Homeಅಂತರಾಷ್ಟ್ರೀಯಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ವೈವಿಧ್ಯತೆಯಿಂದ ಕೂಡಿದ ಪ್ರಧಾನಿ ಜಸಿಂಡಾ ಅವರ ಹೊಸ ಮಂತ್ರಿ ಮಂಡಲದ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಿಷಯಗಳು ಇಲ್ಲಿವೆ

- Advertisement -
- Advertisement -

ನ್ಯೂಜಿಲೆಂಡ್‌ನ ಅತ್ಯಂತ ಕಿರಿಯ ಪ್ರಧಾನ ಮಂತ್ರಿ ಆಗಿದ್ದ ಜಸಿಂಡಾ ಅರ್ಡೆರ್ನ್ ಕಳೆದ ತಿಂಗಳು ಎರಡನೇ ಬಾರಿಗೆ ದೇಶದ ಪ್ರಧಾನಿ ಗದ್ದುಗೆಗೆ ಏರಿದ್ದಾರೆ. ಜಸಿಂಡಾ ಅವರ ಎಡಪಂಥೀಯ ಲೇಬರ್ ಪಕ್ಷವು ಚುನಾವಣೆಯಲ್ಲಿ ಚಲಾವಣೆಯಾದ 87% ದಷ್ಟು ಮತಗಳಲ್ಲಿ 48.9% ಮತವನ್ನು ಪಡೆದು ವಿಜಯಿಯಾಗಿದೆ. ತನ್ನ ಭರ್ಜರಿ ವಿಜಯದ ನಂತರ ಜಸಿಂಡಾ ಮತ್ತೇ ಸುದ್ದಿಯಲ್ಲಿದ್ದು, ದೇಶದ ಮಂತ್ರಿ ಮಂಡಲ ರಚನೆಯಲ್ಲಿ ವೈವಿಧ್ಯತೆಯನ್ನು ತೋರಿದ್ದು ವಿಶ್ವದಾದ್ಯಂತ ಜನರ ಮನಸ್ಸನ್ನು ಗೆದ್ದಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರ ಹೊಸ ಮಂತ್ರಿಗಳ ಸಾಲಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ:

  • ಮಾಜಿ ಹಣಕಾಸು ಸಚಿವ ಗ್ರಾಂಟ್ ರಾಬರ್ಟ್ಸನ್ ಅವರನ್ನು ಉಪ ಪ್ರಧಾನ ಮಂತ್ರಿಯಾಗಿ ನೇಮಿಸಲಾಗಿದೆ. ಪ್ರತಿಷ್ಠಿತ ಸ್ಥಾನವನ್ನು ಅಲಂಕರಿಸಿದ ಮೊದಲ ಸಲಿಂಗ ವಿವಾಹಿತ ವ್ಯಕ್ತಿ ಇವರಾಗಿದ್ದಾರೆ.
ಗ್ರಾಂಟ್ ರಾಬರ್ಟ್ಸನ್ PC: labour.org.nz
  • ದೇಶದ ಹೊಸ ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ನ್ಯಾನಿಯಾ ಮಾಹುತಾ ಅವರನ್ನು ಆಯ್ಕೆ ಮಾಡಲಾಗಿದ್ದು, ಇವರು ಈ ಸ್ಥಾನವನ್ನು ಅಲಂಕರಿಸಿದ ಮೊದಲ ಮೂಲನಿವಾಸಿ ಮಹಿಳೆಯಾಗಿದ್ದಾರೆ. ಮಾವೋರಿ ಜನಾಂಗ ನ್ಯೂಜಿಲ್ಯಾಂಡಿನ ಮೂಲನಿವಾಸಿಗಳಾಗಿದ್ದು, ಯುರೋಪಿಯನ್ನರ ಆಕ್ರಮಣಕ್ಕೆ ಒಳಗಾಗಿ ತಮ್ಮ ಅಸ್ತಿತ್ವವವನ್ನೇ ಕಳೆದುಕೊಂಡಿದ್ದರು. ಈ ಜನಾಂಗದ ಸ್ತ್ರೀಯರು ತಮ್ಮ ಗದ್ದದ ಮೇಲೆ ’ಮೋಕೋ ಕೌಯ’ ಎಂದು ಕರೆಯಲ್ಪಡುವ ಹಚ್ಚೆಯನ್ನು ಹಾಕಿಕೊಳ್ಳುತ್ತಾರೆ.
ನ್ಯಾನಿಯಾ ಮಾಹುತಾ PC: Hagen Hopkins/Getty Images

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

  • ದೇಶದ ಹೊಸ ಸಚಿವ ಸಂಪುಟದಲ್ಲಿ ಮಹಿಳೆಯರು 50% ದಷ್ಟಿದ್ದಾರೆ. ಈ ಅಂಕಿ ಅಂಶವು ಜಾಗತಿಕ ಸರಾಸರಿ ಶೇಕಡಾ 25 ಕ್ಕಿಂತ ಹೆಚ್ಚಾಗಿದೆ.
  • ನ್ಯೂಜಿಲ್ಯಾಂಡ್ ಸದನದಲ್ಲಿ 10% ಸದಸ್ಯರು ತಾವು ಎಲ್ಜಿಬಿಟಿಕ್(LGBTQ) ಸಮುದಾಯಕ್ಕೆ ಸೇರಿದವರು ಎಂದು ಬಹಿರಂಗವಾಗಿ ಘೋಷಿಸಿದವರಾಗಿದ್ದಾರೆ.
  • ಕೇರಳ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರನ್ನು ನ್ಯೂಜಿಲೆಂಡ್‌ನ ಮೊದಲ ಭಾರತೀಯ ಮೂಲದ ಮಂತ್ರಿಯಾಗಿ ನೇಮಕ ಮಾಡಲಾಗಿದೆ. ಅವರು ಈ ಕೆಳಗಿನ ಖಾತೆಗಳನ್ನು ನಿರ್ವಹಿಸುತ್ತಾರೆ: ವೈವಿಧ್ಯತೆ ಸಚಿವೆ, ಸೇರ್ಪಡೆ ಮತ್ತು ಜನಾಂಗೀಯ ಸಮುದಾಯಗಳ ಸಚಿವೆ, ಸಮುದಾಯ ಮತ್ತು ಸ್ವಯಂಪ್ರೇರಿತ ವಲಯದ ಸಚಿವೆ ಮತ್ತು ಸಾಮಾಜಿಕ ಅಭಿವೃದ್ಧಿ ಮತ್ತು ಉದ್ಯೋಗದ ಸಹಾಯಕ ಸಚಿವೆ.
ಪ್ರಿಯಾಂಕಾ ರಾಧಾಕೃಷ್ಣನ್  PC: Priyanka Radhakrishnan Camp / Facebook

ಇದನ್ನು ಓದಿ: ಹಾಡಬೇಕು ಕರಾಳತೆಯ ಬಗ್ಗೆಯೇ ಹಾಡುಗಳನ್ನು

  • ಸಂಸತ್ತಿನ ಹೊಸ ಸದಸ್ಯೆ ಮತ್ತು ಸಾಂಕ್ರಾಮಿಕ ರೋಗ ವೈದ್ಯರಾದ ಆಯೆಷಾ ವೆರಾಲ್ ಅವರನ್ನು ನೇರವಾಗಿ ಸಚಿವ ಸಂಪುಟಕ್ಕೆ ಕರೆತರಲಾಗಿದೆ. ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಡಲು ಪ್ರಧಾನಿಯ ವೈಜ್ಞಾನಿಕ ಸಲಹೆಗಾರಾಗಿ ಅವರು ಸೇವೆ ಸಲ್ಲಿಸಿದ್ದರು.
ಆಯೆಷಾ ವೆರಾಲ್  PC: labour.org.nz
  • ಮಾಜಿ ಆರೋಗ್ಯ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಹೊಸ ಸಚಿವ ಸಂಪುಟದಲ್ಲಿ ಕೊರೊನಾ ನಿಯಂತ್ರಿಸುವ ಹುದ್ದೆಯ ಸಚಿವ ಸ್ಥಾನವನ್ನು ವಹಿಸಿಕೊಂಡಿದ್ದಾರೆ.
  • ಜಸಿಂಡಾ ಎರಡು ಗ್ರೀನ್ ಪಾರ್ಟಿ ಶಾಸಕರನ್ನು ಸಚಿವ ಸಂಪುಟದ ಹೊರಗಿನ ಸಚಿವಾಲಯಗಳಿಗೆ ನೇಮಕ ಮಾಡಿದ್ದಾರೆ.
  • ಒಟ್ಟು 20 ಸದಸ್ಯರಿಂದ ರಚಿಸಲಾದ ಸಂಪುಟದಲ್ಲಿ ಐದು ಮಾವೋರಿ ಮತ್ತು ಮೂವರು ಪಾಸಿಫಿಕಾ ಸಂಸದರು ಸೇರಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...