Homeಅಂತರಾಷ್ಟ್ರೀಯನ್ಯೂಜಿಲೆಂಡ್‌: ಗೇಬ್ರಿಯೆಲ್ ಚಂಡಮಾರುತಕ್ಕೆ ಉತ್ತರ ಭಾಗ ತತ್ತರ - ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ

ನ್ಯೂಜಿಲೆಂಡ್‌: ಗೇಬ್ರಿಯೆಲ್ ಚಂಡಮಾರುತಕ್ಕೆ ಉತ್ತರ ಭಾಗ ತತ್ತರ – ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ

- Advertisement -
- Advertisement -

ನ್ಯೂಜಿಲೆಂಡ್‌ನ ಉತ್ತರ ಭಾಗಕ್ಕೆ ಗೇಬ್ರಿಯೆಲ್ ಚಂಡಮಾರುತ ಅಪ್ಪಳಿಸಿದ್ದು, ಲಕ್ಷಾಂತರ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಭಾರೀ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಮನೆಗಳು ನೀರಿನಲ್ಲಿ ಮುಳುಗಿವೆ. ವಿದ್ಯುತ್ ಗ್ರಿಡ್ ವ್ಯವಸ್ಥೆ ಹಾಳಾದ ಪರಿಣಾಮ ಲಕ್ಷಾಂತರ ಮನೆಗಳ ವಿದ್ಯುತ್ ಕಡಿತಗೊಂಡಿದೆ. ಇದು ಶತಮಾನದಲ್ಲಿಯೇ ಅತ್ಯಂತ ದೊಡ್ಡ ಪರಿಸರದ ಅವಘಡ ಎಂದು ಪ್ರಧಾನಿ ಕ್ರಿಸ್ ಹಿಪ್ಕಿನ್ಸ್ ತಿಳಿಸಿದ್ದು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ನ್ಯೂಜಿಲೆಂಡ್‌ನ ಉತ್ತರ ಭಾಗದ ಆಕ್ಲೆಂಡ್, ನಾರ್ತ್‌ಲ್ಯಾಂಡ್‌, ಗಿಸ್ಬೋರ್ನ್, ಹಾಕ್ಸ್ ಬೇ ಸೇರಿದಂತೆ ಮೊದಲಾದ ಪ್ರದೇಶಗಳಲ್ಲಿ ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಭೂಕುಸಿತ, ಅತಿವೃಷ್ಟಿ, ಮರಗಳು ನೆಲಕ್ಕುರುಳಿರುವುದು ಸೇರಿ ಸುಮಾರು 2 ಲಕ್ಷ ಮನೆಗಳಿಗೆ ತೊಂದರೆಯಾಗಿದ್ದು, 5 ಲಕ್ಷ ಜನರು ಸಂಕಷ್ಟದಲ್ಲಿದ್ದಾರೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.

ಚಂಡಮಾರುತದ ಪರಿಣಾಮ ನ್ಯೂಜಿಲೆಂಡ್​ನಲ್ಲಿ 1.5 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನಾರ್ತ್​ಲ್ಯಾಂಡ್, ಆಕ್ಲೆಂಡ್ ಮತ್ತು ಹಾಕ್ಸ್​ಬೇ ಪ್ರದೇಶಗಳಲ್ಲಿ ಸಂಪೂರ್ಣ ಕತ್ತಲು ಅವರಿಸಿದೆ.

“ಗೇಬ್ರಿಯೆಲ್ ಚಂಡಮಾರುತವು ಈ ಶತಮಾನದಲ್ಲಿ ನ್ಯೂಜಿಲೆಂಡ್ ಕಂಡ ಅತ್ಯಂತ ದೊಡ್ಡ ಹವಾಮಾನ ಘಟನೆಯಾಗಿದೆ. ಇಂದು ನಾವು ನೋಡುತ್ತಿರುವ ಈ ತೀವ್ರತೆ ಮತ್ತು ಹಾನಿಯನ್ನು ಈ ಪೀಳಿಗೆ ಹಿಂದೆಂದೂ ಕಂಡಿರಲಿಲ್ಲ” ಎಂದು ಪ್ರಧಾನ ಮಂತ್ರಿ ಕ್ರಿಸ್ ಹಿಪ್ಕಿನ್ಸ್ ತಿಳಿಸಿದ್ದಾರೆ.

ನ್ಯೂಜಿಲೆಂಡ್​ನಲ್ಲಿ ಗೇಬ್ರಿಯೆಲ್ ಚಂಡಮಾರುತ ಅಪ್ಪಳಿಸಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಸರ್ಕಾರ ರಾಷ್ಟ್ರೀಯ ತುರ್ತುಸ್ಥಿತಿಯನ್ನು ಘೋಷಿಸಿದೆ. ನಾರ್ತ್​ಲೆಂಡ್, ಆಕ್ಲೆಂಡ್, ಟೈರಾವ್ಹಿಟಿ, ಬೇ ಆಫ್ ಪ್ಲೆಂಟಿ, ವೈಕಾಟೋ, ಹಾಕ್ಸ್​ಬೇ ಮತ್ತು ಟರರುವಾ ಪ್ರದೇಶಗಳಲ್ಲಿ ತುರ್ತುಸ್ಥಿತಿ ಘೋಷಿಸಲಾಗಿದೆ. ಆ ಪ್ರದೇಶಗಳ ಪರಿಹಾರ, ರಕ್ಷಣಾ ಕಾರ್ಯಗಳ ಜವಾಬ್ದಾರಿಯನ್ನು ಸ್ಥಳೀಯ ಆಡಳಿತದ ಬದಲು ಕೇಂದ್ರ ಸರ್ಕಾರವೇ ನಡೆಸುತ್ತಿದೆ.

ಅದೃಷ್ಟವಶಾತ್, ಚಂಡಮಾರುತದಿಂದ ಪ್ರಾಣಹಾನಿಯಾಗಿರುವ ವರದಿ ಆಗಿಲ್ಲ. ಇಲ್ಲಿಯವರೆಗೆ ಸುಮಾರು 2,500 ಜನರನ್ನು ಸ್ಥಳಾಂತರಿಸಲಾಗಿದೆ. ಆದರೆ ಈ ಸಂಖ್ಯೆ ಹೆಚ್ಚುವ ನಿರೀಕ್ಷೆಯಿದೆ ಎನ್ನಲಾಗಿದೆ.

ಇದನ್ನೂ ಓದಿ; ಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ಚಿಂತನೆಯಿಲ್ಲ: ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...