Homeಅಂತರಾಷ್ಟ್ರೀಯಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಸಮುದಾಯ ಪ್ರಸರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಈ ದೇಶವನ್ನು ಇತರೆ ದೇಶಗಳಿಗೆ ಮಾದರಿಯೆಂದು ಶ್ಲಾಘಿಸಿದೆ.

- Advertisement -
- Advertisement -

ಸಮುದಾಯದಲ್ಲಿ ಸೋಂಕು ಪ್ರಸರಣವಿಲ್ಲದೇ 100 ದಿನಗಳನ್ನು ಪೂರೈಸಿ ನ್ಯೂಜಿಲ್ಯಾಂಡ್ ಮಹತ್ವದ ಮೈಲಿಗಲ್ಲನ್ನು ಸೃಷ್ಟಿಸಿದೆ. ಆದರೆ ಈಗಲೇ ತೃಪ್ತಿಪಡುವಂತಿಲ್ಲ ಎಂದು ಆರೋಗ್ಯ ಅಧಿಕಾರಗಳು ಎಚ್ಚರಿಸಿದ್ದಾರೆ.

ಸದ್ಯಕ್ಕೆ ವಿದೇಶಿಗರು ನ್ಯೂಜಿಲ್ಯಾಂಡನ್ನು ಪ್ರವೇಶಿಸುವಾಗ ಹೊಸದಾಗಿ 23 ಪ್ರಕರಣಗಳು ಮಾತ್ರ ಪತ್ತೆಯಾಗಿದ್ದು ಅವರನ್ನು ಪ್ರತ್ಯೇಕ ಸೌಲಭ್ಯ ಕೇಂದ್ರಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

“ಸಮುದಾಯ ಪ್ರಸರಣವಿಲ್ಲದೆ 100 ದಿನಗಳನ್ನು ಪೂರೈಸುವುದು ಮಹತ್ವದ ಮೈಲಿಗಲ್ಲು. ಆದರೂ ನಾವೆಲ್ಲರೂ ತಿಳಿದಿರುವಂತೆ ಇಷ್ಟಕ್ಕೆ ನಾವು ತೃಪ್ತಿ ಹೊಂದಲು ಸಾಧ್ಯವಿಲ್ಲ” ಎಂದು ಆರೋಗ್ಯ ಮಹಾನಿರ್ದೇಶಕ ಆಶ್ಲೇ ಬ್ಲೂಮ್‌ಫೀಲ್ಡ್ ಹೇಳಿದ್ದಾರೆ.

“ಈ ಹಿಂದೆ ವೈರಸ್ ನಿಯಂತ್ರಣದಲ್ಲಿದ್ದ ಸ್ಥಳಗಳಲ್ಲಿ ವೈರಸ್ ಎಷ್ಟು ಬೇಗನೆ ಮತ್ತೆ ಹರಡಬಹುದು ಎಂಬುದನ್ನು ನಾವು ವಿದೇಶಗಳಲ್ಲಿ ನೋಡಿದ್ದೇವೆ. ಹಾಗಾಗಿ ನ್ಯೂಜಿಲೆಂಡ್‌ನಲ್ಲಿ ಭವಿಷ್ಯದ ಯಾವುದೇ ಪ್ರಕರಣಗಳನ್ನು ತ್ವರಿತವಾಗಿ ನಿವಾರಿಸಲು ನಾವು ಸಿದ್ಧರಾಗಿರಬೇಕು” ಎಂದು ಅವರು ಹೇಳಿದ್ದಾರೆ.

50 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ನ್ಯೂಜಿಲೆಂಡ್, ಮಾರ್ಚ್ 19 ರಂದು ತನ್ನ ಗಡಿಗಳನ್ನು ನಿರ್ಬಂಧಿಸಿದಾಗಿನಿಂದ ಕೊರೊನಾ ವೈರಸ್ ಅನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದ್ದಕ್ಕಾಗಿ ಜಗತ್ತಿನಾದ್ಯಂತ ವ್ಯಾಪಕ ಪ್ರಶಂಸೆ ಗಳಿಸಿದೆ.

ಸಮುದಾಯ ಪ್ರಸರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಈ ದೇಶವನ್ನು ಇತರೆ ದೇಶಗಳಿಗೆ ಮಾದರಿಯೆಂದು ಶ್ಲಾಘಿಸಿದೆ.

ಫೆಬ್ರವರಿಯಲ್ಲಿ ಮೊದಲ ಸೋಂಕಿತನನ್ನು ಪತ್ತೆಹಚ್ಚಿದಾಗಿನಿಂದ, ನ್ಯೂಜಿಲೆಂಡ್‌ನಲ್ಲಿ 1,569 ವೈರಸ್‌ ಪ್ರಕರಣಗಳು ದೃಢಪಟ್ಟಿದ್ದು, 1524 ಜನ ಚೇತರಿಸಿಕೊಂಡಿದ್ದಾರೆ. 22 ಸಾವುಗಳು ವರದಿಯಾಗಿದ್ದು, 23 ಸಕ್ರಿಯ ಪ್ರಕರಣಗಳಿವೆ. ಮೇ 1 ಸಮುದಾಯ ಪ್ರಸರಣದ ಕೊನೆಯ ಪ್ರಕರಣ ದಾಖಲಾಗಿದೆ. ಅಂದಿನಿಂದ ಇಂದಿನವರೆಗೂ ಸಮುದಾಯ ಹರಡುವಿಕೆಯನ್ನು ನ್ಯೂಜಿಲೆಂಡ್ ಪರಿಣಾಮಕಾರಿಯಾಗಿ ನಿಭಾಯಿಸಿದೆ.

ಇದರ ಫಲವಾಗಿ, ನ್ಯೂಜಿಲೆಂಡ್‌ ಜನತೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ ಮತ್ತು ಪ್ರೇಕ್ಷಕರಿಗೆ ತೊಂದರೆಯಿಲ್ಲದೇ, ಕೊರೊನಾ ಸಾಂಕ್ರಾಮಿಕದ ಪೂರ್ವ ಜೀವನ ಶೈಲಿಯನ್ನೇ ಮರಳಿ ಪಡೆದಿದ್ದಾರೆ.

ಆದರೆ ಗಡಿಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತಿದೆ. ಹೊರಗಿನಿಂದ ಬರುವ ಎಲ್ಲರೂ 14 ದಿನಗಳ ಸಂಪರ್ಕತಡೆಯಲ್ಲಿರಬೇಕಾದ ನಿಬಂಧನೆಗಳನ್ನು ವಿಧಿಸಲಾಗಿದೆ.

ಅಲ್ಲಿನ ಸರ್ಕಾರವು ಎರಡನೇ ಅಲೆಯ ನಿರೀಕ್ಷೆಯನ್ನಿಟ್ಟುಕೊಂಡಿದೆ. ಹಾಗಾಗಿ ಎಲ್ಲಾ ಮನೆಗಳಿಗೆ ಮಾಸ್ಕ್ ಸೇರಿದಂತೆ ತುರ್ತು ಪೂರೈಕೆ ಕಿಟ್‌ಗಳನ್ನು ಇರಿಸಿಕೊಳ್ಳಲು ಒತ್ತಾಯಿಸಿದೆ.


ಇದನ್ನೂ ಓದಿ: ನ್ಯೂಜಿಲೆಂಡ್: ಕೊರೊನಾ ವಿರುದ್ದದ ಸಮರದಲ್ಲಿ ಗೆಲುವಿನತ್ತ ದಾಪುಗಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...