Homeಅಂತರಾಷ್ಟ್ರೀಯಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ವೈವಿಧ್ಯತೆಯಿಂದ ಕೂಡಿದ ಪ್ರಧಾನಿ ಜಸಿಂಡಾ ಅವರ ಹೊಸ ಮಂತ್ರಿ ಮಂಡಲದ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಿಷಯಗಳು ಇಲ್ಲಿವೆ

- Advertisement -
- Advertisement -

ನ್ಯೂಜಿಲೆಂಡ್‌ನ ಅತ್ಯಂತ ಕಿರಿಯ ಪ್ರಧಾನ ಮಂತ್ರಿ ಆಗಿದ್ದ ಜಸಿಂಡಾ ಅರ್ಡೆರ್ನ್ ಕಳೆದ ತಿಂಗಳು ಎರಡನೇ ಬಾರಿಗೆ ದೇಶದ ಪ್ರಧಾನಿ ಗದ್ದುಗೆಗೆ ಏರಿದ್ದಾರೆ. ಜಸಿಂಡಾ ಅವರ ಎಡಪಂಥೀಯ ಲೇಬರ್ ಪಕ್ಷವು ಚುನಾವಣೆಯಲ್ಲಿ ಚಲಾವಣೆಯಾದ 87% ದಷ್ಟು ಮತಗಳಲ್ಲಿ 48.9% ಮತವನ್ನು ಪಡೆದು ವಿಜಯಿಯಾಗಿದೆ. ತನ್ನ ಭರ್ಜರಿ ವಿಜಯದ ನಂತರ ಜಸಿಂಡಾ ಮತ್ತೇ ಸುದ್ದಿಯಲ್ಲಿದ್ದು, ದೇಶದ ಮಂತ್ರಿ ಮಂಡಲ ರಚನೆಯಲ್ಲಿ ವೈವಿಧ್ಯತೆಯನ್ನು ತೋರಿದ್ದು ವಿಶ್ವದಾದ್ಯಂತ ಜನರ ಮನಸ್ಸನ್ನು ಗೆದ್ದಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರ ಹೊಸ ಮಂತ್ರಿಗಳ ಸಾಲಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ:

  • ಮಾಜಿ ಹಣಕಾಸು ಸಚಿವ ಗ್ರಾಂಟ್ ರಾಬರ್ಟ್ಸನ್ ಅವರನ್ನು ಉಪ ಪ್ರಧಾನ ಮಂತ್ರಿಯಾಗಿ ನೇಮಿಸಲಾಗಿದೆ. ಪ್ರತಿಷ್ಠಿತ ಸ್ಥಾನವನ್ನು ಅಲಂಕರಿಸಿದ ಮೊದಲ ಸಲಿಂಗ ವಿವಾಹಿತ ವ್ಯಕ್ತಿ ಇವರಾಗಿದ್ದಾರೆ.
ಗ್ರಾಂಟ್ ರಾಬರ್ಟ್ಸನ್ PC: labour.org.nz
  • ದೇಶದ ಹೊಸ ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ನ್ಯಾನಿಯಾ ಮಾಹುತಾ ಅವರನ್ನು ಆಯ್ಕೆ ಮಾಡಲಾಗಿದ್ದು, ಇವರು ಈ ಸ್ಥಾನವನ್ನು ಅಲಂಕರಿಸಿದ ಮೊದಲ ಮೂಲನಿವಾಸಿ ಮಹಿಳೆಯಾಗಿದ್ದಾರೆ. ಮಾವೋರಿ ಜನಾಂಗ ನ್ಯೂಜಿಲ್ಯಾಂಡಿನ ಮೂಲನಿವಾಸಿಗಳಾಗಿದ್ದು, ಯುರೋಪಿಯನ್ನರ ಆಕ್ರಮಣಕ್ಕೆ ಒಳಗಾಗಿ ತಮ್ಮ ಅಸ್ತಿತ್ವವವನ್ನೇ ಕಳೆದುಕೊಂಡಿದ್ದರು. ಈ ಜನಾಂಗದ ಸ್ತ್ರೀಯರು ತಮ್ಮ ಗದ್ದದ ಮೇಲೆ ’ಮೋಕೋ ಕೌಯ’ ಎಂದು ಕರೆಯಲ್ಪಡುವ ಹಚ್ಚೆಯನ್ನು ಹಾಕಿಕೊಳ್ಳುತ್ತಾರೆ.
ನ್ಯಾನಿಯಾ ಮಾಹುತಾ PC: Hagen Hopkins/Getty Images

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

  • ದೇಶದ ಹೊಸ ಸಚಿವ ಸಂಪುಟದಲ್ಲಿ ಮಹಿಳೆಯರು 50% ದಷ್ಟಿದ್ದಾರೆ. ಈ ಅಂಕಿ ಅಂಶವು ಜಾಗತಿಕ ಸರಾಸರಿ ಶೇಕಡಾ 25 ಕ್ಕಿಂತ ಹೆಚ್ಚಾಗಿದೆ.
  • ನ್ಯೂಜಿಲ್ಯಾಂಡ್ ಸದನದಲ್ಲಿ 10% ಸದಸ್ಯರು ತಾವು ಎಲ್ಜಿಬಿಟಿಕ್(LGBTQ) ಸಮುದಾಯಕ್ಕೆ ಸೇರಿದವರು ಎಂದು ಬಹಿರಂಗವಾಗಿ ಘೋಷಿಸಿದವರಾಗಿದ್ದಾರೆ.
  • ಕೇರಳ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರನ್ನು ನ್ಯೂಜಿಲೆಂಡ್‌ನ ಮೊದಲ ಭಾರತೀಯ ಮೂಲದ ಮಂತ್ರಿಯಾಗಿ ನೇಮಕ ಮಾಡಲಾಗಿದೆ. ಅವರು ಈ ಕೆಳಗಿನ ಖಾತೆಗಳನ್ನು ನಿರ್ವಹಿಸುತ್ತಾರೆ: ವೈವಿಧ್ಯತೆ ಸಚಿವೆ, ಸೇರ್ಪಡೆ ಮತ್ತು ಜನಾಂಗೀಯ ಸಮುದಾಯಗಳ ಸಚಿವೆ, ಸಮುದಾಯ ಮತ್ತು ಸ್ವಯಂಪ್ರೇರಿತ ವಲಯದ ಸಚಿವೆ ಮತ್ತು ಸಾಮಾಜಿಕ ಅಭಿವೃದ್ಧಿ ಮತ್ತು ಉದ್ಯೋಗದ ಸಹಾಯಕ ಸಚಿವೆ.
ಪ್ರಿಯಾಂಕಾ ರಾಧಾಕೃಷ್ಣನ್  PC: Priyanka Radhakrishnan Camp / Facebook

ಇದನ್ನು ಓದಿ: ಹಾಡಬೇಕು ಕರಾಳತೆಯ ಬಗ್ಗೆಯೇ ಹಾಡುಗಳನ್ನು

  • ಸಂಸತ್ತಿನ ಹೊಸ ಸದಸ್ಯೆ ಮತ್ತು ಸಾಂಕ್ರಾಮಿಕ ರೋಗ ವೈದ್ಯರಾದ ಆಯೆಷಾ ವೆರಾಲ್ ಅವರನ್ನು ನೇರವಾಗಿ ಸಚಿವ ಸಂಪುಟಕ್ಕೆ ಕರೆತರಲಾಗಿದೆ. ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಡಲು ಪ್ರಧಾನಿಯ ವೈಜ್ಞಾನಿಕ ಸಲಹೆಗಾರಾಗಿ ಅವರು ಸೇವೆ ಸಲ್ಲಿಸಿದ್ದರು.
ಆಯೆಷಾ ವೆರಾಲ್  PC: labour.org.nz
  • ಮಾಜಿ ಆರೋಗ್ಯ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಹೊಸ ಸಚಿವ ಸಂಪುಟದಲ್ಲಿ ಕೊರೊನಾ ನಿಯಂತ್ರಿಸುವ ಹುದ್ದೆಯ ಸಚಿವ ಸ್ಥಾನವನ್ನು ವಹಿಸಿಕೊಂಡಿದ್ದಾರೆ.
  • ಜಸಿಂಡಾ ಎರಡು ಗ್ರೀನ್ ಪಾರ್ಟಿ ಶಾಸಕರನ್ನು ಸಚಿವ ಸಂಪುಟದ ಹೊರಗಿನ ಸಚಿವಾಲಯಗಳಿಗೆ ನೇಮಕ ಮಾಡಿದ್ದಾರೆ.
  • ಒಟ್ಟು 20 ಸದಸ್ಯರಿಂದ ರಚಿಸಲಾದ ಸಂಪುಟದಲ್ಲಿ ಐದು ಮಾವೋರಿ ಮತ್ತು ಮೂವರು ಪಾಸಿಫಿಕಾ ಸಂಸದರು ಸೇರಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...