Homeಮುಖಪುಟರಾಜೀನಾಮೆ ನೀಡುವುದಾಗಿ ಘೋಷಿಸಿದ ನ್ಯೂಜಿಲೆಂಡ್ ಪ್ರಧಾನಿ ಅರ್ಡೆರ್ನ್

ರಾಜೀನಾಮೆ ನೀಡುವುದಾಗಿ ಘೋಷಿಸಿದ ನ್ಯೂಜಿಲೆಂಡ್ ಪ್ರಧಾನಿ ಅರ್ಡೆರ್ನ್

- Advertisement -
- Advertisement -

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ಮುಂದಿನ ತಿಂಗಳು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ.

ಈ ಬಗ್ಗೆ ಅವರು, ತಮ್ಮ ಲೇಬರ್ ಪಕ್ಷದ ಸದಸ್ಯರ ಸಭೆಯಲ್ಲಿಮಾತನಾಡಿದ್ದು, “ರಾಜೀನಾಮೆ ನೀಡಲು ಇದು ನನಗೆ ಸಮಯ, ನಾನು ನಾಲ್ಕು ವರ್ಷಗಳವರೆಗೆ ಈ ಹುದ್ದೆಯಲ್ಲಿ ಮುಂದುವರೆಯಲು ಆಗಲ್ಲ” ಎಂದು ತಿಳಿಸಿದ್ದಾರೆ.

ಅರ್ಡೆರ್ನ್ ಅವರು 2017 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲೂ ಪ್ರಧಾನ ಮಂತ್ರಿಯಾಗಿದ್ದರು. ಮೂರು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ತಮ್ಮ ಕೇಂದ್ರ-ಎಡ ಲೇಬರ್ ಪಕ್ಷವನ್ನು ಸಮಗ್ರ ವಿಜಯದತ್ತ ಅವರು ಮುನ್ನಡೆಸಿದರು. ಆದರೆ ಇತ್ತೀಚಿನ ಸಮೀಕ್ಷೆಗಳ ಪ್ರಕಾರ ಅವರ ಪಕ್ಷ ಮತ್ತು ವೈಯಕ್ತಿಕ ಜನಪ್ರಿಯತೆಯಲ್ಲಿ ಕುಸಿತ ಕಂಡಿದೆ ಎಂದು ಹೇಳಲಾಗುತ್ತಿದೆ.

ಒಂದು ತಿಂಗಳ ಹಿಂದೆ ಸಂಸತ್ತು ತನ್ನ ಬೇಸಿಗೆಯ ವಿರಾಮಕ್ಕೆ ಹೋದ ನಂತರ ತಮ್ಮ ಮೊದಲ ಸಾರ್ವಜನಿಕ ಪ್ರದರ್ಶನದಲ್ಲಿ ಅವರು, ವಿರಾಮದ ಸಮಯದಲ್ಲಿ ನಾಯಕರಾಗಿ ಮುಂದುವರಿಯಲು ಸಾಮರ್ಥ್ಯ ಇದೆ ಎಂದು ಭರವಸೆ ವ್ಯಕ್ತಪಡಿಸಿದ್ದರು. ಆದರೆ ಇದೀಗ ನಾನು ಮುಂದುವರೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 14 ರ ಶನಿವಾರದಂದು ಮುಂದಿನ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೆ ಅವರು ಚುನಾವಣಾ ಸಂಸದರಾಗಿ ಮುಂದುವರಿಯುತ್ತಾರೆ ಎಂದು ಅರ್ಡೆರ್ನ್ ಹೇಳಿದರು.

“ನಾವು ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ ಹಾಗಾಗಿ ನಾನು ಹೊರಡುವುದಿಲ್ಲ. ಏಕೆಂದರೆ ನಾವು ಗೆದ್ದೇಗೆಲ್ಲುತ್ತೇವೆ ಎನ್ನುವ ನಂಬಿಕೆ ನನಗಿದೆ” ಎಂದು ಅವರು ಹೇಳಿದರು.

ತಮ್ಮ ರಾಜೀನಾಮೆಯೂ ಫೆಬ್ರವರಿ 7ರ ನಂತರ ಜಾರಿಗೆ ಬರಲಿದೆ. ಜನವರಿ 22 ರಂದು ಲೇಬರ್ ಕಾಕಸ್ ಹೊಸ ನಾಯಕನನ್ನು ಮತ ಚಲಾಯಿಸುವ ಮೂಲಕ ಆಯ್ಕೆ ಮಾಡುತ್ತದೆ ಎಂದು ಅರ್ಡೆರ್ನ್ ಹೇಳಿದರು.

ಉಪ ಪ್ರಧಾನ ಮಂತ್ರಿ ಗ್ರಾಂಟ್ ರಾಬರ್ಟ್ಸನ್ ಅವರು ತಮ್ಮ ಹೆಸರನ್ನು ಮುಂದಿಡುವುದಿಲ್ಲ ಎಂದು ಹೇಳಿದರು.

‘ತಮ್ಮ ರಾಜೀನಾಮೆಯ ಹಿಂದೆ ಯಾವುದೇ ರಹಸ್ಯವಿಲ್ಲ’ ಎಂದು ಅರ್ಡೆರ್ನ್ ಹೇಳಿದ್ದಾರೆ.

“ನಾನು ಮನುಷ್ಯ, ನಾವು ಎಲ್ಲಿಯವರೆಗೆ ಸಾಧ್ಯವೋ ಅಷ್ಟು ಕೆಲಸ ಮಾಡಿದ್ದೇನೆ. ಅದರೆ ಈಗ ನನಗೆ ಸಮಯ ಬಂದಿದೆ ಹಾಗಾಗಿ ನಾನು ಹೊರಡುತ್ತೇನೆ. ಜವಾಬ್ದಾರಿಯುತ ಕೆಲಸವನ್ನು ಸಮರ್ಥ ವ್ಯಕ್ತಿ, ನೀವು ಇಲ್ಲದಿರುವಾಗ ಹೇಗೆ ನಿಭಾಯಿಸುತ್ತಾನೆ ಎನ್ನುವ ಸಂಗತಿ ಈಗ ತಿಳಿಯುತ್ತದೆ” ಎಂದು ಅರ್ಡೆರ್ನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...