Homeಅಂತರಾಷ್ಟ್ರೀಯಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ವೈವಿಧ್ಯತೆಯಿಂದ ಕೂಡಿದ ಪ್ರಧಾನಿ ಜಸಿಂಡಾ ಅವರ ಹೊಸ ಮಂತ್ರಿ ಮಂಡಲದ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಿಷಯಗಳು ಇಲ್ಲಿವೆ

- Advertisement -
- Advertisement -

ನ್ಯೂಜಿಲೆಂಡ್‌ನ ಅತ್ಯಂತ ಕಿರಿಯ ಪ್ರಧಾನ ಮಂತ್ರಿ ಆಗಿದ್ದ ಜಸಿಂಡಾ ಅರ್ಡೆರ್ನ್ ಕಳೆದ ತಿಂಗಳು ಎರಡನೇ ಬಾರಿಗೆ ದೇಶದ ಪ್ರಧಾನಿ ಗದ್ದುಗೆಗೆ ಏರಿದ್ದಾರೆ. ಜಸಿಂಡಾ ಅವರ ಎಡಪಂಥೀಯ ಲೇಬರ್ ಪಕ್ಷವು ಚುನಾವಣೆಯಲ್ಲಿ ಚಲಾವಣೆಯಾದ 87% ದಷ್ಟು ಮತಗಳಲ್ಲಿ 48.9% ಮತವನ್ನು ಪಡೆದು ವಿಜಯಿಯಾಗಿದೆ. ತನ್ನ ಭರ್ಜರಿ ವಿಜಯದ ನಂತರ ಜಸಿಂಡಾ ಮತ್ತೇ ಸುದ್ದಿಯಲ್ಲಿದ್ದು, ದೇಶದ ಮಂತ್ರಿ ಮಂಡಲ ರಚನೆಯಲ್ಲಿ ವೈವಿಧ್ಯತೆಯನ್ನು ತೋರಿದ್ದು ವಿಶ್ವದಾದ್ಯಂತ ಜನರ ಮನಸ್ಸನ್ನು ಗೆದ್ದಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರ ಹೊಸ ಮಂತ್ರಿಗಳ ಸಾಲಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ:

  • ಮಾಜಿ ಹಣಕಾಸು ಸಚಿವ ಗ್ರಾಂಟ್ ರಾಬರ್ಟ್ಸನ್ ಅವರನ್ನು ಉಪ ಪ್ರಧಾನ ಮಂತ್ರಿಯಾಗಿ ನೇಮಿಸಲಾಗಿದೆ. ಪ್ರತಿಷ್ಠಿತ ಸ್ಥಾನವನ್ನು ಅಲಂಕರಿಸಿದ ಮೊದಲ ಸಲಿಂಗ ವಿವಾಹಿತ ವ್ಯಕ್ತಿ ಇವರಾಗಿದ್ದಾರೆ.
ಗ್ರಾಂಟ್ ರಾಬರ್ಟ್ಸನ್ PC: labour.org.nz
  • ದೇಶದ ಹೊಸ ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ನ್ಯಾನಿಯಾ ಮಾಹುತಾ ಅವರನ್ನು ಆಯ್ಕೆ ಮಾಡಲಾಗಿದ್ದು, ಇವರು ಈ ಸ್ಥಾನವನ್ನು ಅಲಂಕರಿಸಿದ ಮೊದಲ ಮೂಲನಿವಾಸಿ ಮಹಿಳೆಯಾಗಿದ್ದಾರೆ. ಮಾವೋರಿ ಜನಾಂಗ ನ್ಯೂಜಿಲ್ಯಾಂಡಿನ ಮೂಲನಿವಾಸಿಗಳಾಗಿದ್ದು, ಯುರೋಪಿಯನ್ನರ ಆಕ್ರಮಣಕ್ಕೆ ಒಳಗಾಗಿ ತಮ್ಮ ಅಸ್ತಿತ್ವವವನ್ನೇ ಕಳೆದುಕೊಂಡಿದ್ದರು. ಈ ಜನಾಂಗದ ಸ್ತ್ರೀಯರು ತಮ್ಮ ಗದ್ದದ ಮೇಲೆ ’ಮೋಕೋ ಕೌಯ’ ಎಂದು ಕರೆಯಲ್ಪಡುವ ಹಚ್ಚೆಯನ್ನು ಹಾಕಿಕೊಳ್ಳುತ್ತಾರೆ.
ನ್ಯಾನಿಯಾ ಮಾಹುತಾ PC: Hagen Hopkins/Getty Images

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

  • ದೇಶದ ಹೊಸ ಸಚಿವ ಸಂಪುಟದಲ್ಲಿ ಮಹಿಳೆಯರು 50% ದಷ್ಟಿದ್ದಾರೆ. ಈ ಅಂಕಿ ಅಂಶವು ಜಾಗತಿಕ ಸರಾಸರಿ ಶೇಕಡಾ 25 ಕ್ಕಿಂತ ಹೆಚ್ಚಾಗಿದೆ.
  • ನ್ಯೂಜಿಲ್ಯಾಂಡ್ ಸದನದಲ್ಲಿ 10% ಸದಸ್ಯರು ತಾವು ಎಲ್ಜಿಬಿಟಿಕ್(LGBTQ) ಸಮುದಾಯಕ್ಕೆ ಸೇರಿದವರು ಎಂದು ಬಹಿರಂಗವಾಗಿ ಘೋಷಿಸಿದವರಾಗಿದ್ದಾರೆ.
  • ಕೇರಳ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರನ್ನು ನ್ಯೂಜಿಲೆಂಡ್‌ನ ಮೊದಲ ಭಾರತೀಯ ಮೂಲದ ಮಂತ್ರಿಯಾಗಿ ನೇಮಕ ಮಾಡಲಾಗಿದೆ. ಅವರು ಈ ಕೆಳಗಿನ ಖಾತೆಗಳನ್ನು ನಿರ್ವಹಿಸುತ್ತಾರೆ: ವೈವಿಧ್ಯತೆ ಸಚಿವೆ, ಸೇರ್ಪಡೆ ಮತ್ತು ಜನಾಂಗೀಯ ಸಮುದಾಯಗಳ ಸಚಿವೆ, ಸಮುದಾಯ ಮತ್ತು ಸ್ವಯಂಪ್ರೇರಿತ ವಲಯದ ಸಚಿವೆ ಮತ್ತು ಸಾಮಾಜಿಕ ಅಭಿವೃದ್ಧಿ ಮತ್ತು ಉದ್ಯೋಗದ ಸಹಾಯಕ ಸಚಿವೆ.
ಪ್ರಿಯಾಂಕಾ ರಾಧಾಕೃಷ್ಣನ್  PC: Priyanka Radhakrishnan Camp / Facebook

ಇದನ್ನು ಓದಿ: ಹಾಡಬೇಕು ಕರಾಳತೆಯ ಬಗ್ಗೆಯೇ ಹಾಡುಗಳನ್ನು

  • ಸಂಸತ್ತಿನ ಹೊಸ ಸದಸ್ಯೆ ಮತ್ತು ಸಾಂಕ್ರಾಮಿಕ ರೋಗ ವೈದ್ಯರಾದ ಆಯೆಷಾ ವೆರಾಲ್ ಅವರನ್ನು ನೇರವಾಗಿ ಸಚಿವ ಸಂಪುಟಕ್ಕೆ ಕರೆತರಲಾಗಿದೆ. ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಡಲು ಪ್ರಧಾನಿಯ ವೈಜ್ಞಾನಿಕ ಸಲಹೆಗಾರಾಗಿ ಅವರು ಸೇವೆ ಸಲ್ಲಿಸಿದ್ದರು.
ಆಯೆಷಾ ವೆರಾಲ್  PC: labour.org.nz
  • ಮಾಜಿ ಆರೋಗ್ಯ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಹೊಸ ಸಚಿವ ಸಂಪುಟದಲ್ಲಿ ಕೊರೊನಾ ನಿಯಂತ್ರಿಸುವ ಹುದ್ದೆಯ ಸಚಿವ ಸ್ಥಾನವನ್ನು ವಹಿಸಿಕೊಂಡಿದ್ದಾರೆ.
  • ಜಸಿಂಡಾ ಎರಡು ಗ್ರೀನ್ ಪಾರ್ಟಿ ಶಾಸಕರನ್ನು ಸಚಿವ ಸಂಪುಟದ ಹೊರಗಿನ ಸಚಿವಾಲಯಗಳಿಗೆ ನೇಮಕ ಮಾಡಿದ್ದಾರೆ.
  • ಒಟ್ಟು 20 ಸದಸ್ಯರಿಂದ ರಚಿಸಲಾದ ಸಂಪುಟದಲ್ಲಿ ಐದು ಮಾವೋರಿ ಮತ್ತು ಮೂವರು ಪಾಸಿಫಿಕಾ ಸಂಸದರು ಸೇರಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...