Homeಅಂತರಾಷ್ಟ್ರೀಯಟ್ರಂಪ್ 'ಫ್ಯಾಸಿಸ್ಟ್' ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

ಟ್ರಂಪ್ ‘ಫ್ಯಾಸಿಸ್ಟ್’ ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

- Advertisement -
- Advertisement -

ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ನ.21) ಶ್ವೇತಭವನದಲ್ಲಿ ತಮ್ಮ ಮೊದಲ ಮುಖಾಮುಖಿ ಮಾತುಕತೆ ನಡೆಸಿದ್ದಾರೆ.

ರಾಜಕೀಯ ಮತ್ತು ಸೈದ್ದಾಂತಿಕವಾಗಿ ಪರಸ್ಪರ ಶತ್ರುಗಳಾಗಿರುವ ಮಮ್ದಾನಿ ಮತ್ತು ಟ್ರಂಪ್, ಮೊದಲ ಭೇಟಿಯಲ್ಲಿ ಬಹಳ ಆತ್ಮೀಯತೆಯಿಂದ, ನಗು ನಗುತ್ತಾ ಮಾತನಾಡಿರುವುದು ಹಲವರನ್ನು ಆಶ್ವರ್ಯಗೊಳಿಸಿದೆ.

ಶ್ವೇತ ಭವನದಲ್ಲಿ ಟ್ರಂಪ್ ಜೊತೆ ಬಹಳ ಆಪ್ತವಾಗಿ ಮಾತುಕತೆ ನಡೆಸಿರುವ ಮಮ್ದಾನಿ, ಅಲ್ಲಿಂದ ಹೊರ ಬಂದ ಬಳಿಕ ಟ್ರಂಪ್ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಿಸಿಲ್ಲ. ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಎಂದು ಪುನರುಚ್ಚರಿಸಿದ್ದಾರೆ.

ಶನಿವಾರ (ನ.22) ಎನ್‌ಬಿಸಿ ನ್ಯೂಸ್‌ನ ಮೀಟ್ ದಿ ಪ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮಮ್ದಾನಿ, ಶುಕ್ರವಾರ ಟ್ರಂಪ್ ಜೊತೆ ನಡೆಸಿರುವ ಮಾತುಕತೆ ಫಲದಾಯಕವಾಗಿದೆ. ಆದರೆ, ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಮತ್ತು ‘ನಿರಂಕುಶಾಧಿಕಾರಿ’ ಎಂದು ಎಂಬ ನಿಲುವನ್ನು ಈಗಲೂ ಹೊಂದಿದ್ದೇನೆ ಎಂದಿದ್ದಾರೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ನ್ಯೂಯಾರ್ಕ್ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗಲೇ ಟ್ರಂಪ್ ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು. ಆದರೆ, ಶುಕ್ರವಾರದ ಸಭೆಯಲ್ಲಿ ಮಮ್ದಾನಿಗೆ ಶುಭಾಷಯ ಕೋರಿ, ಅವರನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮ್ದಾನಿ, ಟ್ರಂಪ್ ಜೊತೆಗಿನ ಚರ್ಚೆಗಳು ಧನಾತ್ಮಕವಾಗಿತ್ತು. ಮುಖ್ಯವಾಗಿ ಜನರ ಜೀವನ ವೆಚ್ಚ ಮತ್ತು ಆರ್ಥಿಕ ಸಾಧ್ಯತೆಗಳ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿದ್ದವು ಎಂದು ತಿಳಿಸಿದ್ದಾರೆ.

ನಿಲುವಿಗೆ ಬದ್ದ-ಮಮ್ದಾನಿ

ಚುನಾವಣಾ ಪ್ರಚಾರದ ಸಮಯದಲ್ಲಿ ಟ್ರಂಪ್ ಬಗ್ಗೆ ನೀಡಿದ್ದ ನೇರ ಹೇಳಿಕೆಗಳಿಗೆ ತಾನು ಈಗಲೂ ಬದ್ಧನಾಗಿರುವುದಾಗಿ ಮಮ್ದಾನಿ ಸ್ಪಷ್ಟಪಡಿಸಿದ್ದಾರೆ.

“ನಾನು ಹಿಂದೆ ಯಾವ ಯಾವ ಮಾತುಗಳನ್ನು ಹೇಳಿದ್ದೆಯೋ, ಅವೆಲ್ಲವನ್ನೂ ಇಂದಿಗೂ ನಾನು ಪೂರ್ತಿಯಾಗಿ ನಂಬುತ್ತೇನೆ. ನನ್ನ ಆಲೋಚನೆಗಳು ಬದಲಾಗಿಲ್ಲ. ಆದರೆ ರಾಜಕೀಯದಲ್ಲಿ ಒಂದು ಒಳ್ಳೆಯ ವಿಷಯ ಇದೆ: ನಮಗೆ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮುಚ್ಚಿಹಾಕುವುದಿಲ್ಲ. ನಾವು ತಾಳ್ಮೆಯಿಂದ ಕೂತು ಮಾತಾಡುತ್ತೇವೆ. ನಾನು ಅಧ್ಯಕ್ಷರ ಓವಲ್ ಆಫೀಸ್‌ಗೆ ಹೋಗಿರುವುದು ತಮಾಷೆಗೋ, ತೋರಿಕೆಗೋ ಅಲ್ಲ. ನನ್ನ ಸಿದ್ಧಾಂತಗಳನ್ನು ಜಗಳ ಮಾಡಿಕೊಳ್ಳಲು ಅಲ್ಲ. ನಾನು ಅಲ್ಲಿಗೆ ಹೋಗಿರುವುದು ಕೇವಲ ನ್ಯೂಯಾರ್ಕ್ ನಗರದ ಜನರಿಗೆ ಒಳ್ಳೆಯ ಕೆಲಸ ಮಾಡಲು, ಅವರ ಸಮಸ್ಯೆಗಳಿಗೆ ಪರಿಹಾರ ತಂದುಕೊಡಲು ಮಾತ್ರ” ಎಂದು ಮಮ್ದಾನಿ ಹೇಳಿದ್ದಾರೆ.

ಶುಕ್ರವಾರದ ಮಾತುಕತೆ ವೇಳೆ, “ನಾನು ನಿನ್ನನ್ನು ಫ್ಯಾಸಿಸ್ಟ್ ಅಂತ ಕರ್ದಿದ್ದಲ್ಲಾ? ಇನ್ನೊಮ್ಮೆ ‘ಹೌದು’ ಅಂತ ಹೇಳಿಬಿಡು” ಎಂದು ಟ್ರಂಪ್ ನಗು ನಗುತ್ತಾ ಮಮ್ದಾನಿಗೆ ಹೇಳಿದ್ದರು. ಮಮ್ದಾನಿ ಕೂಡ ನಗು ನಗುತ್ತಾ, ಅದನ್ನು ಈಗಾಗಲೇ ಹೇಳಿದ್ದೇನೆ ಸರ್” ಅಂತ ಶುರು ಮಾಡ್ತಿದ್ದಂತೆ, “ಅಯ್ಯೋ ಬಿಡು ವಿವರಣೆ ಬೇಡ, ಕೇವಲ ‘ಹೌದು’ ಅಂತ ಹೇಳು, ಅಷ್ಟೇ ಸಾಕು. ನನಗೆ ಚಿಂತೆಯೇ ಇಲ್ಲ!” ಎಂದು ಟ್ರಂಪ್ ಹೇಳಿದ್ದರು. ಮಮ್ದಾನಿಯ ತೋಳಿಗೆ ಗಟ್ಟಿಯಾಗಿ ತಟ್ಟಿದ್ದರು. ಇಬ್ಬರೂ ಒಟ್ಟಿಗೆ ಜೋರಾಗಿ ನಕ್ಕಿದ್ದರು.

ಟ್ರಂಪ್‌ಗೆ ಮತ ಹಾಕಿದವರೇ ಆಗಲಿ, ನನ್ನ ಪರ ಮತ ಹಾಕಿದವರೇ ಆಗಲಿ, ಎಲ್ಲರ ಸಮಸ್ಯೆ ಒಂದೇ : ಬಾಡಿಗೆ, ಆಹಾರ, ಎಲ್ಲವೂ ದುಬಾರಿಯಾಗಿದೆ. ಅದನ್ನು ಕಡಿಮೆ ಮಾಡುವುದೇ ನನ್ನ ಮೊದಲ ಕೆಲಸ ಎಂದು ಮಮ್ದಾನಿ ತಿಳಿಸಿದ್ದಾರೆ.

ನಾನು ಶ್ವೇತಭವನಕ್ಕೆ ಹೋಗುವಾಗ ಒಂದೇ ಉದ್ದೇಶ ಇತ್ತು, ಅದು ಟ್ರಂಪ್ ಜೊತೆ ಒಳ್ಳೆಯ, ಕೆಲಸ ಮಾಡಬಹುದಾದ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಆ ಸಂಬಂಧ ನ್ಯೂಯಾರ್ಕ್ ಜನರನ್ನು ರಾತ್ರಿಯೆಲ್ಲಾ ನಿದ್ರೆ ಬರದಂತೆ ಕಾಡುವ ಸಮಸ್ಯೆಗಳ ಮೇಲೆಯೇ ಕೇಂದ್ರೀಕೃತವಾಗಿರಬೇಕು ಎಂಬುವುದು ಎಂದು ಮಮ್ದಾನಿ ಹೇಳಿದ್ದಾರೆ.

ಟ್ರಂಪ್ ಜೊತೆ ಮಾತನಾಡುವಾಗ, “ನಾನು ಎರಡನೇ ಬಾರಿ ಅಧ್ಯಕ್ಷನಾದರೆ ಮೊದಲ ದಿನದಿಂದಲೇ ಜೀವನ ವೆಚ್ಚವನ್ನು ಕಡಿಮೆ ಮಾಡುತ್ತೇನೆ ಎಂದು ನೀವೇ ಕಳೆದ ವರ್ಷ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೀರಿ. ಅದಕ್ಕಾಗಿಯೇ ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಮಮ್ದಾನಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...