Homeಅಂತರಾಷ್ಟ್ರೀಯಟ್ರಂಪ್ 'ಫ್ಯಾಸಿಸ್ಟ್' ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

ಟ್ರಂಪ್ ‘ಫ್ಯಾಸಿಸ್ಟ್’ ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

- Advertisement -
- Advertisement -

ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ನ.21) ಶ್ವೇತಭವನದಲ್ಲಿ ತಮ್ಮ ಮೊದಲ ಮುಖಾಮುಖಿ ಮಾತುಕತೆ ನಡೆಸಿದ್ದಾರೆ.

ರಾಜಕೀಯ ಮತ್ತು ಸೈದ್ದಾಂತಿಕವಾಗಿ ಪರಸ್ಪರ ಶತ್ರುಗಳಾಗಿರುವ ಮಮ್ದಾನಿ ಮತ್ತು ಟ್ರಂಪ್, ಮೊದಲ ಭೇಟಿಯಲ್ಲಿ ಬಹಳ ಆತ್ಮೀಯತೆಯಿಂದ, ನಗು ನಗುತ್ತಾ ಮಾತನಾಡಿರುವುದು ಹಲವರನ್ನು ಆಶ್ವರ್ಯಗೊಳಿಸಿದೆ.

ಶ್ವೇತ ಭವನದಲ್ಲಿ ಟ್ರಂಪ್ ಜೊತೆ ಬಹಳ ಆಪ್ತವಾಗಿ ಮಾತುಕತೆ ನಡೆಸಿರುವ ಮಮ್ದಾನಿ, ಅಲ್ಲಿಂದ ಹೊರ ಬಂದ ಬಳಿಕ ಟ್ರಂಪ್ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಿಸಿಲ್ಲ. ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಎಂದು ಪುನರುಚ್ಚರಿಸಿದ್ದಾರೆ.

ಶನಿವಾರ (ನ.22) ಎನ್‌ಬಿಸಿ ನ್ಯೂಸ್‌ನ ಮೀಟ್ ದಿ ಪ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮಮ್ದಾನಿ, ಶುಕ್ರವಾರ ಟ್ರಂಪ್ ಜೊತೆ ನಡೆಸಿರುವ ಮಾತುಕತೆ ಫಲದಾಯಕವಾಗಿದೆ. ಆದರೆ, ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಮತ್ತು ‘ನಿರಂಕುಶಾಧಿಕಾರಿ’ ಎಂದು ಎಂಬ ನಿಲುವನ್ನು ಈಗಲೂ ಹೊಂದಿದ್ದೇನೆ ಎಂದಿದ್ದಾರೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ನ್ಯೂಯಾರ್ಕ್ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗಲೇ ಟ್ರಂಪ್ ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು. ಆದರೆ, ಶುಕ್ರವಾರದ ಸಭೆಯಲ್ಲಿ ಮಮ್ದಾನಿಗೆ ಶುಭಾಷಯ ಕೋರಿ, ಅವರನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮ್ದಾನಿ, ಟ್ರಂಪ್ ಜೊತೆಗಿನ ಚರ್ಚೆಗಳು ಧನಾತ್ಮಕವಾಗಿತ್ತು. ಮುಖ್ಯವಾಗಿ ಜನರ ಜೀವನ ವೆಚ್ಚ ಮತ್ತು ಆರ್ಥಿಕ ಸಾಧ್ಯತೆಗಳ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿದ್ದವು ಎಂದು ತಿಳಿಸಿದ್ದಾರೆ.

ನಿಲುವಿಗೆ ಬದ್ದ-ಮಮ್ದಾನಿ

ಚುನಾವಣಾ ಪ್ರಚಾರದ ಸಮಯದಲ್ಲಿ ಟ್ರಂಪ್ ಬಗ್ಗೆ ನೀಡಿದ್ದ ನೇರ ಹೇಳಿಕೆಗಳಿಗೆ ತಾನು ಈಗಲೂ ಬದ್ಧನಾಗಿರುವುದಾಗಿ ಮಮ್ದಾನಿ ಸ್ಪಷ್ಟಪಡಿಸಿದ್ದಾರೆ.

“ನಾನು ಹಿಂದೆ ಯಾವ ಯಾವ ಮಾತುಗಳನ್ನು ಹೇಳಿದ್ದೆಯೋ, ಅವೆಲ್ಲವನ್ನೂ ಇಂದಿಗೂ ನಾನು ಪೂರ್ತಿಯಾಗಿ ನಂಬುತ್ತೇನೆ. ನನ್ನ ಆಲೋಚನೆಗಳು ಬದಲಾಗಿಲ್ಲ. ಆದರೆ ರಾಜಕೀಯದಲ್ಲಿ ಒಂದು ಒಳ್ಳೆಯ ವಿಷಯ ಇದೆ: ನಮಗೆ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮುಚ್ಚಿಹಾಕುವುದಿಲ್ಲ. ನಾವು ತಾಳ್ಮೆಯಿಂದ ಕೂತು ಮಾತಾಡುತ್ತೇವೆ. ನಾನು ಅಧ್ಯಕ್ಷರ ಓವಲ್ ಆಫೀಸ್‌ಗೆ ಹೋಗಿರುವುದು ತಮಾಷೆಗೋ, ತೋರಿಕೆಗೋ ಅಲ್ಲ. ನನ್ನ ಸಿದ್ಧಾಂತಗಳನ್ನು ಜಗಳ ಮಾಡಿಕೊಳ್ಳಲು ಅಲ್ಲ. ನಾನು ಅಲ್ಲಿಗೆ ಹೋಗಿರುವುದು ಕೇವಲ ನ್ಯೂಯಾರ್ಕ್ ನಗರದ ಜನರಿಗೆ ಒಳ್ಳೆಯ ಕೆಲಸ ಮಾಡಲು, ಅವರ ಸಮಸ್ಯೆಗಳಿಗೆ ಪರಿಹಾರ ತಂದುಕೊಡಲು ಮಾತ್ರ” ಎಂದು ಮಮ್ದಾನಿ ಹೇಳಿದ್ದಾರೆ.

ಶುಕ್ರವಾರದ ಮಾತುಕತೆ ವೇಳೆ, “ನಾನು ನಿನ್ನನ್ನು ಫ್ಯಾಸಿಸ್ಟ್ ಅಂತ ಕರ್ದಿದ್ದಲ್ಲಾ? ಇನ್ನೊಮ್ಮೆ ‘ಹೌದು’ ಅಂತ ಹೇಳಿಬಿಡು” ಎಂದು ಟ್ರಂಪ್ ನಗು ನಗುತ್ತಾ ಮಮ್ದಾನಿಗೆ ಹೇಳಿದ್ದರು. ಮಮ್ದಾನಿ ಕೂಡ ನಗು ನಗುತ್ತಾ, ಅದನ್ನು ಈಗಾಗಲೇ ಹೇಳಿದ್ದೇನೆ ಸರ್” ಅಂತ ಶುರು ಮಾಡ್ತಿದ್ದಂತೆ, “ಅಯ್ಯೋ ಬಿಡು ವಿವರಣೆ ಬೇಡ, ಕೇವಲ ‘ಹೌದು’ ಅಂತ ಹೇಳು, ಅಷ್ಟೇ ಸಾಕು. ನನಗೆ ಚಿಂತೆಯೇ ಇಲ್ಲ!” ಎಂದು ಟ್ರಂಪ್ ಹೇಳಿದ್ದರು. ಮಮ್ದಾನಿಯ ತೋಳಿಗೆ ಗಟ್ಟಿಯಾಗಿ ತಟ್ಟಿದ್ದರು. ಇಬ್ಬರೂ ಒಟ್ಟಿಗೆ ಜೋರಾಗಿ ನಕ್ಕಿದ್ದರು.

ಟ್ರಂಪ್‌ಗೆ ಮತ ಹಾಕಿದವರೇ ಆಗಲಿ, ನನ್ನ ಪರ ಮತ ಹಾಕಿದವರೇ ಆಗಲಿ, ಎಲ್ಲರ ಸಮಸ್ಯೆ ಒಂದೇ : ಬಾಡಿಗೆ, ಆಹಾರ, ಎಲ್ಲವೂ ದುಬಾರಿಯಾಗಿದೆ. ಅದನ್ನು ಕಡಿಮೆ ಮಾಡುವುದೇ ನನ್ನ ಮೊದಲ ಕೆಲಸ ಎಂದು ಮಮ್ದಾನಿ ತಿಳಿಸಿದ್ದಾರೆ.

ನಾನು ಶ್ವೇತಭವನಕ್ಕೆ ಹೋಗುವಾಗ ಒಂದೇ ಉದ್ದೇಶ ಇತ್ತು, ಅದು ಟ್ರಂಪ್ ಜೊತೆ ಒಳ್ಳೆಯ, ಕೆಲಸ ಮಾಡಬಹುದಾದ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಆ ಸಂಬಂಧ ನ್ಯೂಯಾರ್ಕ್ ಜನರನ್ನು ರಾತ್ರಿಯೆಲ್ಲಾ ನಿದ್ರೆ ಬರದಂತೆ ಕಾಡುವ ಸಮಸ್ಯೆಗಳ ಮೇಲೆಯೇ ಕೇಂದ್ರೀಕೃತವಾಗಿರಬೇಕು ಎಂಬುವುದು ಎಂದು ಮಮ್ದಾನಿ ಹೇಳಿದ್ದಾರೆ.

ಟ್ರಂಪ್ ಜೊತೆ ಮಾತನಾಡುವಾಗ, “ನಾನು ಎರಡನೇ ಬಾರಿ ಅಧ್ಯಕ್ಷನಾದರೆ ಮೊದಲ ದಿನದಿಂದಲೇ ಜೀವನ ವೆಚ್ಚವನ್ನು ಕಡಿಮೆ ಮಾಡುತ್ತೇನೆ ಎಂದು ನೀವೇ ಕಳೆದ ವರ್ಷ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೀರಿ. ಅದಕ್ಕಾಗಿಯೇ ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಮಮ್ದಾನಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...