Homeಅಂತರಾಷ್ಟ್ರೀಯಟ್ರಂಪ್ 'ಫ್ಯಾಸಿಸ್ಟ್' ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

ಟ್ರಂಪ್ ‘ಫ್ಯಾಸಿಸ್ಟ್’ ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

- Advertisement -
- Advertisement -

ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ನ.21) ಶ್ವೇತಭವನದಲ್ಲಿ ತಮ್ಮ ಮೊದಲ ಮುಖಾಮುಖಿ ಮಾತುಕತೆ ನಡೆಸಿದ್ದಾರೆ.

ರಾಜಕೀಯ ಮತ್ತು ಸೈದ್ದಾಂತಿಕವಾಗಿ ಪರಸ್ಪರ ಶತ್ರುಗಳಾಗಿರುವ ಮಮ್ದಾನಿ ಮತ್ತು ಟ್ರಂಪ್, ಮೊದಲ ಭೇಟಿಯಲ್ಲಿ ಬಹಳ ಆತ್ಮೀಯತೆಯಿಂದ, ನಗು ನಗುತ್ತಾ ಮಾತನಾಡಿರುವುದು ಹಲವರನ್ನು ಆಶ್ವರ್ಯಗೊಳಿಸಿದೆ.

ಶ್ವೇತ ಭವನದಲ್ಲಿ ಟ್ರಂಪ್ ಜೊತೆ ಬಹಳ ಆಪ್ತವಾಗಿ ಮಾತುಕತೆ ನಡೆಸಿರುವ ಮಮ್ದಾನಿ, ಅಲ್ಲಿಂದ ಹೊರ ಬಂದ ಬಳಿಕ ಟ್ರಂಪ್ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಿಸಿಲ್ಲ. ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಎಂದು ಪುನರುಚ್ಚರಿಸಿದ್ದಾರೆ.

ಶನಿವಾರ (ನ.22) ಎನ್‌ಬಿಸಿ ನ್ಯೂಸ್‌ನ ಮೀಟ್ ದಿ ಪ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮಮ್ದಾನಿ, ಶುಕ್ರವಾರ ಟ್ರಂಪ್ ಜೊತೆ ನಡೆಸಿರುವ ಮಾತುಕತೆ ಫಲದಾಯಕವಾಗಿದೆ. ಆದರೆ, ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಮತ್ತು ‘ನಿರಂಕುಶಾಧಿಕಾರಿ’ ಎಂದು ಎಂಬ ನಿಲುವನ್ನು ಈಗಲೂ ಹೊಂದಿದ್ದೇನೆ ಎಂದಿದ್ದಾರೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ನ್ಯೂಯಾರ್ಕ್ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗಲೇ ಟ್ರಂಪ್ ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು. ಆದರೆ, ಶುಕ್ರವಾರದ ಸಭೆಯಲ್ಲಿ ಮಮ್ದಾನಿಗೆ ಶುಭಾಷಯ ಕೋರಿ, ಅವರನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮ್ದಾನಿ, ಟ್ರಂಪ್ ಜೊತೆಗಿನ ಚರ್ಚೆಗಳು ಧನಾತ್ಮಕವಾಗಿತ್ತು. ಮುಖ್ಯವಾಗಿ ಜನರ ಜೀವನ ವೆಚ್ಚ ಮತ್ತು ಆರ್ಥಿಕ ಸಾಧ್ಯತೆಗಳ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿದ್ದವು ಎಂದು ತಿಳಿಸಿದ್ದಾರೆ.

ನಿಲುವಿಗೆ ಬದ್ದ-ಮಮ್ದಾನಿ

ಚುನಾವಣಾ ಪ್ರಚಾರದ ಸಮಯದಲ್ಲಿ ಟ್ರಂಪ್ ಬಗ್ಗೆ ನೀಡಿದ್ದ ನೇರ ಹೇಳಿಕೆಗಳಿಗೆ ತಾನು ಈಗಲೂ ಬದ್ಧನಾಗಿರುವುದಾಗಿ ಮಮ್ದಾನಿ ಸ್ಪಷ್ಟಪಡಿಸಿದ್ದಾರೆ.

“ನಾನು ಹಿಂದೆ ಯಾವ ಯಾವ ಮಾತುಗಳನ್ನು ಹೇಳಿದ್ದೆಯೋ, ಅವೆಲ್ಲವನ್ನೂ ಇಂದಿಗೂ ನಾನು ಪೂರ್ತಿಯಾಗಿ ನಂಬುತ್ತೇನೆ. ನನ್ನ ಆಲೋಚನೆಗಳು ಬದಲಾಗಿಲ್ಲ. ಆದರೆ ರಾಜಕೀಯದಲ್ಲಿ ಒಂದು ಒಳ್ಳೆಯ ವಿಷಯ ಇದೆ: ನಮಗೆ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮುಚ್ಚಿಹಾಕುವುದಿಲ್ಲ. ನಾವು ತಾಳ್ಮೆಯಿಂದ ಕೂತು ಮಾತಾಡುತ್ತೇವೆ. ನಾನು ಅಧ್ಯಕ್ಷರ ಓವಲ್ ಆಫೀಸ್‌ಗೆ ಹೋಗಿರುವುದು ತಮಾಷೆಗೋ, ತೋರಿಕೆಗೋ ಅಲ್ಲ. ನನ್ನ ಸಿದ್ಧಾಂತಗಳನ್ನು ಜಗಳ ಮಾಡಿಕೊಳ್ಳಲು ಅಲ್ಲ. ನಾನು ಅಲ್ಲಿಗೆ ಹೋಗಿರುವುದು ಕೇವಲ ನ್ಯೂಯಾರ್ಕ್ ನಗರದ ಜನರಿಗೆ ಒಳ್ಳೆಯ ಕೆಲಸ ಮಾಡಲು, ಅವರ ಸಮಸ್ಯೆಗಳಿಗೆ ಪರಿಹಾರ ತಂದುಕೊಡಲು ಮಾತ್ರ” ಎಂದು ಮಮ್ದಾನಿ ಹೇಳಿದ್ದಾರೆ.

ಶುಕ್ರವಾರದ ಮಾತುಕತೆ ವೇಳೆ, “ನಾನು ನಿನ್ನನ್ನು ಫ್ಯಾಸಿಸ್ಟ್ ಅಂತ ಕರ್ದಿದ್ದಲ್ಲಾ? ಇನ್ನೊಮ್ಮೆ ‘ಹೌದು’ ಅಂತ ಹೇಳಿಬಿಡು” ಎಂದು ಟ್ರಂಪ್ ನಗು ನಗುತ್ತಾ ಮಮ್ದಾನಿಗೆ ಹೇಳಿದ್ದರು. ಮಮ್ದಾನಿ ಕೂಡ ನಗು ನಗುತ್ತಾ, ಅದನ್ನು ಈಗಾಗಲೇ ಹೇಳಿದ್ದೇನೆ ಸರ್” ಅಂತ ಶುರು ಮಾಡ್ತಿದ್ದಂತೆ, “ಅಯ್ಯೋ ಬಿಡು ವಿವರಣೆ ಬೇಡ, ಕೇವಲ ‘ಹೌದು’ ಅಂತ ಹೇಳು, ಅಷ್ಟೇ ಸಾಕು. ನನಗೆ ಚಿಂತೆಯೇ ಇಲ್ಲ!” ಎಂದು ಟ್ರಂಪ್ ಹೇಳಿದ್ದರು. ಮಮ್ದಾನಿಯ ತೋಳಿಗೆ ಗಟ್ಟಿಯಾಗಿ ತಟ್ಟಿದ್ದರು. ಇಬ್ಬರೂ ಒಟ್ಟಿಗೆ ಜೋರಾಗಿ ನಕ್ಕಿದ್ದರು.

ಟ್ರಂಪ್‌ಗೆ ಮತ ಹಾಕಿದವರೇ ಆಗಲಿ, ನನ್ನ ಪರ ಮತ ಹಾಕಿದವರೇ ಆಗಲಿ, ಎಲ್ಲರ ಸಮಸ್ಯೆ ಒಂದೇ : ಬಾಡಿಗೆ, ಆಹಾರ, ಎಲ್ಲವೂ ದುಬಾರಿಯಾಗಿದೆ. ಅದನ್ನು ಕಡಿಮೆ ಮಾಡುವುದೇ ನನ್ನ ಮೊದಲ ಕೆಲಸ ಎಂದು ಮಮ್ದಾನಿ ತಿಳಿಸಿದ್ದಾರೆ.

ನಾನು ಶ್ವೇತಭವನಕ್ಕೆ ಹೋಗುವಾಗ ಒಂದೇ ಉದ್ದೇಶ ಇತ್ತು, ಅದು ಟ್ರಂಪ್ ಜೊತೆ ಒಳ್ಳೆಯ, ಕೆಲಸ ಮಾಡಬಹುದಾದ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಆ ಸಂಬಂಧ ನ್ಯೂಯಾರ್ಕ್ ಜನರನ್ನು ರಾತ್ರಿಯೆಲ್ಲಾ ನಿದ್ರೆ ಬರದಂತೆ ಕಾಡುವ ಸಮಸ್ಯೆಗಳ ಮೇಲೆಯೇ ಕೇಂದ್ರೀಕೃತವಾಗಿರಬೇಕು ಎಂಬುವುದು ಎಂದು ಮಮ್ದಾನಿ ಹೇಳಿದ್ದಾರೆ.

ಟ್ರಂಪ್ ಜೊತೆ ಮಾತನಾಡುವಾಗ, “ನಾನು ಎರಡನೇ ಬಾರಿ ಅಧ್ಯಕ್ಷನಾದರೆ ಮೊದಲ ದಿನದಿಂದಲೇ ಜೀವನ ವೆಚ್ಚವನ್ನು ಕಡಿಮೆ ಮಾಡುತ್ತೇನೆ ಎಂದು ನೀವೇ ಕಳೆದ ವರ್ಷ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೀರಿ. ಅದಕ್ಕಾಗಿಯೇ ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಮಮ್ದಾನಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...