Homeಅಂತರಾಷ್ಟ್ರೀಯಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ವೈವಿಧ್ಯತೆಯಿಂದ ಕೂಡಿದ ಪ್ರಧಾನಿ ಜಸಿಂಡಾ ಅವರ ಹೊಸ ಮಂತ್ರಿ ಮಂಡಲದ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಿಷಯಗಳು ಇಲ್ಲಿವೆ

- Advertisement -
- Advertisement -

ನ್ಯೂಜಿಲೆಂಡ್‌ನ ಅತ್ಯಂತ ಕಿರಿಯ ಪ್ರಧಾನ ಮಂತ್ರಿ ಆಗಿದ್ದ ಜಸಿಂಡಾ ಅರ್ಡೆರ್ನ್ ಕಳೆದ ತಿಂಗಳು ಎರಡನೇ ಬಾರಿಗೆ ದೇಶದ ಪ್ರಧಾನಿ ಗದ್ದುಗೆಗೆ ಏರಿದ್ದಾರೆ. ಜಸಿಂಡಾ ಅವರ ಎಡಪಂಥೀಯ ಲೇಬರ್ ಪಕ್ಷವು ಚುನಾವಣೆಯಲ್ಲಿ ಚಲಾವಣೆಯಾದ 87% ದಷ್ಟು ಮತಗಳಲ್ಲಿ 48.9% ಮತವನ್ನು ಪಡೆದು ವಿಜಯಿಯಾಗಿದೆ. ತನ್ನ ಭರ್ಜರಿ ವಿಜಯದ ನಂತರ ಜಸಿಂಡಾ ಮತ್ತೇ ಸುದ್ದಿಯಲ್ಲಿದ್ದು, ದೇಶದ ಮಂತ್ರಿ ಮಂಡಲ ರಚನೆಯಲ್ಲಿ ವೈವಿಧ್ಯತೆಯನ್ನು ತೋರಿದ್ದು ವಿಶ್ವದಾದ್ಯಂತ ಜನರ ಮನಸ್ಸನ್ನು ಗೆದ್ದಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರ ಹೊಸ ಮಂತ್ರಿಗಳ ಸಾಲಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ:

  • ಮಾಜಿ ಹಣಕಾಸು ಸಚಿವ ಗ್ರಾಂಟ್ ರಾಬರ್ಟ್ಸನ್ ಅವರನ್ನು ಉಪ ಪ್ರಧಾನ ಮಂತ್ರಿಯಾಗಿ ನೇಮಿಸಲಾಗಿದೆ. ಪ್ರತಿಷ್ಠಿತ ಸ್ಥಾನವನ್ನು ಅಲಂಕರಿಸಿದ ಮೊದಲ ಸಲಿಂಗ ವಿವಾಹಿತ ವ್ಯಕ್ತಿ ಇವರಾಗಿದ್ದಾರೆ.
ಗ್ರಾಂಟ್ ರಾಬರ್ಟ್ಸನ್ PC: labour.org.nz
  • ದೇಶದ ಹೊಸ ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ನ್ಯಾನಿಯಾ ಮಾಹುತಾ ಅವರನ್ನು ಆಯ್ಕೆ ಮಾಡಲಾಗಿದ್ದು, ಇವರು ಈ ಸ್ಥಾನವನ್ನು ಅಲಂಕರಿಸಿದ ಮೊದಲ ಮೂಲನಿವಾಸಿ ಮಹಿಳೆಯಾಗಿದ್ದಾರೆ. ಮಾವೋರಿ ಜನಾಂಗ ನ್ಯೂಜಿಲ್ಯಾಂಡಿನ ಮೂಲನಿವಾಸಿಗಳಾಗಿದ್ದು, ಯುರೋಪಿಯನ್ನರ ಆಕ್ರಮಣಕ್ಕೆ ಒಳಗಾಗಿ ತಮ್ಮ ಅಸ್ತಿತ್ವವವನ್ನೇ ಕಳೆದುಕೊಂಡಿದ್ದರು. ಈ ಜನಾಂಗದ ಸ್ತ್ರೀಯರು ತಮ್ಮ ಗದ್ದದ ಮೇಲೆ ’ಮೋಕೋ ಕೌಯ’ ಎಂದು ಕರೆಯಲ್ಪಡುವ ಹಚ್ಚೆಯನ್ನು ಹಾಕಿಕೊಳ್ಳುತ್ತಾರೆ.
ನ್ಯಾನಿಯಾ ಮಾಹುತಾ PC: Hagen Hopkins/Getty Images

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

  • ದೇಶದ ಹೊಸ ಸಚಿವ ಸಂಪುಟದಲ್ಲಿ ಮಹಿಳೆಯರು 50% ದಷ್ಟಿದ್ದಾರೆ. ಈ ಅಂಕಿ ಅಂಶವು ಜಾಗತಿಕ ಸರಾಸರಿ ಶೇಕಡಾ 25 ಕ್ಕಿಂತ ಹೆಚ್ಚಾಗಿದೆ.
  • ನ್ಯೂಜಿಲ್ಯಾಂಡ್ ಸದನದಲ್ಲಿ 10% ಸದಸ್ಯರು ತಾವು ಎಲ್ಜಿಬಿಟಿಕ್(LGBTQ) ಸಮುದಾಯಕ್ಕೆ ಸೇರಿದವರು ಎಂದು ಬಹಿರಂಗವಾಗಿ ಘೋಷಿಸಿದವರಾಗಿದ್ದಾರೆ.
  • ಕೇರಳ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರನ್ನು ನ್ಯೂಜಿಲೆಂಡ್‌ನ ಮೊದಲ ಭಾರತೀಯ ಮೂಲದ ಮಂತ್ರಿಯಾಗಿ ನೇಮಕ ಮಾಡಲಾಗಿದೆ. ಅವರು ಈ ಕೆಳಗಿನ ಖಾತೆಗಳನ್ನು ನಿರ್ವಹಿಸುತ್ತಾರೆ: ವೈವಿಧ್ಯತೆ ಸಚಿವೆ, ಸೇರ್ಪಡೆ ಮತ್ತು ಜನಾಂಗೀಯ ಸಮುದಾಯಗಳ ಸಚಿವೆ, ಸಮುದಾಯ ಮತ್ತು ಸ್ವಯಂಪ್ರೇರಿತ ವಲಯದ ಸಚಿವೆ ಮತ್ತು ಸಾಮಾಜಿಕ ಅಭಿವೃದ್ಧಿ ಮತ್ತು ಉದ್ಯೋಗದ ಸಹಾಯಕ ಸಚಿವೆ.
ಪ್ರಿಯಾಂಕಾ ರಾಧಾಕೃಷ್ಣನ್  PC: Priyanka Radhakrishnan Camp / Facebook

ಇದನ್ನು ಓದಿ: ಹಾಡಬೇಕು ಕರಾಳತೆಯ ಬಗ್ಗೆಯೇ ಹಾಡುಗಳನ್ನು

  • ಸಂಸತ್ತಿನ ಹೊಸ ಸದಸ್ಯೆ ಮತ್ತು ಸಾಂಕ್ರಾಮಿಕ ರೋಗ ವೈದ್ಯರಾದ ಆಯೆಷಾ ವೆರಾಲ್ ಅವರನ್ನು ನೇರವಾಗಿ ಸಚಿವ ಸಂಪುಟಕ್ಕೆ ಕರೆತರಲಾಗಿದೆ. ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಡಲು ಪ್ರಧಾನಿಯ ವೈಜ್ಞಾನಿಕ ಸಲಹೆಗಾರಾಗಿ ಅವರು ಸೇವೆ ಸಲ್ಲಿಸಿದ್ದರು.
ಆಯೆಷಾ ವೆರಾಲ್  PC: labour.org.nz
  • ಮಾಜಿ ಆರೋಗ್ಯ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಹೊಸ ಸಚಿವ ಸಂಪುಟದಲ್ಲಿ ಕೊರೊನಾ ನಿಯಂತ್ರಿಸುವ ಹುದ್ದೆಯ ಸಚಿವ ಸ್ಥಾನವನ್ನು ವಹಿಸಿಕೊಂಡಿದ್ದಾರೆ.
  • ಜಸಿಂಡಾ ಎರಡು ಗ್ರೀನ್ ಪಾರ್ಟಿ ಶಾಸಕರನ್ನು ಸಚಿವ ಸಂಪುಟದ ಹೊರಗಿನ ಸಚಿವಾಲಯಗಳಿಗೆ ನೇಮಕ ಮಾಡಿದ್ದಾರೆ.
  • ಒಟ್ಟು 20 ಸದಸ್ಯರಿಂದ ರಚಿಸಲಾದ ಸಂಪುಟದಲ್ಲಿ ಐದು ಮಾವೋರಿ ಮತ್ತು ಮೂವರು ಪಾಸಿಫಿಕಾ ಸಂಸದರು ಸೇರಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...