Homeಅಂತರಾಷ್ಟ್ರೀಯಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ವೈವಿಧ್ಯತೆಯಿಂದ ಕೂಡಿದ ಪ್ರಧಾನಿ ಜಸಿಂಡಾ ಅವರ ಹೊಸ ಮಂತ್ರಿ ಮಂಡಲದ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಿಷಯಗಳು ಇಲ್ಲಿವೆ

- Advertisement -
- Advertisement -

ನ್ಯೂಜಿಲೆಂಡ್‌ನ ಅತ್ಯಂತ ಕಿರಿಯ ಪ್ರಧಾನ ಮಂತ್ರಿ ಆಗಿದ್ದ ಜಸಿಂಡಾ ಅರ್ಡೆರ್ನ್ ಕಳೆದ ತಿಂಗಳು ಎರಡನೇ ಬಾರಿಗೆ ದೇಶದ ಪ್ರಧಾನಿ ಗದ್ದುಗೆಗೆ ಏರಿದ್ದಾರೆ. ಜಸಿಂಡಾ ಅವರ ಎಡಪಂಥೀಯ ಲೇಬರ್ ಪಕ್ಷವು ಚುನಾವಣೆಯಲ್ಲಿ ಚಲಾವಣೆಯಾದ 87% ದಷ್ಟು ಮತಗಳಲ್ಲಿ 48.9% ಮತವನ್ನು ಪಡೆದು ವಿಜಯಿಯಾಗಿದೆ. ತನ್ನ ಭರ್ಜರಿ ವಿಜಯದ ನಂತರ ಜಸಿಂಡಾ ಮತ್ತೇ ಸುದ್ದಿಯಲ್ಲಿದ್ದು, ದೇಶದ ಮಂತ್ರಿ ಮಂಡಲ ರಚನೆಯಲ್ಲಿ ವೈವಿಧ್ಯತೆಯನ್ನು ತೋರಿದ್ದು ವಿಶ್ವದಾದ್ಯಂತ ಜನರ ಮನಸ್ಸನ್ನು ಗೆದ್ದಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರ ಹೊಸ ಮಂತ್ರಿಗಳ ಸಾಲಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ:

  • ಮಾಜಿ ಹಣಕಾಸು ಸಚಿವ ಗ್ರಾಂಟ್ ರಾಬರ್ಟ್ಸನ್ ಅವರನ್ನು ಉಪ ಪ್ರಧಾನ ಮಂತ್ರಿಯಾಗಿ ನೇಮಿಸಲಾಗಿದೆ. ಪ್ರತಿಷ್ಠಿತ ಸ್ಥಾನವನ್ನು ಅಲಂಕರಿಸಿದ ಮೊದಲ ಸಲಿಂಗ ವಿವಾಹಿತ ವ್ಯಕ್ತಿ ಇವರಾಗಿದ್ದಾರೆ.
ಗ್ರಾಂಟ್ ರಾಬರ್ಟ್ಸನ್ PC: labour.org.nz
  • ದೇಶದ ಹೊಸ ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ನ್ಯಾನಿಯಾ ಮಾಹುತಾ ಅವರನ್ನು ಆಯ್ಕೆ ಮಾಡಲಾಗಿದ್ದು, ಇವರು ಈ ಸ್ಥಾನವನ್ನು ಅಲಂಕರಿಸಿದ ಮೊದಲ ಮೂಲನಿವಾಸಿ ಮಹಿಳೆಯಾಗಿದ್ದಾರೆ. ಮಾವೋರಿ ಜನಾಂಗ ನ್ಯೂಜಿಲ್ಯಾಂಡಿನ ಮೂಲನಿವಾಸಿಗಳಾಗಿದ್ದು, ಯುರೋಪಿಯನ್ನರ ಆಕ್ರಮಣಕ್ಕೆ ಒಳಗಾಗಿ ತಮ್ಮ ಅಸ್ತಿತ್ವವವನ್ನೇ ಕಳೆದುಕೊಂಡಿದ್ದರು. ಈ ಜನಾಂಗದ ಸ್ತ್ರೀಯರು ತಮ್ಮ ಗದ್ದದ ಮೇಲೆ ’ಮೋಕೋ ಕೌಯ’ ಎಂದು ಕರೆಯಲ್ಪಡುವ ಹಚ್ಚೆಯನ್ನು ಹಾಕಿಕೊಳ್ಳುತ್ತಾರೆ.
ನ್ಯಾನಿಯಾ ಮಾಹುತಾ PC: Hagen Hopkins/Getty Images

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

  • ದೇಶದ ಹೊಸ ಸಚಿವ ಸಂಪುಟದಲ್ಲಿ ಮಹಿಳೆಯರು 50% ದಷ್ಟಿದ್ದಾರೆ. ಈ ಅಂಕಿ ಅಂಶವು ಜಾಗತಿಕ ಸರಾಸರಿ ಶೇಕಡಾ 25 ಕ್ಕಿಂತ ಹೆಚ್ಚಾಗಿದೆ.
  • ನ್ಯೂಜಿಲ್ಯಾಂಡ್ ಸದನದಲ್ಲಿ 10% ಸದಸ್ಯರು ತಾವು ಎಲ್ಜಿಬಿಟಿಕ್(LGBTQ) ಸಮುದಾಯಕ್ಕೆ ಸೇರಿದವರು ಎಂದು ಬಹಿರಂಗವಾಗಿ ಘೋಷಿಸಿದವರಾಗಿದ್ದಾರೆ.
  • ಕೇರಳ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರನ್ನು ನ್ಯೂಜಿಲೆಂಡ್‌ನ ಮೊದಲ ಭಾರತೀಯ ಮೂಲದ ಮಂತ್ರಿಯಾಗಿ ನೇಮಕ ಮಾಡಲಾಗಿದೆ. ಅವರು ಈ ಕೆಳಗಿನ ಖಾತೆಗಳನ್ನು ನಿರ್ವಹಿಸುತ್ತಾರೆ: ವೈವಿಧ್ಯತೆ ಸಚಿವೆ, ಸೇರ್ಪಡೆ ಮತ್ತು ಜನಾಂಗೀಯ ಸಮುದಾಯಗಳ ಸಚಿವೆ, ಸಮುದಾಯ ಮತ್ತು ಸ್ವಯಂಪ್ರೇರಿತ ವಲಯದ ಸಚಿವೆ ಮತ್ತು ಸಾಮಾಜಿಕ ಅಭಿವೃದ್ಧಿ ಮತ್ತು ಉದ್ಯೋಗದ ಸಹಾಯಕ ಸಚಿವೆ.
ಪ್ರಿಯಾಂಕಾ ರಾಧಾಕೃಷ್ಣನ್  PC: Priyanka Radhakrishnan Camp / Facebook

ಇದನ್ನು ಓದಿ: ಹಾಡಬೇಕು ಕರಾಳತೆಯ ಬಗ್ಗೆಯೇ ಹಾಡುಗಳನ್ನು

  • ಸಂಸತ್ತಿನ ಹೊಸ ಸದಸ್ಯೆ ಮತ್ತು ಸಾಂಕ್ರಾಮಿಕ ರೋಗ ವೈದ್ಯರಾದ ಆಯೆಷಾ ವೆರಾಲ್ ಅವರನ್ನು ನೇರವಾಗಿ ಸಚಿವ ಸಂಪುಟಕ್ಕೆ ಕರೆತರಲಾಗಿದೆ. ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಡಲು ಪ್ರಧಾನಿಯ ವೈಜ್ಞಾನಿಕ ಸಲಹೆಗಾರಾಗಿ ಅವರು ಸೇವೆ ಸಲ್ಲಿಸಿದ್ದರು.
ಆಯೆಷಾ ವೆರಾಲ್  PC: labour.org.nz
  • ಮಾಜಿ ಆರೋಗ್ಯ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಹೊಸ ಸಚಿವ ಸಂಪುಟದಲ್ಲಿ ಕೊರೊನಾ ನಿಯಂತ್ರಿಸುವ ಹುದ್ದೆಯ ಸಚಿವ ಸ್ಥಾನವನ್ನು ವಹಿಸಿಕೊಂಡಿದ್ದಾರೆ.
  • ಜಸಿಂಡಾ ಎರಡು ಗ್ರೀನ್ ಪಾರ್ಟಿ ಶಾಸಕರನ್ನು ಸಚಿವ ಸಂಪುಟದ ಹೊರಗಿನ ಸಚಿವಾಲಯಗಳಿಗೆ ನೇಮಕ ಮಾಡಿದ್ದಾರೆ.
  • ಒಟ್ಟು 20 ಸದಸ್ಯರಿಂದ ರಚಿಸಲಾದ ಸಂಪುಟದಲ್ಲಿ ಐದು ಮಾವೋರಿ ಮತ್ತು ಮೂವರು ಪಾಸಿಫಿಕಾ ಸಂಸದರು ಸೇರಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...