Homeಅಂತರಾಷ್ಟ್ರೀಯಟ್ರಂಪ್ 'ಫ್ಯಾಸಿಸ್ಟ್' ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

ಟ್ರಂಪ್ ‘ಫ್ಯಾಸಿಸ್ಟ್’ ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

- Advertisement -
- Advertisement -

ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ನ.21) ಶ್ವೇತಭವನದಲ್ಲಿ ತಮ್ಮ ಮೊದಲ ಮುಖಾಮುಖಿ ಮಾತುಕತೆ ನಡೆಸಿದ್ದಾರೆ.

ರಾಜಕೀಯ ಮತ್ತು ಸೈದ್ದಾಂತಿಕವಾಗಿ ಪರಸ್ಪರ ಶತ್ರುಗಳಾಗಿರುವ ಮಮ್ದಾನಿ ಮತ್ತು ಟ್ರಂಪ್, ಮೊದಲ ಭೇಟಿಯಲ್ಲಿ ಬಹಳ ಆತ್ಮೀಯತೆಯಿಂದ, ನಗು ನಗುತ್ತಾ ಮಾತನಾಡಿರುವುದು ಹಲವರನ್ನು ಆಶ್ವರ್ಯಗೊಳಿಸಿದೆ.

ಶ್ವೇತ ಭವನದಲ್ಲಿ ಟ್ರಂಪ್ ಜೊತೆ ಬಹಳ ಆಪ್ತವಾಗಿ ಮಾತುಕತೆ ನಡೆಸಿರುವ ಮಮ್ದಾನಿ, ಅಲ್ಲಿಂದ ಹೊರ ಬಂದ ಬಳಿಕ ಟ್ರಂಪ್ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಿಸಿಲ್ಲ. ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಎಂದು ಪುನರುಚ್ಚರಿಸಿದ್ದಾರೆ.

ಶನಿವಾರ (ನ.22) ಎನ್‌ಬಿಸಿ ನ್ಯೂಸ್‌ನ ಮೀಟ್ ದಿ ಪ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮಮ್ದಾನಿ, ಶುಕ್ರವಾರ ಟ್ರಂಪ್ ಜೊತೆ ನಡೆಸಿರುವ ಮಾತುಕತೆ ಫಲದಾಯಕವಾಗಿದೆ. ಆದರೆ, ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಮತ್ತು ‘ನಿರಂಕುಶಾಧಿಕಾರಿ’ ಎಂದು ಎಂಬ ನಿಲುವನ್ನು ಈಗಲೂ ಹೊಂದಿದ್ದೇನೆ ಎಂದಿದ್ದಾರೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ನ್ಯೂಯಾರ್ಕ್ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗಲೇ ಟ್ರಂಪ್ ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು. ಆದರೆ, ಶುಕ್ರವಾರದ ಸಭೆಯಲ್ಲಿ ಮಮ್ದಾನಿಗೆ ಶುಭಾಷಯ ಕೋರಿ, ಅವರನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮ್ದಾನಿ, ಟ್ರಂಪ್ ಜೊತೆಗಿನ ಚರ್ಚೆಗಳು ಧನಾತ್ಮಕವಾಗಿತ್ತು. ಮುಖ್ಯವಾಗಿ ಜನರ ಜೀವನ ವೆಚ್ಚ ಮತ್ತು ಆರ್ಥಿಕ ಸಾಧ್ಯತೆಗಳ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿದ್ದವು ಎಂದು ತಿಳಿಸಿದ್ದಾರೆ.

ನಿಲುವಿಗೆ ಬದ್ದ-ಮಮ್ದಾನಿ

ಚುನಾವಣಾ ಪ್ರಚಾರದ ಸಮಯದಲ್ಲಿ ಟ್ರಂಪ್ ಬಗ್ಗೆ ನೀಡಿದ್ದ ನೇರ ಹೇಳಿಕೆಗಳಿಗೆ ತಾನು ಈಗಲೂ ಬದ್ಧನಾಗಿರುವುದಾಗಿ ಮಮ್ದಾನಿ ಸ್ಪಷ್ಟಪಡಿಸಿದ್ದಾರೆ.

“ನಾನು ಹಿಂದೆ ಯಾವ ಯಾವ ಮಾತುಗಳನ್ನು ಹೇಳಿದ್ದೆಯೋ, ಅವೆಲ್ಲವನ್ನೂ ಇಂದಿಗೂ ನಾನು ಪೂರ್ತಿಯಾಗಿ ನಂಬುತ್ತೇನೆ. ನನ್ನ ಆಲೋಚನೆಗಳು ಬದಲಾಗಿಲ್ಲ. ಆದರೆ ರಾಜಕೀಯದಲ್ಲಿ ಒಂದು ಒಳ್ಳೆಯ ವಿಷಯ ಇದೆ: ನಮಗೆ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮುಚ್ಚಿಹಾಕುವುದಿಲ್ಲ. ನಾವು ತಾಳ್ಮೆಯಿಂದ ಕೂತು ಮಾತಾಡುತ್ತೇವೆ. ನಾನು ಅಧ್ಯಕ್ಷರ ಓವಲ್ ಆಫೀಸ್‌ಗೆ ಹೋಗಿರುವುದು ತಮಾಷೆಗೋ, ತೋರಿಕೆಗೋ ಅಲ್ಲ. ನನ್ನ ಸಿದ್ಧಾಂತಗಳನ್ನು ಜಗಳ ಮಾಡಿಕೊಳ್ಳಲು ಅಲ್ಲ. ನಾನು ಅಲ್ಲಿಗೆ ಹೋಗಿರುವುದು ಕೇವಲ ನ್ಯೂಯಾರ್ಕ್ ನಗರದ ಜನರಿಗೆ ಒಳ್ಳೆಯ ಕೆಲಸ ಮಾಡಲು, ಅವರ ಸಮಸ್ಯೆಗಳಿಗೆ ಪರಿಹಾರ ತಂದುಕೊಡಲು ಮಾತ್ರ” ಎಂದು ಮಮ್ದಾನಿ ಹೇಳಿದ್ದಾರೆ.

ಶುಕ್ರವಾರದ ಮಾತುಕತೆ ವೇಳೆ, “ನಾನು ನಿನ್ನನ್ನು ಫ್ಯಾಸಿಸ್ಟ್ ಅಂತ ಕರ್ದಿದ್ದಲ್ಲಾ? ಇನ್ನೊಮ್ಮೆ ‘ಹೌದು’ ಅಂತ ಹೇಳಿಬಿಡು” ಎಂದು ಟ್ರಂಪ್ ನಗು ನಗುತ್ತಾ ಮಮ್ದಾನಿಗೆ ಹೇಳಿದ್ದರು. ಮಮ್ದಾನಿ ಕೂಡ ನಗು ನಗುತ್ತಾ, ಅದನ್ನು ಈಗಾಗಲೇ ಹೇಳಿದ್ದೇನೆ ಸರ್” ಅಂತ ಶುರು ಮಾಡ್ತಿದ್ದಂತೆ, “ಅಯ್ಯೋ ಬಿಡು ವಿವರಣೆ ಬೇಡ, ಕೇವಲ ‘ಹೌದು’ ಅಂತ ಹೇಳು, ಅಷ್ಟೇ ಸಾಕು. ನನಗೆ ಚಿಂತೆಯೇ ಇಲ್ಲ!” ಎಂದು ಟ್ರಂಪ್ ಹೇಳಿದ್ದರು. ಮಮ್ದಾನಿಯ ತೋಳಿಗೆ ಗಟ್ಟಿಯಾಗಿ ತಟ್ಟಿದ್ದರು. ಇಬ್ಬರೂ ಒಟ್ಟಿಗೆ ಜೋರಾಗಿ ನಕ್ಕಿದ್ದರು.

ಟ್ರಂಪ್‌ಗೆ ಮತ ಹಾಕಿದವರೇ ಆಗಲಿ, ನನ್ನ ಪರ ಮತ ಹಾಕಿದವರೇ ಆಗಲಿ, ಎಲ್ಲರ ಸಮಸ್ಯೆ ಒಂದೇ : ಬಾಡಿಗೆ, ಆಹಾರ, ಎಲ್ಲವೂ ದುಬಾರಿಯಾಗಿದೆ. ಅದನ್ನು ಕಡಿಮೆ ಮಾಡುವುದೇ ನನ್ನ ಮೊದಲ ಕೆಲಸ ಎಂದು ಮಮ್ದಾನಿ ತಿಳಿಸಿದ್ದಾರೆ.

ನಾನು ಶ್ವೇತಭವನಕ್ಕೆ ಹೋಗುವಾಗ ಒಂದೇ ಉದ್ದೇಶ ಇತ್ತು, ಅದು ಟ್ರಂಪ್ ಜೊತೆ ಒಳ್ಳೆಯ, ಕೆಲಸ ಮಾಡಬಹುದಾದ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಆ ಸಂಬಂಧ ನ್ಯೂಯಾರ್ಕ್ ಜನರನ್ನು ರಾತ್ರಿಯೆಲ್ಲಾ ನಿದ್ರೆ ಬರದಂತೆ ಕಾಡುವ ಸಮಸ್ಯೆಗಳ ಮೇಲೆಯೇ ಕೇಂದ್ರೀಕೃತವಾಗಿರಬೇಕು ಎಂಬುವುದು ಎಂದು ಮಮ್ದಾನಿ ಹೇಳಿದ್ದಾರೆ.

ಟ್ರಂಪ್ ಜೊತೆ ಮಾತನಾಡುವಾಗ, “ನಾನು ಎರಡನೇ ಬಾರಿ ಅಧ್ಯಕ್ಷನಾದರೆ ಮೊದಲ ದಿನದಿಂದಲೇ ಜೀವನ ವೆಚ್ಚವನ್ನು ಕಡಿಮೆ ಮಾಡುತ್ತೇನೆ ಎಂದು ನೀವೇ ಕಳೆದ ವರ್ಷ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೀರಿ. ಅದಕ್ಕಾಗಿಯೇ ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಮಮ್ದಾನಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...