ನ್ಯೂಜಿಲೆಂಡ್ನ ಉತ್ತರ ಭಾಗಕ್ಕೆ ಗೇಬ್ರಿಯೆಲ್ ಚಂಡಮಾರುತ ಅಪ್ಪಳಿಸಿದ್ದು, ಲಕ್ಷಾಂತರ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಭಾರೀ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಮನೆಗಳು ನೀರಿನಲ್ಲಿ ಮುಳುಗಿವೆ. ವಿದ್ಯುತ್ ಗ್ರಿಡ್ ವ್ಯವಸ್ಥೆ ಹಾಳಾದ ಪರಿಣಾಮ ಲಕ್ಷಾಂತರ ಮನೆಗಳ ವಿದ್ಯುತ್ ಕಡಿತಗೊಂಡಿದೆ. ಇದು ಶತಮಾನದಲ್ಲಿಯೇ ಅತ್ಯಂತ ದೊಡ್ಡ ಪರಿಸರದ ಅವಘಡ ಎಂದು ಪ್ರಧಾನಿ ಕ್ರಿಸ್ ಹಿಪ್ಕಿನ್ಸ್ ತಿಳಿಸಿದ್ದು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ನ್ಯೂಜಿಲೆಂಡ್ನ ಉತ್ತರ ಭಾಗದ ಆಕ್ಲೆಂಡ್, ನಾರ್ತ್ಲ್ಯಾಂಡ್, ಗಿಸ್ಬೋರ್ನ್, ಹಾಕ್ಸ್ ಬೇ ಸೇರಿದಂತೆ ಮೊದಲಾದ ಪ್ರದೇಶಗಳಲ್ಲಿ ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಭೂಕುಸಿತ, ಅತಿವೃಷ್ಟಿ, ಮರಗಳು ನೆಲಕ್ಕುರುಳಿರುವುದು ಸೇರಿ ಸುಮಾರು 2 ಲಕ್ಷ ಮನೆಗಳಿಗೆ ತೊಂದರೆಯಾಗಿದ್ದು, 5 ಲಕ್ಷ ಜನರು ಸಂಕಷ್ಟದಲ್ಲಿದ್ದಾರೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.
Gisborne and Hawke's Bay residents are without electricity, phone and internet as Cyclone Gabrielle continues to pound the North Island. This drone footage shows the extent of flooding, with parts of SH15 completely cut off between Hastings and Napier. https://t.co/95XDbIoAsi pic.twitter.com/LU05fht86r
— 1News (@1NewsNZ) February 14, 2023
ಚಂಡಮಾರುತದ ಪರಿಣಾಮ ನ್ಯೂಜಿಲೆಂಡ್ನಲ್ಲಿ 1.5 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನಾರ್ತ್ಲ್ಯಾಂಡ್, ಆಕ್ಲೆಂಡ್ ಮತ್ತು ಹಾಕ್ಸ್ಬೇ ಪ್ರದೇಶಗಳಲ್ಲಿ ಸಂಪೂರ್ಣ ಕತ್ತಲು ಅವರಿಸಿದೆ.
“ಗೇಬ್ರಿಯೆಲ್ ಚಂಡಮಾರುತವು ಈ ಶತಮಾನದಲ್ಲಿ ನ್ಯೂಜಿಲೆಂಡ್ ಕಂಡ ಅತ್ಯಂತ ದೊಡ್ಡ ಹವಾಮಾನ ಘಟನೆಯಾಗಿದೆ. ಇಂದು ನಾವು ನೋಡುತ್ತಿರುವ ಈ ತೀವ್ರತೆ ಮತ್ತು ಹಾನಿಯನ್ನು ಈ ಪೀಳಿಗೆ ಹಿಂದೆಂದೂ ಕಂಡಿರಲಿಲ್ಲ” ಎಂದು ಪ್ರಧಾನ ಮಂತ್ರಿ ಕ್ರಿಸ್ ಹಿಪ್ಕಿನ್ಸ್ ತಿಳಿಸಿದ್ದಾರೆ.
ನ್ಯೂಜಿಲೆಂಡ್ನಲ್ಲಿ ಗೇಬ್ರಿಯೆಲ್ ಚಂಡಮಾರುತ ಅಪ್ಪಳಿಸಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಸರ್ಕಾರ ರಾಷ್ಟ್ರೀಯ ತುರ್ತುಸ್ಥಿತಿಯನ್ನು ಘೋಷಿಸಿದೆ. ನಾರ್ತ್ಲೆಂಡ್, ಆಕ್ಲೆಂಡ್, ಟೈರಾವ್ಹಿಟಿ, ಬೇ ಆಫ್ ಪ್ಲೆಂಟಿ, ವೈಕಾಟೋ, ಹಾಕ್ಸ್ಬೇ ಮತ್ತು ಟರರುವಾ ಪ್ರದೇಶಗಳಲ್ಲಿ ತುರ್ತುಸ್ಥಿತಿ ಘೋಷಿಸಲಾಗಿದೆ. ಆ ಪ್ರದೇಶಗಳ ಪರಿಹಾರ, ರಕ್ಷಣಾ ಕಾರ್ಯಗಳ ಜವಾಬ್ದಾರಿಯನ್ನು ಸ್ಥಳೀಯ ಆಡಳಿತದ ಬದಲು ಕೇಂದ್ರ ಸರ್ಕಾರವೇ ನಡೆಸುತ್ತಿದೆ.
New Zealand declared a national state of emergency for only the third time in its history as Cyclone Gabrielle caused widespread flooding, landslides and huge ocean swells, forcing evacuations and stranding people on roof tops https://t.co/Ali5GD51Lk pic.twitter.com/Sq15u55iwB
— Reuters (@Reuters) February 14, 2023
ಅದೃಷ್ಟವಶಾತ್, ಚಂಡಮಾರುತದಿಂದ ಪ್ರಾಣಹಾನಿಯಾಗಿರುವ ವರದಿ ಆಗಿಲ್ಲ. ಇಲ್ಲಿಯವರೆಗೆ ಸುಮಾರು 2,500 ಜನರನ್ನು ಸ್ಥಳಾಂತರಿಸಲಾಗಿದೆ. ಆದರೆ ಈ ಸಂಖ್ಯೆ ಹೆಚ್ಚುವ ನಿರೀಕ್ಷೆಯಿದೆ ಎನ್ನಲಾಗಿದೆ.
ಇದನ್ನೂ ಓದಿ; ಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ಚಿಂತನೆಯಿಲ್ಲ: ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟನೆ