾನಿ, ಅಲ್ಲಿಂದ ಹೊರ ಬಂದ ಬಳಿಕ ಟ್ರಂಪ್ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಿಸಿಲ್ಲ. ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಎಂದು ಪುನರುಚ್ಚರಿಸಿದ್ದಾರೆ.

ಶನಿವಾರ (ನ.22) ಎನ್‌ಬಿಸಿ ನ್ಯೂಸ್‌ನ ಮೀಟ್ ದಿ ಪ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮಮ್ದಾನಿ, ಶುಕ್ರವಾರ ಟ್ರಂಪ್ ಜೊತೆ ನಡೆಸಿರುವ ಮಾತುಕತೆ ಫಲದಾಯಕವಾಗಿದೆ. ಆದರೆ, ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಮತ್ತು ‘ನಿರಂಕುಶಾಧಿಕಾರಿ’ ಎಂದು ಎಂಬ ನಿಲುವನ್ನು ಈಗಲೂ ಹೊಂದಿದ್ದೇನೆ ಎಂದಿದ್ದಾರೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ನ್ಯೂಯಾರ್ಕ್ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗಲೇ ಟ್ರಂಪ್ ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು. ಆದರೆ, ಶುಕ್ರವಾರದ ಸಭೆಯಲ್ಲಿ ಮಮ್ದಾನಿಗೆ ಶುಭಾಷಯ ಕೋರಿ, ಅವರನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮ್ದಾನಿ, ಟ್ರಂಪ್ ಜೊತೆಗಿನ ಚರ್ಚೆಗಳು ಧನಾತ್ಮಕವಾಗಿತ್ತು. ಮುಖ್ಯವಾಗಿ ಜನರ ಜೀವನ ವೆಚ್ಚ ಮತ್ತು ಆರ್ಥಿಕ ಸಾಧ್ಯತೆಗಳ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿದ್ದವು ಎಂದು ತಿಳಿಸಿದ್ದಾರೆ.

ನಿಲುವಿಗೆ ಬದ್ದ-ಮಮ್ದಾನಿ

ಚುನಾವಣಾ ಪ್ರಚಾರದ ಸಮಯದಲ್ಲಿ ಟ್ರಂಪ್ ಬಗ್ಗೆ ನೀಡಿದ್ದ ನೇರ ಹೇಳಿಕೆಗಳಿಗೆ ತಾನು ಈಗಲೂ ಬದ್ಧನಾಗಿರುವುದಾಗಿ ಮಮ್ದಾನಿ ಸ್ಪಷ್ಟಪಡಿಸಿದ್ದಾರೆ.

“ನಾನು ಹಿಂದೆ ಯಾವ ಯಾವ ಮಾತುಗಳನ್ನು ಹೇಳಿದ್ದೆಯೋ, ಅವೆಲ್ಲವನ್ನೂ ಇಂದಿಗೂ ನಾನು ಪೂರ್ತಿಯಾಗಿ ನಂಬುತ್ತೇನೆ. ನನ್ನ ಆಲೋಚನೆಗಳು ಬದಲಾಗಿಲ್ಲ. ಆದರೆ ರಾಜಕೀಯದಲ್ಲಿ ಒಂದು ಒಳ್ಳೆಯ ವಿಷಯ ಇದೆ: ನಮಗೆ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮುಚ್ಚಿಹಾಕುವುದಿಲ್ಲ. ನಾವು ತಾಳ್ಮೆಯಿಂದ ಕೂತು ಮಾತಾಡುತ್ತೇವೆ. ನಾನು ಅಧ್ಯಕ್ಷರ ಓವಲ್ ಆಫೀಸ್‌ಗೆ ಹೋಗಿರುವುದು ತಮಾಷೆಗೋ, ತೋರಿಕೆಗೋ ಅಲ್ಲ. ನನ್ನ ಸಿದ್ಧಾಂತಗಳನ್ನು ಜಗಳ ಮಾಡಿಕೊಳ್ಳಲು ಅಲ್ಲ. ನಾನು ಅಲ್ಲಿಗೆ ಹೋಗಿರುವುದು ಕೇವಲ ನ್ಯೂಯಾರ್ಕ್ ನಗರದ ಜನರಿಗೆ ಒಳ್ಳೆಯ ಕೆಲಸ ಮಾಡಲು, ಅವರ ಸಮಸ್ಯೆಗಳಿಗೆ ಪರಿಹಾರ ತಂದುಕೊಡಲು ಮಾತ್ರ” ಎಂದು ಮಮ್ದಾನಿ ಹೇಳಿದ್ದಾರೆ.

ಶುಕ್ರವಾರದ ಮಾತುಕತೆ ವೇಳೆ, “ನಾನು ನಿನ್ನನ್ನು ಫ್ಯಾಸಿಸ್ಟ್ ಅಂತ ಕರ್ದಿದ್ದಲ್ಲಾ? ಇನ್ನೊಮ್ಮೆ ‘ಹೌದು’ ಅಂತ ಹೇಳಿಬಿಡು” ಎಂದು ಟ್ರಂಪ್ ನಗು ನಗುತ್ತಾ ಮಮ್ದಾನಿಗೆ ಹೇಳಿದ್ದರು. ಮಮ್ದಾನಿ ಕೂಡ ನಗು ನಗುತ್ತಾ, ಅದನ್ನು ಈಗಾಗಲೇ ಹೇಳಿದ್ದೇನೆ ಸರ್” ಅಂತ ಶುರು ಮಾಡ್ತಿದ್ದಂತೆ, “ಅಯ್ಯೋ ಬಿಡು ವಿವರಣೆ ಬೇಡ, ಕೇವಲ ‘ಹೌದು’ ಅಂತ ಹೇಳು, ಅಷ್ಟೇ ಸಾಕು. ನನಗೆ ಚಿಂತೆಯೇ ಇಲ್ಲ!” ಎಂದು ಟ್ರಂಪ್ ಹೇಳಿದ್ದರು. ಮಮ್ದಾನಿಯ ತೋಳಿಗೆ ಗಟ್ಟಿಯಾಗಿ ತಟ್ಟಿದ್ದರು. ಇಬ್ಬರೂ ಒಟ್ಟಿಗೆ ಜೋರಾಗಿ ನಕ್ಕಿದ್ದರು.

ಟ್ರಂಪ್‌ಗೆ ಮತ ಹಾಕಿದವರೇ ಆಗಲಿ, ನನ್ನ ಪರ ಮತ ಹಾಕಿದವರೇ ಆಗಲಿ, ಎಲ್ಲರ ಸಮಸ್ಯೆ ಒಂದೇ : ಬಾಡಿಗೆ, ಆಹಾರ, ಎಲ್ಲವೂ ದುಬಾರಿಯಾಗಿದೆ. ಅದನ್ನು ಕಡಿಮೆ ಮಾಡುವುದೇ ನನ್ನ ಮೊದಲ ಕೆಲಸ ಎಂದು ಮಮ್ದಾನಿ ತಿಳಿಸಿದ್ದಾರೆ.

ನಾನು ಶ್ವೇತಭವನಕ್ಕೆ ಹೋಗುವಾಗ ಒಂದೇ ಉದ್ದೇಶ ಇತ್ತು, ಅದು ಟ್ರಂಪ್ ಜೊತೆ ಒಳ್ಳೆಯ, ಕೆಲಸ ಮಾಡಬಹುದಾದ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಆ ಸಂಬಂಧ ನ್ಯೂಯಾರ್ಕ್ ಜನರನ್ನು ರಾತ್ರಿಯೆಲ್ಲಾ ನಿದ್ರೆ ಬರದಂತೆ ಕಾಡುವ ಸಮಸ್ಯೆಗಳ ಮೇಲೆಯೇ ಕೇಂದ್ರೀಕೃತವಾಗಿರಬೇಕು ಎಂಬುವುದು ಎಂದು ಮಮ್ದಾನಿ ಹೇಳಿದ್ದಾರೆ.

ಟ್ರಂಪ್ ಜೊತೆ ಮಾತನಾಡುವಾಗ, “ನಾನು ಎರಡನೇ ಬಾರಿ ಅಧ್ಯಕ್ಷನಾದರೆ ಮೊದಲ ದಿನದಿಂದಲೇ ಜೀವನ ವೆಚ್ಚವನ್ನು ಕಡಿಮೆ ಮಾಡುತ್ತೇನೆ ಎಂದು ನೀವೇ ಕಳೆದ ವರ್ಷ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೀರಿ. ಅದಕ್ಕಾಗಿಯೇ ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಮಮ್ದಾನಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...