Homeಮುಖಪುಟರಾಜೀನಾಮೆ ನೀಡುವುದಾಗಿ ಘೋಷಿಸಿದ ನ್ಯೂಜಿಲೆಂಡ್ ಪ್ರಧಾನಿ ಅರ್ಡೆರ್ನ್

ರಾಜೀನಾಮೆ ನೀಡುವುದಾಗಿ ಘೋಷಿಸಿದ ನ್ಯೂಜಿಲೆಂಡ್ ಪ್ರಧಾನಿ ಅರ್ಡೆರ್ನ್

- Advertisement -
- Advertisement -

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ಮುಂದಿನ ತಿಂಗಳು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ.

ಈ ಬಗ್ಗೆ ಅವರು, ತಮ್ಮ ಲೇಬರ್ ಪಕ್ಷದ ಸದಸ್ಯರ ಸಭೆಯಲ್ಲಿಮಾತನಾಡಿದ್ದು, “ರಾಜೀನಾಮೆ ನೀಡಲು ಇದು ನನಗೆ ಸಮಯ, ನಾನು ನಾಲ್ಕು ವರ್ಷಗಳವರೆಗೆ ಈ ಹುದ್ದೆಯಲ್ಲಿ ಮುಂದುವರೆಯಲು ಆಗಲ್ಲ” ಎಂದು ತಿಳಿಸಿದ್ದಾರೆ.

ಅರ್ಡೆರ್ನ್ ಅವರು 2017 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲೂ ಪ್ರಧಾನ ಮಂತ್ರಿಯಾಗಿದ್ದರು. ಮೂರು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ತಮ್ಮ ಕೇಂದ್ರ-ಎಡ ಲೇಬರ್ ಪಕ್ಷವನ್ನು ಸಮಗ್ರ ವಿಜಯದತ್ತ ಅವರು ಮುನ್ನಡೆಸಿದರು. ಆದರೆ ಇತ್ತೀಚಿನ ಸಮೀಕ್ಷೆಗಳ ಪ್ರಕಾರ ಅವರ ಪಕ್ಷ ಮತ್ತು ವೈಯಕ್ತಿಕ ಜನಪ್ರಿಯತೆಯಲ್ಲಿ ಕುಸಿತ ಕಂಡಿದೆ ಎಂದು ಹೇಳಲಾಗುತ್ತಿದೆ.

ಒಂದು ತಿಂಗಳ ಹಿಂದೆ ಸಂಸತ್ತು ತನ್ನ ಬೇಸಿಗೆಯ ವಿರಾಮಕ್ಕೆ ಹೋದ ನಂತರ ತಮ್ಮ ಮೊದಲ ಸಾರ್ವಜನಿಕ ಪ್ರದರ್ಶನದಲ್ಲಿ ಅವರು, ವಿರಾಮದ ಸಮಯದಲ್ಲಿ ನಾಯಕರಾಗಿ ಮುಂದುವರಿಯಲು ಸಾಮರ್ಥ್ಯ ಇದೆ ಎಂದು ಭರವಸೆ ವ್ಯಕ್ತಪಡಿಸಿದ್ದರು. ಆದರೆ ಇದೀಗ ನಾನು ಮುಂದುವರೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 14 ರ ಶನಿವಾರದಂದು ಮುಂದಿನ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೆ ಅವರು ಚುನಾವಣಾ ಸಂಸದರಾಗಿ ಮುಂದುವರಿಯುತ್ತಾರೆ ಎಂದು ಅರ್ಡೆರ್ನ್ ಹೇಳಿದರು.

“ನಾವು ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ ಹಾಗಾಗಿ ನಾನು ಹೊರಡುವುದಿಲ್ಲ. ಏಕೆಂದರೆ ನಾವು ಗೆದ್ದೇಗೆಲ್ಲುತ್ತೇವೆ ಎನ್ನುವ ನಂಬಿಕೆ ನನಗಿದೆ” ಎಂದು ಅವರು ಹೇಳಿದರು.

ತಮ್ಮ ರಾಜೀನಾಮೆಯೂ ಫೆಬ್ರವರಿ 7ರ ನಂತರ ಜಾರಿಗೆ ಬರಲಿದೆ. ಜನವರಿ 22 ರಂದು ಲೇಬರ್ ಕಾಕಸ್ ಹೊಸ ನಾಯಕನನ್ನು ಮತ ಚಲಾಯಿಸುವ ಮೂಲಕ ಆಯ್ಕೆ ಮಾಡುತ್ತದೆ ಎಂದು ಅರ್ಡೆರ್ನ್ ಹೇಳಿದರು.

ಉಪ ಪ್ರಧಾನ ಮಂತ್ರಿ ಗ್ರಾಂಟ್ ರಾಬರ್ಟ್ಸನ್ ಅವರು ತಮ್ಮ ಹೆಸರನ್ನು ಮುಂದಿಡುವುದಿಲ್ಲ ಎಂದು ಹೇಳಿದರು.

‘ತಮ್ಮ ರಾಜೀನಾಮೆಯ ಹಿಂದೆ ಯಾವುದೇ ರಹಸ್ಯವಿಲ್ಲ’ ಎಂದು ಅರ್ಡೆರ್ನ್ ಹೇಳಿದ್ದಾರೆ.

“ನಾನು ಮನುಷ್ಯ, ನಾವು ಎಲ್ಲಿಯವರೆಗೆ ಸಾಧ್ಯವೋ ಅಷ್ಟು ಕೆಲಸ ಮಾಡಿದ್ದೇನೆ. ಅದರೆ ಈಗ ನನಗೆ ಸಮಯ ಬಂದಿದೆ ಹಾಗಾಗಿ ನಾನು ಹೊರಡುತ್ತೇನೆ. ಜವಾಬ್ದಾರಿಯುತ ಕೆಲಸವನ್ನು ಸಮರ್ಥ ವ್ಯಕ್ತಿ, ನೀವು ಇಲ್ಲದಿರುವಾಗ ಹೇಗೆ ನಿಭಾಯಿಸುತ್ತಾನೆ ಎನ್ನುವ ಸಂಗತಿ ಈಗ ತಿಳಿಯುತ್ತದೆ” ಎಂದು ಅರ್ಡೆರ್ನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...