Homeಅಂತರಾಷ್ಟ್ರೀಯಟ್ರಂಪ್ 'ಫ್ಯಾಸಿಸ್ಟ್' ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

ಟ್ರಂಪ್ ‘ಫ್ಯಾಸಿಸ್ಟ್’ ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

- Advertisement -
- Advertisement -

ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ನ.21) ಶ್ವೇತಭವನದಲ್ಲಿ ತಮ್ಮ ಮೊದಲ ಮುಖಾಮುಖಿ ಮಾತುಕತೆ ನಡೆಸಿದ್ದಾರೆ.

ರಾಜಕೀಯ ಮತ್ತು ಸೈದ್ದಾಂತಿಕವಾಗಿ ಪರಸ್ಪರ ಶತ್ರುಗಳಾಗಿರುವ ಮಮ್ದಾನಿ ಮತ್ತು ಟ್ರಂಪ್, ಮೊದಲ ಭೇಟಿಯಲ್ಲಿ ಬಹಳ ಆತ್ಮೀಯತೆಯಿಂದ, ನಗು ನಗುತ್ತಾ ಮಾತನಾಡಿರುವುದು ಹಲವರನ್ನು ಆಶ್ವರ್ಯಗೊಳಿಸಿದೆ.

ಶ್ವೇತ ಭವನದಲ್ಲಿ ಟ್ರಂಪ್ ಜೊತೆ ಬಹಳ ಆಪ್ತವಾಗಿ ಮಾತುಕತೆ ನಡೆಸಿರುವ ಮಮ್ದಾನಿ, ಅಲ್ಲಿಂದ ಹೊರ ಬಂದ ಬಳಿಕ ಟ್ರಂಪ್ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಿಸಿಲ್ಲ. ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಎಂದು ಪುನರುಚ್ಚರಿಸಿದ್ದಾರೆ.

ಶನಿವಾರ (ನ.22) ಎನ್‌ಬಿಸಿ ನ್ಯೂಸ್‌ನ ಮೀಟ್ ದಿ ಪ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮಮ್ದಾನಿ, ಶುಕ್ರವಾರ ಟ್ರಂಪ್ ಜೊತೆ ನಡೆಸಿರುವ ಮಾತುಕತೆ ಫಲದಾಯಕವಾಗಿದೆ. ಆದರೆ, ಟ್ರಂಪ್ ಒಬ್ಬ ‘ಫ್ಯಾಸಿಸ್ಟ್’ ಮತ್ತು ‘ನಿರಂಕುಶಾಧಿಕಾರಿ’ ಎಂದು ಎಂಬ ನಿಲುವನ್ನು ಈಗಲೂ ಹೊಂದಿದ್ದೇನೆ ಎಂದಿದ್ದಾರೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ನ್ಯೂಯಾರ್ಕ್ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗಲೇ ಟ್ರಂಪ್ ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು. ಆದರೆ, ಶುಕ್ರವಾರದ ಸಭೆಯಲ್ಲಿ ಮಮ್ದಾನಿಗೆ ಶುಭಾಷಯ ಕೋರಿ, ಅವರನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮ್ದಾನಿ, ಟ್ರಂಪ್ ಜೊತೆಗಿನ ಚರ್ಚೆಗಳು ಧನಾತ್ಮಕವಾಗಿತ್ತು. ಮುಖ್ಯವಾಗಿ ಜನರ ಜೀವನ ವೆಚ್ಚ ಮತ್ತು ಆರ್ಥಿಕ ಸಾಧ್ಯತೆಗಳ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿದ್ದವು ಎಂದು ತಿಳಿಸಿದ್ದಾರೆ.

ನಿಲುವಿಗೆ ಬದ್ದ-ಮಮ್ದಾನಿ

ಚುನಾವಣಾ ಪ್ರಚಾರದ ಸಮಯದಲ್ಲಿ ಟ್ರಂಪ್ ಬಗ್ಗೆ ನೀಡಿದ್ದ ನೇರ ಹೇಳಿಕೆಗಳಿಗೆ ತಾನು ಈಗಲೂ ಬದ್ಧನಾಗಿರುವುದಾಗಿ ಮಮ್ದಾನಿ ಸ್ಪಷ್ಟಪಡಿಸಿದ್ದಾರೆ.

“ನಾನು ಹಿಂದೆ ಯಾವ ಯಾವ ಮಾತುಗಳನ್ನು ಹೇಳಿದ್ದೆಯೋ, ಅವೆಲ್ಲವನ್ನೂ ಇಂದಿಗೂ ನಾನು ಪೂರ್ತಿಯಾಗಿ ನಂಬುತ್ತೇನೆ. ನನ್ನ ಆಲೋಚನೆಗಳು ಬದಲಾಗಿಲ್ಲ. ಆದರೆ ರಾಜಕೀಯದಲ್ಲಿ ಒಂದು ಒಳ್ಳೆಯ ವಿಷಯ ಇದೆ: ನಮಗೆ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮುಚ್ಚಿಹಾಕುವುದಿಲ್ಲ. ನಾವು ತಾಳ್ಮೆಯಿಂದ ಕೂತು ಮಾತಾಡುತ್ತೇವೆ. ನಾನು ಅಧ್ಯಕ್ಷರ ಓವಲ್ ಆಫೀಸ್‌ಗೆ ಹೋಗಿರುವುದು ತಮಾಷೆಗೋ, ತೋರಿಕೆಗೋ ಅಲ್ಲ. ನನ್ನ ಸಿದ್ಧಾಂತಗಳನ್ನು ಜಗಳ ಮಾಡಿಕೊಳ್ಳಲು ಅಲ್ಲ. ನಾನು ಅಲ್ಲಿಗೆ ಹೋಗಿರುವುದು ಕೇವಲ ನ್ಯೂಯಾರ್ಕ್ ನಗರದ ಜನರಿಗೆ ಒಳ್ಳೆಯ ಕೆಲಸ ಮಾಡಲು, ಅವರ ಸಮಸ್ಯೆಗಳಿಗೆ ಪರಿಹಾರ ತಂದುಕೊಡಲು ಮಾತ್ರ” ಎಂದು ಮಮ್ದಾನಿ ಹೇಳಿದ್ದಾರೆ.

ಶುಕ್ರವಾರದ ಮಾತುಕತೆ ವೇಳೆ, “ನಾನು ನಿನ್ನನ್ನು ಫ್ಯಾಸಿಸ್ಟ್ ಅಂತ ಕರ್ದಿದ್ದಲ್ಲಾ? ಇನ್ನೊಮ್ಮೆ ‘ಹೌದು’ ಅಂತ ಹೇಳಿಬಿಡು” ಎಂದು ಟ್ರಂಪ್ ನಗು ನಗುತ್ತಾ ಮಮ್ದಾನಿಗೆ ಹೇಳಿದ್ದರು. ಮಮ್ದಾನಿ ಕೂಡ ನಗು ನಗುತ್ತಾ, ಅದನ್ನು ಈಗಾಗಲೇ ಹೇಳಿದ್ದೇನೆ ಸರ್” ಅಂತ ಶುರು ಮಾಡ್ತಿದ್ದಂತೆ, “ಅಯ್ಯೋ ಬಿಡು ವಿವರಣೆ ಬೇಡ, ಕೇವಲ ‘ಹೌದು’ ಅಂತ ಹೇಳು, ಅಷ್ಟೇ ಸಾಕು. ನನಗೆ ಚಿಂತೆಯೇ ಇಲ್ಲ!” ಎಂದು ಟ್ರಂಪ್ ಹೇಳಿದ್ದರು. ಮಮ್ದಾನಿಯ ತೋಳಿಗೆ ಗಟ್ಟಿಯಾಗಿ ತಟ್ಟಿದ್ದರು. ಇಬ್ಬರೂ ಒಟ್ಟಿಗೆ ಜೋರಾಗಿ ನಕ್ಕಿದ್ದರು.

ಟ್ರಂಪ್‌ಗೆ ಮತ ಹಾಕಿದವರೇ ಆಗಲಿ, ನನ್ನ ಪರ ಮತ ಹಾಕಿದವರೇ ಆಗಲಿ, ಎಲ್ಲರ ಸಮಸ್ಯೆ ಒಂದೇ : ಬಾಡಿಗೆ, ಆಹಾರ, ಎಲ್ಲವೂ ದುಬಾರಿಯಾಗಿದೆ. ಅದನ್ನು ಕಡಿಮೆ ಮಾಡುವುದೇ ನನ್ನ ಮೊದಲ ಕೆಲಸ ಎಂದು ಮಮ್ದಾನಿ ತಿಳಿಸಿದ್ದಾರೆ.

ನಾನು ಶ್ವೇತಭವನಕ್ಕೆ ಹೋಗುವಾಗ ಒಂದೇ ಉದ್ದೇಶ ಇತ್ತು, ಅದು ಟ್ರಂಪ್ ಜೊತೆ ಒಳ್ಳೆಯ, ಕೆಲಸ ಮಾಡಬಹುದಾದ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಆ ಸಂಬಂಧ ನ್ಯೂಯಾರ್ಕ್ ಜನರನ್ನು ರಾತ್ರಿಯೆಲ್ಲಾ ನಿದ್ರೆ ಬರದಂತೆ ಕಾಡುವ ಸಮಸ್ಯೆಗಳ ಮೇಲೆಯೇ ಕೇಂದ್ರೀಕೃತವಾಗಿರಬೇಕು ಎಂಬುವುದು ಎಂದು ಮಮ್ದಾನಿ ಹೇಳಿದ್ದಾರೆ.

ಟ್ರಂಪ್ ಜೊತೆ ಮಾತನಾಡುವಾಗ, “ನಾನು ಎರಡನೇ ಬಾರಿ ಅಧ್ಯಕ್ಷನಾದರೆ ಮೊದಲ ದಿನದಿಂದಲೇ ಜೀವನ ವೆಚ್ಚವನ್ನು ಕಡಿಮೆ ಮಾಡುತ್ತೇನೆ ಎಂದು ನೀವೇ ಕಳೆದ ವರ್ಷ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೀರಿ. ಅದಕ್ಕಾಗಿಯೇ ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಮಮ್ದಾನಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...