Homeಅಂತರಾಷ್ಟ್ರೀಯಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ವೈವಿಧ್ಯತೆಯಿಂದ ಕೂಡಿದ ಪ್ರಧಾನಿ ಜಸಿಂಡಾ ಅವರ ಹೊಸ ಮಂತ್ರಿ ಮಂಡಲದ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಿಷಯಗಳು ಇಲ್ಲಿವೆ

- Advertisement -
- Advertisement -

ನ್ಯೂಜಿಲೆಂಡ್‌ನ ಅತ್ಯಂತ ಕಿರಿಯ ಪ್ರಧಾನ ಮಂತ್ರಿ ಆಗಿದ್ದ ಜಸಿಂಡಾ ಅರ್ಡೆರ್ನ್ ಕಳೆದ ತಿಂಗಳು ಎರಡನೇ ಬಾರಿಗೆ ದೇಶದ ಪ್ರಧಾನಿ ಗದ್ದುಗೆಗೆ ಏರಿದ್ದಾರೆ. ಜಸಿಂಡಾ ಅವರ ಎಡಪಂಥೀಯ ಲೇಬರ್ ಪಕ್ಷವು ಚುನಾವಣೆಯಲ್ಲಿ ಚಲಾವಣೆಯಾದ 87% ದಷ್ಟು ಮತಗಳಲ್ಲಿ 48.9% ಮತವನ್ನು ಪಡೆದು ವಿಜಯಿಯಾಗಿದೆ. ತನ್ನ ಭರ್ಜರಿ ವಿಜಯದ ನಂತರ ಜಸಿಂಡಾ ಮತ್ತೇ ಸುದ್ದಿಯಲ್ಲಿದ್ದು, ದೇಶದ ಮಂತ್ರಿ ಮಂಡಲ ರಚನೆಯಲ್ಲಿ ವೈವಿಧ್ಯತೆಯನ್ನು ತೋರಿದ್ದು ವಿಶ್ವದಾದ್ಯಂತ ಜನರ ಮನಸ್ಸನ್ನು ಗೆದ್ದಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರ ಹೊಸ ಮಂತ್ರಿಗಳ ಸಾಲಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ:

  • ಮಾಜಿ ಹಣಕಾಸು ಸಚಿವ ಗ್ರಾಂಟ್ ರಾಬರ್ಟ್ಸನ್ ಅವರನ್ನು ಉಪ ಪ್ರಧಾನ ಮಂತ್ರಿಯಾಗಿ ನೇಮಿಸಲಾಗಿದೆ. ಪ್ರತಿಷ್ಠಿತ ಸ್ಥಾನವನ್ನು ಅಲಂಕರಿಸಿದ ಮೊದಲ ಸಲಿಂಗ ವಿವಾಹಿತ ವ್ಯಕ್ತಿ ಇವರಾಗಿದ್ದಾರೆ.
ಗ್ರಾಂಟ್ ರಾಬರ್ಟ್ಸನ್ PC: labour.org.nz
  • ದೇಶದ ಹೊಸ ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ನ್ಯಾನಿಯಾ ಮಾಹುತಾ ಅವರನ್ನು ಆಯ್ಕೆ ಮಾಡಲಾಗಿದ್ದು, ಇವರು ಈ ಸ್ಥಾನವನ್ನು ಅಲಂಕರಿಸಿದ ಮೊದಲ ಮೂಲನಿವಾಸಿ ಮಹಿಳೆಯಾಗಿದ್ದಾರೆ. ಮಾವೋರಿ ಜನಾಂಗ ನ್ಯೂಜಿಲ್ಯಾಂಡಿನ ಮೂಲನಿವಾಸಿಗಳಾಗಿದ್ದು, ಯುರೋಪಿಯನ್ನರ ಆಕ್ರಮಣಕ್ಕೆ ಒಳಗಾಗಿ ತಮ್ಮ ಅಸ್ತಿತ್ವವವನ್ನೇ ಕಳೆದುಕೊಂಡಿದ್ದರು. ಈ ಜನಾಂಗದ ಸ್ತ್ರೀಯರು ತಮ್ಮ ಗದ್ದದ ಮೇಲೆ ’ಮೋಕೋ ಕೌಯ’ ಎಂದು ಕರೆಯಲ್ಪಡುವ ಹಚ್ಚೆಯನ್ನು ಹಾಕಿಕೊಳ್ಳುತ್ತಾರೆ.
ನ್ಯಾನಿಯಾ ಮಾಹುತಾ PC: Hagen Hopkins/Getty Images

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

  • ದೇಶದ ಹೊಸ ಸಚಿವ ಸಂಪುಟದಲ್ಲಿ ಮಹಿಳೆಯರು 50% ದಷ್ಟಿದ್ದಾರೆ. ಈ ಅಂಕಿ ಅಂಶವು ಜಾಗತಿಕ ಸರಾಸರಿ ಶೇಕಡಾ 25 ಕ್ಕಿಂತ ಹೆಚ್ಚಾಗಿದೆ.
  • ನ್ಯೂಜಿಲ್ಯಾಂಡ್ ಸದನದಲ್ಲಿ 10% ಸದಸ್ಯರು ತಾವು ಎಲ್ಜಿಬಿಟಿಕ್(LGBTQ) ಸಮುದಾಯಕ್ಕೆ ಸೇರಿದವರು ಎಂದು ಬಹಿರಂಗವಾಗಿ ಘೋಷಿಸಿದವರಾಗಿದ್ದಾರೆ.
  • ಕೇರಳ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರನ್ನು ನ್ಯೂಜಿಲೆಂಡ್‌ನ ಮೊದಲ ಭಾರತೀಯ ಮೂಲದ ಮಂತ್ರಿಯಾಗಿ ನೇಮಕ ಮಾಡಲಾಗಿದೆ. ಅವರು ಈ ಕೆಳಗಿನ ಖಾತೆಗಳನ್ನು ನಿರ್ವಹಿಸುತ್ತಾರೆ: ವೈವಿಧ್ಯತೆ ಸಚಿವೆ, ಸೇರ್ಪಡೆ ಮತ್ತು ಜನಾಂಗೀಯ ಸಮುದಾಯಗಳ ಸಚಿವೆ, ಸಮುದಾಯ ಮತ್ತು ಸ್ವಯಂಪ್ರೇರಿತ ವಲಯದ ಸಚಿವೆ ಮತ್ತು ಸಾಮಾಜಿಕ ಅಭಿವೃದ್ಧಿ ಮತ್ತು ಉದ್ಯೋಗದ ಸಹಾಯಕ ಸಚಿವೆ.
ಪ್ರಿಯಾಂಕಾ ರಾಧಾಕೃಷ್ಣನ್  PC: Priyanka Radhakrishnan Camp / Facebook

ಇದನ್ನು ಓದಿ: ಹಾಡಬೇಕು ಕರಾಳತೆಯ ಬಗ್ಗೆಯೇ ಹಾಡುಗಳನ್ನು

  • ಸಂಸತ್ತಿನ ಹೊಸ ಸದಸ್ಯೆ ಮತ್ತು ಸಾಂಕ್ರಾಮಿಕ ರೋಗ ವೈದ್ಯರಾದ ಆಯೆಷಾ ವೆರಾಲ್ ಅವರನ್ನು ನೇರವಾಗಿ ಸಚಿವ ಸಂಪುಟಕ್ಕೆ ಕರೆತರಲಾಗಿದೆ. ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಡಲು ಪ್ರಧಾನಿಯ ವೈಜ್ಞಾನಿಕ ಸಲಹೆಗಾರಾಗಿ ಅವರು ಸೇವೆ ಸಲ್ಲಿಸಿದ್ದರು.
ಆಯೆಷಾ ವೆರಾಲ್  PC: labour.org.nz
  • ಮಾಜಿ ಆರೋಗ್ಯ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಹೊಸ ಸಚಿವ ಸಂಪುಟದಲ್ಲಿ ಕೊರೊನಾ ನಿಯಂತ್ರಿಸುವ ಹುದ್ದೆಯ ಸಚಿವ ಸ್ಥಾನವನ್ನು ವಹಿಸಿಕೊಂಡಿದ್ದಾರೆ.
  • ಜಸಿಂಡಾ ಎರಡು ಗ್ರೀನ್ ಪಾರ್ಟಿ ಶಾಸಕರನ್ನು ಸಚಿವ ಸಂಪುಟದ ಹೊರಗಿನ ಸಚಿವಾಲಯಗಳಿಗೆ ನೇಮಕ ಮಾಡಿದ್ದಾರೆ.
  • ಒಟ್ಟು 20 ಸದಸ್ಯರಿಂದ ರಚಿಸಲಾದ ಸಂಪುಟದಲ್ಲಿ ಐದು ಮಾವೋರಿ ಮತ್ತು ಮೂವರು ಪಾಸಿಫಿಕಾ ಸಂಸದರು ಸೇರಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...