Homeಅಂತರಾಷ್ಟ್ರೀಯಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಸಮುದಾಯ ಪ್ರಸರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಈ ದೇಶವನ್ನು ಇತರೆ ದೇಶಗಳಿಗೆ ಮಾದರಿಯೆಂದು ಶ್ಲಾಘಿಸಿದೆ.

- Advertisement -
- Advertisement -

ಸಮುದಾಯದಲ್ಲಿ ಸೋಂಕು ಪ್ರಸರಣವಿಲ್ಲದೇ 100 ದಿನಗಳನ್ನು ಪೂರೈಸಿ ನ್ಯೂಜಿಲ್ಯಾಂಡ್ ಮಹತ್ವದ ಮೈಲಿಗಲ್ಲನ್ನು ಸೃಷ್ಟಿಸಿದೆ. ಆದರೆ ಈಗಲೇ ತೃಪ್ತಿಪಡುವಂತಿಲ್ಲ ಎಂದು ಆರೋಗ್ಯ ಅಧಿಕಾರಗಳು ಎಚ್ಚರಿಸಿದ್ದಾರೆ.

ಸದ್ಯಕ್ಕೆ ವಿದೇಶಿಗರು ನ್ಯೂಜಿಲ್ಯಾಂಡನ್ನು ಪ್ರವೇಶಿಸುವಾಗ ಹೊಸದಾಗಿ 23 ಪ್ರಕರಣಗಳು ಮಾತ್ರ ಪತ್ತೆಯಾಗಿದ್ದು ಅವರನ್ನು ಪ್ರತ್ಯೇಕ ಸೌಲಭ್ಯ ಕೇಂದ್ರಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

“ಸಮುದಾಯ ಪ್ರಸರಣವಿಲ್ಲದೆ 100 ದಿನಗಳನ್ನು ಪೂರೈಸುವುದು ಮಹತ್ವದ ಮೈಲಿಗಲ್ಲು. ಆದರೂ ನಾವೆಲ್ಲರೂ ತಿಳಿದಿರುವಂತೆ ಇಷ್ಟಕ್ಕೆ ನಾವು ತೃಪ್ತಿ ಹೊಂದಲು ಸಾಧ್ಯವಿಲ್ಲ” ಎಂದು ಆರೋಗ್ಯ ಮಹಾನಿರ್ದೇಶಕ ಆಶ್ಲೇ ಬ್ಲೂಮ್‌ಫೀಲ್ಡ್ ಹೇಳಿದ್ದಾರೆ.

“ಈ ಹಿಂದೆ ವೈರಸ್ ನಿಯಂತ್ರಣದಲ್ಲಿದ್ದ ಸ್ಥಳಗಳಲ್ಲಿ ವೈರಸ್ ಎಷ್ಟು ಬೇಗನೆ ಮತ್ತೆ ಹರಡಬಹುದು ಎಂಬುದನ್ನು ನಾವು ವಿದೇಶಗಳಲ್ಲಿ ನೋಡಿದ್ದೇವೆ. ಹಾಗಾಗಿ ನ್ಯೂಜಿಲೆಂಡ್‌ನಲ್ಲಿ ಭವಿಷ್ಯದ ಯಾವುದೇ ಪ್ರಕರಣಗಳನ್ನು ತ್ವರಿತವಾಗಿ ನಿವಾರಿಸಲು ನಾವು ಸಿದ್ಧರಾಗಿರಬೇಕು” ಎಂದು ಅವರು ಹೇಳಿದ್ದಾರೆ.

50 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ನ್ಯೂಜಿಲೆಂಡ್, ಮಾರ್ಚ್ 19 ರಂದು ತನ್ನ ಗಡಿಗಳನ್ನು ನಿರ್ಬಂಧಿಸಿದಾಗಿನಿಂದ ಕೊರೊನಾ ವೈರಸ್ ಅನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದ್ದಕ್ಕಾಗಿ ಜಗತ್ತಿನಾದ್ಯಂತ ವ್ಯಾಪಕ ಪ್ರಶಂಸೆ ಗಳಿಸಿದೆ.

ಸಮುದಾಯ ಪ್ರಸರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಈ ದೇಶವನ್ನು ಇತರೆ ದೇಶಗಳಿಗೆ ಮಾದರಿಯೆಂದು ಶ್ಲಾಘಿಸಿದೆ.

ಫೆಬ್ರವರಿಯಲ್ಲಿ ಮೊದಲ ಸೋಂಕಿತನನ್ನು ಪತ್ತೆಹಚ್ಚಿದಾಗಿನಿಂದ, ನ್ಯೂಜಿಲೆಂಡ್‌ನಲ್ಲಿ 1,569 ವೈರಸ್‌ ಪ್ರಕರಣಗಳು ದೃಢಪಟ್ಟಿದ್ದು, 1524 ಜನ ಚೇತರಿಸಿಕೊಂಡಿದ್ದಾರೆ. 22 ಸಾವುಗಳು ವರದಿಯಾಗಿದ್ದು, 23 ಸಕ್ರಿಯ ಪ್ರಕರಣಗಳಿವೆ. ಮೇ 1 ಸಮುದಾಯ ಪ್ರಸರಣದ ಕೊನೆಯ ಪ್ರಕರಣ ದಾಖಲಾಗಿದೆ. ಅಂದಿನಿಂದ ಇಂದಿನವರೆಗೂ ಸಮುದಾಯ ಹರಡುವಿಕೆಯನ್ನು ನ್ಯೂಜಿಲೆಂಡ್ ಪರಿಣಾಮಕಾರಿಯಾಗಿ ನಿಭಾಯಿಸಿದೆ.

ಇದರ ಫಲವಾಗಿ, ನ್ಯೂಜಿಲೆಂಡ್‌ ಜನತೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ ಮತ್ತು ಪ್ರೇಕ್ಷಕರಿಗೆ ತೊಂದರೆಯಿಲ್ಲದೇ, ಕೊರೊನಾ ಸಾಂಕ್ರಾಮಿಕದ ಪೂರ್ವ ಜೀವನ ಶೈಲಿಯನ್ನೇ ಮರಳಿ ಪಡೆದಿದ್ದಾರೆ.

ಆದರೆ ಗಡಿಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತಿದೆ. ಹೊರಗಿನಿಂದ ಬರುವ ಎಲ್ಲರೂ 14 ದಿನಗಳ ಸಂಪರ್ಕತಡೆಯಲ್ಲಿರಬೇಕಾದ ನಿಬಂಧನೆಗಳನ್ನು ವಿಧಿಸಲಾಗಿದೆ.

ಅಲ್ಲಿನ ಸರ್ಕಾರವು ಎರಡನೇ ಅಲೆಯ ನಿರೀಕ್ಷೆಯನ್ನಿಟ್ಟುಕೊಂಡಿದೆ. ಹಾಗಾಗಿ ಎಲ್ಲಾ ಮನೆಗಳಿಗೆ ಮಾಸ್ಕ್ ಸೇರಿದಂತೆ ತುರ್ತು ಪೂರೈಕೆ ಕಿಟ್‌ಗಳನ್ನು ಇರಿಸಿಕೊಳ್ಳಲು ಒತ್ತಾಯಿಸಿದೆ.


ಇದನ್ನೂ ಓದಿ: ನ್ಯೂಜಿಲೆಂಡ್: ಕೊರೊನಾ ವಿರುದ್ದದ ಸಮರದಲ್ಲಿ ಗೆಲುವಿನತ್ತ ದಾಪುಗಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...